Tuesday | May 5, 2026 |

ಸ್ವಚ್ಛ ಭಾರತ್‌ ಸೇರಿ ಹಲವು ಯೋಜನೆ ಅನುದಾನ ಬಳಕೆಯಲ್ಲಿ ವಿಫಲ; ವೆಚ್ಚವಾಗದ 2,509 ಕೋಟಿ ರು

ಬೆಂಗಳೂರು; ಸ್ವಚ್ಛ ಭಾರತ್‌ ಅಭಿಯಾನ ಸೇರಿದಂತೆ ಹಲವು ಯೋಜನೆಗಳ ಅನುಷ್ಠಾನದಲ್ಲಿ ಹಿಂದೆ ಬಿದ್ದಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಉತ್ಪಾದಕ ವೆಚ್ಚ ಕಾರ್ಯಕ್ರಮಗಳಿಗೆ ನೀಡಲಾಗಿದ್ದ ಒಟ್ಟು ಅನುದಾನದ ಪೈಕಿ 2,509 ಕೋಟಿ ರು. ವೆಚ್ಚ ಮಾಡದೇ ಬಾಕಿ ಉಳಿಸಿಕೊಂಡಿರುವುದು ಇದೀಗ ಬಹಿರಂಗವಾಗಿದೆ.

 

ಇಲಾಖೆಯು ಕೈಗೆತ್ತಿಕೊಂಡಿರುವ ಮಹತ್ವದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹಿಂದೆ ಬಿದ್ದಿರುವುದು ಮತ್ತು ಪ್ರಸಕ್ತ ಸಾಲಿನ ಆರ್ಥಿಕ ವರ್ಷ ಅಂತ್ಯವಾಗುತ್ತಿದ್ದರೂ ಉತ್ಪಾದಕಾ ವೆಚ್ಚದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಕ್ರಮ ವಹಿಸಬೇಕಿದ್ದ ಸಚಿವ ಕೆ ಎಸ್‌ ಈಶ್ವರಪ್ಪ ಅವರು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮಾತುಗಳಲ್ಲೇ ಮುಳುಗಿದ್ದಾರೆ.

 

2021-22ನೇ ಸಾಲಿನ ಉತ್ಪಾದಕ ವೆಚ್ಚದಲ್ಲಿ 2022ರ ಜನವರಿ ಅಂತ್ಯಕ್ಕೆ ಹೆಚ್ಚಿಗೆ ಬಾಕಿ ಇರುವ ಇಲಾಖೆಗಳ ಪಟ್ಟಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯು ಮುಂಚೂಣಿಯಲ್ಲಿದೆ. ಈ ಸಂಬಂಧ ಯೋಜನಾ ಇಲಾಖೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಅಂಕಿ ಅಂಶಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಪೌರ ಕಾರ್ಮಿಕರ ವಸತಿ, ಮಹಾತ್ಮಗಾಂಧಿ ನಗರ ವಿಕಾಸ, ಮುಖ್ಯಮಂತ್ರಿ ನೈರ್ಮಲ್ಯ, ಸ್ವಚ್ಛ ಭಾರತ, ಪೌಷ್ಠಿಕ ಆಹಾರಕ್ಕೆ ಬೆಂಬಲ, ಪ್ರಧಾನಮಂತ್ರಿ ಜನಾರೋಗ್ಯ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ವಿಧವಾ ಪಿಂಚಣಿ ಸೇರಿದಂತೆ ಹಲವು ಯೋಜನೆಗಳ ಅನುಷ್ಠಾನದಲ್ಲಿ 7 ಇಲಾಖೆಗಳು ಹಿಂದೆ ಬಿದ್ದಿವೆ.

 

2021-22ನೇ ಸಾಲಿನ ಉತ್ಪಾದಕ ವೆಚ್ಚದಲ್ಲಿ 2022ರ ಜನವರಿ ಅಂತ್ಯಕ್ಕೆ ಹೆಚ್ಚಿಗೆ ಬಾಕಿ ಇರುವ ಇಲಾಖೆಗಳ ಪಟ್ಟಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಜತೆ ಕಂದಾಯ, ನಗರಾಭಿವೃದ್ಧಿ, ಪ್ರಾಥಮಿಕ, ಪ್ರೌಢಶಿಕ್ಷಣ, ಆರೋಗ್ಯ, ವಸತಿ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಇದೆ.

