Tuesday | May 12, 2026 |

ಆರೋಗ್ಯ ಕ್ಷೇತ್ರಕ್ಕೆ ಬಿಡುಗಡೆಯಾಗದ 552 ಕೋಟಿ; ಅನುಷ್ಠಾನಗೊಂಡಿಲ್ಲ ಆಯೋಗದ ಶಿಫಾರಸ್ಸು?

ಬೆಂಗಳೂರು; ಹದಿನೈದನೇ ಹಣಕಾಸು ಆಯೋಗ 2020–21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ಆರೋಗ್ಯ ವಲಯಕ್ಕೆ 2021-22ರಿಂದ 2025-26ರ ವರ್ಷದಲ್ಲಿ 2,929 ಕೋಟಿ ರು. ಶಿಫಾರಸ್ಸು ಮಾಡಿದೆಯಾದರೂ 2021-22ನೇ ಸಾಲಿಗೆ ಸಂಬಂಧಿಸಿದಂತೆ 552.00 ಕೋಟಿ ರು. ಈವರೆವಿಗೂ ಬಿಡುಗಡೆಗೊಂಡಿಲ್ಲ.

ಕೋವಿಡ್‌ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರವು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದೆ. ಇಂತಹ ಹೊತ್ತಿನಲ್ಲಿ 15ನೇ ಹಣಕಾಸು ಆಯೋಗವು ಆರೋಗ್ಯ ವಲಯಕ್ಕೆ ಮಾಡಿದ್ದ ಶಿಫಾರಸ್ಸಿನಂತೆ 552.00 ಕೋಟಿ ರು. ಬಿಡುಗಡೆ ಮಾಡದೆಯೇ ಶಿಫಾರಸ್ಸು ಕಾಗದದ ಮೇಲಷ್ಟೇ ಉಳಿಸಿಕೊಂಡಿದೆ. ಕೇಂದ್ರ ಸರ್ಕಾರವು ಅನುದಾನವನ್ನು ಇದುವರೆಗೂ ಬಿಡುಗಡೆ ಮಾಡದಿದ್ದರೂ ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಅವರು ದನಿ ಎತ್ತಿಲ್ಲ.

2021-22ನೆ ಸಾಲಿಗೆ 552.00 ಕೋಟಿ, 2022-23ಕ್ಕೆ 552.00 ಕೋಟಿ, 2023-24ನೇ ಸಾಲಿಗೆ 579 ಕೋಟಿ, 2024-25ನೇ ಸಾಲಿಗೆ 608 ಕೋಟಿ, 2025-26ಕ್ಕೆ 638 ಕೋಟಿ ಸೇರಿದಂತೆ ಒಟ್ಟು 2,929 ಕೋಟಿ ರು.ಗಳನ್ನು 15ನೇ ಹಣಕಾಸು ಆಯೋಗವು ರಾಜ್ಯದ ಆರೋಗ್ಯ ವಲಯಕ್ಕೆ ಶಿಫಾರಸ್ಸು ಮಾಡಿದೆ.

2021-22ನೇ ಸಾಲಿಗೆ ಶಿಫಾರಸ್ಸಾಗಿರುವ 552 ಕೋಟಿ ರು. ಕೇಂದ್ರ ಸರ್ಕಾರದಿಂದ ಇನ್ನೂ ಬಿಡುಗಡೆಯಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈ ಮೊತ್ತವನ್ನು ಕೇಂದ್ರದಿಂದ ಪಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಬೇಕು ಎಂದು ಆರ್ಥಿಕ ಇಲಾಖೆಯು ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ.

ಸಾಂಕ್ರಾಮಿಕ ಪ್ರಭಾವದ ತೀವ್ರತೆಯಿಂದ ವಿವಿಧ ರಾಜ್ಯಗಳು ವಿವಿಧ ಹಂತಗಳಲ್ಲಿ ಸುಧಾರಿಸಿಕೊಳ್ಳುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಮತ್ತು ಇತರ ಹಣಕಾಸು ಏಜೆಂಟರಿಗೆ ಆರ್ಥಿಕ ಬೆಂಬಲ ನೀಡಬೇಕಿದೆ. ರಾಜ್ಯ ಸರ್ಕಾರವು ಈಗಾಗಲೇ ಸಾಕಷ್ಟು ಖರ್ಚಿನ ಹೊರೆ ಹೊಂದಿದೆ. ಆರ್ಥಿಕ ಕುಂಠಿತ ಚಟುವಟಿಕೆಯಿಂದಾಗಿ ದೊಡ್ಡಪ್ರಮಾಣದಲ್ಲಿ ತೆರಿಗೆ ಮತ್ತು ಇತರ ಆದಾಯದ ಕೊರತೆಯೂ ಸೃಷ್ಟಿಯಾಗಿದೆ.

