Thursday | July 16, 2026 |

ಶಾಸಕ ಪ್ರಶಸ್ತಿ; ಬಿಎಸ್‌ವೈ ಓಲೈಕೆಗಿಳಿದು ರಮೇಶ್‌ಕುಮಾರ್‌ ಹೆಸರು ಕೈಬಿಡಲಾಗಿತ್ತೇ?

ಬೆಂಗಳೂರು; ಕರ್ನಾಟಕ ವಿಧಾನಸಭೆಯ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಕಾಂಗ್ರೆಸ್‌ನ ಶಾಸಕ ಹಾಗೂ ಮಾಜಿ ಸ್ಪೀಕರ್‌ ಕೆ ಆರ್‌ ರಮೇಶ್‌ಕುಮಾರ್‌ ಅವರ ಹೆಸರನ್ನೂ ಆಯ್ಕೆ ಸಮಿತಿಯು ಅಂತಿಮಗೊಳಿಸಿತ್ತು. ಕಡೇ ಗಳಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಶಿಕಾರಿಪುರ ಶಾಸಕ ಬಿ ಎಸ್‌ ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲು ಆಯ್ಕೆ ಸಮಿತಿಯು ತೀರ್ಮಾನಿಸಿತ್ತು ಎಂಬ ಅಂಶ ಇದೀಗ ಆರ್‌ಟಿಐನಿಂದ ಬಹಿರಂಗವಾಗಿದೆ.

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಿರುವ ಸಂಬಂಧ ‘ದಿ ಫೈಲ್‌’ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಉತ್ತರಿಸಿರುವ ಕರ್ನಾಟಕ ವಿಧಾನಸಭೆ ಸಚಿವಾಲಯವು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡುವ ಸಂಬಂಧ ಅಖೈರುಗೊಳಿಸಿದ್ದ ಶಾಸಕರ ಪಟ್ಟಿಯನ್ನು ಒದಗಿಸಿಲ್ಲ.

2021ನೆ ಸಾಲಿನ ಕರ್ನಾಟಕ ವಿಧಾನಸಭೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಲು 2021ರ ಸೆಪ್ಟಂಬರ್‌ 21ರಂದು ಸಭೆ ಸೇರಿದ್ದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಸಮಿತಿಯು ವಿಧಾನಸಭೆಯ ಸದಸ್ಯರುಗಳ ಸಾಧನೆಗಳನ್ನು ಪರಿಶೀಲಿಸಿತ್ತು. ಆದರೆ ಯಾವ್ಯಾವ ಶಾಸಕರ ಸಾಧನೆಗಳನ್ನು ಪರಿಶೀಲಿಸಿದೆ ಎಂಬ ಮಾಹಿತಿಯನ್ನು ಆರ್‌ಟಿಐನಲ್ಲಿ ಒದಗಿಸಿಲ್ಲ.

‘ಪ್ರಶಸ್ತಿಗೆ ನಾವು ಹಲವು ಹೆಸರನ್ನು ಪರಿಶೀಲಿಸಿದೆವು. ಅದರೆ, ಆಯ್ಕೆ ಕ್ಲಿಷ್ಟಕರವಾಗಿತ್ತು. ಯಡಿಯೂರಪ್ಪನವರ ಆಯ್ಕೆಯು ಸರ್ವಾನುಮತದಿಂದ ಕೂಡಿದೆ,’ ಎಂದು ಕಾಗೇರಿ ಹೇಳಿದ್ದನ್ನು ಸ್ಮರಿಸಬಹುದು.

‘ಕರ್ನಾಟಕ ವಿಧಾನಸಭೆಯ ಅತ್ಯುತ್ತಮ ಶಾಸಕ ಪ್ರಶಸ್ತಿ’ ನೀಡುವ ವಿಚಾರವಾಗಿ ಸಮಿತಿಯು ವಿಧಾನಸಭೆಯ ಸದಸ್ಯರುಗಳ ಸಾಧನೆಗಳನ್ನು ಪರಿಶೀಲಿಸಿತು. ನಂತರ ಸಭೆಯಲ್ಲಿ ಕರ್ನಾಟಕ ವಿಧಾನಸಭೆಯ ಅತ್ಯುತ್ತಮ ಶಾಸಕ ಪ್ರಶಸ್ತಿಗಾಗಿ ಬಿಜೆಪಿ ಪಕ್ಷದ ಸದಸ್ಯರಾದ ಬಿ ಎಸ್‌ ಯಡಿಯೂರಪ್ಪ ಹಾಗೂ ಕಾಂಗ್ರೆಸ್‌ ಪಕ್ಷದ ಸದಸ್ಯರಾದ ಕೆ ಆರ್‌ ರಮೇಶ್‌ಕುಮಾರ್‌ ಇವರುಗಳ ಹೆಸರುಗಳನ್ನು ಅಂತಿಮಗೊಳಿಸಿ ಇವರಿಬ್ಬರಲ್ಲಿ ಒಬ್ಬ ಸದಸ್ಯರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡುವ ಕುರಿತು ತೀರ್ಮಾನವನ್ನು ತೆಗೆದುಕೊಳ್ಳುವ ಅಧಿಕಾರವನ್ನು ಸಭಾಧ್ಯಕ್ಷರಿಗೆ ವಹಿಸಲಾಗಿತ್ತು,’ ಎಂಬುದು ಆರ್‌ಟಿಐ ನಿಂದ ತಿಳಿದು ಬಂದಿದೆ.

