Saturday | April 11, 2026 |

ಕೋವಿಡ್‌; 14.52 ಲಕ್ಷ ಕಟ್ಟಡ ಕಾರ್ಮಿಕರ ಪೈಕಿ ನಾಲ್ವರಿಗಷ್ಟೇ 8.16 ಲಕ್ಷ ಪರಿಹಾರ

ಬೆಂಗಳೂರು; ಕೋವಿಡ್‌ 19ರ ಎರಡನೇ ಅಲೆಯ ವಿಶೇಷ ಪ್ಯಾಕೇಜ್‌ಗೆ ರಾಜ್ಯದಾದ್ಯಂತ ನೋಂದಣಿಯಾಗಿರುವ ಒಟ್ಟು ಕಟ್ಟಡ ಕಾರ್ಮಿಕರ ಪೈಕಿ 14.52 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಕೋವಿಡ್‌ನಿಂದ ಮೃತಪಟ್ಟಿದ್ದ ಕಟ್ಟಡ ಕಾರ್ಮಿಕರಲ್ಲಿ ಕೇವಲ 4 ಮಂದಿಗೆ ಮಾತ್ರ ಅನುಗ್ರಹ ರಾಶಿ ಮತ್ತು ಅಂತ್ಯಕ್ರಿಯೆ ವೆಚ್ಚದಡಿಯಲ್ಲಿ 8.16 ಲಕ್ಷ ರು. ಗಳನ್ನು ಭರಿಸಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಡಾ ಅಜಯ್‌ ಧರ್ಮಸಿಂಗ್‌ ಸೇರಿದಂತೆ ಇನ್ನಿತರ ಶಾಸಕರು ಕೋವಿಡ್‌ ವಿಶೇಷ ಪ್ಯಾಕೇಜ್‌ ಪರಿಹಾರ ಕುರಿತು ಉತ್ತರಿಸಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಅವರು ಮೃತ ಕಾರ್ಮಿಕರ ಅವಲಂಬಿತರನ್ನು ಹೊರತುಪಡಿಸಿ ವಿಶೇಷ ಪ್ಯಾಕೇಜ್‌ ಅಡಿಯಲ್ಲಿ ಎಷ್ಟು ಮಂದಿ ಕಾರ್ಮಿಕರಿಗೆ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ ಎಂಬ ಮಾಹಿತಿಯನ್ನು ಒದಗಿಸಿಲ್ಲ.

2021ರ ಏಪ್ರಿಲ್‌ 2ರ ನಂತರ ನೋಂದಾಯಿತ ಕಟ್ಟಡ ಕಾರ್ಮಿಕರು ಕೋವಿಡ್‌ನಿಂದ ಮೃತಪಟ್ಟಿದ್ದರೆ ಅವರಿಗೆ 54, 000 ರು. ಬದಲಿಗೆ 2.04 ಲಕ್ಷ ರು.ಗಳನ್ನು ಅನುಗ್ರಹ ರಾಶಿ ಮತ್ತು ಅಂತ್ಯಕ್ರಿಯೆ ವೆಚ್ಚವನ್ನು ನೀಡಲು ಆದೇಶ ಹೊರಡಿಸಿತ್ತು. ನೋಂದಾಯಿತ ಕಟ್ಟಡ ಕಾರ್ಮಿಕರ ಪೈಕಿ ಒಟ್ಟು 14.52 ಲಕ್ಷ ಮಂದಿ ಕೋವಿಡ್‌ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸಚಿವ ಹೆಬ್ಬಾರ್‌ ಅವರು ಉತ್ತರ ಒದಗಿಸಿದ್ದಾರೆ.


