Friday | April 10, 2026 |

ಲಸಿಕೆ ಪ್ರಮಾಣಪತ್ರವಿಲ್ಲದವರಿಗೆ ಪ್ರವೇಶಕ್ಕೆ ನಿರ್ಬಂಧ;ನ್ಯಾಯಾಲಯಗಳ ಆದೇಶ ಉಲ್ಲಂಘನೆ?

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಕಚೇರಿಗೆ ದೂರು ನೀಡಲು ಮತ್ತು ವಿಚಾರಣೆಗೆ ಆಗಮಿಸುವ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಕೂಡ 2ನೇ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಲು ಮುಂದಾಗಿದೆ. ಎರಡನೇ ಡೋಸ್‌ ಪಡೆದಿರುವ ಪ್ರಮಾಣಪತ್ರವನ್ನು ಪರಿಶೀಲಿಸದೆಯೇ ಲೋಕಾಯುಕ್ತ ಕಚೇರಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಸುತ್ತೋಲೆ ಹೊರಡಿಸಿದೆ.

ಮಾಲ್‌, ಹೋಟೆಲ್‌, ಈಜುಕೊಳ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಎರಡು ಡೋಸ್‌ ಲಸಿಕೆ ಪಡೆದಿರುವ ಕುರಿತು ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಬಿಬಿಎಂಪಿ ಕಡ್ಡಾಯ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದರ ಬೆನ್ನಲ್ಲೇ ಲೋಕಾಯುಕ್ತ ಸಂಸ್ಥೆಯು ಸಹ ಎರಡನೇ ಡೋಸ್‌ ಪಡೆದಿರುವ ಕುರಿತು ಪ್ರಮಾಣಪತ್ರವನ್ನು ಕಡ್ಡಾಯ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ಲದೆ ಕೋವಿಡ್‌ ಲಸಿಕೆ ಕಡ್ಡಾಯಗೊಳಿಸಿರುವುದು ಮೂಲಭೂತ ಹಕ್ಕು ಮತ್ತು ಖಾಸಗಿತನ ಹಕ್ಕನ್ನು ಉಲ್ಲಂಘಿಸಿದಂತಾಗಿದೆ ಎಂದು ಸುಪ್ರೀಂ ಕೋರ್ಟ್‌ ಮತ್ತು ಮೇಘಾಲಯ ಸೇರಿದಂತೆ ವಿವಿಧ ರಾಜ್ಯಗಳ ಹೈಕೋರ್ಟ್‌ಗಳು ತೀರ್ಪು ನೀಡಿದ್ದರೂ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ತನ್ನ ಕಚೇರಿಗೆ ಪ್ರವೇಶಿಸುವ ಸಾರ್ವಜನಿಕ, ಅಧಿಕಾರಿ, ನೌಕರರಿಂದ ಕಡ್ಡಾಯ ಲಸಿಕೆ ಪ್ರಮಾಣ ಪತ್ರ ಹೊಂದುವುದನ್ನು ಕಡ್ಡಾಯಗೊಳಿಸಿರುವುದು ಈ ಎಲ್ಲಾ ನ್ಯಾಯಾಲಯಗಳ ತೀರ್ಪುನ್ನು ಉಲ್ಲಂಘಿಸಿದಂತಾಗಿದೆ.

ಎರಡನೇ ಡೋಸ್‌ ಲಸಿಕೆ ಪಡೆದಿರುವ ಪ್ರಮಾಣಪತ್ರ ಪರಿಶೀಲನೆ ಮತ್ತು ಈ ಸಂಬಂಧ ಖಚಿತಪಡಿಸಿಕೊಳ್ಳದೇ ಕಚೇರಿಗೆ ಪ್ರವೇಶಿಸಲು ಅನುಮತಿ ನೀಡುವ ಸಂಬಂಧ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು 2022ರ ಜನವರಿ 5ರಂದು ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕೋವಿಡ್‌-19 ರೂಪಾಂತರಿ ವೈರಸ್‌ ಒಮಿಕ್ರಾನ್‌ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಲು ಮುಂದಾಗಿರುವ ಲೋಕಾಯುಕ್ತ ಸಂಸ್ಥೆಯು ಹೊರಡಿಸಿರುವ ಸುತ್ತೋಲೆಯಲ್ಲಿ ಲಸಿಕೆ ಪ್ರಮಾಣಪತ್ರ ಪರಿಶೀಲನೆ ಇಲ್ಲದೆಯೇ ಕಚೇರಿಯ ಸ್ವಾಗತಕಾರರು ಸಾರ್ವಜನಿಕರನ್ನು ಅನುಮತಿಸುವಂತಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಿದೆ.