 

ಇಲಾಖೆಗಳಿಗೆ ಒಟ್ಟಾರೆ ಉತ್ಪಾದಕ ವೆಚ್ಚ ಬಾಬ್ತಿನಲ್ಲಿ 1,37,951.38 ಕೋಟಿ ರು. ಒದಗಿಸಿತ್ತು. ಈ ಪೈಕಿ 1,01,017.01 ಕೋಟಿ ರು. ಲಭ್ಯವಿತ್ತು. ಇದರಲ್ಲಿ 82,523.84 ಕೋಟಿ ವೆಚ್ಚ ಮಾಡಿರುವ ಇಲಾಖೆಗಳು 2022ರ ಜನವರಿ ಅಂತ್ಯಕ್ಕೆ 18,493.17 ಕೋಟಿ ರು. ಬಾಕಿ ಉಳಿಸಿಕೊಂಡಿವೆ. ಪ್ರಸಕ್ತ ಸಾಲಿನ ಆರ್ಥಿಕ ವರ್ಷ ಮುಕ್ತಾಯಗೊಳ್ಳಲು ಕೆಲವೇ ದಿನಗಳು ಬಾಕಿ ಇದ್ದರೂ ಉತ್ಪಾದಕ ವೆಚ್ಚಗಳಿಗೆ ಅನುದಾನಕ್ಕೆ ಶೇ.59.82ರಷ್ಟು ಮಾತ್ರ ವೆಚ್ಚ ಮಾಡಿದೆ.

 

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 2,509 ಕೋಟಿ ಬಾಕಿ

 

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉತ್ಪಾದಕ ಅನುದಾನವೆಂದು ಒದಗಿಸಿದ್ದ 17,197.17 ಕೋಟಿ ರು ನಲ್ಲಿ 10,686.27 ಕೋಟಿ ರು. ಲಭ್ಯವಿತ್ತು. ಇದರಲ್ಲಿ 8,176.56 ಕೋಟಿ ರು. ವೆಚ್ಚ ಮಾಡಿರುವ ಇಲಾಖೆಯು ಇನ್ನೂ 2,509.71 ಕೋಟಿ ರು. ಬಾಕಿ ಇರಿಸಿಕೊಂಡಿದೆ. ಜಲಜೀವನ್‌ ಮಿಷನ್‌ ಯೋಜನೆಗೆ 3,017.85 ಕೋಟಿ ರು.ಅನುದಾನ ಲಭ್ಯವಿದ್ದರೂ 2022ರ ಜನವರಿ ಅಂತ್ಯಕ್ಕೆ 1,889.56 ಕೋಟಿ ರು ಖರ್ಚಾಗಿದೆ. ಇದು ಉತ್ಪಾದಕ ಅನುದಾನಕ್ಕೆ ಶೇ.39.33ರಷ್ಟು ಮಾತ್ರ ವೆಚ್ಚವಾಗಿದೆ.

 

ಉತ್ಪಾದಕ ಕಾರ್ಯಕ್ರಮಗಳ ಬಾಕಿ ಉಳಿಸಿಕೊಂಡಿರುವ ಪಟ್ಟಿ (ಜನವರಿ ಅಂತ್ಯಕ್ಕೆ)

 

ಸ್ವಚ್ಛ ಭಾರತ್‌ ಅಭಿಯಾನಕ್ಕೆ 680.23 ಕೋಟಿ ರು. ಅನುದಾನ ಲಭ್ಯವಿದ್ದರೂ ಜನವರಿ ಅಂತ್ಯಕ್ಕೆ 324.50 ಕೋಟಿಯಷ್ಟು ಖರ್ಚು ಮಾಡಿರುವ ಇಲಾಖೆಯು ಇನ್ನೂ 355.73 ಕೋಟಿ ರು. ಬಾಕಿ ಇರಿಸಿಕೊಂಡಿದೆ. ಈ ಅಭಿಯಾನಕ್ಕೆ ನೀಡಿದ್ದ ಒಟ್ಟಾರೆ ಅನುದಾನದಲ್ಲಿ ಶೇ. ಶೇ.29.60ರಷ್ಟು ಮಾತ್ರ ಪ್ರಗತಿ ಸಾಧಿಸಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

 

ವಿಶೇಷವೆಂದರೆ ಶ್ಯಾಮ್‌ ಪ್ರಸಾದ್‌ ಮುಖರ್ಜಿ ರೂರ್ಬನ್‌ ಅಭಿಯಾನಕ್ಕೆ 15.31 ಕೋಟಿ ರು. ಅನುದಾನ ಉತ್ಪಾದಕ ಬಾಬ್ತಿನಲ್ಲಿ ಲಭ್ಯವಿದ್ದರೂ 2022ರ ಜನವರಿ ಅಂತ್ಯದವರೆಗೂ ಬಿಡಿಗಾಸನ್ನೂ ಖರ್ಚು ಮಾಡದೇ ಶೂನ್ಯ ಸಂಪಾದಿಸಿದೆ.

 

ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ ಕಾಯ್ದೆ 2013ರಡಿ ಬಳಕೆಯಾಗದ ಇರುವ ಮೊತ್ತದಲ್ಲಿ 117.03 ಕೋಟಿ ರು. ಅನುದಾನದ ಪೈಕಿ 45.46 ಕೋಟಿ ಮಾತ್ರ ಬಿಡುಗಡೆಯಾಗಿತ್ತು. ಇದರಲ್ಲಿ 2022ರ ಜನವರಿ ಅಂತ್ಯಕ್ಕೆ ಕೇವಲ 26.54 ಕೋಟಿ ರು. ಮಾತ್ರ ವೆಚ್ಚವಾಗಿದೆ. ಲಭ್ಯವಿದ್ದ ಉತ್ಪಾದಕ ಅನುದಾನಕ್ಕೆ ಹೋಲಿಸಿದರೆ ಶೇ. 18.92ರಷ್ಟು ಮಾತ್ರ ವೆಚ್ಚವಾಗಿದೆ.

