Tuesday | August 25, 2026 |

ಆನಂದ್‌ ತೇಲ್ತುಂಬೆ ಪರ ಸಹಿ ಸಂಗ್ರಹ; ಸಂಘಟನೆಗಳ ಚಟುವಟಿಕೆ ಕುರಿತು ರಾಜ್ಯ ಗುಪ್ತಚರ ಇಲಾಖೆ ವರದಿ

ಬೆಂಗಳೂರು; ಮಹಾರಾಷ್ಟ್ರದ ಭೀಮಾ-ಕೋರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಹೋರಾಟಗಾರ ಆನಂದ್‌ ತೇಲ್ತುಂಬೆ ಅವರ ಬಿಡುಗಡೆಗೆ ಒತ್ತಾಯಿಸಿ ಸಹಿ ಸಂಗ್ರಹಿಸುತ್ತಿರುವ ಸಂಘಟನೆಗಳ ಚಟುವಟಿಕೆಗಳ ಕುರಿತು ರಾಜ್ಯ ಗುಪ್ತಚರ ಇಲಾಖೆಯು ಪೊಲೀಸ್‌ ಕಮಿಷನರ್‌ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ರಹಸ್ಯ ಪತ್ರ ಬರೆದಿದೆ.

 

ಸದ್ಯ ಬಂಧನಲ್ಲಿರುವ ಆನಂದ್‌ ತೇಲ್ತುಂಬೆ ಮತ್ತು ಇತರೆ 15 ಮಂದಿಯನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯದ ಹಾವೇರಿ ಸೇರಿದಂತೆ ಇನ್ನಿತರೆ ಜಿಲ್ಲೆಗಳಲ್ಲಿ ದಲಿತ ಮತ್ತಿತರ ಸಂಘಟನೆಗಳು ಸಹಿ ಅಭಿಯಾನ ನಡೆಸುತ್ತಿವೆ ಎಂದು ರಾಜ್ಯ ಗುಪ್ತಚರ ಇಲಾಖೆಯು ಪಾಕ್ಷಿಕ (2021 ಡಿಸೆಂಬರ್‌ 15ರಿಂದ 31 ಡಿಸೆಂಬರ್‌ವರೆಗೆ ) ರಹಸ್ಯ ವರದಿ ಸಿದ್ಧಪಡಿಸಿದೆ.

 

ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲ್ಬುರ್ಗಿ ಮತ್ತು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್‌ಗಳಿಗೆ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಈ ರಹಸ್ಯ ಪತ್ರವನ್ನು (NO 01/C.I.CELL-1/MISC/2022) 2022ರ ಜನವರಿ 13ರಂದು ಸಿ. ಐ. ಸೆಲ್‌ನ ಉಪ ನಿರ್ದೇಶಕ ಎಂ ನಾರಾಯಣ ಅವರು ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

4 ಪುಟಗಳನ್ನು ಒಳಗೊಂಡಿರುವ ಈ ಪತ್ರದಲ್ಲಿ ರಾಜ್ಯದಲ್ಲಿ ಸಿಪಿಐ ಮಾವೋವಾದಿ ಮತ್ತು ಎಡಪಕ್ಷಗಳು ಹಾಗೂ ಯಾವುದೇ ಭಯೋತ್ಪಾದಕ ಚಟುವಟಿಕೆಗಳು ನಡೆದಿಲ್ಲ ಎಂಬ ಮಾಹಿತಿಯೂ ಇದೆ. ಈ ಮಾಹಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೂ ತಲುಪಿಸಲಾಗಿದೆ ಎಂದು ತಿಳಿದು ಬಂದಿದೆ.

 

