Wednesday | March 25, 2026 |

ಬೆಳೆ ಸಮೀಕ್ಷೆ; ಬಿಎಸ್‌ವೈ, ನಟ ದರ್ಶನ್‌, ಬಿ ಸಿ ಪಾಟೀಲ್‌ ವಿಡಿಯೋ ತುಣುಕು ಪ್ರಸಾರಕ್ಕೆ 62 ಲಕ್ಷ ವೆಚ್ಚ

Support THE-FILE

spot_img

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಬಿ ಸಿ ಪಾಟೀಲ್‌ ಮತ್ತು ಕೃಷಿ ಇಲಾಖೆ ರಾಯಭಾರಿ ನಟ ದರ್ಶನ್‌ ಅವರು ಬೆಳೆ ಸಮೀಕ್ಷೆ ಕುರಿತು ವಿಡಿಯೋ ತುಣಕುಗಳನ್ನು ಪ್ರಸಾರ ಮಾಡಿದ್ದ 11 ಸುದ್ದಿವಾಹಿನಿಗಳಿಗೆ 62.62 ಲಕ್ಷ ರು. ವೆಚ್ಚವಾಗಿದೆ.

 

ಕೃಷಿ ಇಲಾಖೆಗೆ ರಾಯಭಾರಿಯಾಗಿರುವ ನಟ ದರ್ಶನ್‌ ಅವರು ಯಾವುದೇ ಸಂಭಾವನೆ ಪಡೆದುಕೊಳ್ಳದಿದ್ದರೂ ಬೆಳೆ ಸಮೀಕ್ಷೆ ಕುರಿತು ಮಾಡಿದ್ದ ವಿಡಿಯೋ ತುಣುಕುಗಳ ಪ್ರಸಾರಕ್ಕೆ 62.62 ಲಕ್ಷ ರು ವೆಚ್ಚವಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಹಣ ಬಿಡುಗಡೆ ಮಾಡಲು ಕೃಷಿ ಇಲಾಖೆ ಆಯುಕ್ತರು ಅನುಮೋದನೆ ಕೋರಿ 2021ರ ಡಿಸೆಂಬರ್‌ 7ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

2021-22ನೇ ಸಾಲಿನ ಬೆಳೆ ಸಮೀಕ್ಷೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ ಸಿ ಪಾಟೀಲ್‌, ಕೃಷಿ ಇಲಾಖೆ ರಾಯಭಾರಿ ಹಾಗೂ ನಟ ದರ್ಶನ್‌ ಅವರು 40 ಸೆಕೆಂಡುಗಳ ವಿಡಿಯೋ ತುಣಕುಗಳನ್ನು ಸುದ್ದಿವಾಹಿನಿಗಳಲ್ಲಿ 2021ರ ಸೆಪ್ಟಂಬರ್‌ 27ರಿಂದ ಡಿಸೆಂಬರ್‌ 3ರವರೆಗೆ ಬಿತ್ತರಿಸಲಾಗಿತ್ತು. ಯಕ್ಷಿ ಕಮ್ಯುನಿಕೇಷನ್‌ ಮತ್ತು ಎಂಸಿ ಅಂಡ್‌ ಎ ಮೂಲಕ ಸುದ್ದಿವಾಹಿನಿಗಳಿಗೆ ಜಾಹೀರಾತು ಬಿಡುಗಡೆ ಮಾಡಲಾಗಿತ್ತು ಎಂಬುದು ಕೃಷಿ ಆಯುಕ್ತರ ಪತ್ರದಿಂದ ಗೊತ್ತಾಗಿದೆ.

 

ಟಿ ವಿ 9 ಕನ್ನಡ, ನ್ಯೂಸ್‌ 18 ಕನ್ನಡ, ಸುವರ್ಣ ನ್ಯೂಸ್‌, ಟಿ ವಿ 5 ಕನ್ನಡ, ಪವರ್‌ ಟಿವಿ, ಪಬ್ಲಿಕ್‌ ಟಿವಿಗೆ ಯಕ್ಷಿ ಕಮ್ಯುನಿಕೇಷನ್‌ ಮೂಲಕ ಬಿಡುಗಡೆಯಾಗಿದ್ದ ಜಾಹೀರಾತಿಗೆ 30,77,440 ರು., ಎಂ ಸಿ ಅಂಡ್‌ ಎ ಮೂಲಕ ಪಬ್ಲಿಕ್‌ ಟಿವಿ, ದಿಗ್ವಿಜಯ ನ್ಯೂಸ್‌ ಟಿವಿ, ಬಿ ಟಿ ವಿ ನ್ಯೂಸ್‌, ನ್ಯೂಸ್‌ ಫಸ್ಟ್‌, ಪ್ರಜಾ ಟಿವಿ ಮತ್ತು ರಾಜ್‌ ನ್ಯೂಸ್‌ಗೆ ಬಿಡುಗಡೆಯಾಗಿದ್ದ ಜಾಹೀರಾತಿಗೆ 31, 85,056 ರು. ವೆಚ್ಚವಾಗಿತ್ತು.

 

ಕೃಷಿ ಇಲಾಖೆ ಆಯುಕ್ತರು ಪ್ರಧಾನ ಕಾರ್ಯದರ್ಶಿಗೆ ಬರೆದಿರುವ ಪತ್ರ

 

2021-22ನೇ ಸಾಲಿನ ಬೆಳೆ ಸಮೀಕ್ಷೆ ಕುರಿತು ರಾಜ್ಯದ ರೈತರಲ್ಲಿ ಅರಿವು ಮೂಡಿಸಲು 40 ಸೆಕೆಂಡುಗಳ ವಿಡಿಯೋ ತುಣುಕುಗಳನ್ನು ರಾಜ್ಯದ 11 ಸುದ್ದಿವಾಹಿನಿಗಳಿಗೆ ಪ್ರಚಾರ ಪಡಿಸಿರುವ ಸಂಬಂಧ ತಗುಲಿರುವ 62,62,496 ರುಗ.ಳನ್ನು ಸಂಬಂಧಿಸಿದ ಸಂಸ್ಥೆಗಳಿಗೆ ಪಾವತಿಸುವ ಪ್ರಸ್ತಾವನೆಗೆ ಆಂತರಿಕ ಆರ್ಥಿಕ ಸಲಹೆಗಾರರ ಅಭಿಪ್ರಾಯ ಕೋರಿ ಕಡತವನ್ನು 2022ರ ಜನವರಿ 13ರಂದು ಸಲ್ಲಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

2020-21ರ ಸಾಲಿನಲ್ಲಿ ಸುಮಾರು 256. 77 ಲಕ್ಷ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಈವರೆಗೂ ಒಟ್ಟು 228.05 ಲಕ್ಷ ತಾಲೂಕುಗಳ ಶೇ.88.81ರಷ್ಟು ಬೆಳೆ ಸಮೀಕ್ಷೆ ಮಾಡಲಾಗಿದೆ. 2020-21ರ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಒಟ್ಟು 12.80 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

Hot this week

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Topics

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

Related Articles

Popular Categories

error: Content is protected !!