Thursday | April 30, 2026 |

ಲಸಿಕೆ ಪ್ರಮಾಣಪತ್ರವಿಲ್ಲದವರಿಗೆ ಪ್ರವೇಶಕ್ಕೆ ನಿರ್ಬಂಧ;ನ್ಯಾಯಾಲಯಗಳ ಆದೇಶ ಉಲ್ಲಂಘನೆ?

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಕಚೇರಿಗೆ ದೂರು ನೀಡಲು ಮತ್ತು ವಿಚಾರಣೆಗೆ ಆಗಮಿಸುವ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಕೂಡ 2ನೇ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಲು ಮುಂದಾಗಿದೆ. ಎರಡನೇ ಡೋಸ್‌ ಪಡೆದಿರುವ ಪ್ರಮಾಣಪತ್ರವನ್ನು ಪರಿಶೀಲಿಸದೆಯೇ ಲೋಕಾಯುಕ್ತ ಕಚೇರಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಸುತ್ತೋಲೆ ಹೊರಡಿಸಿದೆ.

ಮಾಲ್‌, ಹೋಟೆಲ್‌, ಈಜುಕೊಳ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಎರಡು ಡೋಸ್‌ ಲಸಿಕೆ ಪಡೆದಿರುವ ಕುರಿತು ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಬಿಬಿಎಂಪಿ ಕಡ್ಡಾಯ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದರ ಬೆನ್ನಲ್ಲೇ ಲೋಕಾಯುಕ್ತ ಸಂಸ್ಥೆಯು ಸಹ ಎರಡನೇ ಡೋಸ್‌ ಪಡೆದಿರುವ ಕುರಿತು ಪ್ರಮಾಣಪತ್ರವನ್ನು ಕಡ್ಡಾಯ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ಲದೆ ಕೋವಿಡ್‌ ಲಸಿಕೆ ಕಡ್ಡಾಯಗೊಳಿಸಿರುವುದು ಮೂಲಭೂತ ಹಕ್ಕು ಮತ್ತು ಖಾಸಗಿತನ ಹಕ್ಕನ್ನು ಉಲ್ಲಂಘಿಸಿದಂತಾಗಿದೆ ಎಂದು ಸುಪ್ರೀಂ ಕೋರ್ಟ್‌ ಮತ್ತು ಮೇಘಾಲಯ ಸೇರಿದಂತೆ ವಿವಿಧ ರಾಜ್ಯಗಳ ಹೈಕೋರ್ಟ್‌ಗಳು ತೀರ್ಪು ನೀಡಿದ್ದರೂ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ತನ್ನ ಕಚೇರಿಗೆ ಪ್ರವೇಶಿಸುವ ಸಾರ್ವಜನಿಕ, ಅಧಿಕಾರಿ, ನೌಕರರಿಂದ ಕಡ್ಡಾಯ ಲಸಿಕೆ ಪ್ರಮಾಣ ಪತ್ರ ಹೊಂದುವುದನ್ನು ಕಡ್ಡಾಯಗೊಳಿಸಿರುವುದು ಈ ಎಲ್ಲಾ ನ್ಯಾಯಾಲಯಗಳ ತೀರ್ಪುನ್ನು ಉಲ್ಲಂಘಿಸಿದಂತಾಗಿದೆ.

ಎರಡನೇ ಡೋಸ್‌ ಲಸಿಕೆ ಪಡೆದಿರುವ ಪ್ರಮಾಣಪತ್ರ ಪರಿಶೀಲನೆ ಮತ್ತು ಈ ಸಂಬಂಧ ಖಚಿತಪಡಿಸಿಕೊಳ್ಳದೇ ಕಚೇರಿಗೆ ಪ್ರವೇಶಿಸಲು ಅನುಮತಿ ನೀಡುವ ಸಂಬಂಧ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು 2022ರ ಜನವರಿ 5ರಂದು ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕೋವಿಡ್‌-19 ರೂಪಾಂತರಿ ವೈರಸ್‌ ಒಮಿಕ್ರಾನ್‌ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಲು ಮುಂದಾಗಿರುವ ಲೋಕಾಯುಕ್ತ ಸಂಸ್ಥೆಯು ಹೊರಡಿಸಿರುವ ಸುತ್ತೋಲೆಯಲ್ಲಿ ಲಸಿಕೆ ಪ್ರಮಾಣಪತ್ರ ಪರಿಶೀಲನೆ ಇಲ್ಲದೆಯೇ ಕಚೇರಿಯ ಸ್ವಾಗತಕಾರರು ಸಾರ್ವಜನಿಕರನ್ನು ಅನುಮತಿಸುವಂತಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಿದೆ.

