Monday | March 9, 2026 |

ಮೈಷುಗರ್ಸ್‌ನಲ್ಲಿ 335 ಕೋಟಿ ಹೂಡಿಕೆಯನ್ನೇ ಮುಚ್ಚಿಟ್ಟಿತೇ?; ಸಿಎಜಿಯನ್ನೇ ದಾರಿತಪ್ಪಿಸಿದ ಸರ್ಕಾರ!

Support THE-FILE

spot_img

ಬೆಂಗಳೂರು; ಮೈಸೂರು ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಹಾಯವನ್ನು ಮಾತ್ರ ಒದಗಿಸಿದೆ ಎಂದು ಹೇಳಿರುವ ಆರ್ಥಿಕ ಇಲಾಖೆಯು ಈ ಕಂಪನಿಯಲ್ಲಿ ಸರ್ಕಾರವು ಯಾವುದೇ ಹೂಡಿಕೆ ಮಾಡಿಲ್ಲವೆಂದು ಸಿಎಜಿಯನ್ನೇ ದಾರಿ ತಪ್ಪಿಸಿದೆ!

ಆರ್ಥಿಕ ಸಹಾಯ ಒದಗಿಸಿದೆಯೇ ವಿನಃ ಯಾವುದೇ ಹೂಡಿಕೆ ಮಾಡಿಲ್ಲ ಎಂದು ಆರ್ಥಿಕ ಇಲಾಖೆ ಹೇಳಿದೆಯಾದರೂ ವಾಸ್ತವದಲ್ಲಿ ಹಣಕಾಸು ಲೆಕ್ಕದಲ್ಲಿ 335.78 ಕೋಟಿ ರು.ಗಳನ್ನು ಸರ್ಕಾರವು ಹೂಡಿಕೆ ಮಾಡಿತ್ತು ಎಂಬ ಅಂಶವನ್ನು ಸಿಎಜಿ ವರದಿಯು ಹೊರಗೆಡವಿದೆ. ಕಂಪನಿಯಲ್ಲಿ ಸರ್ಕಾರವು ಮಾಡಿದ್ದ ಹೂಡಿಕೆಯನ್ನು ಮರೆಮಾಚಿರುವ ಆರ್ಥಿಕ ಇಲಾಖೆಯ ಉದ್ದೇಶವೇನಿತ್ತು ಎಂಬುದು ನಿಗೂಢವಾಗಿದೆ.

ಮೈಸೂರು ಸಕ್ಕರೆ ಕಾರ್ಖಾನೆಯು 2016-17ರ ಅಂತ್ಯಕ್ಕೆ 416. 67 ಕೋಟಿ ಸಂಚಿತ ನಷ್ಟ ಅನುಭವಿಸಿತ್ತು. 2017-18ರಲ್ಲಿ 289.42 ಕೋಟಿ, 2018-19ರ ಅಂತ್ಯಕ್ಕೆ 460.89 ಕೋಟಿ ನಷ್ಟ ಅನುಭವಿಸಿತ್ತು. 2019-20ರಲ್ಲಿ ಸರ್ಕಾರವು 335.78 ಕೋಟಿಯಷ್ಟು ಹೂಡಿಕೆ ಮಾಡಿತ್ತು ಎಂಬುದು ಸಿಎಜಿ ವರದಿಯಿಂದ ತಿಳಿದು ಬಂದಿದೆ.

ಮೈಸೂರು ಸಕ್ಕರೆ ಕಾರ್ಖಾನೆ ನಿಯಮಿತಕ್ಕೆ ಸಂಬಂಧಿಸಿದಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು (ಸೆ.2020) ದುಡಿಯುವ ಬಂಡವಾಳದ ಕೊರತೆಯಿಂದಾಗಿ ಕಂಪನಿಯು ನಷ್ಟವನ್ನು ಅನುಭವಿಸುತ್ತಿದೆ ಎಂದು ಹೇಳಿತ್ತು. 2015-16 ಮತ್ತು 2016-17ರ ಅವಧಿಯಲ್ಲಿ ಕಬ್ಬು ಅರೆಯುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ರೈತರ ಹಿತಾಸಕ್ತಿ ಮತ್ತು ಈ ಪ್ರದೇಶದ ಇತರ ಪೂರಕ ಘಟಕಗಳನ್ನು ಪುನರುಜ್ಜೀವನಗೊಳಿಸುವುದು ಹಾಗೂ ನೌಕರರಿಗೆ ಸಂಬಳ, ವೇತನ, ಪಿಂಚಣಿಗಳನ್ನು ಪಾವತಿಸಲು ಸರ್ಕಾರವು 2017-18 ಮತ್ತು 2018-19ರಲ್ಲಿ 57 ಕೋಟಿಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ 17 ಕೋಟಿಯನ್ನು ಸಾಲವನ್ನಾಗಿ ಪರಿಗಣಿಸಿತ್ತು ಎಂದು ಸಿಎಜಿ ವರದಿಯಲ್ಲಿ ಪ್ರಸ್ತಾಪವಾಗಿದೆ.

ಮೈಸೂರು ಸಕ್ಕರೆ ಕಾರ್ಖಾನೆಯನ್ನು ಅಂದಾಜು 500 ಕೋಟಿ ರು. ವೆಚ್ಚದಲ್ಲಿ ಪುನಶ್ಚೇತನಗೊಳಿಸುವ ಪ್ರಸ್ತಾವನೆ ಕುರಿತು ಸರ್ಕಾರದ ಹಂತದಲ್ಲಿ ತೀರ್ಮಾನಿಸಿಲ್ಲ. ಅಲ್ಲದೆ ಈ ಸಂಬಂಧ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ವಿಧಾನಸಭೆಯಲ್ಲಿ ಸೆ.17ರಂದು ಸಕ್ಕರೆ ಸಚಿವ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಅವರು ಲಿಖಿತ ಉತ್ತರ ಒದಗಿಸಿದ್ದರು.

