Monday | July 6, 2026 |

ಶಿಕ್ಷೆಗೆ ಒಳಪಡಬೇಕಾದ ಅಪರಾಧಿಗಳಿಗೆ ನೆರವಾಗುವ ಪೊಲೀಸರು; ಆಯೋಗದ ವರದಿ ಬಹಿರಂಗ

ಬೆಂಗಳೂರು; ಸರ್ಕಾರಿ ನೌಕರರು ಅದರಲ್ಲೂ ವಿಶೇಷವಾಗಿ ಪೊಲೀಸ್‌ ಸಿಬ್ಬಂದಿ ಕೆಲವೊಮ್ಮೆ ಶಿಕ್ಷೆಗೆ ಒಳಪಡಿಸಬೇಕಾಗಿರುವ ಅಪರಾಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಗಂಭೀರವಾದ ಸಂಗತಿಯನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ವರದಿಯು ಬಹಿರಂಗಗೊಳಿಸಿದೆ.

 

ರಾಜ್ಯದಲ್ಲಿ ಮಹಿಳೆ, ಮಕ್ಕಳು ಮತ್ತು ಬಂಧನದಲ್ಲಿರುವ ವ್ಯಕ್ತಿಗಳ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ 2019-20ನೇ ಸಾಲಿನ 13ನೇ ವಾರ್ಷಿಕ ವರದಿಯು ಹೊರಗೆಡವಿದೆ. ಈ ವರದಿಯು ವಿಧಾನಸಭೆಯ ಮುಂಬರುವ ಅಧಿವೇಶನದಲ್ಲಿ ಶೀಘ್ರದಲ್ಲಿಯೇ ಮಂಡನೆಯಾಗಲಿದೆ. ವರದಿಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ರಾಜ್ಯ ಮಾನವ ಹಕ್ಕುಗಳ ಆಯೋಗದ ವರದಿ ಮುಖಪುಟ

 

2017-18ರಿಂದ 2019-20ರವರೆಗಿನ ಮೂರು ವರ್ಷಗಳಲ್ಲಿ ಒಟ್ಟು 16,778 ದೂರುಗಳು ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಕೆಯಾಗಿವೆ. 2017-18ರಲ್ಲಿ 6,561, 2018-19ರಲ್ಲಿ 5,658, 2019-20ರಲ್ಲಿ4,559 ದೂರುಗಳನ್ನು ಮಾನವ ಹಕ್ಕುಗಳ ಆಯೋಗವು ಸ್ವೀಕರಿಸಿರುವುದು ವರದಿಯಿಂದ ಗೊತ್ತಾಗಿದೆ.

 

ಆಯೋಗದ ತನಿಖಾ ವಿಭಾಗವು 2019ರ ಏಪ್ರಿಲ್‌ 1ರಿಂದ 2020ರ ಮಾರ್ಚ್‌ 31ರವರೆಗೆ ಒಟ್ಟು 74 ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಿದೆ. ಇದೇ ಅವಧಿಯಲ್ಲಿ 237 ಪ್ರಕರಣಗಳು ದಾಖಲಾಗಿವೆ. ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರ, ಸಾರ್ವಜನಿಕ ಅಥವಾ ಖಾಸಗಿ ಸೇವೆಗಳಲ್ಲಿ ಲೈಂಗಿಕ ಕಿರುಕುಳ, ಜೀತ ಪದ್ಧತಿ, ಅಪ್ರಾಪ್ತ ಮಕ್ಕಳ ಕಳ್ಳ ಸಾಗಾಣಿಕೆ, ಬಾಲಕಾರ್ಮಿಕರು, ಬಾಲ್ಯ ವಿವಾಹ, ರಾಜ್ಯದ ಬಂಧೀಖಾನೆಗಳಲ್ಲಿ ಲಭ್ಯವಿರುವ ಮೂಲಭೂತ ಮತ್ತು ಇತರೆ ಸೌಲಭ್ಯಗಳು, ಲೈಂಗಿಕ ಕಾರ್ಯಕರ್ತರು, ಕುಡಿಯುವ ನೀರು ಸರಬರಾಜು ಒಳಗೊಂಡಂತೆ ಮೂಲಭೂತ ನಾಗರಿಕ ಸೌಕರ್ಯಗಳು, ಕೆಲವು ಪ್ರದೇಶಗಳ ನಿವಾಸಿಗಳಿಗೆ ಕಲುಷಿತ ನೀರಿನ ಸರಬರಾಜು ಸಂಬಂಧ ಆಯೋಗವು ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

 