‘ದೂರು ನೀಡಲು ಮತ್ತು ವಿಚಾರಣೆಗೆ ಅಥವಾ ಇತರೆ ಕಚೇರಿ ಕೆಲಸಕ್ಕಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸುವ ವ್ಯಕ್ತಿಗಳು 2ನೇ ಡೋಸ್‌ ಕೋವಿಡ್‌ ಲಸಿಕೆಯನ್ನು ಪಡೆದ ಬಗ್ಗೆ ಪ್ರಮಾಣಪತ್ರವನ್ನು ಹಾಜರುಪಡಿಸಿದ ನಂತರವೇ ಕಚೇರಿ ಪ್ರವೇಶಕ್ಕೆ ಅನುಮತಿಸಲಾಗಿದೆ,’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಅದೇ ರೀತಿ ‘ಈ ಕಚೇರಿಗೆ ಆಗಮಿಸುವ ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿಗಳು ಹಾಗೂ ಸಾರ್ವಜನಿಕರು 2ನೇ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಪರಿಶೀಲಿಸಿ, ಖಚಿತಪಡಿಸಿಕೊಂಡ ನಂತರವೇ ಕಚೇರಿಗೆ ಪ್ರವೇಶಿಸಲು ಕಚೇರಿಯ ಸ್ವಾಗತಕಾರರು ಅನುಮತಿ ನೀಡಬೇಕು,’ ಎಂದು ಸುತ್ತೋಲೆಯಲ್ಲಿ ಸೂಚಿಸಿದೆ.

ಕೋವಿಡ್‌ ಭೀತಿಯ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಿಂದ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಲು ಬರುತ್ತಿದ್ದಾರಾದರೂ ಅವರ ಬಳಿ ಎರಡನೇ ಡೋಸ್‌ ಲಸಿಕೆ ಪಡೆದಿರುವ ಪ್ರಮಾಣ ಪತ್ರವಿಲ್ಲದ ಕಾರಣ ದೂರು ಸಲ್ಲಿಸಲು ಅನಾನುಕೂಲವಾಗುತ್ತಿದೆ. ಅದರಲ್ಲೂ ಗ್ರಾಮೀಣ ಪ್ರದೇಶಗಳಿಂದ ಬಂದಿರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದೆ.

ಕೋವಿಡ್‌ ಎರಡನೇ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಹೊಂದದೇ ಇದ್ದರೆ ಲೋಕಾಯುಕ್ತ ಕಚೇರಿಗೆ ಪ್ರವೇಶ ನೀಡದಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್‌ನ ಕಾಮನ್‌ಕಾಸಸ್‌ ವರ್ಸಸ್‌ ಯೂನಿಯನ್‌ ಆಫ್‌ ಇಂಡಿಯಾ ಪ್ರಕರಣ (2018) 5ಎಸ್‌ಸಿಸಿ 1 ಒಬ್ಬ ವ್ಯಕ್ತಿಯು ವೈದ್ಯಕೀಯ ಚಿಕಿತ್ಸೆ , ಔಷಧಿ ಅಥವಾ ಮದ್ದುಗಳನ್ನು ತೆಗೆದುಕೊಳ್ಳಬೇಕೆ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕನ್ನು ಒಬ್ಬ ವ್ಯಕ್ತಿಗೆ ನೀಡಲಾಗಿದೆ. ಹಾಗೂ ಅದನ್ನು ಉಲ್ಲಂಘಿಸುವಂತಿಲ್ಲ. ಆದರೂ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೂ ಆಗಿರುವ ಲೋಕಾಯುಕ್ತ ವಿಶ್ವನಾಥ ಶೆಟ್ಟಿ ಅವರು ಕೋವಿಡ್‌ 2ನೇ ಡೋಸ್‌ ಲಸಿಕೆ ಪಡೆಯದೇ ಇರುವ ಯಾರೊಬ್ಬರನ್ನೂ ಕಚೇರಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂಬ ಸುತ್ತೋಲೆ ಹೊರಡಿಸಲು ನಿರ್ದೇಶನ ನೀಡಿರುವುದು ಸರಿಯಲ್ಲ ಎನ್ನುತ್ತಾರೆ ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷ ಆದರ್ಶ ಐಯ್ಯರ್‌.

