Friday | June 12, 2026 |

ಸತ್ತ ವ್ಯಕ್ತಿ ಹೆಸರಿಗೆ 125 ಕೋಟಿ ರು.ಮೌಲ್ಯದ ಜಮೀನು; ತುಟಿ ಬಿಚ್ಚದ ಸಚಿವ ಅಶೋಕ್‌

ಬೆಂಗಳೂರು; ಇಪ್ಪತ್ತಮೂರು ವರ್ಷಗಳ ಹಿಂದೆಯೇ ಸತ್ತು ಹೋಗಿರುವ ವ್ಯಕ್ತಿ ಹೆಸರಿನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪರಿಗಣಿಸಿ ಮಾರುಕಟ್ಟೆಯಲ್ಲಿ  ಸುಮಾರು 125 ಕೋಟಿ ರು. ಮೌಲ್ಯದಷ್ಟು ಬೆಲೆಬಾಳುವ  ಜಾಗವನ್ನು ಮಂಜೂರು ಮಾಡಿರುವ ಪ್ರಕರಣ ಇದೀಗ ಬಹಿರಂಗವಾಗಿದೆ.

 

ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ತಾಲೂಕಿನ ಬೇಗೂರು ಹೋಬಳಿಯ ಹುಳಿಮಾವು ಗ್ರಾಮದ ಸರ್ವೆ ನಂಬರ್‌ 63ರಲ್ಲಿನ ಜಮೀನು ಮಂಜೂರಾತಿ ಕುರಿತಂತೆ ಕೆ ಜಿ ಬೋಪಯ್ಯ ಅಧ್ಯಕ್ಷತೆಯಲ್ಲಿರುವ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿಯು ವಿಚಾರಣೆಗೆ ಕೈಗೆತ್ತಿಕೊಂಡು ಪರಿಶೀಲನೆ ನಡೆಸುತ್ತಿರುವಾಗಲೇ ಮೃತ ವ್ಯಕ್ತಿ ಹೆಸರಿನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ಸಂಬಂಧ ಆದೇಶವನ್ನೂ ಹೊರಡಿಸಲಾಗಿದೆ. ಮೃತ ವ್ಯಕ್ತಿಯ ಹೆಸರಿಗೆ ಜಮೀನು ಮಂಜೂರು ಆದೇಶ ಹೊರಡಿಸಿರುವ ಸಹಾಯಕ ಆಯಕ್ತರ ವಿರುದ್ಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್‌ ಇದುವರೆಗೂ ಯಾವುದೇ ಕ್ರಿಮಿನಲ್‌ ಮೊಕದ್ದಮೆ ಹೂಡದೇ ನಿರ್ಲಕ್ಷ್ಯ ವಹಿಸಲಾಗಿದೆ. ಕಂದಾಯ ಸಚಿವ ಆರ್‌ ಅಶೋಕ್‌ ಅವರೂ ಸಹ ಈ ಪ್ರಕರಣದ ಬಗ್ಗೆ ಇದುವರೆಗೂ ತುಟಿ ಬಿಚ್ಚಿಲ್ಲ.

 

ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿಯು 2022ರ ಜನವರಿ 19ರಂದು ನಡೆಸಿದ್ದ ಸಭೆಯ ನಡವಳಿಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಸಭೆಯ ನಡವಳಿ ಪ್ರತಿ

 

ಪ್ರಕರಣದ ವಿವರ

 

ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ತಾಲೂಕಿನ ಬೇಗೂರು ಹೋಬಳಿಯ ಹುಳಿಮಾವು ಗ್ರಾಮದ ಸರ್ವೆ ನಂಬರ್‌ 63ರಲ್ಲಿ 1. 20 ಎಕರೆ ಜಾಗವನ್ನು ತೋಟಿ ಯಲ್ಲಪ್ಪ (ಮೂಲ ಹೆಸರು ಈರನಹಳ್ಳಿ ಯಲ್ಲಪ್ಪ) ಎಂಬುವರಿಗೆ ಮಂಜೂರು ಮಾಡಲಾಗಿದೆ. ಈ ಸಂಬಂಧ ಆರ್‌ಟಿಸಿ ಕೂಡ ಮಾಡಿಕೊಡಲಾಗಿದೆ. ಆದರೆ ವಾಸ್ತವದಲ್ಲಿ ತೋಟಿ ಯಲ್ಲಪ್ಪ ಎಂಬವರು 1998ರ ನವೆಂಬರ್‌ 4ರಂದು ಮರಣ ಹೊಂದಿದ್ದಾರೆ. ಆದರೆ ಅವರ ಹೆಸರಿನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಬೆಂಗಳೂರು ದಕ್ಷಿಣ ತಾಲೂಕಿನ ಸಹಾಯಕ ಆಯುಕ್ತರು ಪರಿಶೀಲನೆ ನಡೆಸದೆಯೇ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ ಎಂಬ ಸಂಗತಿ ಸಭೆಯ ನಡವಳಿಯಿಂದ ತಿಳಿದು ಬಂದಿದೆ.