‘ಮಹಿಳೆ, ಮಕ್ಕಳು ಮತ್ತು ಬಂಧನದಲ್ಲಿರುವ ವ್ಯಕ್ತಿಗಳ ಮೇಲಿನ ಮಾನವ ಹಕ್ಕುಗಳ ಉಲ್ಲಂಘನೆಗಳು ತೀವ್ರವಾಗಿ ಹೆಚ್ಚುತ್ತಿರುವ ಬಗ್ಗೆ ಕಳವಳವಿದೆ. ಸರ್ಕಾರಿ ನೌಕರರು ವಿಶೇಷವಾಗಿ ಪೊಲೀಸ್‌ ಸಿಬ್ಬಂದಿ ಕೆಲವೊಮ್ಮೆ ಶಿಕ್ಷೆಗೆ ಒಳಪಡಿಸಬೇಕಾಗಿರುವ ಅಪರಾಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸದೇ ನಿರ್ಲಕ್ಷ್ಯ ವಹಿಸುತ್ತಿರುವುದು ಗಂಭೀರವಾದ ವಿಷಯವಾಗಿದೆ.

 

 

 

ಈ ಬಗ್ಗೆ ಪರಿಣಾಮಕಾರಿ ಮತ್ತು ಫಲಕಾರಿ ಪರಿಹಾರದ ಒಂದು ಆಲೋಚನೆಯು ಅಗತ್ಯವಿದೆ. ಸಮಾಜದಲ್ಲಿ ಶಾಂತಿಯುತ ಜೀವನಕ್ಕೆ ಭಂಗ ತರುವಂತಹ ವ್ಯಕ್ತಿಗಳ ವಿರುದ್ಧ ಹಾಗೂ ಇಂತಹ ತಪ್ಪುಗಳನ್ನು ಬೆಂಬಲಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಸಹ ಅವಶ್ಯವಾಗಿದೆ,’ ಎಂದು ಆಯೋಗವು ತನ್ನ ವರದಿಯಲ್ಲಿ ವಿವರಿಸಿದೆ.

ಮಾನವ ಹಕ್ಕುಗಳ ಆಯೋಗ, ಮತ್ತಿತರ ಆಯೋಗಗಳು ಇಂದಿನ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇವಲ ಅಲಂಕಾರಿಕ ಸಂಸ್ಥೆಗಳು ಎಂಬಂತೆ ಕಾಣುತ್ತಿವೆ. ಏಕೆಂದರೆ ಪ್ರತಿವರ್ಷವೂ ಸಹ ಈ ತರಹದ ಮಾನವ ಹಕ್ಕುಗಳ ಉಲ್ಲಂಘನೆಗಳು ಹೆಚ್ಚಾಗಿವೆ ಎಂಬ ವರದಿ ಕಾಣುತ್ತದೆಯೇ ವಿನಃ ಕಡಿಮೆಯಾಗಿದೆ ಎಂಬುದು ಕಾಣುವುದಿಲ್ಲ. ಇದರ ಅರ್ಥವೇನೆಂದರೆ ಈ ಆಯೋಗಗಳ ವೈಫಲ್ಯತೆಗೆ ಕನ್ನಡಿ ಹಿಡಿದಂತಾಗಿದೆ.

 

ಆದರ್ಶ ಐಯ್ಯರ್‌, ಸಹ- ಅಧ್ಯಕ್ಷ, ಜನಾಧಿಕಾರ ಸಂಘರ್ಷ ಪರಿಷತ್‌

 

 

2019ರ ಮಾರ್ಚ್‌ 31ರ ಅಂತ್ಯಕ್ಕೆ ಆಯೋಗದಲ್ಲಿ ರಾಜ್ಯದ ಜಿಲ್ಲೆಗಳಲ್ಲಿ 4,145 ದೂರುಗಳು ವಿಚಾರಣೆಗೆ ಬಾಕಿ ಇದ್ದವು. 2019-20ನೇ ಸಾಲಿನಲ್ಲಿ 4,559ದೂರುಗಳು ಆಯೋಗಕ್ಕೆ ಸಲ್ಲಿಕೆಯಾಗಿದ್ದವು. ಒಟ್ಟಾರೆಯಾಗಿ 8,704 ದೂರುಗಳಿದ್ದವು. ಇದರಲ್ಲಿ 3,280 ಸಾಮಾನ್ಯ, ಸ್ವಯಂ ಪ್ರೇರಿತವಾಗಿ 865 ದೂರುಗಳು 2019ರಲ್ಲಿ ಬಾಕಿ ಇದ್ದವು. 2019-20ರಲ್ಲಿ ಸಾಮಾನ್ಯ 4,545 ದೂರು ಮತ್ತು 14 ದೂರುಗಳನ್ನು ಆಯೋಗವು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿತ್ತು.

