Wednesday | March 25, 2026 |

ವಿಲಾಸಿ ಔತಣಕೂಟಗಳಲ್ಲಿ ಶ್ರೀಕಿ ಭಾಗಿ; ಆರ್ಕಾ ಸೈಲಿಂಗ್‌ ಬೋಟ್ಸ್‌ಗೆ 10 ಲಕ್ಷ ಪಾವತಿ

Support THE-FILE

spot_img

ಬೆಂಗಳೂರು; ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿ ಸಮುದ್ರದಲ್ಲಿ ತೇಲುವ ಹಡಗು ಮತ್ತು  ದೋಣಿಗಳಲ್ಲಿ ನಡೆಯುತ್ತಿದ್ದ ಮೋಜು ಮಸ್ತಿ, ವಿಲಾಸಿ ಔತಣ ಕೂಟಗಳಲ್ಲಿ ಭಾಗಿಯಾಗಿದ್ದ. ಇದಕ್ಕಾಗಿ ಅರ್ಕಾ ಸೈಲಿಂಗ್‌ ಬೋಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 10 ಲಕ್ಷ ರು.ಗಳನ್ನು ಈತನ ಸೂಚನೆಯಂತೆ ಪಾವತಿಯಾಗಿತ್ತು ಎಂಬುದನ್ನು ದೋಷಾರೋಪಣೆ ಪಟ್ಟಿಯು ಬಹಿರಂಗಗೊಳಿಸಿದೆ.

ವಿಐಪಿ, ವಿವಿಐಪಿ, ಸಿನಿಮಾ ತಾರೆಯರು, ಪ್ರತಿಷ್ಠಿತ ರಾಜಕಾರಣಿಗಳ ಮಕ್ಕಳು ಭಾಗವಹಿಸುವ ಇಂತಹ ವಿಲಾಸಿ ಔತಣಕೂಟಗಳಲ್ಲಿ ಶ್ರೀಕಿಯು ಭಾಗವಹಿಸುತ್ತಿದ್ದ ಎಂಬುದಕ್ಕೆ ಅರ್ಕಾ ಸೈಲಿಂಗ್‌ ಬೋಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 10 ಲಕ್ಷ ರು.ಪಾವತಿಯಾಗಿರುವುದೇ ನಿದರ್ಶನ.

2017ರಿಂದ ಇಲ್ಲಿಯವರೆಗೆ ಶ್ರೀಕೃಷ್ಣ ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ. 2017ರಿಂದ ಇಲ್ಲಿಯವರೆಗೆ ಶ್ರೀ ಕೃಷ್ಣನ ಖರ್ಚು ವೆಚ್ಚಗಳನ್ನು ನೋಡಿಕೊಂಡಿದ್ದ ಆತನ ಸಹಚರ ಆರ್ಕಾ ಸೈಲಿಂಗ್‌ ಬೋಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 10 ಲಕ್ಷ ರು. ಸೇರಿದಂತೆ ಹಲವು ಐಷಾರಾಮಿ ಹೋಟೆಲ್‌, ವ್ಯಕ್ತಿಗಳಿಗೆ ಲಕ್ಷಾಂತರ ರುಪಾಯಿಗಳನ್ನು ಪಾವತಿಸಿದ್ದ ಎಂಬ ಸಂಗತಿಯು ದೋಷಾರೋಪಣೆ ಪಟ್ಟಿಯಿಂದ ತಿಳಿದು ಬಂದಿದೆ.

ಐಟಿಸಿ ಲಿಮಿಟೆಡ್‌ಗೆ 325,000.00 ರು., ಐಟಿಸಿ ಹೋಟೆಲ್‌ ವಿಭಾಗಕ್ಕೆ 119,057.00 ರು., ಮ್ಯಾಗ್ನಸ್‌ ವೆಕೇಷನ್‌ಗೆ 350,000.00 ರು., ಆರ್ಕಾ ಸೈಲ್‌ ಬೋಟ್‌ ಪ್ರೈವೈಟ್‌ ಲಿಮಿಟೆಡ್‌ಗೆ 1,000,000.00 ರು., ಪ್ಯಾರಾಡೈಸ್‌ ಪ್ರಾಪರ್ಟಿಸ್‌ ವೆಸ್ಟಿನ್‌ಗೆ 250,000.00 ರು, ರೇಮಂಡ್ಸ್‌ ಲಿಮಿಟೆಡ್‌ಗೆ 191,950.00 ರು., ವಿಜ್ಞೇಶ್‌ ಕೆ ಮೂರ್ತಿಗೆ 104,000.00 ರು., ಮೊದಡಗು ಸುಪ್ರಿಯಾ ಎಂಬುವರಿಗೆ 303,000.00 ರು., ಸೆರೇಸ್‌ ಹೋಟೆಲ್‌ಗೆ 1,000,000.00 ರು., ಇಂಪೀರಿಯಲ್‌ ಹೋಟೆಲ್‌ಗೆ 74,000, ಇಂಡಿಯನ್‌ ಹೋಟೆಲ್‌ಗೆ 485,000.00 ರು., ಐಟಿಸಿ ಲಿಮಿಟೆಡ್‌ಗೆ 559,979.00 ರು., ಸೇರಿದಂತೆ ಒಟ್ಟು 50 ಮಂದಿಯ ಖಾತೆಗಳಿಗೆ 3,48,62,590 ರು.ಗಳನ್ನು ಬ್ಯಾಂಕ್‌ ಮೂಲಕ ಕಳಿಸಲಾಗಿತ್ತು ಎಂದು ಶ್ರೀಕಿಯ ಸಹಚರ ಪೊಲೀಸರ ಮುಂದೆ ಒಪ್ಪಿಕೊಂಡಿರುವುದು ದೋಷಾರೋಪಣೆ ಪಟ್ಟಿಯಿಂದ ಗೊತ್ತಾಗಿದೆ.