ಕೋವಿಡ್‌ 19ರ ವಿಶೇಷ ಪ್ಯಾಕೇಜ್‌ ಅಡಿಯಲ್ಲಿ ಬೆಳಗಾವಿಯಲ್ಲಿ 1,51,032, ಬೆಂಗಳೂರು ನಗರ 1,47,631, ಕಲ್ಬುರ್ಗಿಯಲ್ಲಿ 1,23,276, ಮೈಸೂರಿನಲ್ಲಿ 1,02,344 ಕಟ್ಟಡ ಕಾರ್ಮಿಕರು ನೆರವು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಕೋವಿಡ್‌ ಪರಿಹಾರ ವಿತರಣೆಗೆ ಮೀಸಲಿಟ್ಟಿರುವ 400 ಕೋಟಿ ರು. ಅನುದಾನದಲ್ಲಿ ಈವರೆವಿಗೆ 100 ಕೋಟಿ ರು ಬಿಡುಗಡೆಯಾಗಿದೆ. ಇನ್ನು ರಾಜ್ಯದಲ್ಲಿ 2021ರ ಡಿಸೆಂಬರ್‌ 7ರವರೆಗೆ ಒಟ್ಟು 38,174 ಕೋವಿಡ್‌ 19 ನಿಂದ ಮೃತಪಟ್ಟಿದ್ದಾರೆ. ಕೋವಿಡ್‌ ಪರಿಹಾರಕ್ಕಾಗಿ ರಾಜ್ಯದಾದ್ಯಂತ ಒಟ್ಟು 17,098 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 10,289 ಬಿಪಿಎಲ್‌ ಕುಟುಂಬಗಳ ಅರ್ಜಿಗಳು ಸರ್ಕಾರದ ಹಂತದಲ್ಲಿ ಸ್ವೀಕೃತವಾಗಿವೆ ಎಂದು ಸಚಿವ ಆರ್‌ ಅಶೋಕ್‌ ಅವರು ಉತ್ತರ ಒದಗಿಸಿದ್ದಾರೆ.

ಇದರಲ್ಲಿ ಜಿಲ್ಲಾಧಿಕಾರಿಗಳು 8,424 ಅರ್ಜಿಗಳನ್ನು ಅನುಮೋದಿಸಿದ್ದಾರೆ. ಎಪಿಎಲ್‌ ಕುಟುಂಬಗಳದ್ದು 6,809 ಅರ್ಜಿಗಳಿವೆ. ಇದರಲ್ಲಿ ಜಿಲ್ಲಾಧಿಕಾರಿಗಳು 5,243 ಅರ್ಜಿಗಳನ್ನು ಅನುಮೋದಿಸಿದ್ದಾರೆ. ಎಪಿಎಲ್‌ ಮತ್ತು ಬಿಪಿಎಲ್‌ ಅರ್ಜಿಗಳ ಪೈಕಿ ಜಿಲ್ಲಾಧಿಕಾರಿಗಳು 13,667 ಅರ್ಜಿಗಳನ್ನು ಅನುಮೋದಿಸಿದ್ದಾರೆ.

ಅದೇ ರೀತಿ ಕೇಂದ್ರ ಸರ್ಕಾರದ ಪರಿಹಾರದ ವ್ಯಾಪ್ತಿಗೊಳಪಟ್ಟ 11,438 ಪ್ರಕರಣಗಳಲ್ಲಿ 50,000 ರು. ಪಾವತಿಸಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿಯೇ ಅತಿ ಹೆಚ್ಚು ಎಂದರೆ 1,751 ಪ್ರಕರಣಗಳಲ್ಲಿ 50,000 ರು. ಪರಿಹಾರ ಪಾವತಿಸಲಾಗಿದೆ.

ರಾಜ್ಯ ಸರ್ಕಾರವು ಬಿಪಿಎಲ್‌ ಕುಟುಂಬಗಳಿಗೆ ಘೋಷಿಸಿರುವ 1.00 ಲಕ್ಷ ಪರಿಹಾರಕ್ಕಾಗಿ ಒಟ್ಟು 9,080 ಅರ್ಜಿಗಳ ಸ್ವೀಕೃತವಾಗಿವೆ. ಪರಿಶೀಲನಾ ಕಾರ್ಯ ಮುಗಿದ ನಂತರ 6,736 ಫಲಾನುಭವಿಗಳಿಗೆ 1.00 ಲಕ್ಷ ಪರಿಹಾರವನ್ನು ಚೆಕ್‌ ಮೂಲಕ ವಿತರಿಸಲು ಜಿಲ್ಲಾಧಿಕಾರಿಗಳ ಹಂತದಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ಸದನಕ್ಕೆ ಮಾಹಿತಿ ಒದಗಿಸಿದೆ.

Hot this week

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Related Articles

Popular Categories

error: Content is protected !!