 

 

ಈ ಪ್ರಕರಣದ ಕುರಿತು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿಯು ನಡೆಸಿದ್ದ ಸಭೆಗೆ ಹಾಜರಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್‌ ಅವರು ವಿವರಣೆ ನೀಡಿದ್ದಾರೆ. ‘ ತೋಟಿಯಲ್ಲಪ್ಪ ಎಂಬುವರಿಗೆ 1 ಎಕರೆ 20 ಗುಂಟೆಯನ್ನು ನಮ್ಮ ಸಹಾಯಕ ಆಯುಕ್ತರು ಆದೇಶ ಹೊರಡಿಸಿರುವ ಸಂಬಂಧ ಅದರ ವಿರುದ್ಧವಾಗಿ ಎಚ್‌ ಎಂ ರಾಮಕೃಷ್ಣಪ್ಪ ಮತ್ತು 7 ಜನ ಇತರರು ಡಿ ಸಿ ಕೋರ್ಟ್‌ನಲ್ಲಿ ಮೇಲ್ಮನವಿ (ಪ್ರಕರಣ ಸಂಖ್ಯೆ; ಆರ್‌ಪಿ 331/2021) ಸಲ್ಲಿಸಿದ್ದಾರೆ. ಸಹಾಯಕ ಆಯುಕ್ತರು ನೀಡಿದ್ದ ಆದೇಶದ ವಿರುದ್ಧ ತಡೆಯಾಜ್ಞೆ ನೀಡಿದ್ದೇನೆ. ಪ್ರಕರಣದ ಮೂರನೇ ಪ್ರತಿವಾದಿ ತೋಟಿ ಯಲ್ಲಪ್ಪ ಬದುಕಿಲ್ಲ. ಅವರ ಪರವಾಗಿ ಯಾರು ಬರುತ್ತಾರೋ ಅವರು ಮೂರನೇ ಪ್ರತಿವಾದಿಯಾಗಲಿದ್ದಾರೆ,’ ಎಂದು ವಿವರಣೆ ನೀಡಿರುವುದು ಸಭೆ ನಡವಳಿಯಿಂದ ಗೊತ್ತಾಗಿದೆ.

 

ಇದೇ ಪ್ರಕರಣದ ಕುರಿತು ವಿವರಣೆ ನೀಡಬೇಕಿದ್ದ ಸಹಾಯಕ ಆಯುಕ್ತರು ಸಮಿತಿಯು ನಡೆಸಿದ್ದ ಮೂರು ಸಭೆಗಳಿಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿರುವುದು ಸಭೆ ನಡವಳಿಯಿಂದ ತಿಳಿದು ಬಂದಿದೆ.

 

1957ರಲ್ಲಿ ಯಾರಿಗೋ ಮಂಜೂರಾತಿಯಾಗಿತ್ತು ಎಂದು ಕೈಬರಹದ ಪಹಣಿಯನ್ನು ತೋರಿಸಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸದೆಯೇ ಪುರಸ್ಕರಿಸುವ ಸಹಾಯಕ ಆಯುಕ್ತರು ಅತ್ಯಂತ ಬೆಲೆ ಬಾಳುವ ಜಮೀನುಗಳನ್ನು ಮಂಜೂರು ಮಾಡುತ್ತಿದ್ದರೂ ಕ್ರಿಮಿನಲ್‌ ಮೊಕದ್ದಮೆ ದಾಖಲಿಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

