Wednesday | March 25, 2026 |

ವರ್ಷವಾದರೂ ಉಪಲೋಕಾಯುಕ್ತ ನೇಮಕವಿಲ್ಲ; ಸಿಎಂ ಕಚೇರಿಯಿಂದ ಹೊರಬಾರದ ಕಡತ

Support THE-FILE

spot_img

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಮತ್ತೊಂದು ಉಪ ಲೋಕಾಯುಕ್ತರ ಹುದ್ದೆಯು ಕಳೆದೊಂದು ವರ್ಷದಿಂದ ಖಾಲಿ ಇದೆ. 2020ರ ಡಿಸೆಂಬರ್‌ನಲ್ಲಿಯೇ ಎರಡನೇ ಉಪ ಲೋಕಾಯುಕ್ತ ಹುದ್ದೆಯಿಂದ ನಿವೃತ್ತ ನ್ಯಾಯಮೂರ್ತಿ ಆನಂದ್‌ ಅವರು ನಿವೃತ್ತರಾಗುವ 4 ತಿಂಗಳ ಮೊದಲೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೇಮಕಾತಿ ಸಂಬಂಧ ಪ್ರಕ್ರಿಯೆ ಆರಂಭಿಸಿದ್ದರೂ ವರ್ಷ ಕಳೆದರೂ ಲೋಕಾಯುಕ್ತ ಸಂಸ್ಥೆಗೆ ಎರಡನೇ ಉಪ ಲೋಕಾಯುಕ್ತ ನೇಮಕ ಭಾಗ್ಯ ದೊರೆತಿಲ್ಲ.

ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಸಂಬಂಧ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಕುರಿತು ಕಟಕಟೆಯಲ್ಲಿ ನಿಂತಿದ್ದ ರಾಜ್ಯ ಬಿಜೆಪಿ ಸರ್ಕಾರವು ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ ಎಂದು ಪ್ರಮಾಣಪತ್ರ ಸಲ್ಲಿಸಿತ್ತಾದರೂ ಇದುವರೆಗೂ ನೇಮಕಾತಿ ಸಂಬಂಧದ ಕಡತಕ್ಕೆ ಮುಕ್ತಿ ದೊರೆತಿಲ್ಲ.

‘ನೇಮಕಾತಿ ಸಂಬಂಧದ ಕಡತವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಇದೆ. ಕಡತವನ್ನು ಅವರು ಈವರೆವಿಗೂ ಪರಿಶೀಲಿಸಿಲ್ಲ. ಹೀಗಾಗಿ ನೇಮಕಾತಿ ವರ್ಷದಿಂದಲೂ ನೆನೆಗುದಿಗೆ ಬಿದ್ದಿದೆ. ಅಲ್ಲದೆ ಪ್ರತಿಪಕ್ಷ ನಾಯಕ, ವಿಧಾನಮಂಡಲದ ಉಭಯ ಸದನಗಳ ಸಭಾಪತಿ, ಸಭಾಧ್ಯಕ್ಷರು, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಂದ ಉಪ ಲೋಕಾಯುಕ್ತ ಹುದ್ದೆಗೆ ಶಿಫಾರಸ್ಸು ಮಾಡಲಾಗಿದೆಯೇ ಇಲ್ಲವೇ ಎಂಬ ಬಗ್ಗೆ ಇದುವರೆಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜಾಗೃತ ವಿಭಾಗಕ್ಕೆ ಇದುವರೆಗೂ ಮುಖ್ಯಮಂತ್ರಿಗಳ ಕಚೇರಿಯಿಂದ ಕಡತವು ಹಿಂದಿರುಗಿಲ್ಲ ಹಾಗೂ ಈ ಸಂಬಂಧ ಯಾವುದೇ ಮಾಹಿತಿಯೂ ಇಲ್ಲ ಎಂದು ತಿಳಿದು ಬಂದಿದೆ.

