Sunday | May 10, 2026 |

ಒಮೈಕ್ರಾನ್‌ ಭೀತಿ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ, ಶುಲ್ಕದಲ್ಲೂ ಏರಿಕೆ

ಬೆಂಗಳೂರು; ಕೊರೊನಾ ವೈರಾಣುವಿನ ಹೊಸ ರೂಪಾಂತರ ತಳಿ ಒಮೈಕ್ರಾನ್‌ ವೈರಸ್‌ ಭೀತಿ ನಡುವೆಯೇ 2021-22ನೇ ಸಾಲಿನ ಎಸ್‌ಎಸ್ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿರುವ ರಾಜ್ಯ ಸರ್ಕಾರವು ಪರೀಕ್ಷಾ ಶುಲ್ಕವನ್ನು ಪರಿಷ್ಕರಿಸಿದೆ. ಪ್ರತಿ ವಿದ್ಯಾರ್ಥಿಯಿಂದ 35 ರು.ನಷ್ಟು ಹೆಚ್ಚು ಶುಲ್ಕ ವಸೂಲು ಮಾಡಲು ಮುಂದಾಗಿದೆ.

ಶಾಲೆ ಮತ್ತು ಕಾಲೇಜುಗಳಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಮತ್ತು ಶಾಲಾ ಮಕ್ಕಳ ಪೋಷಕರಿಗೂ ಲಸಿಕೆ ಕಡ್ಡಾಯಗೊಳಿಸಿರುವುದಕ್ಕೆ ಬಲವಾದ ಆಕ್ಷೇಪಗಳು ಕೇಳಿ ಬಂದಿರುವ ಬೆನ್ನಲ್ಲೇ ಪೂರ್ವ ಸಿದ್ಧತಾ ಪರೀಕ್ಷೆ ಶುಲ್ಕ ಹೆಚ್ಚಳಗೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರವು 2021ರ ಡಿಸೆಂಬರ್‌ 6ರಂದು ಆದೇಶ ಹೊರಡಿಸಿದೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸಾಗಾಣಿಕೆ ದರದಲ್ಲಿನ ಹೆಚ್ಚಳ ಮತ್ತು ಪರೀಕ್ಷಾ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಇತರೆ ಕಾರ್ಯಗಳಿಗೆ ಖರ್ಚು ವೆಚ್ಚ ಹೆಚ್ಚಾಗಿರುವುದನ್ನು ಮುಂದಿರಿಸಿಕೊಂಡಿರುವ ಸರ್ಕಾರವು 2021-22ನೇ ಸಾಲಿಗೆ ಪ್ರತಿ ವಿದ್ಯಾರ್ಥಿಗೆ ಪರೀಕ್ಷಾ ಶುಲ್ಕವನ್ನು 25 ರು.ನಿಂದ 60 ರು.ಗೆ ಹೆಚ್ಚಿಸಿ ಶುಲ್ಕ ಹೆಚ್ಚಳವನ್ನು ಸಮರ್ಥಿಸಿಕೊಂಡಿದೆ. 2022ರ ಫೆಬ್ರುವರಿ ಮೊದಲನೇ ವಾರದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಿದೆ. ಪೂರ್ವ ಸಿದ್ಧತಾ ಮತ್ತು ಮುಖ್ಯ ಪರೀಕ್ಷಾ ಶುಲ್ಕವನ್ನೂ ವಿದ್ಯಾರ್ಥಿಗಳಿಂದ ಒಟ್ಟಿಗೇ ಪಡೆಯಲು ಸರ್ಕಾರವು ಅನುಮೋದಿಸಿದೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಶಾಲಾ ಮಕ್ಕಳಿಗೂ ಕೋವಿಡ್‌ ಸೋಂಕು ಹರಡುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ್ದ ಸಚಿವ ನಾಗೇಶ್‌ ಅವರು ಅಗತ್ಯಬಿದ್ದರೆ ಶಾಲೆಗಳ ಕಾರ್ಯಾರಂಭವನ್ನೂ ಸ್ಥಗಿತಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದರ ಬೆನ್ನಲ್ಲೇ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ಹೊರಡಿಸಿರುವ ಆದೇಶವು ಮುನ್ನೆಲೆಗೆ ಬಂದಿದೆ.

