Saturday | April 11, 2026 |

ರಾಷ್ಟ್ರೋತ್ಥಾನಕ್ಕೆ ಬಹುಕೋಟಿ ಮೌಲ್ಯದ ಗೋಮಾಳ ಜಮೀನು; ಸಂಘಪರಿವಾರ ಮೆಚ್ಚಿಸಿದರೇ ಅಶೋಕ್‌?

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕು ವ್ಯಾಪ್ತಿಯಲ್ಲಿರುವ ಹೆಸರಘಟ್ಟ ಬಳಿ 24.8 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ ರಾಷ್ಟ್ರೋತ್ಥಾನ ಪರಿಷತ್‌ಗೆ ಬಹುಕೋಟಿ ಮೌಲ್ಯದ 9.32 ಎಕರೆ ವಿಸ್ತೀರ್ಣದ ಜಾಗವನ್ನು ಮಂಜೂರು ಮಾಡಲು ರಾಜ್ಯ ಬಿಜೆಪಿ ಸರ್ಕಾರವು ಮುಂದಾಗಿದೆ.

ಇದೇ ರಾಷ್ಟ್ರೋತ್ಥಾನ ಪರಿಷತ್‌ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಹಿಂದೆ 76 ಎಕರೆ ಜಮೀನು ಮಂಜೂರು ಮಾಡಿದ್ದನ್ನು ಸಿಎಜಿ ವರದಿಯಲ್ಲಿ ಆಕ್ಷೇಪಿಸಲಾಗಿತ್ತು. ಈ ವರದಿಯನ್ನು ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಚರ್ಚೆಗೆ ಕೈಗೆತ್ತಿಕೊಂಡಿತ್ತು. ಈ ಸಮಿತಿಗೆ ಯಾವುದೇ ವರದಿಯನ್ನೂ ಸಲ್ಲಿಸದ ಕಂದಾಯ ಇಲಾಖೆಯು ಬೆಂಗಳೂರು ನಗರ ಜಿಲ್ಲೆಯ ಹೆಸರಘಟ್ಟದಲ್ಲಿ 9.32 ಎಕರೆ ಜಮೀನು ಮಂಜೂರು ಮಾಡಲು ಮುಂದಾಗಿರುವುದು ಮತ್ತೊಮ್ಮೆ ಸಿಎಜಿ ಆಕ್ಷೇಪಣೆಗೆ ದಾರಿಮಾಡಿಕೊಡಲಿದೆ.

ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2009 ಮತ್ತು 2011ರಲ್ಲಿ ಒಟ್ಟು 76 ಎಕರೆ 03 ಗುಂಟೆ ಜಮೀನನ್ನು ರಾಷ್ಟ್ರೋತ್ಥಾನ ಪರಿಷತ್‌ಗೆ ಮಂಜೂರು ಮಾಡಿದ್ದರೂ ಪ್ರಸಕ್ತ 2021ನೇ ಸಾಲಿನಲ್ಲಿಯೂ 9 ಎಕರೆ 32 ಗುಂಟೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕೆ ಮಂಜೂರು ಮಾಡಲು ಕಂದಾಯ ಇಲಾಖೆ ಸಚಿವ ಆರ್‌ ಅಶೋಕ್‌ ಸಹ ಆಸಕ್ತಿ ವಹಿಸಿದ್ದಾರೆ ಎಂದು ಗೊತ್ತಾಗಿದೆ.

ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕು ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂಬರ್ 69ರಲ್ಲಿ 9-32 ಎಕರೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ರಾಷ್ಟ್ರೋತ್ಥಾನ ಪರಿಷತ್‌ಗೆ ಮಂಜೂರು ಮಾಡುವ ಸಂಬಂಧ 2021ರ ನವೆಂಬರ್‌ 25ರಂದು ನಡೆದಿದ್ದ ಸಚಿವ ಸಂಪುಟದ ಸಭೆಯಲ್ಲಿ ಕಡತ ಮಂಡನೆಯಾಗಿತ್ತು. ಆದರೆ ಈ ಕುರಿತು ಸಚಿವ ಸಂಪುಟವು ಯಾವುದೇ ನಿರ್ಧಾರ ಕೈಗೊಳ್ಳಲಿಲ್ಲ. ಬದಲಿಗೆ ಮಂಜೂರಾತಿ ವಿಚಾರವನ್ನು ಕಂದಾಯ ಇಲಾಖೆಯೇ ನೇರವಾಗಿ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸೂಚಿಸಲಾಯಿತು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಯಲಹಂಕ ತಾಲೂಕು ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂಬರ್‌ನಲ್ಲಿ ಒಟ್ಟು 24.8 ವಿಸ್ತೀರ್ಣದ ಗೋಮಾಳ ಇದೆ. 2012ರಿಂದ 2021-22ರವರೆಗೂ ಈ ಜಮೀನು ಗೋಮಾಳ ಎಂದೇ ನಮೂದಾಗಿರುವುದು ಭೂಮಿ ತಂತ್ರಾಂಶದಿಂದ ತಿಳಿದು ಬಂದಿದೆ.

