Monday | March 30, 2026 |

ಬೋಧಕರಿಗೆ ದೊರೆತಿಲ್ಲ ಪಿಂಚಣಿ ಸೌಲಭ್ಯ; 5 ವರ್ಷಗಳಿಂದಲೂ ಬಾಕಿ ಇದೆ 299 ಕೋಟಿ

Support THE-FILE

spot_img

ಬೆಂಗಳೂರು; ಸರ್ಕಾರದ ಸಾಧನೆ ಬಿಂಬಿಸಲು ದಿನಪತ್ರಿಕೆ ಮತ್ತು ಟಿ ವಿ ಚಾನಲ್‌ಗಳಿಗೆ ಜಾಹೀರಾತುಗಳಿಗೆ ಕೋಟ್ಯಂತರ ರುಪಾಯಿಗಳನ್ನು ವೆಚ್ಚ ಮಾಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ವಿಶ್ವವಿದ್ಯಾಲಯಗಳಲ್ಲಿ ವಯೋ ನಿವೃತ್ತಿ, ಸ್ವಯಂ ನಿವೃತ್ತಿ ಹೊಂದಿರುವ ಅಧ್ಯಾಪಕರು, ಪ್ರಾಧ್ಯಾಪಕರಿಗೆ ಕುಟುಂಬ ಪಿಂಚಣಿ, ವಿಶ್ರಾಂತಿ ವೇತನ, ಮರಣ ಉಪದಾನ ಮತ್ತು ನಿವೃತ್ತಿ ಉಪದಾನಗಳ ಶೀರ್ಷಿಕೆಯಡಿಯಲ್ಲಿ 299.24 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ.

ಪಿಂಚಣಿ ನೀಡಲು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಕಮಿಷನ್‌ ಕೇಳುತ್ತಿದ್ದಾರೆ ಎಂಬ ಗುರುತರವಾದ ಆರೋಪ ಕೇಳಿ ಬಂದ ಬೆನ್ನಲ್ಲೇ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪಿಂಚಣಿ ಸೇರಿದಂತೆ ಇನ್ನಿತರೆ ಸೌಲಭ್ಯ ಒದಗಿಸಲು 299.24 ಕೋಟಿ ರು. ಬಾಕಿ ಉಳಿಸಿಕೊಂಡಿರುವುದು ಮುನ್ನೆಲೆಗೆ ಬಂದಿದೆ.

ವಿಶ್ವವಿದ್ಯಾಲಯಗಳಲ್ಲಿ 2016ರ ನಂತರ ನಿವೃತ್ತಿ ಹೊಂದಿದ ಪ್ರಾಧ್ಯಾಪಕರಿಗೆ ಪಿಂಚಣಿ ಸೌಲಭ್ಯಗಳನ್ನು ನೀಡಲು ಕನ್ನಡ ವಿಶ್ವವಿದ್ಯಾಲಯವೂ ಸೇರಿದಂತೆ ರಾಜ್ಯದ ಸಾಂಪ್ರದಾಯಿಕ 17 ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಅನುದಾನದ ಕೋರಿಕೆ ಪ್ರಸ್ತಾವನೆಗಳು ಸರ್ಕಾರದ ಹಂತದಲ್ಲೇ ನೆನೆಗುದಿಗೆ ಬಿದ್ದಿವೆ. ಇದರಲ್ಲಿ ಯುಜಿಸಿ 7ನೇ ಆಯೋಗದ ಅನ್ವಯ ಪರಿಷ್ಕೃತ ವೇತನಕ್ಕೆ ಪರಿಷ್ಕರಿಸಿರುವ ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳ ಪಾವತಿಯ ಮೊತ್ತವೂ ಸೇರಿದೆ.

ಯುಜಿಸಿ 7ನೇ ಆಯೋಗದನ್ವಯ ಪರಿಷ್ಕೃತ ವೇತನಕ್ಕೆ ಪರಿಷ್ಕರಿಸಿರುವ ಪಿಂಚಣಿ, ಪಿಂಚಣಿ ಸೌಲಭ್ಯಗಳ ಪಾವತಿಗಾಗಿ ಮೈಸೂರು ವಿಶ್ವವಿದ್ಯಾಲಯವು ಒಟ್ಟು 15,14,43,829 ಕೋಟಿ ರು ಮತ್ತು ಕಾಲೇಜು, ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ, ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ 2016ರ ನಂತರ ನಿವೃತ್ತಿ ಹೊಂದಿರುವ ಅಧ್ಯಾಪಕರುಗಳಿಗೆ 2016ನೇ ಯುಜಿಸಿ ಪರಿಷ್ಕೃತ ಪಿಂಚಣಿ ಸೌಲಭ್ಯದ 154.57 ಕೋಟಿ ರು. .ಗಳ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದೆ.

