Sunday | September 20, 2026 |

‘ಮಿನಿಸ್ಟರ್‌, ಅಧ್ಯಕ್ಷರಿಗೆ ಹಣ ಕೊಡಬೇಕು,’; ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಲಂಚಕ್ಕೆ ಬೇಡಿಕೆ

ಬೆಂಗಳೂರು; ‘ನಾನು ರೆಡ್‌ ಇಂಕ್‌ನಲ್ಲಿ ಬರೆದರೆ ಕೈಗಾರಿಕೆ ಮುಚ್ಚಬೇಕಾಗುತ್ತದೆ ಗ್ರೀನ್‌ ಇಂಕ್‌ನಲ್ಲಿ ಬರೆದರೆ ಕೈಗಾರಿಕೆ ನಡೆಸಬೇಕಾಗುತ್ತದೆ, ನಾನು ಹೇಳಿದಷ್ಟು ಹಣ ಕೊಟ್ಟರೆ ನಿಮ್ಮ ಕೆಲಸವಾಗುತ್ತದೆ. ನೀವು ಕೊಟ್ಟ ಹಣವನ್ನು ಮಿನಿಸ್ಟರ್‌, ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿ, ಆಡಳಿತಾಧಿಕಾರಿ, ಹಿರಿಯ ಪರಿಸರ ಅಧಿಕಾರಿಗಳಿಗೆ ಕೊಡಬೇಕು,’ ಹೀಗೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಕೈಗಾರಿಕೋದ್ಯಮಗಳಿಗೆ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ!

ನೆಲಮಂಗಲ ವ್ಯಾಪ್ತಿಯಲ್ಲಿರುವ ಪರಿಸರ ಮಂಡಳಿಯ ಅಧಿಕಾರಿಗಳಿಬ್ಬರ ವಿರುದ್ಧ ದೂರು ಸಲ್ಲಿಕೆಗೂ ಮುನ್ನವೇ ಕೈಗಾರಿಕೋದ್ಯಮಿ ರಾಜೇಂದ್ರಪ್ರಸಾದ್‌ ಎಂಬುವರು ಪರಿಸರ, ಜೀವಿಶಾಸ್ತ್ರ ಸಚಿವ ಆನಂದ್‌ಸಿಂಗ್‌ ಅವರಿಗೆ ಸಲ್ಲಿಸಿರುವ ದೂರು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ಭ್ರಷ್ಟಾಚಾರವನ್ನು ಮತ್ತಷ್ಟು ಅನಾವರಣಗೊಳಿಸಿದೆ. 2021ರ ಅಕ್ಟೋಬರ್‌ 28ರಂದು ಸಚಿವ ಆನಂದ್‌ ಸಿಂಗ್‌ ಅವರಿಗೆ ಸಲ್ಲಿಸಿರುವ ದೂರಿನ ಪ್ರತಿಯನ್ನು ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

ನೆಲಮಂಗಲ ಮತ್ತು ಪೀಣ್ಯದಲ್ಲಿ ಕಚೇರಿ ಹೊಂದಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕೈಗಾರಿಕೋದ್ಯಮಿಗಳ ಬಳಿ ಉದ್ಧಟತನದಿಂದ ವರ್ತಿಸುತ್ತಾರೆ. ಅಲ್ಲದೆ ಸಚಿವರು, ಮಂಡಳಿ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿ, ಆಡಳಿತಾಧಿಕಾರಿ, ಹಿರಿಯ ಪರಿಸರ ಅಧಿಕಾರಿಗಳಿಗೆ ಎಷ್ಟೆಷ್ಟು ಹಣ ಕೊಡಬೇಕು ಎಂದು ಕ್ಯಾಲುಕ್ಯುಲೇಟರ್‌ನಲ್ಲಿ ಲೆಕ್ಕ ಮಾಡಿ ಪಟ್ಟಿಯನ್ನು ತೋರಿಸುತ್ತಾರೆ ಎಂದು ಕೈಗಾರಿಕೋದ್ಯಮಿಗಳು ದೂರಿನಲ್ಲಿ ವಿವರಿಸಿದ್ದಾರೆ.

‘ಗುರುಮೂರ್ತಿ, ರಾಜಣ್ಣ ಎಂಬುವರು ದಿನನಿತ್ಯ ಕೈಗಾರಿಕೆಗಳಿಗೆ ಪರವಾನಿಗೆ ಮಾಡಿಸಿಕೊಡುವುದು , ಪರಿಸರ ವರದಿ, ಲೆಕ್ಕ ಪರಿಶೋಧನೆ ವರದಿ, ವಿಶ್ಲೇಷಣೆವರದಿ, ಯೋಜನೆ ವರದಿ ಮಾಡಿಸಿಕೊಡುವ ಹೆಸರಿನಲ್ಲಿ ಲಕ್ಷಗಟ್ಟಲೇ ಹಣ ವಸೂಲಿ ಮಾಡುತ್ತಿದ್ದಾರೆ. ಅಲ್ಲದೆ ಮಂಡಳಿಯ ಹಿರಿಯ ಅಧಿಕಾರಿಗಳಿಂದಲೇ ಫೋನ್ ಮಾಡಿಸಿ ಗುರುಮೂರ್ತಿ ಎಂಬುವರಿಂದಲೇ ಲೈಸೆನ್ಸ್‌ ರಿಪೋರ್ಟ್‌ ಮಾಡಿಸಿಕೊಳ್ಳಿ ಎಂದು ಆದೇಶ ಮಾಡಿಸುತ್ತಾರೆ,’ ಎಂದು ವರದಿಯಲ್ಲಿ ದೂರಲಾಗಿದೆ.

ಕೈಗಾರಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕಂಪ್ಯೂಟರ್‌ ಮೂಲಕ ಅಪ್‌ ಲೋಡ್‌ ಮಾಡಿಸಲು 10-15 ಸಾವಿರ ತೆಗೆದುಕೊಳ್ಳುತ್ತಿದ್ದಾರೆ ಎಂದು ಕೈಗಾರಿಕೋದ್ಯಮಿಗಳು ದೂರಿದ್ದಾರಲ್ಲದೆ ಈ ಹಣದಲ್ಲಿ ಪರಿಸರ ಅಧಿಕಾರಗಳಿಗೂ ಪಾಲಿದೆ ಎಂಬ ಅಂಶವನ್ನು ದೂರಿನಲ್ಲಿ ಉಲ್ಲೆಖಿಸಲಾಗಿದೆ.

‘ಪರಿಸರ ಮಂಡಳಿಯಲ್ಲಿ ಕೆಲಸ ಮಾಡುವ ಪ್ರಾಜೆಕ್ಟ್‌ ಅಸಿಸ್ಟೆಂಟ್‌, ಡೇಟಾ ಎಂಟ್ರಿ ಆಪರೇಟರ್‌ಗಳು ದಿನಕ್ಕೆ 50,000 ರು.ಗಳಿಂದ 80,000 ರು.ಗಳವರೆಗೆ ಹಣ ಸಂಪಾದಿಸುತ್ತಿದ್ದಾರೆ. ಕಚೇರಿಗೆ ಹೋದಾಗ ಇಂತಿಷ್ಟೇ ಹಣ ಕೊಡಿ ಎನ್ನುತ್ತಾರೆ. ಇಷ್ಟು ಹಣ ತಂದಿಲ್ಲ ಎಂದರೆ ಬ್ಯಾಂಕ್‌, ಎಟಿಎಂ ಅಡ್ರೆಸ್‌ಗಳನ್ನು ಅವರೇ ತೋರಿಸುತ್ತಾರೆ. ಅಥವಾ ಗೂಗಲ್‌ ಪೇ, ಪೋನ್‌ ಪೇ ಮಾಡಿ ಎನ್ನುತ್ತಾರೆ,’ ಎಂದು ಕೈಗಾರಿಕೋದ್ಯಮಿಗಳು ದೂರಿದ್ದಾರೆ.

ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರಿಗೆ 2021ರ ನವೆಂಬರ್‌ 4ರಂದು ಪತ್ರ ಬರೆದಿದ್ದರು. ಕೈಗಾರಿಕೆಗಳಿಗೆ ಪರವಾನಿಗೆ ನೀಡುವುದು ಮತ್ತು ಪರವಾನಿಗೆ ನವೀಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಕೈಗಾರಿಕೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಲಂಚಕ್ಕಾಗಿ ಬೇಡಿಕೆ ಇರಿಸುತ್ತಿರುವುದನ್ನು ವಿವರಿಸಿದ್ದರು.

ಪರವಾನಿಗೆ ಶುಲ್ಕವೆಂದು ಮಂಡಳಿಗೆ 60,000 ರು.ಗಳನ್ನು ಭರಿಸಲಾಗುತ್ತಿತ್ತು. ಆದರೆ ಲಂಚದ ಹಣವನ್ನು ಇದೀಗ 2 ಲಕ್ಷದಿಂದ 3 ಲಕ್ಷಕ್ಕೆ ಏರಿಸಲಾಗಿದೆ. ಇಷ್ಟು ಹಣವನ್ನು ಮಂಡಳಿಯ ಎಲ್ಲಾ ಅಧಿಕಾರಿಗಳಿಗೆ ಕೊಡಬೇಕು. ಇಲ್ಲದಿದ್ದರೆ ಕೈಗಾರಿಕೆಗಳಿಗೆ ಭೇಟಿ ಕೊಟ್ಟು ಬೆಸ್ಕಾಂ ಮೂಲಕ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸುತ್ತಾರೆ ಎಂದೂ ಬೆದರಿಸಲಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆಯಲ್ಲದೆ ಕೈಗಾರಿಕೆಗಳಿಂದ ಕೋಟಿ ಕೋಟಿ ಹಣವನ್ನು ವಸೂಲಿ ಮಾಡುತ್ತಿದ್ದಾರೆ ಎಂದೂ ಕೈಗಾರಿಕೋದ್ಯಮಿಗಳು ದೂರಿದ್ದನ್ನು ಸ್ಮರಿಸಬಹುದು.

Hot this week

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

Related Articles

Popular Categories

error: Content is protected !!