Wednesday | May 13, 2026 |

ಕೋವಿಡ್‌ 3ನೇ ಅಲೆ; ಆಕ್ಸಿಜನ್‌ ಘಟಕ ಖರೀದಿಗೆ ಪಿಎಂ ಕೇರ್ಸ್‌ ಫಂಡ್‌ನಿಂದ ಅನುದಾನ ಕೋರದ ಸರ್ಕಾರ

ಬೆಂಗಳೂರು; ಕೋವಿಡ್‌ ಮೂರನೇ ಅಲೆ ಎದುರಿಸಲು 140 ಕೋಟಿ ರು. ಮೊತ್ತದಲ್ಲಿ ಆಕ್ಸಿಜನ್‌ ಜನರೇಟರ್‌ ಯುನಿಟ್‌ಗಳ ಖರೀದಿದಾಗಿ ಪಿಎಂ ಕೇರ್ಸ್‌ ಫಂಡ್‌ ಅಡಿಯಲ್ಲಿ ಅನುದಾನ ಕೋರದ ಆರೋಗ್ಯ ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಯನ್ನು ಕೋರಿರುವುದು ಇದೀಗ ಬಹಿರಂಗವಾಗಿದೆ.

 

ಕೋವಿಡ್‌ ಮೂರನೇ ಅಲೆಯ ನಿರ್ವಹಣೆಗೆ ಪೂರ್ವ ಸಿದ್ಧತೆಗೆ ಮಾಡಿಕೊಳ್ಳುವ ಸಲುವಾಗಿ ಒಟ್ಟಾರೆ ಕೋರಿದ್ದ 1,595 ಕೋಟಿ ರು.ಗಳಿಗೆ ಪಟ್ಟಿ ತಯಾರಿಸಿ ಅನುಮೋದನೆಗೆ ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿಯೇ ನರ್ಸಿಂಗ್‌, ಎಎಚ್‌ಎಸ್‌ ಮತ್ತು ಫಿಸಿಯೋತೆರಪಿ ಕಾಲೇಜುಗಳನ್ನು ತೆರೆಯಲು ಅನುಮತಿ ಕೋರಿದ್ದ ಸಂಗತಿಯು ಇದೀಗ ಹೊರಬಿದ್ದಿದೆ.

 

ಕೋವಿಡ್‌ ಮೂರನೇ ಅಲೆ ಪೂರ್ವ ಸಿದ್ಧತೆಗಾಗಿ ವೈದ್ಯಕೀಯ ಮತ್ತು ಆರೋಗ್ಯ, ಕುಟಂಬ ಕಲ್ಯಾಣ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವನೆ ಮತ್ತು ಈ ಸಂಬಂಧ ಆರ್ಥಿಕ ಇಲಾಖೆಯು ನೀಡಿದ್ದ ಅಭಿಪ್ರಾಯಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ ಆರ್ಥಿಕ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ. ಸಚಿವ ಸುಧಾಕರ್‌ ಅಧ್ಯಕ್ಷತೆಯಲ್ಲಿ ಹಲವು ಸುತ್ತಿನ ಸಭೆಗಳ ನಡೆದ ನಂತರ ಆರ್ಥಿಕ ಇಲಾಖೆಗೆ ಪ್ರಸ್ತಾವನೆ  ಸಲ್ಲಿಕೆಯಾಗಿತ್ತು.

 

ಅಕ್ಸಿಜನ್‌ ಜನರೇಟರ್‌ ಯುನಿಟ್‌ಗಳನ್ನು 140.00 ಕೋಟಿ ರು.ಗಳ ಅನುದಾನ ಕೋರಿಕೆ ಪೈಕಿ 100 ಕೋಟಿ ರು. ಅನುದಾನ ನೀಡಲು ಆರ್ಥಿಕ ಇಲಾಖೆಯು ಸಹಮತಿಸಿತ್ತಾದರೂ ಇವುಗಳನ್ನು ಪಿಎಂ ಕೇರ್ಸ್‌ , ಸಿಎಸ್‌ಆರ್‌ ಫಂಡ್‌ನ ಮೂಲಕ ಪಡೆದುಕೊಳ್ಳಬೇಕು ಎಂದು ಆರ್ಥಿಕ ಇಲಾಖೆಯ (ವೆಚ್ಚ-5) ಅಧೀನ ಕಾರ್ಯದರ್ಶಿ ರವಿಚಂದ್ರನ್‌ ಅವರು ಅಭಿಪ್ರಾಯಿಸಿದ್ದರು ಎಂಬುದು ಇಲಾಖೆಯ ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