ಎಲ್‌ಆರ್‌ಓಟಿ ಆಧಾರದ ಮೇಲೆ 2021-22ನೇ ಹಂಗಾಮಿನಿಂದ 40 ವರ್ಷಗಳ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ನೀಡಲು 2020ರ ನವೆಂಬರ್‌ 18ರಂದು ಸರ್ಕಾರದ ಅನುಮತಿ ದೊರೆತಿತ್ತು. ಟೆಂಡರ್ ಪ್ರಕ್ರಿಯೆಯಲ್ಲಿ ಯಶಸ್ವಿಯಾಗುವ ಗುತ್ತಿಗೆದಾರರು 2021-22ನೇ ಹಂಗಾಮಿನಿಂದ ಕಬ್ಬು ನುರಿಸುವ ಕಾರ್ಯವನ್ನು ಪ್ರಾರಂಭಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿತ್ತು. ಆದರೆ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ನೀಡುವ ಪ್ರಸ್ತಾವನೆಗೆ ಕಾರ್ಖಾನೆಯ ವ್ಯಾಪ್ತಿಯಲ್ಲಿ ಕಬ್ಬು ಬೆಳೆಯುವ ರೈತರು, ಕಂಪನಿಯ ಷೇರುದಾರರು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಮೈಸೂರು ಸಕ್ಕರೆ ಕಾರ್ಖಾನೆ (ಮೈ ಷುಗರ್ಸ್‌) ಪುನರಾರಂಭಕ್ಕೆ ಸಂಬಂಧಿಸಿದಂತೆ ಹಿಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ‘ಈ ಹಿಂದೆ ಮೈ ಷುಗರ್ಸ್ ಪುನಶ್ಚೇತನಕ್ಕಾಗಿ ₹ 200 ಕೋಟಿ ಅನುದಾನವನ್ನು ನಾನೇ ಒದಗಿಸಿದ್ದೆ. ಆದರೆ, ಕಾರ್ಖಾನೆಯಲ್ಲಿನ ಗುಂಪುಗಾರಿಕೆಯಿಂದ ಮತ್ತೆ ನಷ್ಟ ಸಂಭವಿಸಿದೆ. ಈಗಲೂ ಕಾರ್ಖಾನೆ ನಡೆಸಲಾಗದ ಸ್ಥಿತಿ ಇದೆ. ಶೀಘ್ರದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಜತೆ ಸಭೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉತ್ತರಿಸಿದ್ದನ್ನು ಸ್ಮರಿಸಬಹುದು.

‘ಹೊಸ ಯಂತ್ರೋಪಕರಣಗಳನ್ನು ಅಳವಡಿಸಲಾಗಿದೆ. ತಕ್ಷಣಕ್ಕೆ ₹ 15 ಕೋಟಿ ವೆಚ್ಚ ಮಾಡಿದರೆ ಕಾರ್ಖಾನೆಯಲ್ಲಿ ಕಬ್ಬು ನುರಿಯಲು ಆರಂಭಿಸಬಹುದು. ಆದರೆ, ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಹೊಂದಿರುವ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ 40 ವರ್ಷಗಳ ಅವಧಿಗೆ ಗುತ್ತಿಗೆಗೆ ನೀಡಲು ಸರ್ಕಾರ ಹೊರಟಿದೆ. ಈ ವಿಚಾರದಲ್ಲಿ ಖಾಸಗಿಯವರ ಒತ್ತಡಕ್ಕೆ ಮಣಿಯಲಾಗಿದೆಯೆ’ ಎಂದು ಶ್ರೀಕಂಠೇಗೌಡ ಅವರು ಸದನದಲ್ಲಿ ಪ್ರಶ್ನಿಸಿದ್ದರು. .

ಸಕ್ಕರೆ ಕಾರ್ಖಾನೆಯಿಂದ ₹ 30 ಕೋಟಿ ಆದಾಯ ತೆರಿಗೆ ಮತ್ತು ₹ 27 ಕೋಟಿ ವಿದ್ಯುತ್‌ ಬಿಲ್‌ ಬಾಕಿ ಇದೆ. ಇತ್ತೀಚೆಗೆ ನಿವೃತ್ತರಾದ ನೌಕರರಿಗೆ ₹ 8 ಕೋಟಿ ಬಾಕಿ ಪಾವತಿಸಬೇಕಾಗಿದೆ. ಯಂತ್ರೋಪಕರಣಗಳ ದುರಸ್ತಿ, ಹೊಸ ಯಂತ್ರಗಳ ಅಳವಡಿಕೆಗೆ ತುರ್ತಾಗಿ ₹ 100 ಕೋಟಿ ಅಗತ್ಯವಿದೆ. ಈ ಎಲ್ಲವನ್ನು ಪರಿಗಣಿಸಿ ಕಾರ್ಖಾನೆಯನ್ನು ಗುತ್ತಿಗೆಗೆ ನೀಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಚಿವ ಎಂ.ಟಿ.ಬಿ. ನಾಗರಾಜು ತಿಳಿಸಿದ್ದನ್ನು ಸ್ಮರಿಸಬಹುದು.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!