Friday | April 10, 2026 |

ಲಂಚ ಪ್ರಕರಣಕ್ಕೆ ನೈತಿಕ ಅಧಃಪತನದ ಮುಖವಾಡ; ಕಡ್ಡಾಯ ನಿವೃತ್ತಿಯ ಶಿಫಾರಸ್ಸು ತಿರಸ್ಕರಿಸಿದ ಸರ್ಕಾರ

ಬೆಂಗಳೂರು; ಪರವಾನಗಿ ನವೀಕರಿಸದ ಟಿಂಬರ್‌ ಉದ್ಯಮಿಯೊಬ್ಬರಿಂದ ಲಂಚ ಪಡೆದ ಪ್ರಕರಣವನ್ನು ಕಳೆದ 10 ವರ್ಷಗಳಿಂದ ಸುದೀರ್ಘವಾಗಿ ತನಿಖೆ ನಡೆಸಿ ಆರೋಪಿತ ಸರ್ಕಾರಿ ನೌಕರರನ್ನು ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಬೇಕು ಎಂಬ ಲೋಕಾಯುಕ್ತರ ಶಿಫಾರಸ್ಸನ್ನು ತಿರಸ್ಕರಿಸಿರುವ ಅರಣ್ಯ ಇಲಾಖೆಯು ಇದನ್ನು ‘ನೈತಿಕ ಅಧಃಪತನ’ದ ಮುಖವಾಡ ತೊಡಿಸಿದೆ.

ಸೇವೆಯಿಂದ ಕಡ್ಡಾಯ ನಿವೃತ್ತಿ ಮತ್ತು ನಿವೃತ್ತಿ ವೇತನದಲ್ಲಿ ಶೇ.40ರಷ್ಟನ್ನು ಶಾಶ್ವತವಾಗಿ ತಡೆಹಿಡಿಯುವ ದಂಡನೆ ವಿಧಿಸಬೇಕು ಎಂಬ ಉಪಲೋಕಾಯುಕ್ತರ ಪ್ರಸ್ತಾವನೆಯನ್ನು ಅರಣ್ಯ ಇಲಾಖೆಯು ಒಪ್ಪಿಕೊಂಡಿಲ್ಲ. ಉಪ ಲೋಕಾಯುಕ್ತರ ಶಿಫಾರಸ್ಸನ್ನು ಒಪ್ಪಿಕೊಳ್ಳದ ಅರಣ್ಯ ಇಲಾಖೆಯು ಆರೋಪಿತ ಸರ್ಕಾರಿ ನೌಕರನನ್ನು ನೈತಿಕ ಅಧಃಪತನದ ಅಡಿಯಲ್ಲಿ ವೇತನ ಬಡ್ತಿ ತಡೆಹಿಡಿಯುವ ದಂಡನೆ ವಿಧಿಸಿದೆ. ಈ ಸಂಬಂಧ ಇಲಾಖೆಯು ಹೊರಡಿಸಿರುವ ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪ್ರಕರಣದ ವಿವರ

ಬೆಂಗಳೂರು ಜಿಲ್ಲೆಯ ದಾಸನಪುರ ಹೋಬಳಿಯ ಲಕ್ಷ್ಮಿವೆಂಕಟೇಶ್ವರ ಟಿಂಬರ್ಸ್‌ನ್ನು 2008ರಲ್ಲಿ ಖರೀದಿಸಿದ್ದ ಎಲ್‌ ವೆಂಕಟೇಶ್‌ ಅವರು ಪರವಾನಗಿಯನ್ನು ತಮ್ಮ ಹೆಸರಿಗೆ ನವೀಕರಣ ಮಾಡಿಸಿಕೊಳ್ಳುವ ಸಂದರ್ಭದಲ್ಲಿ ಅರಣ್ಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಎಂ ಎನ್‌ ನರಸಿಂಹಮೂರ್ತಿ ಅವರು 17,000 ರು.ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ 2011ರಲ್ಲಿ ತನಿಖೆ ಕೈಗೊಂಡಿದ್ದ ಉಪ ಲೋಕಾಯುಕ್ತರು 10 ವರ್ಷಗಳ ನಂತರ ಅಂದರೆ 2020ರಲ್ಲಿ ವಿಚಾಣೆ ವರದಿಯನ್ನು (ಲೋಕ್‌/ಐಎನ್‌ಕ್ಯೂ/14-ಎ/442/2011/ಎಆರ್‌ಇ-4 ದಿನಾಂಕ 25-08-2020) ಸರ್ಕಾರಕ್ಕೆ ಸಲ್ಲಿಸಿದ್ದರು.