 

 

ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2019ರ ಮಾರ್ಚ್‌ 31ರ ಅಂತ್ಯಕ್ಕೆ 1,801 ದೂರುಗಳು ಬಾಕಿ ಇದ್ದರೆ ಇದೇ ಅವಧಿಯಲ್ಲಿ 1,534 ದೂರುಗಳು ದಾಖಲಾಗಿದ್ದವು. ಒಟ್ಟು 3,335 ದೂರುಗಳ ಪೈಕಿ 2,741 ದೂರುಗಳು ವಿಲೇವಾರಿ ಆಗಿದ್ದರೆ 2020ರ ಮಾರ್ಚ್‌ 31ರ ಅಂತ್ಯಕ್ಕೆ 594 ದೂರುಗಳು ಬಾಕಿ ಇದ್ದವು.
ಮಡಿಕೇರಿಯಲ್ಲಿ 703, ಶಿವಮೊಗ್ಗದಲ್ಲಿ 492, ದಕ್ಷಿಣ ಕನ್ನಡದಲ್ಲಿ 86, ದಾವಣಗೆರೆಯಲ್ಲಿ 233, ಧಾರವಾಡದಲ್ಲಿ 216, ಬೆಳಗಾವಿಯಲ್ಲಿ 240, ಬಳ್ಳಾರಿಯಲ್ಲಿ 201, ರಾಮನಗರದಲ್ಲಿ 256 ದೂರುಗಳು ಆಯೋಗಕ್ಕೆ ಸಲ್ಲಿಕೆಯಾಗಿದ್ದವು ಎಂಬುದು ವರದಿಯಿಂದ ಗೊತ್ತಾಗಿದೆ.

 

ರಾಜ್ಯದ ಎಲ್ಲಾ ಇಲಾಖೆಗಳಲ್ಲಿಯೂ ರಾಜಕಾರಣಿಗಳ ಅವ್ಯಾಹತ ಹಸ್ತಕ್ಷೇಪ, ಅದರಲ್ಲೂ ಪೊಲೀಸ್‌ ಇಲಾಖೆಯಲ್ಲಿನ ಎಲ್ಲಾ ಮಟ್ಟಗಳಲ್ಲಿಯೂ ಬೃಹತ್ ಹಸ್ತಕ್ಷೇಪ ಹಾಗೂ ತಮ್ಮ ಸ್ವಾರ್ಥಕ್ಕಾಗಿ ಇಲಾಖೆಯ ದುರುಪಯೋಗ. ಪೋಲಿಸ್ ಮತ್ತು ಇತರೆ ಇಲಾಖೆಯ ಉನ್ನತ ಅಧಿಕಾರಿಗಳು ಯಾವಾಗ ರಾಜಕಾರಣಿಗಳ ಮುಂದೆ ತಲೆಬಾಗದೆ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಾರೆಯೊ ಅಂದು ಈ ಆಯೋಗಗಳ ಶಿಫಾರಸುಗಳು ಬಲಿಷ್ಠವಾಗುವುವು,’ ಎನ್ನುತ್ತಾರೆ ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷ ಆದರ್ಶ ಐಯ್ಯರ್‌.

 

ಮಾನವ ಹಕ್ಕುಗಳ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ ಹೆಚ್‌ ವಘೇಲಾ ಅಧ್ಯಕ್ಷರಾಗಿದ್ದರೆ, ಕೆ ಬಿ ಚಂಗಪ್ಪ ಮತ್ತು ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ರೂಪಕ್‌ ಕುಮಾರ್‌ ದತ್ತ ಅವರು ಆಯೋಗದ ಸದಸ್ಯರಾಗಿದ್ದಾರೆ.

Hot this week

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಸಿಎಂ, ಡಿಸಿಎಂ ಸೇರಿ ಐವರು ಸಚಿವರ ವಸತಿಗೃಹ ನವೀಕರಣ, ದುರಸ್ತಿ, ಪೀಠೋಪಕರಣ, ಗೃಹಪಯೋಗಿ ವಸ್ತುಗಳ ಖರೀದಿ; 3 ವರ್ಷದಲ್ಲಿ 19.01 ಕೋಟಿ ರು ವೆಚ್ಚ

ಬೆಂಗಳೂರು; ಸರ್ಕಾರಿ ಶಾಲೆ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಇರುವ ಕೊಠಡಿಗಳ...
Please Scan to make Your Contribution

Topics

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...

Related Articles

Popular Categories

error: Content is protected !!