ಆಯ್ಕೆಗೆ ಮಾರ್ಗಸೂಚಿಗಳೇನು?

ವಿಧಾನಸಭಾ ಸದಸ್ಯರು ಸಾರ್ವಜನಿಕ ಜೀವನದಲ್ಲಿ ಶಾಸಕರಾಗಿ ಮತಕ್ಷೇತ್ರಕ್ಕೆ ನೀಡಿರುವ ಕೊಡುಗೆಯ ಪರಿಗಣನೆ

ತಮ್ಮ ಮತ ಕ್ಷೇತ್ರಗಳಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿ ಗಳಿಸಿರುವ ಅನುಭವದ ಪರಿಗಣನೆ

ಸದನದಲ್ಲಿ ನಡೆಯುವ ಚರ್ಚೆಗಳಲ್ಲಿ ಸದಸ್ಯರು ತೋರಿಸುವ ಕೌಶಲ್ಯ

ಸಾರ್ವಜನಿಕ ಹಿತಾಸಕ್ತಿ ಇರುವಂತಹ ವಿಷಯಗಳ ಬಗ್ಗೆ ಸದಸ್ಯರಿಗೆ ಇರುವ ಆಸಕ್ತಿ

ಸದನದಲ್ಲಿ ಸದಸ್ಯರು ಪ್ರಸ್ತಾಪಿಸುವ ವಿಷಯ ಹಾಗೂ ಅದರ ಗಂಭೀರತೆಯ ಪರಿಗಣನೆ

ಸದನದಲ್ಲಿ ವಿಷಯಗಳನ್ನು ಪ್ರಸ್ತುತಪಡಿಸುವ ವಿಧಾನ ಹಾಗೂ ಸದನದ ಸಂಪ್ರದಾಯಗಳ ಬಗ್ಗೆ ಅವರಿಗೆ ಇರುವ ಮನೋಭಾವನೆ

ಕನ್ನಡ ಭಾಷೆಯಲ್ಲಿ ಹೊಂದಿರುವ ಪಾಂಡಿತ್ಯ

ಸದನದ ಒಳಗೆ ಹಾಗೂ ಹೊರಗೆ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆ ನಿಯಮಗಳ ಅರಿವು, ಅವುಗಳ ಪಾಲನೆ

ಸಭಾಧ್ಯಕ್ಷರು ನೀಡುವ ಸೂಚನೆಗಳನ್ನು ಅನುಸರಿಸಲು ಗ್ರಹಿಸುವಲ್ಲಿನ ಸಾಮರ್ಥ್ಯ

ವಿಧಾನಮಂಡಲದ/ವಿಧಾನಸಭೆಯ ಸಮಿತಿಗಳಲ್ಲಿನ ಭಾಗವಹಿಸುವಿಕೆ

ಶಾಸಕರಾಗಿ ಸದನದ ಒಳಗೆ ಹಾಗೂ ಹೊರಗೆ ಸದಸ್ಯರ ನಡವಳಿಕೆ

ಸದನದಲ್ಲಿ ಹಾಜರಾತಿ

ಇತರೆ ಸದಸ್ಯರುಗೊಳೊಂದಿಗೆ ತೋರ್ಪಡಿಸುವ ಸೌಹಾರ್ದಯುತ ಸಂಬಂಧ ಸದನದಲ್ಲಿ ಕೇಳಲಾದ ಪ್ರಶ್ನೆಗಳ ಗುಣಮಟ್ಟ, ವ್ಯಾಪ್ತಿ ಮತ್ತು ಪ್ರಸ್ತುತಪಡಿಸುವ ವಿಧಾನ

ಸದನದಲ್ಲಿ ಉಂಟಾಗುವ ಪ್ರತಿರೋಧದ ಪರಿಸ್ಥಿತಿಗಳ ಕಾರ್ಯನಿರ್ವಹಣೆ ಸಂದರ್ಭದಲ್ಲಿ ತೋರಿಸುವ ಸಹಕಾರ

ಪ್ರಶಸ್ತಿಗೆ ಆಯ್ಕೆ ಮಾಡುವ ಸಮಿತಿಯು ವಿಧಾನಸಭೆ ಸದಸ್ಯರ ಜೇಷ್ಠತೆಯನ್ನು ಪರಿಶೀಲಿಸಿರುವುದು ಗೊತ್ತಾಗಿದೆ. ಮಾರ್ಗಸೂಚಿಗಳ ಅನ್ವಯ ಪ್ರಶಸ್ತಿಗೆ ಶಾಸಕರುಗಳ ಪಟ್ಟಿಯನ್ನು ತಯಾರಿಸಲಾಗಿತ್ತೇ ಅಥವಾ ಇಲ್ಲವೇ ಎಂಬುದನ್ನು ವಿಧಾನಸಭೆ ಸಚಿವಾಲಯವು ಆರ್‌ಟಿಐನಲ್ಲಿ ಮಾಹಿತಿ ಒದಗಿಸಿಲ್ಲ.

ಸ್ಪೀಕರ್‌ ಕಾಗೇರಿ ನೇತೃತ್ವದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಅವರು ಸಮಿತಿಯ ಸದಸ್ಯರಾಗಿದ್ದರು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!