ಅರ್ಥಿಕ ಇಲಾಖೆ ನೀಡಿರುವ ಅಭಿಪ್ರಾಯದ ಪ್ರತಿ

 

ನರ್ಸಿಂಗ್‌, ಎಎಚ್ಎಸ್‌ ಮತ್ತು ಫಿಸಿಯೋತೆರೆಪಿ ಕಾಲೇಜು ಸ್ಥಾಪನೆಗಾಗಿ ಇಲಾಖೆಯು ಒಟ್ಟು 31.00 ಕೋಟಿ ರು.ಗಳ ಅನುದಾನ ಕೋರಿಕೆಯೂ ಒಳಗೊಂಡಿತ್ತು. ಆದರೆ ಆರ್ಥಿಕ ಇಲಾಖೆಯು ಕೋವಿಡ್‌ 19ರ ಮೂರನೇ ಅಲೆಯ ತಯಾರಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಇದನ್ನು ತಳ್ಳಿ ಹಾಕಿತ್ತು.

 

ಮೈಕ್ರೋಮೈಸಿಸ್‌ ಉಪಕರಣಗಳನ್ನು ಈಗಾಗಲೇ 12.28 ಕೋಟಿ ಮೊತ್ತದಲ್ಲಿ ಖರೀದಿಸಿದ್ದರೂ ಇಲಾಖೆಯು ಮತ್ತೊಮ್ಮೆ 17.00 ಕೋಟಿ ರು. ಮೊತ್ತದ ಅನುದಾನ ಕೋರಿತ್ತು. ಆದರೂ ಆರ್ಥಿಕ ಇಲಾಖೆಯು ಪರಿಗಣಿಸಿರುವುದು ಆರ್‌ಟಿಐ ದಾಖಲೆಯಿಂದ ತಿಳಿದು ಬಂದಿದೆ.

 

19 ಜಿಲ್ಲಾಸ್ಪತ್ರೆ ಮತ್ತು 40 ತಾಲೂಕು ಆಸ್ಪತ್ರೆಗಳ ಕಟ್ಟಡ ಕಾಮಗಾರಿಗೆ 857 ಕೋಟಿ (ವೈದ್ಯಕೀಯ ಶಿಕ್ಷಣ ಇಲಾಖೆ 217.00 ಕೋಟಿ, ಆರೋಗ್ಯ ಇಲಾಖೆ 640 ಕೋಟಿ) , ಈ ಆಸ್ಪತ್ರೆಗಳಿಗೆ ಉಪಕರಣ ಖರೀದಿಗೆ 236.44 ಕೋಟಿ, ,ಮಾನವ ಸಂಪನ್ಮೂಲಕ್ಕಾಗಿ ಆರೋಗ್ಯ ಇಲಾಖೆಯು ಕೋರಿದ್ದ 300 ಕೋಟಿ ಅನುದಾನ ಪೈಕಿ 200 ಕೋಟಿ ರು.ಗಳ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯು ಆರಂಭದಲ್ಲಿ ಸಹಮತಿ ವ್ಯಕ್ತಪಡಿಸಿತ್ತಾದರೂ ಕಟ್ಟಡ ಕಾಮಗಾರಿ ದೀರ್ಘಾವಧಿ ಯೋಜನೆಯಾಗಿದ್ದರಿಂದ ಒಟ್ಟು 857 ಕೋಟಿ ರು. ಕೋರಿಕೆ ಪ್ರಸ್ತಾಪವನ್ನು ಪರಿಗಣಿಸಿಲ್ಲ.

 

ಹಾಗೆಯೇ ಬಜೆಟ್‌ನಲ್ಲಿ ಒದಗಿಸಿದ್ದ ಅನುದಾನವನ್ನು ಮಾನವ ಸಂಪನ್ಮೂಲ ಮತ್ತು ಇತರೆ ಬಾಬ್ತುಗಳಿಗೆ ಖರ್ಚು ಮಾಡಲು ಸೂಚಿಸಿತ್ತಲ್ಲದೆ ವಾಸ್ತವ ವೆಚ್ಚಗಳಿಗೆ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಸಲ್ಲಿಸಬಹುದು ಎಂದು ಆರ್ಥಿಕ ಇಲಾಖೆಯು ಅಭಿಪ್ರಾಯಿಸಿತ್ತು.