ಪ್ರಕರಣ ಕುರಿತು ತನಿಖೆ ನಡೆಸಿದ್ದ ಉಪ ಲೋಕಾಯುಕ್ತರು ‘ ವಿಚಾರಣೆ ವರದಿಯಲ್ಲಿ ಆರೋಪವು ಸಾಬೀತಾಗಿರುವುದಾಗಿ ಅಭಿಪ್ರಾಯಿಸಿದ್ದು, ನಿವೃತ್ತಿ ವೇತನದಿಂದ ಶೇ.40ರಷ್ಟನ್ನು ಶಾಶ್ವತವಾಗಿ ತಡೆಹಿಡಿಯುವ ದಂಡನೆ ಮತ್ತು ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸುವ ದಂಡನೆ ವಿಧಿಸಬೇಕು,’ ಎಂದು ಶಿಫಾರಸ್ಸು ಮಾಡಿದ್ದರು.

ಈ ವರದಿಯನ್ನಾಧರಿಸಿ ಆರೋಪಿತ ನೌಕರನಿಂದ ಲಿಖಿತ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಅರಣ್ಯ ಇಲಾಖೆಯು ಜಿ ಎಂ ಟ್ಯಾಂಕ್‌ ವಿರುದ್ಧ ಗುಜರಾತ್‌ ಸರ್ಕಾರ 2006(5) ಎಸ್‌ಸಿಸಿ 466 ಮತ್ತು ಮಧ್ವರಾಜ್‌ ರಾವ್‌ ವಿರುದ್ಧ ಮುಖ್ಯ ಪ್ರಬಂಧಕರು, ಕೆನರಾ ಬ್ಯಾಂಕ್‌ ಬೆಂಗಳೂರು 1995(5) ಕೆಎಸ್‌ಎಲ್‌ಜೆ 428, ಅದೇ ರೀತಿ ಪಂಜಾಬ್‌ ವಿರುದ್ಧ ರಾಮಕೃಷ್ಣನ್‌ ಚೋಪ್ರಾ 1977 (2) ಎಸ್‌ಎಲ್‌ಆರ್‌ 809 (ಪಿಅಂಡ್‌ ಎಚ್‌-ಎಚ್‌ಸಿ) ಪ್ರಕರಣಗಳಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಮಾದರಿಯನ್ನಾಗಿಸಿದೆ.

ಅದರಂತೆ ‘ಉಪ ಲೋಕಾಯುಕ್ತರ ಶಿಫಾರಸ್ಸನ್ನು ಅವಲೋಕಿಸಿದಾಗ ದೂರುದಾರರು ಆರೋಪಿಸಿರುವಂತೆ ಲೈಸೆನ್ಸ್‌ ನವೀಕರಿಸಲು ಆರೋಪಿತ ಸರ್ಕಾರಿ ನೌಕರರು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವುದನ್ನು ಸಾಕಷ್ಟು ಸಾಕ್ಷಿ ಮತ್ತು ಪುರಾವೆಗಳ ಕೊರತೆ ಎದ್ದು ಕಾಣುತ್ತದೆ. ನ್ಯಾಯಿಕ ಮತ್ತು ಅರೆ ನ್ಯಾಯಿಕ ಪ್ರಕರಣಗಳೆರಡಲ್ಲೂ ದೋಷಾರೋಪಣೆ/ಸಾಕ್ಷಿ/ಸಾಕ್ಷಿದಾರರು/ಸಂದರ್ಭಗಳು ಸಮಾನವಾಗಿರುತ್ತವೆ,’ ಎಂಬ ತೀರ್ಮಾನಕ್ಕೆ ಅರಣ್ಯ ಇಲಾಖೆಯು ಬಂದಿರುವುದು ನಡವಳಿಯಿಂದ ತಿಳಿದು ಬಂದಿದೆ.