ಈ ಹೊತ್ತಿನ ಬಿಕ್ಕಟ್ಟಿಗೆ ಹಣಕಾಸಿನ ಸ್ಪಂದನೆ ಹೆಚ್ಚು ಸೂಕ್ಷ್ಮವಾಗಿರಬೇಕು. ಹಣಕಾಸಿನ ಸಹಾಯ ಪ್ರಕ್ರಿಯೆಯ ಗಾತ್ರವನ್ನು ಮಾತ್ರವಲ್ಲದೆ ವಿಧಿವಿಧಾನಗಳನ್ನು ಗಮನವಿಟ್ಟು ಎಚ್ಚರಿಕೆಯಿಂದ ನೋಡಬೇಕು. ಆದರೆ ಕೇಂದ್ರ ಸರ್ಕಾರವು ಆರೋಗ್ಯ ವಲಯಕ್ಕೆ ಶಿಫಾರಸ್ಸು ಮಾಡಿರುವ ಹಣಕಾಸನ್ನು ಬಿಡುಗಡೆ ಮಾಡದಿರುವುದು ಹೊಣೆಗಾರಿಕೆ ನಿಭಾಯಿಸುವಲ್ಲಿ ದೊಡ್ಡ ಹಿನ್ನಡೆ ಅನುಭವಿಸುತ್ತಿದೆ.

15ನೇ ಹಣಕಾಸು ಆಯೋಗ 2020–21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ರೂ.5,495 ಕೋಟಿ ನೀಡಲು ಶಿಫಾರಸು ಮಾಡಿದೆ. ಈ ಶಿಫಾರಸ್ಸನ್ನು ಒಪ್ಪಿಕೊಂಡು 2021–22 ಸಾಲಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಪ್ರಕಟಿಸಬೇಕು ಎಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿತ್ತು. ಆದರೆ ಆಗಸ್ಟ್‌ ಮತ್ತು ಸೆಪ್ಟಂಬರ್‌ವರೆಗಿನ ಅವಧಿಯಲ್ಲಿ ಶೇ. 32ರಷ್ಟು ಮಾತ್ರ ಅನುದಾನ ಬಿಡುಗಡೆಯಾಗಿದೆ ಎಂದು ಗೊತ್ತಾಗಿದೆ.

ಆಗಸ್ಟ್‌ 4ರ ಅಂತ್ಯಕ್ಕೆ ರಾಜ್ಯ ಸರ್ಕಾರವು 2,114.5 ಕೋಟಿ ರು.ಗಳನ್ನು 6 ಲೆಕ್ಕ ಶೀರ್ಷಿಕೆಗಳಿಗೆ ಬಿಡುಗಡೆ ಮಾಡಿದೆ. ರಾಜ್ಯ ವಿಪತ್ತು ನಿರ್ವಹಣೆ ನಿಧಿಗೆ ಅಂದಾಜು 1,000 ಕೋಟಿ ರು.ಗಳನ್ನು ರಾಷ್ಟ್ರೀಯ ವಿಪತ್ತು ನಿಧಿ ಅಡಿಯಲ್ಲಿ ಬಿಡುಗಡೆಯಾಗಿದೆ.

ಕಳೆದ ವರ್ಷದ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಭೀಕರ ಪ್ರವಾಹ ಎದುರಾದಾಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಮೊದಲ ಹಂತದಲ್ಲಿ 1,369 ಕೋಟಿ ಹಾಗೂ ಎರಡನೇ ಹಂತದಲ್ಲಿ 2,261 ಕೋಟಿ ಬಿಡುಗಡೆ ಮಾಡಿತ್ತು.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!