‘ಯಾರೋ ಒಬ್ಬರು ಕೈಬರಹದ ಪಹಣಿಯನ್ನು ಇಟ್ಟುಕೊಂಡು ಅರ್ಜಿ ಕೊಡುತ್ತಾರೆ. ಯಾರ ಹೆಸರಿಗೆ ಅರ್ಜಿ ಕೊಟ್ಟಿದ್ದಾರೆಯೋ ಆ ಮನುಷ್ಯ ಬದುಕಿಲ್ಲ. 1957ರಲ್ಲಿಯೇ ಅವರ ಹೆಸರಿಗೆ ದರಖಾಸ್ತು ಮಂಜೂರಾಗಿಯಾಗಿದ್ದರೆ ಸುಮಾರು 65 ವರ್ಷಗಳ ಏಕೆ ಸುಮ್ಮನಿದ್ದರು, ಈಗ ಹೇಗೆ ಈ ಪ್ರಸ್ತಾಪ ದಿಢೀರ್ ಉದ್ಭವವಾಯಿತು, ಅದರ ಮಾರುಕಟ್ಟೆ ಬೆಲೆ ಒಂದು ಚದರಡಿಗೆ 23-25 ಸಾವಿರ ರೂಪಾಯಿ ಇದೆ. ಸುಮಾರು 125 ಕೋಟಿ ರು. ಬೆಲೆ ಬಾಳುವ ಜಮೀನಿಗೆ ಏಕಾಏಕಿ ಅರ್ಜಿ ಕೊಟ್ಟರೇ ಹೇಗೆ, ದರಖಾಸ್ತು ಷರತ್ತುಗಳ ಪ್ರಕಾರ ಅವರ ಅನುಭವಕ್ಕೆ ಹೋಗದಲೇ ರದ್ದಾಗಿರುತ್ತದೆ. ಯಾರ ಹೆಸರಿನಲ್ಲಿ ಅರ್ಜಿ ಕೊಟ್ಟಿದ್ದಾರೆಯೋ ಅವರು ಬದುಕಿಲ್ಲ. ಇದನ್ನು ಮಾನ್ಯ ಮಾಡಿರುವ ಎ ಸಿ ಅವರು ಸತ್ತವರ ಹೆಸರಿಗೆ ಮಂಜೂರಾತಿ ಮಾಡಿ ಆದೇಶ ಹೊರಡಿಸಿದರೆ ಹೇಗೆ? He is Assistant Commissioner, Sub Divisional Magistrate. ಅದಲ್ಲದೆ ಅವರು ಕಳೆದ ಮೂರೂ ಸಭೆಗಳಿಗೆ ತಪ್ಪಿಸಿಕೊಳ್ಳುತ್ತಿದ್ದಾರೆ,’ ಎಂದು ಸಮಿತಿ ಸದಸ್ಯ ಎ ಟಿ ರಾಮಸ್ವಾಮಿ ಅವರು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿರುವುದು ನಡವಳಿಯಿಂದ ಗೊತ್ತಾಗಿದೆ.

 

ಮತ್ತೊಂದು ಸಂಗತಿ ಎಂದರೆ ಸರ್ವೇ ನಂಬರ್‌ 63ರಲ್ಲಿನ ಒಟ್ಟಾರೆ ಜಮೀನನ್ನು ಮಂಜೂರು ಮಾಡಿರುವ ಕುರಿತು ಇದೇ ಸಮಿತಿಯು ಪರಿಶೀಲಿಸುತ್ತಿದೆ. ಈ ಕುರಿತು ಹಲವು ಸಭೆಗಳನ್ನು ನಿರಂತರವಾಗಿ ನಡೆಸುತ್ತಿದೆ. ಹೀಗಿದ್ದರೂ ಮೃತ ವ್ಯಕ್ತಿಯ ಹೆಸರಿನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪರಿಶೀಲನೆ ನಡೆಸದೆಯೇ ಪುರಸ್ಕರಿಸಿದ್ದ ಬೆಂಗಳೂರು ದಕ್ಷಿಣ ತಾಲೂಕಿನ ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

 

‘ಸಾರ್ವಜನಿಕ ಹಾಗೂ ಸರ್ಕಾರದ ಹಿತಾಸಕ್ತಿಯನ್ನು ಕಾಪಾಡಬೇಕಾದವರು ಈ ರೀತಿ ಉಲ್ಲಂಘನೆ ಮಾಡಿದರೆ ಹೇಗೆ? ಸಮಿತಿಯ ಪರಿಶೀಲನೆ ಇದ್ದಾಗಲೂ ಸಹ ಏಕೆ ಹೀಗೆ ಮಾಡಿದರು. ಅವರ ವಿರುದ್ಧ ಕೇವಲ ಅಮಾನತು ಒಂದೇ ಶಿಕ್ಷೆಯಲ್ಲ. ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣವನ್ನು ದಾಖಲು ಮಾಡಬೇಕು,’ ಎಂದು ಸಮಿತಿ ಸದಸ್ಯ ಎ ಟಿ ರಾಮಸ್ವಾಮಿ ಅವರು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದರು ಎಂಬುದು ನಡವಳಿಯಿಂದ ತಿಳಿದು ಬಂದಿದೆ.

