Tuesday | July 21, 2026 |

ಪಿಎಂ ಕಿಸಾನ್‌; ಪ.ಜಾತಿ, ಪ.ಪಂಗಡ ಉಪ ಯೋಜನೆಯಲ್ಲಿ 210 ಕೋಟಿ ಬಳಸದೇ ವಾಪಸ್‌ ಮಾಡಿದ ಇಲಾಖೆ

ಬೆಂಗಳೂರು: ಹೊಸ ಬೆಳೆ ವಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿಯಲ್ಲಿ 2021-22ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಲೆಕ್ಕ ಶೀರ್ಷಿಕೆಯಡಿಯಲ್ಲಿ ಒದಗಿಸಿದ್ದ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿರುವ ಕೃಷಿ ಇಲಾಖೆಯು 210.66 ಕೋಟಿ ರು. ಗಳನ್ನು ಸರ್ಕಾರಕ್ಕೆ ವಾಪಸ್‌ ಮಾಡಿರುವುದು ಇದೀಗ ಬಹಿರಂಗವಾಗಿದೆ.

 

2021-22ನೇ ಸಾಲಿನಲ್ಲಿ ಹೊಸ ಬೆಳೆ ವಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಉಪ ಶೀರ್ಷಿಕೆಯಡಿ ಉಳಿತಾಯವಾಗುವ ಅನುದಾನವನ್ನು ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣೆ ಕಾರ್ಯಕ್ರಮಗಳಿಗೆ ಪುನರ್‌ ವಿನಿಯೋಗ ಮಾಡಲು ಅನುಮತಿ ನೀಡಬೇಕು ಎಂದು 2022ರ ಫೆ. 3ರಂದು ಸಲ್ಲಿಸಿದ್ದ ಪ್ರಸ್ತಾವನೆಯೂ ತಿರಸ್ಕೃತಗೊಂಡಿದೆ.

 

ಈ ಕುರಿತು ಕೃಷಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಇಲಾಖೆಯ ಆಯುಕ್ತರಿಗೆ 2022ರ ಫೆಬ್ರುವರಿ 16ರಂದು ಪತ್ರ ಬರೆದಿದ್ದಾರೆ ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘2021-22ನೇ ಸಾಲಿನಲ್ಲಿ ಹೊಸ ಬೆಳೆ ವಿಮಾ ಯೋಜನೆ ಲೆಕ್ಕ ಶೀರ್ಷಿಕೆಯಡಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಉಪ ಶೀರ್ಷಿಕೆಯಡಿಯಲ್ಲಿ ವೆಚ್ಚವಾಗದೇ ಉಳಿತಾಯವಾದ ಒಟ್ಟು 138 ಕೋಟಿ ಹಾಗೂ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ ಲೆಕ್ಕ ಶೀರ್ಷಿಕೆಯ ಎಸ್‌ಸಿಎಸ್‌ಪಿ ಮತ್ತು ಟಿ ಎಸ್‌ ಪಿ ಉಪ ಶೀರ್ಷಿಕೆಯಡಯಲ್ಲಿ ಉಳಿತಾಯವಾಗುವ ಒಟ್ಟು 72.00 ಕೋಟಿ ಸೇರಿ ಒಟ್ಟು 210.66 ಕೋಟಿ ರು.ಗಳನ್ನು ಅನುದಾನವನ್ನು ಸರ್ಕಾರಕ್ಕೆ ಆಧ್ಯರ್ಪಿಸಲಾಗಿದೆ. ಆದ್ದರಿಂದ ಈ ಲೆಕ್ಕ ಶೀರ್ಷಿಕೆಗಳಡಿ ಅನುದಾನ ಉಳಿತಾಯವಿರುವುದಿಲ್ಲ. ಪ್ರಸ್ತಾವನೆಯಲ್ಲಿ ಕೋರಿದಂತೆ ಪುನರ್‌ವಿನಿಯೋಗ ಸಾಧ್ಯವಿಲ್ಲ,’ ಎಂದು ಕೃಷಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಇಲಾಖೆಯ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

 

 

ಅದೇ ರೀತಿ ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಆರ್ಥಿಕ ಸಹಾಯ ಧನ ಬಿಡುಗಡೆ ಮಾಡುವಲ್ಲಿಯೂ ವಿಳಂಬ ಮಾಡಿತ್ತು.
ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿರುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಗೆ ರಾಜ್ಯ ಸರ್ಕಾರವು ಅನುದಾನವನ್ನು ಹಂಚಿಕೊಳ್ಳುತ್ತಿದೆ. ಆದರೆ 2020-21ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ನೀಡುವ 4,000 ರು. ಹೆಚ್ಚುವರಿ ಆರ್ಥಿಕ ಸಹಾಯಧನದ ಎರಡನೇ ಕಂತಿನ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಈ ಕುರಿತು ಕೃಷಿ ಆಯುಕ್ತರು 2021ರ ಮಾರ್ಚ್‌ 16ರಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

 