ಕಳೆದ 2 ವರ್ಷದಿಂದಲೂ ವಿಶ್ವವಿದ್ಯಾಲಯಗಳು ಪಿಂಚಣಿ ಸೌಲಭ್ಯಗಳಿಗಾಗಿ ಅನುದಾನ ಕೋರಿಕೆ ಸಂಬಂಧ ಸಲ್ಲಿಸಿರುವ ಪ್ರಸ್ತಾವನೆಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 2016ರ ನಂತರ ವಯೋ ನಿವೃತ್ತಿ, ಸ್ವಯಂ ನಿವೃತ್ತಿ ಹೊಂದಿರುವ ಪ್ರಾಧ್ಯಾಪಕರಿಗೆ ಒಟ್ಟು 299, 24,33,378 ರು. ಅನುದಾನ ಕೋರಿಕೆ ಸಲ್ಲಿಸಿ ಪ್ರಸ್ತಾವನೆ ಸಲ್ಲಿಸಿದೆ. ಈ ಪ್ರಸ್ತಾವನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಉನ್ನತ ಶಿಕ್ಷಣ ಇಲಾಖೆಯು ಕಳೆದ ಒಂದು ವರ್ಷದಿಂದ ಆರ್ಥಿಕ ಇಲಾಖೆಯ ಜತೆ ಪತ್ರ ವ್ಯವಹಾರಗಳಲ್ಲೇ ಕಾಲಹರಣ ಮಾಡಿರುವುದು ಇಲಾಖೆಯ ಟಿಪ್ಪಣಿ ಹಾಳೆಗಳಿಂದ ತಿಳಿದು ಬಂದಿದೆ.

ಪಿಂಚಣಿ ಅನುದಾನ ಕೋರಿಕೆ ಪಟ್ಟಿ

ಮೈಸೂರು ವಿಶ್ವವಿದ್ಯಾಲಯ – 50,70, 91,704 ರು.

ಕರ್ನಾಟಕ ವಿ ವಿ – 5,72,23,832 ರು.

ಬೆಂಗಳೂರು ವಿ ವಿ – 29, 62, 02, 932 ರು

ಗುಲ್ಬರ್ಗಾ ವಿ ವಿ – 7, 29, 17, 585 ರು.

ಮಂಗಳೂರು ವಿ ವಿ – 11, 83, 57,195 ರು.

ಕನ್ನಡ ವಿ ವಿ – 4, 59, 90, 595 ರು.

ಕುವೆಂಪು ವಿ ವಿ – 1, 40, 85,509 ರು.

ಅಕ್ಕಮಹಾದೇವಿ ಮಹಿಳಾ ವಿ ವಿ – 80, 20, 341 ರು.

ದಾವಣಗೆರೆ ವಿ ವಿ – 6, 49, 55, 545 ರು.

ವಿಜಯನಗರ ವಿ ವಿ – 1, 19, 37, 694 ರು.

ಬೆಳಗಾವಿ ವಿ ವಿ – 7, 81, 47, 268 ರು.

ಕರ್ನಾಟಕ ಮುಕ್ತ ವಿ ವಿ – 2, 03, 12, 228 ರು

ಕಾಲೇಜು, ತಾಂತ್ರಿಕ ಶಿಕ್ಷಣ – 154, 57, 47, 121 ರು.

2016ರ ಜನವರಿ 1ರ ನಂತರ ವಯೋ ನಿವೃತ್ತಿ ಹೊಂದಿರುವ ಅಧ್ಯಾಪಕರುಗಳಿಗೆ 7ನೇ ವೇತನ ಆಯೋಗದ ಅನ್ವಯ ಪರಿಷ್ಕೃತ ವೇತನಕ್ಕೆ ಪಿಂಚಣೀ ಸೌಲಭ್ಯಗಳನ್ನು ಮಂಜೂರು ಮಾಡಿತ್ತು. ಮೇ 2020ರ ನಂತರ ಪ್ರತಿತಿಂಗಳು ಪಿಂಚಣಿಯನ್ನು ಮಾತ್ರ ಪಾವತಿಸಲಾಗುತ್ತಿದೆ. 2016ರ ನಂತರ ನಿವೃತ್ತಿ ಹೊಂದಿದ ಅಧ್ಯಾಪಕರಿಗೆ ಇತರೆ ಪಿಂಚಣಿ ಸೌಲಭ್ಯಗಳನ್ನು ನೀಡಲು 50, 70, 91, 704 ರು.ಗಳ ಅನುದಾನವನ್ನು ಬಿಡುಗಡೆ ಮಾಡಲು ಮೈಸೂರು ವಿಶ್ವವಿದ್ಯಾಲಯವು ಸರ್ಕಾರಕ್ಕೆ ಕೋರಿಕೆ ಸಲ್ಲಿಸಿತ್ತು ಎಂದು ತಿಳಿದು ಬಂದಿದೆ.

ಅಲ್ಲದೆ ಯುಜಿಸಿ 7ನೇ ವೇತನ ಪರಿಷ್ಕೃತ ವೇತನ ವ್ಯತ್ಯಾಸದ ಪಾವತಿಗಾಗಿ ಸರ್ಕಾರದಿಂದ ಬಿಡುಗಡೆಗೊಳಿಸಿರುವ 78, 14, 40,000 ರು.ಗಳಅನುದಾನದಲ್ಲಿ ವೇತನ ವ್ಯತ್ಯಾಸ ಪಾವತಿಸಿ ಉಳಿದಿರುವ ಬಾಕಿ ಮೊತ್ತವನ್ನು ಯುಜಿಸಿ 7ನೇ ಪರಿಷ್ಕೃತ ವೇತನದ ಅನ್ವಯ ಪರಿಷ್ಕೃತಗೊಂಡ ಪಿಂಚಣಿ ಮತ್ತುಪಿಂಚಣಿ ಸೌಲಭ್ಯಗಳ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಉಪಯೋಗಿಸಲು ಆಡಳಿತಾತ್ಮಕ ಆದೇಶಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು ಎಂದು ಗೊತ್ತಾಗಿದೆ.

Hot this week

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

Topics

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Related Articles

Popular Categories

error: Content is protected !!