Tuesday | September 15, 2026 |

ಆನಂದ್‌ ತೇಲ್ತುಂಬೆ ಪರ ಸಹಿ ಸಂಗ್ರಹ; ಸಂಘಟನೆಗಳ ಚಟುವಟಿಕೆ ಕುರಿತು ರಾಜ್ಯ ಗುಪ್ತಚರ ಇಲಾಖೆ ವರದಿ

ಬೆಂಗಳೂರು; ಮಹಾರಾಷ್ಟ್ರದ ಭೀಮಾ-ಕೋರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಹೋರಾಟಗಾರ ಆನಂದ್‌ ತೇಲ್ತುಂಬೆ ಅವರ ಬಿಡುಗಡೆಗೆ ಒತ್ತಾಯಿಸಿ ಸಹಿ ಸಂಗ್ರಹಿಸುತ್ತಿರುವ ಸಂಘಟನೆಗಳ ಚಟುವಟಿಕೆಗಳ ಕುರಿತು ರಾಜ್ಯ ಗುಪ್ತಚರ ಇಲಾಖೆಯು ಪೊಲೀಸ್‌ ಕಮಿಷನರ್‌ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ರಹಸ್ಯ ಪತ್ರ ಬರೆದಿದೆ.

 

ಸದ್ಯ ಬಂಧನಲ್ಲಿರುವ ಆನಂದ್‌ ತೇಲ್ತುಂಬೆ ಮತ್ತು ಇತರೆ 15 ಮಂದಿಯನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯದ ಹಾವೇರಿ ಸೇರಿದಂತೆ ಇನ್ನಿತರೆ ಜಿಲ್ಲೆಗಳಲ್ಲಿ ದಲಿತ ಮತ್ತಿತರ ಸಂಘಟನೆಗಳು ಸಹಿ ಅಭಿಯಾನ ನಡೆಸುತ್ತಿವೆ ಎಂದು ರಾಜ್ಯ ಗುಪ್ತಚರ ಇಲಾಖೆಯು ಪಾಕ್ಷಿಕ (2021 ಡಿಸೆಂಬರ್‌ 15ರಿಂದ 31 ಡಿಸೆಂಬರ್‌ವರೆಗೆ ) ರಹಸ್ಯ ವರದಿ ಸಿದ್ಧಪಡಿಸಿದೆ.

 

ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲ್ಬುರ್ಗಿ ಮತ್ತು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್‌ಗಳಿಗೆ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಈ ರಹಸ್ಯ ಪತ್ರವನ್ನು (NO 01/C.I.CELL-1/MISC/2022) 2022ರ ಜನವರಿ 13ರಂದು ಸಿ. ಐ. ಸೆಲ್‌ನ ಉಪ ನಿರ್ದೇಶಕ ಎಂ ನಾರಾಯಣ ಅವರು ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

4 ಪುಟಗಳನ್ನು ಒಳಗೊಂಡಿರುವ ಈ ಪತ್ರದಲ್ಲಿ ರಾಜ್ಯದಲ್ಲಿ ಸಿಪಿಐ ಮಾವೋವಾದಿ ಮತ್ತು ಎಡಪಕ್ಷಗಳು ಹಾಗೂ ಯಾವುದೇ ಭಯೋತ್ಪಾದಕ ಚಟುವಟಿಕೆಗಳು ನಡೆದಿಲ್ಲ ಎಂಬ ಮಾಹಿತಿಯೂ ಇದೆ. ಈ ಮಾಹಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೂ ತಲುಪಿಸಲಾಗಿದೆ ಎಂದು ತಿಳಿದು ಬಂದಿದೆ.

 

ಬಹುಮುಖ್ಯವಾಗಿ ಆನಂದ್‌ ತೇಲ್ತುಂಬೆ ಮತ್ತಿತರರನ್ನು ಬಿಡುಗಡೆಗೊಳಿಸಲು ಕರ್ನಾಟಕ ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯು ಆಂತರಿಕ ಸಭೆ ನಡೆಸುತ್ತಿದೆ. ‘ಸಂಘಟನೆಯ ಅಧ್ಯಕ್ಷ ಮರಿದೇವಪ್ಪ ನಡುವಿನಕೇರಿ 2021ರ ನವೆಂಬರ್‌ 21ರಂದು ರಾಣೆಬೆನ್ನೂರುತಾಲೂಕಿನ ಮೈದೂರಿನ ದುರ್ಗಾದೇವಿ ದೇವಸ್ಥಾನದಲ್ಲಿ ಆಂತರಿಕ ಸಭೆ ನಡೆಸಿದ್ದಾರೆ. ಆನಂದ್‌ ತೇಲ್ತುಂಬೆ ಸೇರಿದಂತೆ ಒಟ್ಟು 15 ಮಂದಿಯನ್ನು ಬಿಡುಗಡೆಗೆ ಒತ್ತಾಯಿಸಿ ಸಹಿ ಅಭಿಯಾನ ನಡೆಸಲಾಗಿದೆ. ಹಾವೇರಿ ಜಿಲ್ಲೆಯಾದ್ಯಂತ ಸುಮಾರು 3,000 ಸಹಿ ಸಂಗ್ರಹಿಸಿದ್ದು ಅದನ್ನು ಅದನ್ನು ಆನಂದ್‌ ತೇಲ್ಬುಂಬೆ ಅವರ ಪತ್ನಿ ರಮಾಬಾಯಿ ಅವರ ಹೆಸರಿನಲ್ಲಿ ಕರ್ನಾಟಕ ರಾಜ್ಯಪಾಲರಿಗೆ ಕಳಿಸಲು ನಿರ್ಧರಿಸಿದ್ದಾರೆ,’ ಎಂಬ ಮಾಹಿತಿಯು ಪತ್ರದಲ್ಲಿರುವುದು ತಿಳಿದು ಬಂದಿದೆ.