ಕರ್ನಾಟಕ ಲೋಕಾಯುಕ್ತ ಅಧಿನಿಯಮ, 1984ರ ಸೆಕ್ಷನ್ 3(2)(ಬಿ)ರ ಅಡಿ ಉಪ ಲೋಕಾಯುಕ್ತರಾಗಿ ನೇಮಕಗೊಳ್ಳುವವರು ಕಡ್ಡಾಯವಾಗಿ ಐದು ವರ್ಷಗಳ ಕಾಲ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿರಬೇಕು. ಈ ಹಿನ್ನೆಲೆಯಲ್ಲಿ ಸೂಕ್ತ ನಿವೃತ್ತ ನ್ಯಾಯಮೂರ್ತಿಗಳ ಹೆಸರನ್ನು ಸೂಚಿಸಿದರೆ ತಮ್ಮ ಅಭಿಪ್ರಾಯವನ್ನು ಸೇರಿಸಿ ರಾಜ್ಯಪಾಲರ ಅನುಮೋದನೆ ಕಳುಹಿಸಿಕೊಡಲಾಗುವುದು” ಎಂದು ಬೊಮ್ಮಾಯಿ ಪತ್ರದಲ್ಲಿ ಉಲ್ಲೇಖಿಸಿದ್ದರು.

ಲೋಕಾಯುಕ್ತ ಸಂಸ್ಥೆಯಲ್ಲಿ ಎರಡು ಉಪ ಲೋಕಾಯುಕ್ತ ಹುದ್ದೆಗಳನ್ನು ಸೃಜಿಸಲಾಗಿದ್ದು, 2019ರ ನವೆಂಬರ್‌ 20ರಂದು ನಿವೃತ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ನಿವೃತ್ತ ನ್ಯಾ. ಎನ್‌ ಆನಂದ್‌ ಅವರ ನಿವೃತ್ತಿಯ ಬಳಿಕ ಮತ್ತೊಂದು ಸ್ಥಾನವು ವರ್ಷದಿಂದಲೂ ಖಾಲಿ ಉಳಿದಿದೆ.

ಅರ್ಜಿದಾರ ವಕೀಲ ಎಸ್ ಉಮಾಪತಿ ಸಲ್ಲಿಸಿದ್ದ ಮನವಿ ಆಧರಿಸಿ ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಸಂಬಂಧ ಪ್ರಸಕ್ತ ವರ್ಷದ ಜನವರಿ 27ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿದ್ದನ್ನು ಸ್ಮರಿಸಬಹುದು.

ವಿಚಾರಣೆಯಲ್ಲಿ ಭಾಗಿಯಾಗಿದ್ದ ಹೆಚ್ಚುವರಿ ಸರ್ಕಾರಿ ವಕೀಲ ಧ್ಯಾನ್ ಚಿನ್ನಪ್ಪ ಅವರು, ಉಪ ಲೋಕಾಯುಕ್ತರನ್ನು ನೇಮಕ ಮಾಡುವ ಸಂಬಂಧ ರಾಜ್ಯ ಸರ್ಕಾರವು ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಸರ್ಕಾರ ಕೈಗೊಂಡ ನಿರ್ಧಾರವನ್ನು ದಾಖಲೆಯಲ್ಲಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು. ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಪಿ ಹೇಮಲತಾ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅನುಪಾಲನಾ ವರದಿಯನ್ನು ಸಲ್ಲಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಪೀಠವು ನವೆಂಬರ್ 8ಕ್ಕೆ ಮುಂದೂಡಿತ್ತು.

ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ ಉಪ ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎನ್ ಆನಂದ್ ಅವರು ಕಳೆದ ವರ್ಷದ ಡಿಸೆಂಬರ್ 16 ರಂದು ನಿವೃತ್ತರಾಗಿದ್ದಾರೆ. ಈ ಸಂಬಂಧ ಅವರ ಸ್ಥಾನಕ್ಕೆ ಅರ್ಹರನ್ನು ನೇಮಿಸುವಂತೆ ಜನವರಿ 27ರಂದು ಹೈಕೋರ್ಟ್ ಆದೇಶಿಸಿತ್ತು. ಕೋವಿಡ್ ಸಂದರ್ಭದಲ್ಲಿ ಇಡೀ ಆಡಳಿತ ಯಂತ್ರವನ್ನು ಕೊರೊನಾ ವೈರಸ್ ನಿಯಂತ್ರಿಸಲು ನಿಯೋಜಿಸಿದ್ದರಿಂದ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ. ಉಪ ಲೋಕಾಯುಕ್ತರನ್ನು ನೇಮಿಸುವ ಪ್ರಕ್ರಿಯೆ ಆರಂಭಿಸಿರುವುದರಿಂದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಡಬೇಕು ಎಂದು ಮನವಿ ಮಾಡಲಾಗಿತ್ತು.

Hot this week

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Topics

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

Related Articles

Popular Categories

error: Content is protected !!