ಅದೇ ರೀತಿ ಜಸ್ಟೀಸ್‌ ಕೆ ಎಸ್‌ ಪುಟ್ಟಸ್ವಾಮಿ (ನಿವೃತ್ತ) ಮತ್ತು ಇನೊಬ್ಬರು ವರ್ಸಸ್‌ ಯೂನಿಯನ್‌ ಆಫ್ ಇಂಡಿಯಾ ಮತ್ತು ಇತರರು ಪ್ರಕರಣ (2017) 10 ಎಸ್‌ಸಿಸಿ 1ದಲ್ಲಿ ಸುಪ್ರೀಂಕೋರ್ಟ್‌ನ 9 ಮಂದಿ ನ್ಯಾಯಾಧೀಶರ ಒಳಗೊಂಡ ಸಾಂವಿಧಾನಿಕ ಪೀಠವು 2017ರ ಆಗಸ್ಟ್‌ 24ರಂದು ನೀಡಿದ್ದ ತೀರ್ಪಿನ ಪ್ರಕಾರ ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದ್ದ ಪಕ್ಷದಲ್ಲಿ ಸಂವಿಧಾನದ ಅನುಚ್ಛೇಧ 21ರ ಪ್ರಕಾರ ಜೀವಿಸುವ ಹಕ್ಕನ್ನು ಕಸಿದುಕೊಂಡಂತಾಗುತ್ತದೆ ಎಂದೂ ಆದರ್ಶ ಐಯ್ಯರ್‌ ಅವರು ಉದಾಹರಿಸುತ್ತಾರೆ.

ಕೋವಿಡ್‌ ಲಸಿಕೆ ಕಡ್ಡಾಯಗೊಳಿಸಿರುವುದು ತಪ್ಪು ಮತ್ತು ಅದು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ಮೇಘಾಲಯ ಹೈಕೋರ್ಟ್ ರಿಜಿಸ್ಟ್ರಾರ್‌ ಜನರಲ್‌ ವರ್ಸಸ್‌ ಮೇಘಾಲಯ ರಾಜ್ಯ ಸರ್ಕಾರದ ಪ್ರಕರಣದಲ್ಲಿ (ಪಿಐಎಲ್‌ ನಂ 6/2021- 23.06.2021) ಇತ್ತೀಚೆಗಷ್ಟೇ ತೀರ್ಪು ಪ್ರಕಟಗೊಂಡಿತ್ತು. ಕೇಂದ್ರ ಸರ್ಕಾರವು ಸಹ ಕೋವಿಡ್‌ ಲಸಿಕೆಯನ್ನು ಹಾಕಿಸಿಕೊಳ್ಳುವುದು ಕಡ್ಡಾಯವಲ್ಲ ಬದಲಿಗೆ ಸ್ವ ಇಚ್ಛೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗಷ್ಟೆ ತಿಳಿಸಿತ್ತು.

“ಪ್ರತಿಯೊಬ್ಬರೂ ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಹೊಂದಿದ್ದಾರೆ. ನಿಯಮಿತ ಕಡ್ಡಾಯ ಕೋವಿಡ್ ಸ್ಕ್ರೀನಿಂಗ್ ಜೊತೆಗೆ ಅವರು ಪ್ರವೇಶದ ಮೊದಲು ವ್ಯಾಕ್ಸಿನ್ ಪ್ರಮಾಣ ಪತ್ರ ತೋರಿಸಬೇಕು. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರುಪೇರಾಗುತ್ತಿದ್ದು, ಹೊಸ ರೂಪುರೇಷೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ,’ ಎನ್ನುತ್ತಾರೆ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಯೊಬ್ಬರು.

Hot this week

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Topics

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!