 

ಇದೇ ಪತ್ರದಲ್ಲಿ ನಕ್ಸಲ್‌ ಹೊಸಗದ್ದೆ ಪ್ರಭಾ ಎಂಬುವರು 2021ರ ಡಿಸೆಂಬರ್‌ 18ರಂದು ತಮಿಳುನಾಡಿನ ಧರ್ಮಪುರಿಯಲ್ಲಿ ಶರಣಾಗಿರುವ ಕುರಿತು ಮಾಹಿತಿಯೂ ಇದೆ. 2003ರಿಂದ ಹೊಸಗದ್ದೆ ಪ್ರಭಾ ಭೂಗತರಾಗಿದ್ದರು. ಆ ನಂತರ ನಕ್ಸಲ್‌ ಮುಖಂಡ ಬಿ ಜಿ ಕೃಷ್ಣಮೂರ್ತಿ ಅವರನ್ನು ವಿವಾಹವಾದರು. ಕಳೆದ ಹಲವು ವರ್ಷಗಳಿಂದ ಪ್ಯಾರಲಿಸಿಸ್‌ನಿಂದ ಬಳಲುತ್ತಿದ್ದು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ವಿವರಣೆಯು ಪತ್ರದಲ್ಲಿರುವುದು ಗೊತ್ತಾಗಿದೆ.

 

ಹೊಸಗದ್ದೆ ಪ್ರಭಾ ವಿರುದ್ಧ ಕರ್ನಾಟಕದಲ್ಲಿ 42 ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಚಿಕ್ಕಮಗಳೂರಿನಲ್ಲಿ 28, ಶಿವಮೊಗ್ಗದಲ್ಲಿ 5, ಬೆಂಗಳೂರು ನಗರದಲ್ಲಿ 1 ಪ್ರಕರಣಗಳಿವೆ. ಇವರ ಬಂಧನಕ್ಕೆ ಸಹಕರಿಸಿದವರು ಮತ್ತು ಸುಳಿವು ನೀಡುವವರಿಗೆ 5 ಲಕ್ಷ ಬಹುಮಾನವನ್ನೂ ಸರ್ಕಾರವು ಘೋಷಿಸಿತ್ತು. ಸದ್ಯ ತಮಿಳುನಾಡು ಪೊಲೀಸರ ವಶದಲ್ಲಿದ್ದಾರೆ ಎಂಬ ಮಾಹಿತಿಯು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮತ್ತು ಪೊಲೀಸ್ ಕಮಿಷನರ್‌ಗಳಿಗೆ ಬರೆದಿರುವ ಪತ್ರದಲ್ಲಿದೆ.

 

ಅದೇ ರೀತಿ ಕರ್ನಾಟಕದ ಚರ್ಚ್‌ಗಳಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಕುರಿತು ರಾಜ್ಯ ಗುಪ್ತಚರ ಇಲಾಖೆಯು ಸಮೀಕ್ಷೆಗೆ ಮುಂದಾಗಿದ್ದನ್ನು ಸ್ಮರಿಸಬಹುದು.

Hot this week

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಅದಾನಿ ಎಸಿಸಿ ಸಮೂಹಕ್ಕೆ ವಿಧಿಸಿದ್ದ 482.69 ಕೋಟಿ ರು ದಂಡದ ಬೇಡಿಕೆ ರದ್ದು; ರಾಜ್ಯದ ಅರ್ಜಿಯೂ ವಜಾ, ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ವಿಫಲವಾಯಿತೇ ರಾಜ್ಯ?

ಬೆಂಗಳೂರು; ಕಲಬುರಗಿ ಜಿಲ್ಲೆಯ ಇಂಗಳಗಿ ಮತ್ತು ರಾವೂರ್ ಗ್ರಾಮಗಳಲ್ಲಿ ಗಣಿಗಾರಿಕೆ ನಡೆಸುತ್ತಿದ್ದ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...
Please Scan to make Your Contribution

Topics

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ...

ಬಹು ದೊಡ್ಡ ಬರಗಾಲ; ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 310 ಕೋಟಿಯಷ್ಟೇ ಲಭ್ಯ

ಬೆಂಗಳೂರು; ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡಿರುವ ಬಹುದೊಡ್ಡ ಬರಕ್ಕೆ ತುತ್ತಾಗಿರುವ...

Related Articles

Popular Categories

error: Content is protected !!