ಅಲ್ಲದೆ ‘ಇಲಾಖೆ ಶಿಸ್ತು ನಡವಳಿ ಹಾಗೂ ಕ್ರಿಮಿನಲ್‌ ಪ್ರಕರಣವನ್ನು ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಅನ್ವಯ ಸಮಗ್ರವಾಗಿ ಪರಿಶೀಲಿಸಲಾಗಿದೆ. ವಾಸ್ತವಿಕವಾಗಿ ಇಲಾಖೆ ವಿಚಾರಣೆಗಳಲ್ಲಿ ಕಟ್ಟುನಿಟ್ಟಿನ ಸಾಕ್ಷಿ ಹಾಗೂ ನಡವಳಿಗಳನ್ನು ಪಾಲಿಸಲಾಗುವುದಿಲ್ಲ. ಇಲಾಖೆ ವಿಚಾರಣೆಗಳಲ್ಲಿ ಸಂಭವನೀಯತೆಯ ಗುರುತ್ವದ ಆಧಾರದಲ್ಲಿ ದಾಖಲಿತವಾಗುವ ವಿಚಾರಣೆ ಅಭಿಪ್ರಾಯದ ಅಧಾರದಲ್ಲಿ ಆರೋಪಿತರ ಮೇಲೆ ದಂಡನೆ ವಿಧಿಸಲಾಗುವುದು. ಈ ಪ್ರಕರಣದಲ್ಲಿ ಆರೋಪಿತರ ಮೇಲಿನ ಆರೋಪವನ್ನು ದೃಢೀಕರಿಸಲು ಸಾಕಷ್ಟು ಸಾಕ್ಷಿ/ಪುರಾವೆಗಳ ಕೊರತೆ ಇದ್ದಾಗಿಯೂ ಅವರಮೇಲೆ ಲಂಚದ ಆರೋಪ ಇರುವುದನ್ನು ಪರಿಗಣಿಸಿ ಇದನ್ನು ಆರೋಪಿತರ ‘ನೈತಿಕ ಅಧಃಪತನ,’ ಎಂದು ಪರಿಗಣಿಸಬಹುದು ಎಂದು ಅರಣ್ಯ ಇಲಾಖೆಯು ನಿಲುವು ತಾಳಿರುವುದು ನಡವಳಿಯಿಂದ ಗೊತ್ತಾಗಿದೆ. ಇಲಾಖೆ ಅಧಿಕಾರಿಗಳು ತಳೆದಿರುವ ನಿಲುವನ್ನು ಸಚಿವ ಉಮೇಶ್‌ ಕತ್ತಿ ಅವರು ಅನುಮೋದಿಸಿರುವುದು ಗೊತ್ತಾಗಿದೆ.

ಅಲ್ಲದೆ ಉಪ ಲೋಕಾಯುಕ್ತರು ಆರೋಪಿತರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸುವ ಹಾಗೂ ಇವರಿಗೆ ಪಾವತಿಸಲಾಗುವ ನಿವೃತ್ತಿ ವೇತನದಲ್ಲಿ ಶೇ.40ರಷ್ಟನ್ನು ಶಾಶ್ವತವಾಗಿ ತಡೆಹಿಡಿಯುವ ದಂಡನೆ ವಿಧಿಸಲು ಮಾಡಿರುವ ಶಿಫಾರಸ್ಸು, ಆರೋಪಿತರು ಎಸಗಿದ್ದಾರೆಂದು ಹೇಳಲಾಗಿರುವ ದುರ್ನಡತೆಯ ತೀವ್ರತೆಗೆ ಅಸಮ ಪ್ರಮಾಣದ್ದು ಎಂದು ಇಲಾಖೆಯು ಅಭಿಪ್ರಾಯಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯ ವಿಚಾರಣೆ ವರದಿ, ಕಾನೂನಾತ್ಮಕ, ನಿಯಮಬದ್ಧ ಹಾಗೂ ವಿಚಾರಣೆ ನಡವಳಿಯಲ್ಲಿ ದಾಖಲಾಗಿರುವ ಅಂಶಗಳ ಆಧಾರದ ಮೇಲೆ ಆರೋಪಿತ ಪ್ರಥಮ ದರ್ಜೆ ಸಹಾಯಕ ಎಂ ಎನ್‌ ನರಸಿಂಹಮೂರ್ತಿ ವಿರುದ್ಧದ ಆರೋಪಗಳನ್ನು ನೈತಿಕ ಅಧಃಪತನ ಅಡಿಯಲ್ಲಿ 1957ರ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳ ಅನ್ವಯ 02 ವಾರ್ಷಿಕ ವೇತನ ಬಡ್ತಿಗಳನ್ನು ತಡೆಹಿಡಿಯುವ ದಂಡನೆ ವಿಧಿಸಿ ಆದೇಶಿಸಿರುವುದು ಗೊತ್ತಾಗಿದೆ.

Hot this week

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Related Articles

Popular Categories

error: Content is protected !!