ಶ್ರೀಕಿ ಹೇಳಿರುವ ಖಾತೆಗಳಿಗೆ ಲಕ್ಷಾಂತರ ರುಪಾಯಿಗಳನ್ನು ಪಾವತಿಸಲಾಗಿದೆ ಎಂದು ಈತನ ಸಹಚರರು ಹೇಳಿಕೆ ನೀಡಿದ್ದಾರೆ. ಈ ಪೈಕಿ ಹಲವು ಮೋಜು ಮಸ್ತಿ, ವಿಲಾಸ ಜೀವನ ನಡೆಸಿದ್ದ ಹೋಟೆಲ್‌, ರೆಸಾರ್ಟ್‌ ಸೇರಿದಂತೆ ಇನ್ನಿತರರಿಗೆ ಪಾವತಿಸಲಾಗಿದೆ. ದಿನವೊಂದಕ್ಕೆ ಸರಾಸರಿ 2 ಲಕ್ಷ ರು.ಗಳನ್ನು ಖರ್ಚು ಮಾಡುತ್ತಿದ್ದೇನೆ ಎಂದು ಶ್ರೀಕಿ ನೀಡಿದ್ದ ಹೇಳಿಕೆ ಮತ್ತು ಆತ ಹೇಳಿದ್ದ ಹೋಟೆಲ್‌ ಮತ್ತು ವ್ಯಕ್ತಿಗಳ ಖಾತೆಗಳಿಗೆ ಲಕ್ಷಾಂತರ ರು.ಪಾವತಿ ಮಾಡಲಾಗಿದೆ ಎಂಬ ಸಹಚರರ ಹೇಳಿಕೆ ಆಧರಿಸಿ ಆದಾಯ ತೆರಿಗೆ ಇಲಾಖೆಯ ನೆರವು ಪಡೆದು ಪತ್ತೆದಾರಿಕೆ ನಡೆಸುವಂತಹ ಕನಿಷ್ಠ ಜಾಣ್ಮೆಯನ್ನೂ ತನಿಖಾ ತಂಡ ಪ್ರದರ್ಶಿಸಿಲ್ಲ.

ದಿನವೊಂದಕ್ಕೆ ಸರಾಸರಿ 2 ಲಕ್ಷ ರು. ಗಳನ್ನು ಶ್ರೀಕಿ ಖರ್ಚು ಮಾಡುತ್ತಿದ್ದ ಎಂದಾದರೆ ತಿಂಗಳಿಗೆ 60 ಲಕ್ಷ ಖರ್ಚು ಮಾಡಿದ್ದಾನೆ ಎಂದೇ ಅರ್ಥ.ಇದೇ ಲೆಕ್ಕಾಚಾರದ ಪ್ರಕಾರ ವರ್ಷಕ್ಕೆ 7.20 ಕೋಟಿ ಖರ್ಚು ಮಾಡಿದಂತಾಗುತ್ತದೆ. ಇದರ ಪ್ರಕಾರ ಕಳೆದ ಮೂರು ವರ್ಷದಲ್ಲಿ ಸರಾಸರಿ 20 ಕೋಟಿ ಖರ್ಚಾದಂತೆ. ದಿನವೊಂದಕ್ಕೆ 2 ಲಕ್ಷ ರು.ಗಳನ್ನು ಕ್ರೆಡಿಟ್‌ ಕಾರ್ಡ್‌ ಮೂಲಕ ಪಾವತಿಸಿದ್ದಾನೆಯೇ ಅಥವಾ ಡಿಜಿಟಲ್‌ನ ಬೇರೊಂದು ಮಾರ್ಗದಲ್ಲಿ ಪಾವತಿಸಲಾಗಿದೆಯೇ ಎಂಬುದರತ್ತ ತನಿಖೆಯೇ ನಡೆದಿಲ್ಲ ಎಂದು ತಿಳಿದು ಬಂದಿದೆ.

ತನಿಖೆಯ ಆಳವನ್ನು ನಿಜಕ್ಕೂ ವಿಸ್ತರಣೆ ಮಾಡಬೇಕೆಂದಾಗಿದ್ದರೆ ಈ ಎಲ್ಲ ಮಗ್ಗುಲುಗಳಿಂದಲೂ ಪೊಲೀಸರು ತನಿಖೆ ನಡೆಸಬೇಕಿತ್ತು. ಆದರೆ ಈ ಪ್ರಕರಣದಲ್ಲಿ ಈ ಯಾವ ಪ್ರಕ್ರಿಯೆಯೂ ನಡೆದಿಲ್ಲ ಎಂದು ಗೊತ್ತಾಗಿದೆ.

Hot this week

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

Topics

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

Related Articles

Popular Categories

error: Content is protected !!