2019ರ ಮಾರ್ಚ್‌ ಮತ್ತು ಏಪ್ರಿಲ್‌ನಲ್ಲಿ ನಡೆಸಿದ್ದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷಾ ಶುಲ್ಕವನ್ನು 25 ರು.ಗೆ ನಿಗದಿಪಡಿಸಲಾಗಿತ್ತು. 2020-21ನೇ ಸಾಲಿನಲ್ಲಿ ಎರಡನೇ ಅಲೆಯು ರಾಜ್ಯಾದ್ಯಂತ ವ್ಯಾಪಿಸಿದ್ದ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಿರಲಿಲ್ಲ. ಇದೀಗ 2021-22ನೇ ಸಾಲಿಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷಾ ಶುಲ್ಕವನ್ನು ಪ್ರತಿ ವಿದ್ಯಾರ್ಥಿಗೆ 25 ರು.ಗಳಿಂದ 60 ರು. ಗೆ ಹೆಚ್ಚಳ ಮಾಡಿದೆ.

2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ 2021ರ ಆಗಸ್ಟ್‌ 23ರಿಂದ ಭೌತಿಕವಾಗಿ ತರಗತಿ ಆರಂಭವಾಗಿವೆ. ಶಾಲೆಗಳು ಭೌತಿಕವಾಗಿ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿರುವುದರಿಂದ 2021-22ನೇ ಸಾಲಿಗೆ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷಾ ಪದ್ಧತಿ, ಪ್ರಶ್ನೆ ಪತ್ರಿಕೆ ವಿನ್ಯಾಸ, ಪೂರ್ವ ಸಿದ್ಧತಾ ಪರೀಕ್ಷೆ ವಿಧಾನ, ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಸ್ವೀಕೃತಿ ಹಾಗೂ ಪರೀಕ್ಷಾ ಖರ್ಚು ವೆಚ್ಚಗಳ ಕುರಿತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷೆ ಮಂಡಳಿಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

‘ಪ್ರಸ್ತುತ ಸಾಗಾಣಿಕೆ ದರದಲ್ಲಿನ ಹೆಚ್ಚಳ ಮತ್ತು ಪರೀಕ್ಷಾ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಇತರೆ ಕಾರ್ಯಗಳಿಗೆ ಖರ್ಚು ವೆಚ್ಚ ಹೆಚ್ಚಾಗಿರುವುದನ್ನು ಮುಂದಿರಿಸಿಕೊಂಡಿರುವ ಸರ್ಕಾರವು 2021-22ನೇ ಸಾಲಿಗೆ ಪ್ರತಿ ವಿದ್ಯಾರ್ಥಿಗೆ ಪರೀಕ್ಷಾ ಶುಲ್ಕವನ್ನು 25 ರು.ನಿಂದ 60 ರು.ಗೆ ಹೆಚ್ಚಿಸುವುದು ಸೂಕ್ತ,’ ಎಂದು ಮಂಡಳಿಯು ಪ್ರಸ್ತಾವನೆ ಸಲ್ಲಿಸಿತ್ತು ಎಂಬುದು ಆದೇಶದಿಂದ ತಿಳಿದು ಬಂದಿದೆ.