ಹುರುಳಿಚಿಕ್ಕನಹಳ್ಳಿಯಲ್ಲಿ ಖುಷ್ಕಿ ಜಮೀನಿಗೆ ತಲಾ ಎಕರೆಯೊಂದಕ್ಕೆ 61.00 ಲಕ್ಷ ರು. ಸರ್ಕಾರಿ ಮಾರ್ಗಸೂಚಿ ದರವಿದೆ. ಇದರ ಪ್ರಕಾರ 9.32 ಎಕರೆಗೆ 5.49 ಕೋಟಿಗೂ ಹೆಚ್ಚು ಬೆಲೆಬಾಳಲಿದೆ. ಮುಕ್ತ ಮಾರುಕಟ್ಟೆಯಲ್ಲಿನ ಲೆಕ್ಕಚಾರದ ಪ್ರಕಾರ (ಸರ್ಕಾರಿ ಮಾರ್ಗಸೂಚಿ ದರಕ್ಕಿಂತ ಗರಿಷ್ಠ 3 ಪಟ್ಟು) ತಲಾ ಎಕರೆಗೆ 1.81 ಕೋಟಿ ರು. ಆಗಲಿದೆ. ಇದರ ಪ್ರಕಾರ 9.32 ಎಕರೆಗೆ ಅಂದಾಜು 16.86 ಕೋಟಿ ರು. ಆಗಲಿದೆ.

2009ರ ಅಕ್ಟೋಬರ್‌ ಮತ್ತು 2011ರಲ್ಲಿಯೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 76 ಎಕರೆ 03 ಗುಂಟೆ ವಿಸ್ತೀರ್ಣದ ಜಾಗವನ್ನು ರಾಷ್ಟ್ರೋತ್ಥಾನ ಪರಿಷತ್‌ಗೆ ಮಂಜೂರು ಮಾಡಲಾಗಿತ್ತು. ಫಲಾನುಭವಿಗಳು ಯಾವುದೇ ಅರ್ಜಿಯನ್ನು ಸಲ್ಲಿಸದಿದ್ದರೂ ಕೂಡ ರಿಯಾಯಿತಿಗಳನ್ನು ನೀಡಲು ಯಾವುದೇ ಕಾರಣಗಳನ್ನೂ ದಾಖಲಿಸದೆಯೇ ಸರ್ಕಾರವು ಸ್ವಯಂ ಪ್ರೇರಿತವಾಗಿ ರಿಯಾಯಿತಿ ನೀಡಿತ್ತು. ಕರ್ನಾಟಕ ಭೂ ಮಂಜೂರಾತಿ ನಿಯಮಗಳ ನಿಯಮ 27ರ ಅಡಿಯಲ್ಲಿ ಅಗತ್ಯವಿರುವ ಯಾವುದೇ ಕಾರಣಗಳನ್ನು ದಾಖಲಿಸಿರಲಿಲ್ಲ. ಇದನ್ನು ಸಿಎಜಿ ವರದಿಯಲ್ಲಿ ಆಕ್ಷೇಪಿಸಲಾಗಿತ್ತು.

ಅದೇ ರೀತಿ ಬೆಂಗಳೂರು ದಕ್ಷಿಣ ತಾಲೂಕಿನ ಚನ್ನೇನಹಳ್ಳಿಯಲ್ಲಿ 2009ರಲ್ಲಿ ಜನಸೇವಾ ವಿಶ್ವಸ್ಥ ಮಂಡಳಿಗೆ 6 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿತ್ತು. ಶೇ.50ರ ರಿಯಾಯಿತಿಯನ್ನು ನೀಡಲಾಗಿದ್ದ ಮೂಲ ಆದೇಶವನ್ನು ತದನಂತರ ಶೇ.75ರ ರಿಯಾಯಿತಿಗೆ ಮಾರ್ಪಾಡು ಮಾಡಲಾಗಿತ್ತು. ಅಲ್ಲದೆ ಹಂಚಿಕೆಯನ್ನು ಪಡೆದವರ ಕೋರಿಕೆ ಮೇರೆಗೆ ಎಂದು ಹೇಳಲಾಗಿತ್ತು.

ಆದರೂ ಅಂತಹ ಕೋರಿಕೆಯ ಪತ್ರವು ದಾಖಲೆಗಳಲ್ಲಿ ಇರಲಿಲ್ಲ. ಭೂಮಿಯ ಮಾರ್ಗಸೂಚಿ ಮೌಲ್ಯವು ಎಕರೆಗೆ 45 ಲಕ್ಷ ಆಗಿತ್ತು. ಹಾಗೂ ಹೆಚ್ಚುವರಿಯಾಗಿ ನೀಡಿದ್ದ ರಿಯಾಯಿತಿಯು 67.50 ಲಕ್ಷ ಆಗಿತ್ತು.

ಸರ್ಕಾರವು ಯಾವುದೇ ಕಾರಣಗಳನ್ನು ದಾಖಲಿಸದೆಯೇ ಸ್ವಯಂ ಪ್ರೇರಿತವಾಗಿ ಶೇ. 20ರಿಂದ 100ರಷ್ಟು ರಿಯಾಯಿತಿಗಳನ್ನು ನೀಡಿತ್ತು. ಒಟ್ಟಾರೆಯಾಗಿ ಭೂಮಿಯ ಬೆಲೆಯನ್ನು 18.93 ಕೋಟಿ ಮೊತ್ತದಷ್ಟು ಕಡಿಮೆ ಪ್ರಮಾಣದಲ್ಲಿ ವಸೂಲಾತಿ ಮಾಡುವಲ್ಲಿ ಪರಿಣಿಮಿಸಿತ್ತು ಎಂದು ಸಿಎಜಿ ( ಅನುಬಂಧ-5) ವರದಿಯಲ್ಲಿ ವಿವರಿಸಲಾಗಿತ್ತು.

Hot this week

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Related Articles

Popular Categories

error: Content is protected !!