Monday | March 30, 2026 |

ಸಂಸ್ಕೃತ ವಿವಿಯಲ್ಲಿ ಅವ್ಯವಹಾರ; ಸ್ವಜಾತಿ, ಒಳಪಂಗಡಕ್ಕೆ ಮನ್ನಣೆ, ಕನ್ನಡ ಸಂಸ್ಕೃತಿಗೆ ನಿಂದನೆ

Support THE-FILE

spot_img

ಬೆಂಗಳೂರು; ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸ್ವಜಾತಿ, ಒಳಪಂಗಡ, ಭಾಷೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರೀಕ್ಷಾ ಅವ್ಯವಹಾರದಲ್ಲಿ ನಿರತರಾಗಿದ್ದಾರೆ! ಆಂತರಿಕ ಅಂಕ ನೀಡಿಕೆಯಲ್ಲಿಯೂ ಪ್ರಾಧ್ಯಾಪಕರು ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಮತ್ತು ಮಲೆಯಾಳಿ ಭಾಷೆಗೆ ಒತ್ತು ನೀಡಿ ಕನ್ನಡ ಸಂಸ್ಕೃತಿಯನ್ನು ನಿಂದಿಸುತ್ತಿದ್ದಾರೆ ಎಂಬ ಗುರುತರವಾದ ಆರೋಪವೂ ಇದೀಗ ಕೇಳಿ ಬಂದಿದೆ.

ಬೆಂಗಳೂರಿನ ಅನಂತ್‌ ಐತಾಳ್‌ ಎಂಬುವರು ಈ ಕುರಿತು ಲಿಖಿತ ದೂರನ್ನು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಈ ದೂರನ್ನಾಧರಿಸಿ ಕ್ರಮ ಕೈಗೊಳ್ಳುವ ಸಂಬಂಧ ಸಂಸ್ಕೃತ ವಿಶ್ವವಿದ್ಯಾಲಯದ ಕುಲಸಚಿವರಿಗೆ 2021ರ ಅಕ್ಟೋಬರ್‌ 1ರಂದು ಪತ್ರ ಬರೆದಿದ್ದಾರೆ. ದೂರಿನ ಪತ್ರ ‘ದಿ ಫೈಲ್‌’ಗೆ ಲಭ್ಯವಾಗಿದೆ.

ವಿಶ್ವವಿದ್ಯಾಲಯದದಲ್ಲಿ ಹಲವು ಪ್ರಾಧ್ಯಾಪಕರು ಕಳೆದ ಹಲವು ವರ್ಷಗಳಿಂದಲೂ ತಮಗೆ ಬೇಕಾದ ಹಾಗೆ ಮನಸೋ ಇಚ್ಛೆಯಿಂದ ವರ್ತಿಸುತ್ತಿದ್ದರೂ ಉನ್ನತ ಶಿಕ್ಷಣ ಇಲಾಖೆ ಮತ್ತು ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

‘ವ್ಯಾಕರಣ ವಿಭಾಗದ ಮುಖ್ಯಸ್ಥೆ ಶಿವಾನಿ ಅವರು ಎರಡನೇ ಷಣ್ಮಾಸಿಕದಲ್ಲಿ ಬೋಧನೆ ಸಂದರ್ಭದಲ್ಲಿ ಮಲೆಯಾಳಿ ಸಂಸ್ಕೃತಿಯನ್ನು ಹೊಗಳಿ ಕನ್ನಡ ಸಂಸ್ಕೃತಿಯನ್ನು ನಿಂದಿಸಿದ್ದಾರೆ. ಈ ಬಗ್ಗೆ ಕುಲಪತಿಗಳನ್ನು ಗಮನ ಸೆಳೆದಿದ್ದೇನೆ,’ ಎಂದು ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ದೂರಿನಲ್ಲಿ ವಿವರಿಸಿದ್ದಾರೆ.

ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪಾಠ ಪ್ರವಚನಗಳು ನಿಗದಿತ ಸಮಯಕ್ಕೆ ಸರಿಯಾಗಿ ನಡೆಯುವುದಿಲ್ಲ. ಅವ್ಯವಸ್ಥೆಯಿಂದ ಕೂಡಿವೆ. ವ್ಯಾಕರಣದ ಕುರಿತು ಪ್ರಾಧ್ಯಾಪಕರಿಗೆ ಸರಿಯಾದ ತಿಳಿವಳಿಕೆ ಇಲ್ಲ. ತೋರಿಕೆಗೆ ಮಾತ್ರ ಅಲ್ಪಾವಧಿಯಲ್ಲಿಯೇ ವಿಷಯವನ್ನು ಅಪೂರ್ಣವಾಗಿ ಪೂರ್ಣಗೊಳಿಸುತ್ತಿದ್ದಾರೆ. ಹಲವು ಬಾರಿ ಕುಲಪತಿ, ಕುಲಸಚಿವರು ಮತ್ತು ವಿಭಾಗದ ಮುಖ್ಯಸ್ಥರಿಗೆ ಅನಂತ್‌ ಐತಾಳ್‌ ಅವರು ಗಮನಕ್ಕೆ ತಂದಿರುವುದು ದೂರಿನಿಂದ ತಿಳಿದು ಬಂದಿದೆ.

ಪರೀಕ್ಷಾ ಅವ್ಯವಹಾರ

ಪ್ರಥಮ ವರ್ಷದ ಷಣ್ಮಾಸಿಕ ಪರೀಕ್ಷೆ ಫಲಿತಾಂಶ ನೀಡಿಕೆಯಲ್ಲಿ ಅವ್ವವಹಾರ ನಡೆದಿದೆ ಎಂದು ದೂರಿರುವ ಅನಂತ್‌ ಐತಾಳ್‌ ಅವರು ಸ್ವ ಜಾತಿ, ಒಳಪಂಗಡ, ತಮ್ಮ ಭಾಷೆ ಆಧಾರದ ಮೇಲೆ ಅಂಕಗಳನ್ನು ನೀಡುತ್ತಿದ್ದಾರೆ. ವಿಷಯದ ಬಗ್ಗೆ ತಿಳಿವಳಿಕೆ ಇಲ್ಲದಿರುವವರಿಗೂ ಪ್ರತಿಶತ 70ರಿಂದ 80 ಅಂಕಗಳನ್ನು ನೀಡುತ್ತಿದ್ದಾರೆ ಎಂದು ಅರೋಪಿಸಿದ್ದಾರೆ.

ಕಾರೇಕಾ ವೃತ್ತಿ ಪತ್ರಿಕೆಯ ಆಂತರಿಕ ಅಂಕಗಳನ್ನು ನೀಡುವಾಗ 25 ಅಂಕಗಳಲ್ಲಿ 23 ರಷ್ಟು ಆಂತರಿಕ ಅಂಕಗಳನ್ನು ಪಡೆದಿದ್ದರೂ ಪರೀಕ್ಷೆ ಫಲಿತಾಂಶದಲ್ಲಿ 20 ಅಂಕಗಳನ್ನು ನೀಡಿ ಎಲ್ಲರಿಗಿಂತಲೂ ಕಡಿಮೆ ಅಂಕ ನಮೂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಲೋಪವನ್ನು ಸರಿಪಡಿಸಬೇಕು ಎಂದು ನೀಡಿದ್ದ ಮನವಿ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅನಂತ್‌ ಐತಾಳ್‌ ಅವರು ದೂರಿನಲ್ಲಿ ವಿವರಿಸಿದ್ದಾರೆ. ಈ ದೂರನ್ನಾಧರಿಸಿ ಕೂಡಲೇ ಕ್ರಮ ಕೈಗೊಳ್ಳಿ ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್‌ನಾಯಕ್‌ ಅವರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರಿಗೆ ಸೂಚಿಸಿರುವುದು ಪತ್ರದಿಂದ ತಿಳಿದು ಬಂದಿದೆ.

Hot this week

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

Topics

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Related Articles

Popular Categories

error: Content is protected !!