ಶುಲ್ಕ ವಿನಾಯಿತಿ ಪಡೆಯುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಶುಲ್ಕ ಪಾವತಿಸುವ ಸಾಮಾನ್ಯ ವಿದ್ಯಾರ್ಥಿಗಳು ಒಟ್ಟು 1.60 ಲಕ್ಷದಷ್ಟಿದ್ದಾರೆ. ಈ ವಿದ್ಯಾರ್ಥಿಗಳಿಂದ 60 ರು.ನಂತೆ ಪರೀಕ್ಷಾ ಶುಲ್ಕ ಪಡೆದಲ್ಲಿ ಇದರಿಂದ 96.00 ಲಕ್ಷ ರು. ನಿರೀಕ್ಷಿಸಬಹುದು ಎಂದು ಸರ್ಕಾರವು ಅಂದಾಜಿಸಿದೆ. ಶುಲ್ಕ ಪಾವತಿಸುವ ವಿದ್ಯಾರ್ಥಿಗಳಿಂದ 96 ಲಕ್ಷ ಮತ್ತು ಇತರೆ ಇಲಾಖೆಗಳಿಂದ ಮರು ಭರಣವಾಗುವ 372.00 ಲಕ್ಷ ಒಟ್ಟಾರೆ 468.00 ಲಕ್ಷ ರು.ಗಳನ್ನು ಪರೀಕ್ಷಾ ಶುಲ್ಕವಾಗಿ ಪಡೆಯಬಹುದು ಎಂದು ಸರ್ಕಾರವು ಲೆಕ್ಕಾಚಾರ ಮಾಡಿರುವುದು ಆದೇಶದಿಂದ ಗೊತ್ತಾಗಿದೆ.

ಎಲ್ಲಾ ಪರೀಕ್ಷಾ ಪ್ರಕ್ರಿಯೆಗೆ ಅಂದಾಜಿಸಲಾದ 592.00 ಲಕ್ಷ ರು.ಗಳಲ್ಲಿ ಪರೀಕ್ಷಾ ಶುಲ್ಕವಾಗಿ ಪಡೆಯುವ 468 ಲಕ್ಷ ರು.ಗಳನ್ನು ಕಳೆದರೆ ಇನ್ನೂ 124.00 ಲಕ್ಷ ರು. ಕೊರತೆ ಉಂಟಾಗುತ್ತದೆ ಎಂದು ಮಂಡಳಿಯು ಪ್ರಸ್ತಾವನೆಯಲ್ಲಿ ವಿವರಿಸಿದೆ. ಇಲಾಖೆಗಳಿಂದ ಪರೀಕ್ಷೆ ನಡೆಸುವ ಪೂರ್ವದಲ್ಲಿಯೇ ಮರುಭರಣ ಪಡೆಯಲಾಗದ 372.00 ಲಕ್ಷ ರು.ತ್ತು ಕೊರತೆ ಮೊತ್ತ 124.00 ಲಕ್ಷ ಸೇರಿ ಒಟ್ಟಾರೆ 496 ಲಕ್ಷ ರು.ಗಳನ್ನುಮಂಡಳಿಯ ಎಸ್‌ಎಸ್‌ಎಲ್‌ಸಿ ವಿಭಾಗದಲ್ಲಿ ಲಭ್ಯವಿರುವ ಅನುದಾನದಲ್ಲಿ ಭರಿಸಬಹುದು ಎಂದು ಮಂಡಳಿಯು ಹೇಳಿದೆ.

ಅದೇ ರೀತಿ ಶುಲ್ಕ ವಿನಾಯಿತಿ ಪಡೆಯುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಶುಲ್ಕ ಪಾವತಿಸುವ ಸಾಮಾನ್ಯ ವಿದ್ಯಾರ್ಥಿಗಳಿಂದ ಪೂರ್ವ ಸಿದ್ಧತಾ ಪರೀಕ್ಷಾ ಪರೀಕ್ಷೆ ಶುಲ್ಕ ಹಾಗೂ ಮುಖ್ಯ ಪರೀಕ್ಷೆಯ ಶುಲ್ಕವನ್ನು ಒಟ್ಟಿಗೇ ಸ್ವೀಕರಿಸಬಹುದು ಎಂಬ ಪ್ರಸ್ತಾವನೆಯಲ್ಲಿ ಹೇಳಲಾಗಿದೆ.