4,000 ರು.ಗಳ ಹೆಚ್ಚುವರಿ ಆರ್ಥಿಕ ನೆರವನ್ನು 2 ಕಂತುಗಳಲ್ಲಿ ಪಿ ಎಂ ಕಿಸಾನ್‌ ಕರ್ನಾಟಕ ಯೋಜನೆಯಡಿ ನೀಡುತ್ತಿದೆ. ಇದಕ್ಕಾಗಿ ರಾಜ್ಯವಲಯದ ಲೆಕ್ಕ ಶೀರ್ಷಿಕೆ (2401-00-800-1-05-100) ಅಡಿ ಒಟ್ಟು 2,100 ಕೋಟಿ ರು. ನಿಗದಿಪಡಿಸಿತ್ತು. ಈ ಪೈಕಿ 2020-21ನೇ ಸಾಲಿನಲ್ಲಿ ಎರಡನೇ ಕಂತಿಗೆ 51,66,395 ರೈತರಿಗೆ 1,033.28 ಕೋಟಿ ಹಾಗೂ ಮೊದಲನೇ ಕಂತಿನ ಬಾಕಿ ಬಾಕಿ 56,665 ರೈತರಿಗೆ 11.33 ಕೋಟಿ ರು. ಸೇರಿ ಒಟ್ಟಾರೆ 2020-21ನೇ ಸಾಲಿಗೆ 1,044.61 ಕೋಟಿ ರು. ಅನುದಾನ ಒದಗಿಸಬೇಕಿತ್ತು.

 

‘2020-21ನೇ ಸಾಲಿನಲ್ಲಿ ಎರಡನೇ ಕಂತಿನ ಆರ್ಥಿಕ ಸಹಾಯಧನವನ್ನು ಪಾವತಿಸಲು ಅನುದಾನ ಇಲ್ಲಿಯವರೆಗೆ ಬಿಡುಗಡೆ ಮಾಡಿಲ್ಲ, ‘ ಎಂದು ಕೃಷಿ ಆಯುಕ್ತರು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅನುದಾನ ಹೆಚ್ಚುವರಿ ಆರ್ಥಿಕ ಸಹಾಯಧನ ಬಿಡುಗಡೆಯಾಗದ ಕಾರಣ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಸಾವಿರಾರು ಸಂಖ್ಯೆಯ ರೈತರು ಸಂಕಷ್ಟದಲ್ಲಿದ್ದರೂ ಕೃಷಿ ಸಚಿವ ಬಿ ಸಿ ಪಾಟೀಲ್‌ ರೈತರ ಸಂಕಷ್ಟವನ್ನು ಆಲಿಸಿರಲಿಲ್ಲ.!

 

ಇದೇ ಲೆಕ್ಕ ಶೀರ್ಷಿಕೆಯಲ್ಲಿ ಕಳೆದ ಸಾಲಿನಲ್ಲಿ 59346.00 ಲಕ್ಷ ರುಗ.ಳನ್ನು ಪ್ರಸಕ್ತ ಸಾಲಿನಲ್ಲಿ ಬಳಸಿಕೊಂಡಿದ್ದ ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಒದಗಿಸಿರುವ ಅನುದಾನವನ್ನು ಉಳಿಕೆ ಮಾಡಲು ಮುಂದಾಗಿದೆ ಎಂದು ಗೊತ್ತಾಗಿದೆ.

 

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ 60,85,996 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ಮತ್ತು 3,77,990 ಸ್ವಯಂ/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ವಿವರಗಳನ್ನು ಪರಿಶೀಲಿಸಿದ ನಂತರ ಕೇಂದ್ರ ಸರ್ಕಾರಕ್ಕೆ ಒಟ್ಟು 57,09,537 ರೈತರ ವಿವರಗಳನ್ನು ಕಳಿಸಲಾಗಿತ್ತು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರು 2021ರ ಮಾರ್ಚ್‌ 17ರಂದು ನಡೆದಿದ್ದ ವಿಧಾನಸಭೆ ಅಧಿವೇಶನದಲ್ಲಿ ಡಾ ಅಜಯ್‌ ಧರ್ಮಸಿಂಗ್‌ ಅವರಿಗೆ ಲಿಖಿತ ಉತ್ತರ ನೀಡಿದ್ದರು.

 

ಅಲ್ಲದೆ ಯೋಜನೆ ಜಾರಿಯಾದ ದಿನದಿಂದ ಈವರೆವಿಗೆ 53,96,762 ರೈತರಿಗೆ ಹಣ ಸಂದಾಯವಾಗಿದೆ. ವಿವಿಧ ಕಾರಣಗಳಿಂದಾಗಿ 20,584 ಫಲಾನುಭವಿ ರೈತರಿಗೆ ಯೋಜನೆಯ ಅರ್ಥಿಕ ನೆರವು ಲಭಿಸಿಲ್ಲ. 2018-19ರಲ್ಲಿ 1106062, 2019-20ರಲ್ಲಿ 4304980, 2020-21ರಲ್ಲಿ 296964 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. 2018-19ರಲ್ಲಿ 19,872, 2019-20ರಲ್ಲಿ 50,10,591, 2020-21ರಲ್ಲಿ 53,96,762 ರೈತರು ಆರ್ಥಿಕ ನೆರವು ಪಡೆದಿದ್ದರು.

Hot this week

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...
Please Scan to make Your Contribution

Topics

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!