‘ದೂರು ನೀಡಲು ಮತ್ತು ವಿಚಾರಣೆಗೆ ಅಥವಾ ಇತರೆ ಕಚೇರಿ ಕೆಲಸಕ್ಕಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸುವ ವ್ಯಕ್ತಿಗಳು 2ನೇ ಡೋಸ್‌ ಕೋವಿಡ್‌ ಲಸಿಕೆಯನ್ನು ಪಡೆದ ಬಗ್ಗೆ ಪ್ರಮಾಣಪತ್ರವನ್ನು ಹಾಜರುಪಡಿಸಿದ ನಂತರವೇ ಕಚೇರಿ ಪ್ರವೇಶಕ್ಕೆ ಅನುಮತಿಸಲಾಗಿದೆ,’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಅದೇ ರೀತಿ ‘ಈ ಕಚೇರಿಗೆ ಆಗಮಿಸುವ ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿಗಳು ಹಾಗೂ ಸಾರ್ವಜನಿಕರು 2ನೇ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಪರಿಶೀಲಿಸಿ, ಖಚಿತಪಡಿಸಿಕೊಂಡ ನಂತರವೇ ಕಚೇರಿಗೆ ಪ್ರವೇಶಿಸಲು ಕಚೇರಿಯ ಸ್ವಾಗತಕಾರರು ಅನುಮತಿ ನೀಡಬೇಕು,’ ಎಂದು ಸುತ್ತೋಲೆಯಲ್ಲಿ ಸೂಚಿಸಿದೆ.

ಕೋವಿಡ್‌ ಭೀತಿಯ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಿಂದ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಲು ಬರುತ್ತಿದ್ದಾರಾದರೂ ಅವರ ಬಳಿ ಎರಡನೇ ಡೋಸ್‌ ಲಸಿಕೆ ಪಡೆದಿರುವ ಪ್ರಮಾಣ ಪತ್ರವಿಲ್ಲದ ಕಾರಣ ದೂರು ಸಲ್ಲಿಸಲು ಅನಾನುಕೂಲವಾಗುತ್ತಿದೆ. ಅದರಲ್ಲೂ ಗ್ರಾಮೀಣ ಪ್ರದೇಶಗಳಿಂದ ಬಂದಿರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದೆ.

ಕೋವಿಡ್‌ ಎರಡನೇ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಹೊಂದದೇ ಇದ್ದರೆ ಲೋಕಾಯುಕ್ತ ಕಚೇರಿಗೆ ಪ್ರವೇಶ ನೀಡದಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್‌ನ ಕಾಮನ್‌ಕಾಸಸ್‌ ವರ್ಸಸ್‌ ಯೂನಿಯನ್‌ ಆಫ್‌ ಇಂಡಿಯಾ ಪ್ರಕರಣ (2018) 5ಎಸ್‌ಸಿಸಿ 1 ಒಬ್ಬ ವ್ಯಕ್ತಿಯು ವೈದ್ಯಕೀಯ ಚಿಕಿತ್ಸೆ , ಔಷಧಿ ಅಥವಾ ಮದ್ದುಗಳನ್ನು ತೆಗೆದುಕೊಳ್ಳಬೇಕೆ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕನ್ನು ಒಬ್ಬ ವ್ಯಕ್ತಿಗೆ ನೀಡಲಾಗಿದೆ. ಹಾಗೂ ಅದನ್ನು ಉಲ್ಲಂಘಿಸುವಂತಿಲ್ಲ. ಆದರೂ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೂ ಆಗಿರುವ ಲೋಕಾಯುಕ್ತ ವಿಶ್ವನಾಥ ಶೆಟ್ಟಿ ಅವರು ಕೋವಿಡ್‌ 2ನೇ ಡೋಸ್‌ ಲಸಿಕೆ ಪಡೆಯದೇ ಇರುವ ಯಾರೊಬ್ಬರನ್ನೂ ಕಚೇರಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂಬ ಸುತ್ತೋಲೆ ಹೊರಡಿಸಲು ನಿರ್ದೇಶನ ನೀಡಿರುವುದು ಸರಿಯಲ್ಲ ಎನ್ನುತ್ತಾರೆ ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷ ಆದರ್ಶ ಐಯ್ಯರ್‌.