ಪ್ರಶ್ನೆ ಪತ್ರಿಕೆಯ ಮುದ್ರಣ, ಸರಬರಾಜು ಕಾರ್ಯಕ್ಕೆ (ರಾಜ್ಯ ಹಂತದಿಂದ ಜಿಲ್ಲಾ ಹಂತಕ್ಕೆ) ಅಂದಾಜು 8 ಲಕ್ಷ ವಿದ್ಯಾರ್ಥಿಗಳಿಗೆ 400.00 ಲಕ್ಷ ರು. ವೆಚ್ಚವಾಗಲಿದೆ. ಪ್ರಶ್ನೆ ಪತ್ರಿಕೆಗಳನ್ನು ಬಿಇಒ ಕಚೇರಿಯಿಂದ ಶಾಲೆಗಳಿಗೆ ರವಾನಿಸಲು ( 15,000 ಶಾಲೆಗಳು, ಪ್ರತಿ ರೂಟ್‌ಗೆ 8 ಶಾಲೆಗಳಂತೆ) ಒಂದು ರೂಟ್‌ಗೆ 1,400 ರು.ನಂತೆ 6 ದಿನಗಳಿಗೆ 158.00 ಲಕ್ಷ ರು., ಮಾರ್ಗಾಧಿಕಾರಿಗಳ ಸಂಭಾವನೆ (ಪ್ರತಿ ಮಾರ್ಗಕ್ಕೆ ಇಬ್ಬರಂತೆ, ಪ್ರತಿ ಮಾರ್ಗಾಧಿಕಾರಿಗೆ 150 ರು.ನಂತೆ) 34.00 ಲಕ್ಷ ಸೇರಿ ಒಟ್ಟು 592.00 ಲಕ್ಷ ರು. ವೆಚ್ಚವಾಗಲಿದೆ ಎಂದು ಮಂಡಳಿಯು ಲೆಕ್ಕಾಚಾರವನ್ನು ಸರ್ಕಾರದ ಮುಂದಿಟ್ಟಿರುವುದು ಆದೇಶದಿಂದ ಗೊತ್ತಾಗಿದೆ.

2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪಠ್ಯವಸ್ತುವಿನಲ್ಲಿ ಶೇ.20ರಷ್ಟನ್ನು ಕಡಿತಗೊಳಿಸಿ 2021ರ ಡಿಸೆಂಬರ್‌ 4ರಂದು ಆದೇಶ ಹೊರಡಿಸಿದೆ. 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಭೌತಿಕವಾಗಿ 2 ತಿಂಗಳು ವಿಳಂಬವಾಗಿ ಪ್ರಾರಂಭವಾಗಿರುವುದರಿಂದ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಟ್ಟಾರೆ ಪಠ್ಯವಸ್ತುವಿನ್ಲಿ ಶೇ.20ರಷ್ಟು ಕಡಿತಗೊಳಿಸಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಈಗಾಗಲೇ ಆದೇಶ ಹೊರಡಿಸಿರುವುದನ್ನು ಸ್ಮರಿಸಬಹುದು.

2019-20ನೇ ಸದಾಲಿನಲ್ಲಿದ್ದಯೇ ಪ್ರಶ್ನೆ ಪತ್ರಿಕೆಯ ಮಾದರಿಯಲ್ಲಿ ಬದಲಾವಣೆ ಮಾಡದೇ ಪ್ರಶ್ನೆ ಪತ್ರಿಕೆಯು ಕಠಿಣತೆಯ ಮಟ್ಟ ಕಡಿಮೆ ಮಾಡಿದೆ. 2019-20ನೇ ಸಾಲಿನಲ್ಲಿದ್ದಂತೆ ಪ್ರಥಮ ಭಾಷೆಗೆ ಗರಿಷ್ಠ 100 ಅಂಕಗಳಿಗೆ ಹಾಗೂ ಉಳಿದ 5 ವಿಷಯಗಳಿಗೆ ಗರಿಷ್ಠ 80 ಅಂಕಗಳಿಗೆ 3 ಗಂಟೆಯ ಕಾಲಾವಕಾಶ ನೀಡಿ ಸರಳ ಹಾಗೂ ಸುಲಭವಾಗಿ ಉತ್ತರಿಸಲು ಅವಕಾಶ ನೀಡಬಹುದು ಎಂದು ಮಂಡಳಿಯು ಪ್ರಸ್ತಾವನೆಯಲ್ಲಿ ವಿವರಿಸಿದೆ.

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!