 

ಅಲ್ಲದೆ ‘ Again I am telling is this is not a small issue. ಈ ಪ್ರಕರಣ ಹಗಲು ದರೋಡೆಗೂ ಮೀರಿದ ಹಗರಣವಾಗಿದೆ. ರೆವಿನ್ಯೂ ಇಲಾಖೆಯವರು ಇದನ್ನು ಒಪ್ಪಿಕೊಳ್ಳುವಿರಾ?,’ ಎಂದು ಎ ಟಿ ರಾಮಸ್ವಾಮಿ ಅವರು ಕಂದಾಯ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿರುವುದು ನಡವಳಿಯಿಂದ ಗೊತ್ತಾಗಿದೆ.

ಅಲ್ಲದೆ ‘ಅವರ ಹೆಸರಿನಲ್ಲಿ ಅರ್ಜಿ ಕೊಟ್ಟುಇ ಸ್ಯಾಂಕ್ಷನ್‌ ಮಾಡಿಸಿಕೊಂಡಿದ್ದಾರೆ. ಇದನ್ನು ವೆರಿಫೈ ಮಾಡಬೇಕೋ ಬೇಡವೋ ? without verifying the facts ಆದೇಶ ಮಾಡಿದರೆ ಹೇಗೆ, ಆದೇಶವನ್ನು ಸುಮ್ಮನೆ ಮಾಡಿಲ್ಲ. ಇದನ್ನು ನೋಡಿದರೆ ಮೈ ಮನಸ್ಸು ಕುದಿಯುತ್ತದೆ. ಅದಕ್ಕಾಗಿ land administration collpase ಆಗಿ ಬಹಳ ದಶಕಗಳೇ ಕಳೆದು ಹೋಗಿವೆ. ಹೀಗಾದರೆ ನಾವು ಸಮಾಜಕ್ಕೆ ಏನು ಬಿಟ್ಟು ಹೋಗುತ್ತೇವೆ? ಇದರ ಬಗ್ಗೆ ಗಂಭೀರವಾಗಿ ತೆಗೆದುಕೊಳ್ಳಿ ಎಂದು ಪ್ರಧಾನ ಕಾರ್ಯದರ್ಶಿಗಳಿಗೆ ಹೇಳಿದ್ದೆವು,’ ಎಂದು ತರಾಟೆಗೆ ತೆಗೆದುಕೊಂಡಿದ್ದರು.

 

 

ಇದಕ್ಕೆ ದನಿಗೂಡಿಸಿದ್ದ ಸಮಿತಿ ಅಧ್ಯಕ್ಷ ಕೆ ಜಿ ಬೋಪಯ್ಯ ಅವರು ‘ ತೋಟಿಯಲ್ಲಪ್ಪ ಸತ್ತು ಹೋಗಿ ಎಷ್ಟು ವರ್ಷ ಆಗಿದೆಯೆಂದು ಗೊತ್ತಿಲ್ಲ. How can he become an applicant? ಈ ರೀತಿ ಆದರೆ ಹೇಗೆ,’ ಎಂದು ಪ್ರಶ್ನಿಸಿದ್ದಕ್ಕೆ ಉತ್ತರಿಸಿದ್ದ ಜಿಲ್ಲಾಧಿಕಾರಿ ‘ ಏಕೆ ಈ ಆದೇಶ ಹೊರಡಿಸಿದ್ದಾರೆಂದು ಎ ಸಿ ಅವರಿಗೆ ಮಾತ್ರ ಗೊತ್ತಿದೆ,” ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಎ ಟಿ ರಾಮಸ್ವಾಮಿ ಅವರು ‘ ನೀವು ಜಾಗವನ್ನು ತೆರವು ಮಾಡಿಸಿದ್ದು ಸರಿ, ಆದರೆ ಎ ಸಿ ಅವರು ಹಕ್ಕುದಾತ ಆದೇಶ ಮಾಡಿದ್ದರಿಂದ ಅವರು ಕೋರ್ಟ್‌ನ್ನು ಅಪ್ರೋಚ್‌ ಮಾಡಲು ರಹದಾರಿ ಕೊಟ್ಟಂತೆ ಆಯಿತು. ಸ್ಟೇ ತಂದಿರುವುದರಿಂದ ಹತ್ತಾರು ವರ್ಷಗಳು ಈ ಪ್ರಕರಣ ಎಳೆಯುತ್ತದೆ. ನಮ್ಮ ಸರ್ಕಾರಿ ಕಾನೂನು ಕೋಶ ಜೀವಂತವಾಗಿಲ್ಲ,’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

Hot this week

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...
Please Scan to make Your Contribution

Topics

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

Related Articles

Popular Categories

error: Content is protected !!