 

ರಾಷ್ಟ್ರೀಯ ಗ್ರಾಮ್‌ ಸ್ವರಾಜ್‌ ಅಭಿಯಾನದಲ್ಲಿ 264.39 ಕೋಟಿ ರು. ಅನುದಾನದ ಪೈಕಿ 97.32 ಕೋಟಿ ರು. ಬಿಡುಗಡೆಯಾಗಿದೆ. ಜನವರಿ ಅಂತ್ಯಕ್ಕೆ 48.66 ಕೋಟಿ ರು. ಮಾತ್ರ ವೆಚ್ಚವಾಗಿದೆ. ಇದು ಒಟ್ಟು ಉತ್ಪಾದಕ ಅನುದಾನಕ್ಕೆ ಹೋಲಿಸಿದರೆ ಶೇ. 18.40ರಷ್ಟು ಮಾತ್ರ ಖರ್ಚಾಗಿರುವುದು ಅಂಕಿ ಅಂಶಗಳಿಂದ ಗೊತ್ತಾಗಿದೆ.

 

ಗ್ರಾಮೀಣ ನೀರು ಸರಬರಾಜು ಮತ್ತು ಜಲಧಾರೆ ಯೋಜನೆಗೆ 1,027.86 ಕೋಟಿ ರು. ಅನುದಾನ ಒದಗಿಸಲಾಗಿತ್ತು. ಇದರಲ್ಲಿ ಉತ್ಪಾದನಾ ಬಾಬ್ತಿನಲ್ಲಿ 686.43 ಕೋಟಿ ರು. ಲಭ್ಯವಿತ್ತಾದರೂ 552.18 ಕೋಟಿ ರು. ಖರ್ಚಾಗಿದೆ. ಇನ್ನೂ 134.25 ಕೋಟಿ ರು. ಬಾಕಿ ಇದೆ. ಈ ಯೋಜನೆಯಲ್ಲಿ ಶೆ. 53.72ರಷ್ಟು ಸಾಧನೆ ಪ್ರದರ್ಶಿಸಿದೆ.

 

ನಮ್ಮ ಗ್ರಾಮ ನಮ್ಮ ರಸ್ತೆ ಒಳಗೊಂಡಂತೆ ಗ್ರಾಮೀಣ ಸುಮಾರ್ಗ ಯೋಜನೆಗೆ 1,318. 78 ಕೋಟಿ ರು. ಅನುದಾನದ ಪೈಕಿ 1,027.93 ಕೋಟಿ ರು ನಲ್ಲಿ 595.05 ಕೋಟಿ ರು. ವೆಚ್ಚವಾಗಿದೆ. ಇನ್ನೂ 432.88 ಕೋಟಿ ರು. ಬಾಕಿ ಉಳಿಸಿಕೊಂಡಿರುವ ಇಲಾಖೆಯು ಇದರಲ್ಲಿ ಶೇ. 45.12ರಷ್ಟು ಮಾತ್ರ ಪ್ರಗತಿ ಸಾಧಿಸಿದೆ.

 

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿಯಲ್ಲಿ 198.08 ಕೋಟಿ ರು. ಅನುದಾನ ಒದಗಿಸಲಾಗಿತ್ತು. ಈ ಪೈಕಿ 100.89 ಕೋಟಿ ರು. ಬಿಡುಗಡೆಯಾಗಿದ್ದರ ಪೈಕಿ 61.94 ಕೋಟಿ ರು. ವೆಚ್ಚ ಮಾಡಿ 38.95 ಕೋಟಿ ರು. ಬಾಕಿ ಉಳಿಸಿಕೊಂಡಿದೆ.

 

2021ರ ಡಿಸೆಂಬರ್‌ ಅಂತ್ಯಕ್ಕೆ ಗ್ರಾಮೀಣಾಭಿವೃದ್ದಿ ಇಲಾಖೆಯಲ್ಲಿ ಒಟ್ಟು ಉತ್ಪಾದಕ ಅನುದಾನವೆಂದು 15,495.24 ಕೋಟಿ ರು. ಒದಗಿಸಲಾಗಿತ್ತು. ಇದರಲ್ಲಿ 9,960.5 ಕೋಟಿ ರು. ಬಿಡುಗಡೆಯಾಗಿತ್ತು. 6,949.99 ಕೋಟಿ ರು. ವೆಚ್ಚವಾಗಿದೆ. 3,010.51 ಕೋಟಿ ರು. ಬಾಕಿ ಉಳಿಸಿಕೊಂಡಿತ್ತು.

Hot this week

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...
Please Scan to make Your Contribution

Topics

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

Related Articles

Popular Categories

error: Content is protected !!