Saturday | June 20, 2026 |

ಹುಲಿಗಳ ಜೀವನದ ಕುರಿತು ಅಧ್ಯಯನವೇ ನಡೆದಿಲ್ಲ; ಸದನವನ್ನು ದಾರಿತಪ್ಪಿಸಿದರೇ ಕತ್ತಿ?

ಬೆಂಗಳೂರು; ರಾಜ್ಯದಲ್ಲಿ ಹುಲಿಗಳ ಜೀವನದ ಬಗ್ಗೆ ಯಾವುದೇ ಅಧ್ಯಯನ ನಡೆಸಿಲ್ಲ ಎಂದು ಅರಣ್ಯ ಪಡೆ ಮುಖ್ಯಸ್ಥರೂ ಆಗಿರುವ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೀಡಿದ್ದ ಉತ್ತರವನ್ನು ಪರಿಶೀಲಿಸದೆಯೇ ಅರಣ್ಯ ಸಚಿವ ಉಮೇಶ್‌ ಕತ್ತಿ ಅವರು ಸದನವನ್ನು ದಾರಿತಪ್ಪಿಸಿದ್ದಾರೆ!

ವಿಧಾನ ಪರಿಷತ್‌ನಲ್ಲಿ ಬಿ ಕೆ ಹರಿಪ್ರಸಾದ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸೆ.13ರಂದು ಉತ್ತರಿಸಿರುವ ಅರಣ್ಯ ಸಚಿವ ಉಮೇಶ್‌ ಕತ್ತಿ ಅವರು ಹುಲಿಗಳ ಜೀವನ ವಿಧಾನದ ಬಗ್ಗೆ ಯಾವುದೇ ಅಧ್ಯಯನ ನಡೆಸಿಲ್ಲ ಎಂದು ಉತ್ತರಿಸಿದ್ದಾರೆ.

ಆದರೆ 2021ರ ಮಾರ್ಚ್‌ 15ರಂದು ಪರಿಷತ್‌ ಸದಸ್ಯ ಲೆಹರ್‌ಸಿಂಗ್‌ ಸಿರೋಯಾ ಅವರು ಕೇಳಿದ್ದ ಇದೇ ಪ್ರಶ್ನೆಗೆ ಉತ್ತರಿಸಿದ್ದ ಹಿಂದಿನ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರು ಹುಲಿಗಳ ಜೀವನ ವಿಧಾನದ ಕುರಿತು ಅಧ್ಯಯನ ನಡೆದಿದೆ ಎಂದು ಉತ್ತರಿಸಿದ್ದರು.

ಆದರೀಗ ಹುಲಿಗಳ ಜೀವನ ವಿಧಾನದ ಕುರಿತು ಯಾವುದೇ ಅಧ್ಯಯನ ನಡೆಸಿರುವುದಿಲ್ಲ ಎಂದು ಅರಣ್ಯಪಡೆ ಮುಖ್ಯಸ್ಥರು ಒದಗಿಸಿದ್ದ ಮಾಹಿತಿಯನ್ನು ಪರಿಶೀಲಿಸದೆಯೇ ಸಚಿವ ಉಮೇಶ್‌ ಕತ್ತಿ ಅವರು ಉತ್ತರವನ್ನು ಸದನಕ್ಕೆ ಮಂಡಿಸಿದ್ದಾರೆ. ಉಲ್ಲಾಸ್‌ ಕಾರಂತ ಸೇರಿದಂತೆ ಹಲವರು ಹುಲಿಗಳ ಜೀವನ ಕುರಿತು ಅಧ್ಯಯನ ನಡೆಸಿದ್ದಾರೆ. ಆದರೂ ಹುಲಿಗಳ ಜೀವನ ಕುರಿತು ಯಾವುದೆ ಅಧ್ಯಯನ ನಡೆದೇ ಇಲ್ಲ ಎಂದು ನೀಡಿರುವ ಉತ್ತರವೇ ತಪ್ಪಿನಿಂದ ಕೂಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

2021ರ ಮಾರ್ಚ್‌ನಲ್ಲಿ ನೀಡಿದ್ದ ಉತ್ತರದಲ್ಲೇನಿತ್ತು?

ಜಾರ್ಜ್ ಶೆಲ್ಲರ್‌ ಎಂಬುವರು ಮಧ್ಯ ಪ್ರದೇಶದ ಕಾನ್ಹ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಕುರಿತು ಅಧ್ಯಯನ ನಡೆಸಿ ಡೀರ್‌ ಅಂಡ್‌ ಟೈಗರ್‌ ಎನ್ನುವ ಕೃತಿ ಪ್ರಕಟಿಸಿದ್ದರು. ಇದು ಹುಲಿಗಳ ಕುರಿತು ತಿಳಿದುಕೊಳ್ಳಲು ಸಹಕಾರಿಯಾಘಿದೆ. Smithsonian, USA ಸಂಸ್ಥೆಯು ನೇಪಾಳದ Chitwan National Parkನಲ್ಲಿ ನಡೆಸಿರುವ ಅಧ್ಯಯನವು ಎಲ್ಲಾ ಹುಲಿಗಳ ಸಂರಕ್ಷಿತ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗೆ ಮಾರ್ಗಸೂಚಿಯಾಗಿದೆ.

