Friday | April 10, 2026 |

ಸಿಎಂ ಇಲಾಖೆಯಲ್ಲೇ ವಿಲೇವಾರಿಗೆ 3,351 ಕಡತ ಬಾಕಿ; ನೂರು ದಿನ ಪೂರೈಸಿದ್ದರೂ ಚುರುಕಿಲ್ಲ

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಭಾಯಿಸುವ ಹಣಕಾಸು ಇಲಾಖೆಯಲ್ಲಿ 2021ರ ಅಕ್ಟೋಬರ್‌ 27ರ ಅಂತ್ಯಕ್ಕೆ 3,351 ಕಡತಗಳು ಬಾಕಿ ಉಳಿದಿರುವುದು ಇದೀಗ ಬಹಿರಂಗವಾಗಿದೆ. ಅವರದೇ ಇಲಾಖೆಯು ಕಡತ ವಿಲೇವಾರಿಯಲ್ಲಿ ಹಿಂದೆ ಬಿದ್ದಿರುವುದು ನೂರು ದಿನದ ಸಂಭ್ರಮವನ್ನು ಅಣಕಿಸಿದಂತಾಗಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಂದೇ ಕಡತ ವಿಲೇವಾರಿಗೆ ಸೂಚಿಸಿದ್ದರಲ್ಲದೆ 15 ದಿನದಲ್ಲಿ ಕಡತಗಳು ವಿಲೇವಾರಿಯಾಗಿರಬೇಕು ಎಂದೂ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದರು. ಹಣಕಾಸು ಇಲಾಖೆಯಲ್ಲಿಯೇ 3,351 ಕಡತಗಳು ವಿಲೇವಾರಿಯಾಗದಿರುವುದು ಮುಖ್ಯಮಂತ್ರಿ ನೀಡಿದ್ದ ಎಚ್ಚರಿಕೆ ಸಂದೇಶವನ್ನು ಕಸದ ಬುಟ್ಟಿಗೆ ಎಸೆದಂತಾಗಿದೆ.

ಆರ್ಥಿಕ ಇಲಾಖೆಯ 69 ಶಾಖೆಗಳಲ್ಲಿ 7 ದಿನದವರೆಗೆ 8 ರಿಂದ 15 ದಿನ, 16ರಿಂದ 30 ದಿನ, 31ರಿಂದ 60 ದಿನ ಮತ್ತು 60 ದಿನಗಳ ನಂತರ ದಿನಗಳಲ್ಲಿ ಸೃಜಿಸಲಾದ ಕಡತಗಳು ಕೊಳೆಯುತ್ತಿವೆ. 0-7 ದಿನಗಳವರೆಗೆ ವಿಲೇವಾರಿಯಾಗದಿರುವ ಕಡತಗಳ ಸಂಖ್ಯೆ 1,484ರಷ್ಟಿದೆ. 8-15 ದಿನದವರೆಗೆ 329, 16-30 ದಿನದವರೆಗೆ 292, 31-60 ದಿನದವರೆಗೆ 348, 60 ದಿನಗಳ ನಂತರ ಒಟ್ಟು 898 ಕಡತಗಳು ವಿಲೇವಾರಿಯಾಗದೆ ಬಾಕಿ ಇರುವುದು ತಿಳಿದು ಬಂದಿದೆ.

ಕಡತ ವಿಲೇವಾರಿಯಾಗದೇ ಇರುವ ಇಲಾಖೆಗಳಲ್ಲಿ ಕಡತ ವಿಲೇವಾರಿಗೆ ರಾಜ್ಯ ಸರ್ಕಾರ ಅಧೀನ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿಗಳನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಿದ್ದರೂ ಆರ್ಥಿಕ ಇಲಾಖೆಯಲ್ಲಿ 3,351 ಕಡತಗಳು ಬಾಕಿ ಉಳಿದಿವೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನೂರು ದಿನದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ಒಟ್ಟು 98 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಒಟ್ಟು 2,950 ದೂರು ದಾಖಲಾಗಿರುವುದನ್ನು ಸ್ಮರಿಸಬಹುದು.

ಜುಲೈ 28ರಿಂದ ಅಕ್ಟೋಬರ್‌ 25ರವರೆಗೆ 63 ಟ್ರ್ಯಾಪ್‌, 10 ಶೋಧನಾ ಹಾಗೂ ಇತರೆ 25 ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ದಳವು ದಾಖಲು ಮಾಡಿಕೊಂಡಿದೆ. ಈ ಎಲ್ಲಾ ಪ್ರಕರಣಗಳಲ್ಲಿ 101 ಆರೋಪಿ ಸಾರ್ವಜನಿಕ ನೌಕರರನ್ನು ದಸ್ತಗಿರಿ ಮಾಡಿರುವುದು ಇಲಾಖೆಯು ಒದಗಿಸಿರುವ ಮಾಹಿತಿಯಿಂದ ತಿಳಿದು ಬಂದಿದೆ.