ಬಹುಮುಖ್ಯವಾಗಿ ಆನಂದ್‌ ತೇಲ್ತುಂಬೆ ಮತ್ತಿತರರನ್ನು ಬಿಡುಗಡೆಗೊಳಿಸಲು ಕರ್ನಾಟಕ ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯು ಆಂತರಿಕ ಸಭೆ ನಡೆಸುತ್ತಿದೆ. ‘ಸಂಘಟನೆಯ ಅಧ್ಯಕ್ಷ ಮರಿದೇವಪ್ಪ ನಡುವಿನಕೇರಿ 2021ರ ನವೆಂಬರ್‌ 21ರಂದು ರಾಣೆಬೆನ್ನೂರುತಾಲೂಕಿನ ಮೈದೂರಿನ ದುರ್ಗಾದೇವಿ ದೇವಸ್ಥಾನದಲ್ಲಿ ಆಂತರಿಕ ಸಭೆ ನಡೆಸಿದ್ದಾರೆ. ಆನಂದ್‌ ತೇಲ್ತುಂಬೆ ಸೇರಿದಂತೆ ಒಟ್ಟು 15 ಮಂದಿಯನ್ನು ಬಿಡುಗಡೆಗೆ ಒತ್ತಾಯಿಸಿ ಸಹಿ ಅಭಿಯಾನ ನಡೆಸಲಾಗಿದೆ. ಹಾವೇರಿ ಜಿಲ್ಲೆಯಾದ್ಯಂತ ಸುಮಾರು 3,000 ಸಹಿ ಸಂಗ್ರಹಿಸಿದ್ದು ಅದನ್ನು ಅದನ್ನು ಆನಂದ್‌ ತೇಲ್ಬುಂಬೆ ಅವರ ಪತ್ನಿ ರಮಾಬಾಯಿ ಅವರ ಹೆಸರಿನಲ್ಲಿ ಕರ್ನಾಟಕ ರಾಜ್ಯಪಾಲರಿಗೆ ಕಳಿಸಲು ನಿರ್ಧರಿಸಿದ್ದಾರೆ,’ ಎಂಬ ಮಾಹಿತಿಯು ಪತ್ರದಲ್ಲಿರುವುದು ತಿಳಿದು ಬಂದಿದೆ.

 

ಇದೇ ಪತ್ರದಲ್ಲಿ ನಕ್ಸಲ್‌ ಹೊಸಗದ್ದೆ ಪ್ರಭಾ ಎಂಬುವರು 2021ರ ಡಿಸೆಂಬರ್‌ 18ರಂದು ತಮಿಳುನಾಡಿನ ಧರ್ಮಪುರಿಯಲ್ಲಿ ಶರಣಾಗಿರುವ ಕುರಿತು ಮಾಹಿತಿಯೂ ಇದೆ. 2003ರಿಂದ ಹೊಸಗದ್ದೆ ಪ್ರಭಾ ಭೂಗತರಾಗಿದ್ದರು. ಆ ನಂತರ ನಕ್ಸಲ್‌ ಮುಖಂಡ ಬಿ ಜಿ ಕೃಷ್ಣಮೂರ್ತಿ ಅವರನ್ನು ವಿವಾಹವಾದರು. ಕಳೆದ ಹಲವು ವರ್ಷಗಳಿಂದ ಪ್ಯಾರಲಿಸಿಸ್‌ನಿಂದ ಬಳಲುತ್ತಿದ್ದು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ವಿವರಣೆಯು ಪತ್ರದಲ್ಲಿರುವುದು ಗೊತ್ತಾಗಿದೆ.

 

ಹೊಸಗದ್ದೆ ಪ್ರಭಾ ವಿರುದ್ಧ ಕರ್ನಾಟಕದಲ್ಲಿ 42 ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಚಿಕ್ಕಮಗಳೂರಿನಲ್ಲಿ 28, ಶಿವಮೊಗ್ಗದಲ್ಲಿ 5, ಬೆಂಗಳೂರು ನಗರದಲ್ಲಿ 1 ಪ್ರಕರಣಗಳಿವೆ. ಇವರ ಬಂಧನಕ್ಕೆ ಸಹಕರಿಸಿದವರು ಮತ್ತು ಸುಳಿವು ನೀಡುವವರಿಗೆ 5 ಲಕ್ಷ ಬಹುಮಾನವನ್ನೂ ಸರ್ಕಾರವು ಘೋಷಿಸಿತ್ತು. ಸದ್ಯ ತಮಿಳುನಾಡು ಪೊಲೀಸರ ವಶದಲ್ಲಿದ್ದಾರೆ ಎಂಬ ಮಾಹಿತಿಯು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮತ್ತು ಪೊಲೀಸ್ ಕಮಿಷನರ್‌ಗಳಿಗೆ ಬರೆದಿರುವ ಪತ್ರದಲ್ಲಿದೆ.

 

ಅದೇ ರೀತಿ ಕರ್ನಾಟಕದ ಚರ್ಚ್‌ಗಳಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಕುರಿತು ರಾಜ್ಯ ಗುಪ್ತಚರ ಇಲಾಖೆಯು ಸಮೀಕ್ಷೆಗೆ ಮುಂದಾಗಿದ್ದನ್ನು ಸ್ಮರಿಸಬಹುದು.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!