ಇದಲ್ಲದೆ ಕರ್ನಾಟಕ ಅರಣ್ಯ ಇಲಾಖೆಯು ಕ್ಯಾಮರಾ ಟ್ರ್ಯಾಪ್‌ನಿಂದ ಮಾಹಿತಿ ಕಲೆಹಾಕಿ ಹುಲಿಗಳ ಆರೋಗ್ಯ ಸ್ಥಿತಿ, ನಡವಳಿಕೆ ಮತ್ತು ವಯಸ್ಸನ್ನು ಕೂಡಾ ಪತ್ತೆ ಹಚ್ಚಲಾಗುತ್ತಿದೆ. ಇದಕ್ಕಾಗಿ ವಿಶೇಷವಾಗಿ ಟೈಗರ್ ಸೆಲ್‌ನ್ನು ಕೇಂದ್ರ ಕಚೇರಿಯಲ್ಲಿ ತೆರೆಯಲಾಗಿದೆ. ಕರ್ನಾಟಕ ಅರಣ್ಯ ಇಲಾಖೆಯು ಭಾರತೀಯ ವನ್ಯಜೀವಿ ಸಂಸ್ಥೆ, ಡೆಹರಾಡೂನ್‌ ಇವರಿಗೆ ಮಾನವ-ಹುಲಿ-ಸಂಘರ್ಷ ಸೇರಿದಂತೆ ಹುಲಿಗಳ ಕುರಿತು ಸಮಗ್ರ ಅಧ್ಯಯನಕ್ಕಾಗಿ ಅನುಮತಿ ನೀಡಿದೆ.

ಅಲ್ಲದೆ ವನ್ಯಜೀವಿ ಸಂರಕ್ಷಣಾ ಸಂಸ್ಥೆಯು ಕರ್ನಾಟಕ ಅರಣ್ಯ ಇಲಾಖೆಯ ಜತೆ 2 ವರ್ಷದಿಂದ ನಾಗರಹೊಳೆ, ಬಿಆರ್‌ಟಿ, ಕಾಳಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಚಲನವಲನ, ನಡವಳಿಕೆ, ಆಹಾರ ಪದ್ಧತಿ ಕುರಿತು ಅಧ್ಯಯನ ಮಾಡಿ ಹಲವಾರು ವೈಜ್ಞಾನಿಕ ಪ್ರಕಟಣೆಗಳನ್ನು ತಂದಿದೆ ಎಂದು ಮಾರ್ಚ್‌ 15ರಂದು ನಡೆದಿದ್ದ ಅಧಿವೇಶನದಲ್ಲಿ ಇದೇ ಅರಣ್ಯ ಇಲಾಖೆಯು ಉತ್ತರ ನೀಡಿತ್ತು.

ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ 33 ಹುಲಿಗಳು ಸಾವನ್ನಪ್ಪಿವೆ. ಹುಲಿಗಳು ಸಾವೀಗೀಡಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. 2018-19ರಲ್ಲಿ 11, 2019-20ರಲ್ಲಿ 10 ಮತ್ತು 2020-21ರಲ್ಲಿ 12 ಹುಲಿಗಳು ಸಾವನ್ನಪ್ಪಿವೆ.

2018-19ರಲ್ಲಿ ಕೊಡಗು ಜಿಲ್ಲೆಯಲ್ಲಿ 07, ಚಾಮರಾಜನಗರದಲ್ಲಿ 01, ಮೈಸೂರಿನಲ್ಲಿ 02, ಚಿಕ್ಕಮಗಳೂರಿನಲ್ಲಿ 01 ಹುಲಿಗಳು ಸಾವನ್ನಪ್ಪಿವೆ. ಅದೇ ರೀತಿ 2019-20ರಲ್ಲಿ ಕೊಡಗಿನಲ್ಲಿ -2, ಚಾಮರಾಜನಗರದಲ್ಲಿ 06, ಮೈಸೂರಿನಲ್ಲಿ 02, 2020-21ರಲ್ಲಿ ಕೊಡಗಿನಲ್ಲಿ 05, ಚಾಮರಾಜನಗರದಲ್ಲಿ 06, ಚಿಕ್ಕಮಗಳೂರಿನಲ್ಲಿ 01 ಸೇರಿದಂತೆ ಒಟ್ಟು 33 ಹುಲಿಗಳು ಸಾವನ್ನಪ್ಪಿರುವುದು ಅರಣ್ಯ ಪಡೆ ಮುಖ್ಯಸ್ಥರು ನೀಡಿರುವ ಉತ್ತರವನ್ನು ಸ್ಮರಿಸಬಹುದು.

Hot this week

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ...

ಡಿಸಿಎಂ ಕಚೇರಿಯಲ್ಲಿಯೇ ಧೂಳಿಡಿದಿದ್ದ ಕಡತಗಳು; ಸಚಿವ ಸಂಪುಟ ವಿಸರ್ಜನೆ ಬೆನ್ನಲ್ಲೇ 80 ಕಡತಗಳು ಇಲಾಖೆಗೆ ವಾಪಸ್‌

ಬೆಂಗಳೂರು; ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಕೋರಿದ್ದ ಮಾಹಿತಿಯ ಕಡತ,...

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...
Please Scan to make Your Contribution

Topics

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ...

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?

ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಹೊಸದಾಗಿ ಮೆಟ್ರಿಕ್‌ ಪೂರ್ವ...

ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆ ಉದ್ದೇಶಕ್ಕೆ ಧಕ್ಕೆ ; ನ್ಯಾಯಾಂಗ ಬಡಾವಣೆ ಪ್ರತಿಷ್ಠಿತರ ಒತ್ತಡಕ್ಕೆ ಮಣಿದು ಹೆಬ್ಬಾಗಿಲು ನಿರ್ಮಾಣ?

ಬೆಂಗಳೂರು; ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ ಒದಗಿಸಿದ್ದ ಅನುದಾನವನ್ನು ಅಧಿಕಾರಿವರ್ಗವು ಪ್ರಭಾವಿಗಳ ಒತ್ತಡಕ್ಕೆ...

Related Articles

Popular Categories

error: Content is protected !!