 

ಅದೇ ರೀತಿ ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ವೈದ್ಯಕೀಯ ಕಾಲೇಜುಗಳ ಹಾಸಿಗೆ ಸಾಮರ್ಥ್ಯದ ಪಿಐಸಿಯು, ಎನ್‌ಐಸಿಯು, ಎಚ್‌ಡಿಯು, ಮಾನವ ಸಂಪನ್ಮೂಲ, ವೈದ್ಯಕೀಯ ಉಪಕರಣ, ಪರಿಕರ ಮತ್ತು ಕಾಮಗಾರಿಗೆ ಇಲಾಖೆಯು 1,594.57 ಕೋಟಿ ರು. ಅನುದಾನ ಕೋರಿಕೆ ಪೈಕಿ ಆರ್ಥಿಕ ಇಲಾಖೆಯು 422.71 ಕೋಟಿ ರು.ಬಿಡುಗಡೆಗೆ ಸಹಮತಿಸಿತ್ತು.

 

ವೈದ್ಯಕೀಯ ಶಿಕ್ಷಣ ಕಾಲೇಜುಗಳಲ್ಲಿ 1,280 ಹಾಸಿಗೆಗಳಿಗೆ ಪಿಐಸಿಯು, ಎನ್‌ಐಸಿಯು, ಎಚ್‌ಡಿಯು ಅಳವಡಿಸುವ ಸಲುವಾಗಿ 197.18 ಕೋಟಿ ರು., ವೈದ್ಯಕೀಯ ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ಬಲವರ್ಧನೆಗೊಳಿಸಲು ಉಪಕರಣ ಖರೀದಿಸಲು 228.46 ಕೋಟಿ ರು. ಪೈಕಿ 153.31 ಕೋಟಿ ರು. ಬಿಡುಗಡೆಗೆ ಒಪ್ಪಿಗೆ ದೊರೆತಿತ್ತು.

 

ಹಾಗೆಯೇ ಆಕ್ಸಿಜನ್‌ ಬೆಡ್‌ಗಳಿಗಾಗಿ 2.50 ಕೋಟಿ, ಮಾನವ ಸಂಪನ್ಮೂಲಕ್ಕಾಗಿ 76.37 ಕೋಟಿ, ತಾತ್ಕಾಲಿಕವಾಗಿ ಸ್ಟೆಬಲೇಷನ್‌ ಘಟಕ ನಿರ್ಮಾಣಕ್ಕೆ 18 ಕೋಟಿ, ವೈದ್ಯಕೀಯ ಕಾಲೇಜು, ಸಂಸ್ಥೆಗಳ ತರಬೇತಿ ವೆಚ್ಚಕ್ಕೆ 1.30 ಕೋಟಿ, ಮೈಕ್ರೋಮೈಸಿಸ್‌ ಉಪಕರಣ ಖರೀದಿಗೆ 17.09 ಕೋಟಿ, ಪಿಪಿಇ ಕಿಟ್‌, ಎನ್‌ 95 ಮಾಸ್ಕ್‌ ಇತ್ಯಾದಿ ಉಪಕರಣಗಳ ಖರೀದಿಗೆ 571.77 ಕೋಟಿ, ಕಟ್ಟಡ ಕಾಮಗಾರಿಗೆ 5.40 ಕೋಟಿ, ನರ್ಸಿಂಗ್‌, ಎಎಚ್‌ಎಸ್‌ ಮತ್ತ ಫಿಜಿಯೋತೆರಪಿ ಕಾಲೇಜುಗಳ ಸ್ಥಾಪನೆಗೆ 31.00 ಕೋಟಿ, ಎಸ್‌ಎಬಿವಿ ವೈದ್ಯಕೀಯ ಕಾಲೇಜನ್ನು ಮೇಲ್ದರ್ಜೆಗೇರಿಸಲು 315.00 ಕೋಟಿ, ಕಾರವಾರದಲ್ಲಿ ಸೂಪರ್‌ ಸ್ಪೆಷಾಲಿಟಿ ಯುನಿಟ್‌ ಸ್ಥಾಪಿಸಲು 130 ಕೋಟಿ ಸೇರಿದಂತೆ ಒಟ್ಟು 1,594.57 ಕೋಟಿ ರು.ಗಳ ಅನುದಾನಕ್ಕೆ ಕೋರಿಕೆ ಸಲ್ಲಿಸಿತ್ತು.

 

 

ಈ ಪೈಕಿ ಆರ್ಥಿಕ ಇಲಾಖೆಯು 422.71 ಕೋಟಿ ರು., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 1,176.71 ಕೋಟಿ ಸೇರಿದಂತೆ ಒಟ್ಟಾರೆ 1,599.42 ಕೋಟಿ ರು. ಬಿಡುಗಡೆಗೆ ಕೋರಿಕೆ ಸಲ್ಲಿಸಿತ್ತು ಎಂಬುದು ದಾಖಲೆಗಳಿಂದ ತಿಳಿದು ಬಂದಿದೆ.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!