ದಾಖಲಾಗಿರುವ ಪ್ರಕರಣಗಳ ಪೈಕಿ 57 ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದೆ. 1,425 ದೂರು ಅರ್ಜಿಗಳು ಸಲ್ಲಿಕೆಯಾಗಿವೆ. ಬಾಕಿ ಇದ್ದ ಅರ್ಜಿಗಳ ಪೈಕಿ 1,084 ದೂರು ಅರ್ಜಿಗಳನ್ನು ವಿಲೇವಾರಿ ಮಾಡಿರುವುದು ಗೊತ್ತಾಗಿದೆ.

ಲೋಕಾಯುಕ್ತದಲ್ಲಿಯೂ ಜುಲೈ 28ರಿಂದ ಅಕ್ಟೋಬರ್‌ 26ರವರೆಗೆ 1,525 ದೂರು ಪ್ರಕರಣಗಳು ದಾಖಲಾಗಿವೆ. 2,865 ಇಲಾಖೆ ವಿಚಾರಣೆಗಳು ಬಾಕಿ ಇವೆಯಲ್ಲದೇ ಈ ಅವಧಿಯಲ್ಲಿ 294 ಪ್ರಕರಣಗಳಲ್ಲಿ ವಿಚಾರಣೆ ವರದಿಗಳನ್ನು ಸರ್ಕಾರಕ್ಕೆ ಕಳಿಸಲಾಗಿದೆ. ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಕಲಂ 12(3) ಅಡಿ 26 ಪ್ರಕರಣಗಳಲ್ಲಿ ವರದಿ ಸಲ್ಲಿಸಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯಗಳಲ್ಲಿ 2021ರ ಸೆಪ್ಟಂಬರ್‌ 30ರ ಅಂತ್ಯಕ್ಕೆ 834 ಪ್ರಕರಣಗಳು ಬಾಕಿ ಇವೆ. ಜುಲೈ 28ರಿಂದ ಅಕ್ಟೋಬರ್‌ 26ರವರೆಗೆ 14 ಪ್ರಕರಣಗಳಲ್ಲಷ್ಟೇ ತೀರ್ಪು ಬಂದಿದೆ. ಈ ಪೈಕಿ 03 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ ಎಂದು ಲೋಕಾಯುಕ್ತ ರಿಜಿಸ್ಟ್ರಾರ್‌ ಅವರು ಸರ್ಕಾರಕ್ಕೆ ಮಾಹಿತಿ ಒದಗಿಸಿದ್ದರು.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ನಂತರ ಹಲವು ದಿನಗಳ ಕಾಲ ದೆಹಲಿ ಯಾತ್ರೆ ಕೈಗೊಂಡಿದ್ದರು. ಈ ಮಧ್ಯೆಯೇ ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟಿನಲ್ಲಿ ಮುಳುಗಿದ್ದರು. ಪ್ರಮುಖವಾಗಿ ಆನಂದ್‌ಸಿಂಗ್‌ ಅವರ ಭಿನ್ನಮತವನ್ನು ಉಪಶಮನಗೊಳಿಸಿದ್ದರು.

ವಿಜಯನಗರ ಜಿಲ್ಲೆಯನ್ನು ಉದ್ಘಾಟಿಸಿದರು. ಸುದ್ದಿವಾಹಿನಿಗಳು ನಡೆಸಿದ್ದ ಸಂದರ್ಶನದಲ್ಲಿ ನಿರಂತರವಾಗಿ ಪಾಲ್ಗೊಂಡಿದ್ದರು. ಇದರ ಬೆನ್ನಲ್ಲೇ ಹಾನಗಲ್‌, ಸಿಂಧಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗಳಲ್ಲಿ ತೊಡಗಿಸಿಕೊಂಡಿದ್ದರು. ರಾಜಕೀಯ ಬೆಳವಣಿಗೆಗಳ ಮಧ್ಯೆಯೇ ಎರಡು ಬಾರಿ ಕರ್ನಾಟಕ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ)ಗಳಲ್ಲಿ ಪಾಲ್ಗೊಂಡಿದ್ದನ್ನು ಸ್ಮರಿಸಬಹುದು.

Hot this week

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Related Articles

Popular Categories

error: Content is protected !!