ಅದೇ ರೀತಿ ಜಸ್ಟೀಸ್‌ ಕೆ ಎಸ್‌ ಪುಟ್ಟಸ್ವಾಮಿ (ನಿವೃತ್ತ) ಮತ್ತು ಇನೊಬ್ಬರು ವರ್ಸಸ್‌ ಯೂನಿಯನ್‌ ಆಫ್ ಇಂಡಿಯಾ ಮತ್ತು ಇತರರು ಪ್ರಕರಣ (2017) 10 ಎಸ್‌ಸಿಸಿ 1ದಲ್ಲಿ ಸುಪ್ರೀಂಕೋರ್ಟ್‌ನ 9 ಮಂದಿ ನ್ಯಾಯಾಧೀಶರ ಒಳಗೊಂಡ ಸಾಂವಿಧಾನಿಕ ಪೀಠವು 2017ರ ಆಗಸ್ಟ್‌ 24ರಂದು ನೀಡಿದ್ದ ತೀರ್ಪಿನ ಪ್ರಕಾರ ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದ್ದ ಪಕ್ಷದಲ್ಲಿ ಸಂವಿಧಾನದ ಅನುಚ್ಛೇಧ 21ರ ಪ್ರಕಾರ ಜೀವಿಸುವ ಹಕ್ಕನ್ನು ಕಸಿದುಕೊಂಡಂತಾಗುತ್ತದೆ ಎಂದೂ ಆದರ್ಶ ಐಯ್ಯರ್‌ ಅವರು ಉದಾಹರಿಸುತ್ತಾರೆ.

ಕೋವಿಡ್‌ ಲಸಿಕೆ ಕಡ್ಡಾಯಗೊಳಿಸಿರುವುದು ತಪ್ಪು ಮತ್ತು ಅದು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ಮೇಘಾಲಯ ಹೈಕೋರ್ಟ್ ರಿಜಿಸ್ಟ್ರಾರ್‌ ಜನರಲ್‌ ವರ್ಸಸ್‌ ಮೇಘಾಲಯ ರಾಜ್ಯ ಸರ್ಕಾರದ ಪ್ರಕರಣದಲ್ಲಿ (ಪಿಐಎಲ್‌ ನಂ 6/2021- 23.06.2021) ಇತ್ತೀಚೆಗಷ್ಟೇ ತೀರ್ಪು ಪ್ರಕಟಗೊಂಡಿತ್ತು. ಕೇಂದ್ರ ಸರ್ಕಾರವು ಸಹ ಕೋವಿಡ್‌ ಲಸಿಕೆಯನ್ನು ಹಾಕಿಸಿಕೊಳ್ಳುವುದು ಕಡ್ಡಾಯವಲ್ಲ ಬದಲಿಗೆ ಸ್ವ ಇಚ್ಛೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗಷ್ಟೆ ತಿಳಿಸಿತ್ತು.

“ಪ್ರತಿಯೊಬ್ಬರೂ ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಹೊಂದಿದ್ದಾರೆ. ನಿಯಮಿತ ಕಡ್ಡಾಯ ಕೋವಿಡ್ ಸ್ಕ್ರೀನಿಂಗ್ ಜೊತೆಗೆ ಅವರು ಪ್ರವೇಶದ ಮೊದಲು ವ್ಯಾಕ್ಸಿನ್ ಪ್ರಮಾಣ ಪತ್ರ ತೋರಿಸಬೇಕು. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರುಪೇರಾಗುತ್ತಿದ್ದು, ಹೊಸ ರೂಪುರೇಷೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ,’ ಎನ್ನುತ್ತಾರೆ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಯೊಬ್ಬರು.

Hot this week

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

ಬಿಆರ್‍‌ಜಿಎಫ್‌ ಅನುದಾನದಲ್ಲಿ ಅಕ್ರಮ; ಲೋಕಾ ಶಿಫಾರಸ್ಸು ತಿರಸ್ಕೃತ, ಹಿರಿಯ ಐಎಎಸ್ ಅಧಿಕಾರಿ ವಿರುದ್ಧದ ಪ್ರಕರಣ ಮುಕ್ತಾಯ!

ಬೆಂಗಳೂರು; ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ನೀಡಿದ್ದ ಅನುದಾನ ಮತ್ತು...

96.73 ಕೋಟಿ ರು ರಿಯಾಯಿತಿ ಕೋರಿದ ದಾಲ್ಮಿಯಾ ಸಿಮೆಂಟ್ಸ್‌; ನಿಯಮ ಪಾಲನೆಯೋ, ಉಲ್ಲಂಘನೆಯೋ?

ಬೆಂಗಳೂರು; ಗಣಿಗಾರಿಕೆ ಉದ್ಯಮದಲ್ಲಿ  ಆಂಧ್ರ ಪ್ರದೇಶ, ರಾಜಸ್ತಾನ ಸರ್ಕಾರವು ನೀಡಿರುವ ರಿಯಾಯಿತಿಯನ್ನು...

Related Articles

Popular Categories

error: Content is protected !!