Monday | August 24, 2026 |

ಆರ್ಥಿಕ ಹೊರೆ; ಇಲಾಖೆ ಎಚ್ಚರಿಕೆ ನಡುವೆಯೂ ವಿಶೇಷ ಹೂಡಿಕೆ ವಲಯ ರಚನೆ ಕುರಿತು ಬಜೆಟ್‌ನಲ್ಲಿ ಘೋಷಣೆ

ಬೆಂಗಳೂರು; ರಾಜ್ಯದಲ್ಲಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಸ್ಥಾಪನೆ ಸಂಬಂಧ ಸಂಸದೀಯ ಮತ್ತು ಶಾಸನ ರಚನೆ ಇಲಾಖೆ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ವಾಣಿಜ್ಯ ಕೈಗಾರಿಕೆ ಇಲಾಖೆಗಳ ಮಧ್ಯೆ ಇನ್ನೂ ಪ್ರಾಥಮಿಕ ಚರ್ಚೆ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ ರಚಿಸಲಾಗುವುದು ಎಂದು ಘೋಷಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ದೊಡ್ಡ ಗಾತ್ರ ಹೂಡಿಕೆ ಪ್ರದೇಶ, ಕೈಗಾರಿಕೆ ವಸಾಹತುಗಳ ಸ್ಥಾಪನೆ, ಕಾರ್ಯಾಚರಣೆ, ನಿಯಂತ್ರಣ ಮತ್ತು ನಿರ್ವಹಣೆಗೆಗಾಗಿ ಗುಜರಾತ್‌ ಮಾದರಿಯಲ್ಲಿ ಶಿವಮೊಗ್ಗ, ಕಲ್ಬುರ್ಗಿ ಮತ್ತು ಧಾರವಾಡದಲ್ಲಿ ವಿಶೇಷ ಹೂಡಿಕೆ ವಲಯ ಸ್ಥಾಪಿಸಲು ಮುಂದಾಗಿದೆ.

 

ಆರಂಭಿಕ ಹಂತದಲ್ಲಿ ತುಮಕೂರು ಮತ್ತು ಧಾರವಾಡ ಜಿಲ್ಲೆಯಲ್ಲಿ ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲು ಘೋಷಿಸಲಾಗಿದೆಯಾದರೂ ವಿಶೇಷ ಹೂಡಿಕೆ ವಲಯ ಸ್ಥಾಪನೆ ಸಂಬಂಧ ಸಂಸದೀಯ ಮತ್ತು ಶಾಸನ ರಚನೆ ಇಲಾಖೆ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ. ಅಲ್ಲದೆ ವಿಶೇಷ ಹೂಡಿಕೆ ವಲಯ ರಚನೆಯಿಂದಾಗಿ ಆರ್ಥಿಕ ಹೊರೆಯಾಗಲಿದೆ ಎಂದೂ ಎಚ್ಚರಿಸಿದೆ. ಆದರೂ ಬಜೆಟ್‌ನಲ್ಲಿ ತರಾತುರಿಯಲ್ಲಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಕೈಗಾರಿಕೆ ವಲಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಈಗಾಗಲೇ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯನಿರ್ವಹಿಸುತ್ತಿರುವುದರಿಂದ ವಿಧೇಯಕದಲ್ಲಿ ಪ್ರಸ್ತಾಪಿಸಿರುವ ವಿಶೇಷ ಹೂಡಿಕೆ ವಲಯ ಮತ್ತು ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರದ ರಚನೆಯು ಕೆಐಎಡಿಬಿಯ ನಕಲು ಮಾಡಿದಂತಾಗುತ್ತದೆ ಎಂದೂ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

 

ಪ್ರಸ್ತುತ ಕೈಗಾರಿಕೆ ಪ್ರದೇಶಾಭಿವೃದ್ಧಿಗಾಗಿ ಭೂಮಿಯನ್ನು ನಿಯಮಾನುಸಾರ ಸರ್ಕಾರದಿಂದ ಪಡೆದು ಕೈಗಾರಿಕೆ ವಲಯಗಳನ್ನು ಸ್ಥಾಪಿಸುವ ಕಾರ್ಯವನ್ನು ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ನಿರ್ವಹಿಸುತ್ತಿದೆ. ಈಗ ಪ್ರಸ್ತಾಪಿಸಿರುವ ವಿಶೇಷ ಹೂಡಿಕೆ ವಲಯವನ್ನು (The Karnataka Special Investment Region Bill 2021) ಸಹ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯೇ ನಿರ್ವಹಿಸುವುದು ಸೂಕ್ತ. ಇಲ್ಲದಿದ್ದರೆ ಇದು Duplication of work and Authority ಆಗುತ್ತದೆ ಹಾಗೂ ಇದರಿಂದ ಆರ್ಥಿಕ ಹೊರೆಯಾಗುತ್ತದೆ ಎಂದು ಶಾಸನ ರಚನೆ ಇಲಾಖೆ ಹೇಳಿತ್ತು.

 

ಪ್ರಸ್ತಾಪಿಸಿರುವ ವಿಧೇಯಕದಲ್ಲಿ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರವು ನಿರ್ವಹಿಸುವ ಕಾರ್ಯವನ್ನು ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ನಿರ್ವಹಿಸುತ್ತಿರುವುದರಿಂದ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರದ ಅಗತ್ಯತೆ ಇದೆಯೇ ಎಂಬುದನ್ನು ಪರಿಶೀಲಿಸುವಂತೆ ಆಡಳಿತ ಇಲಾಖೆಯನ್ನು ಕೋರಿದೆ.
Special Investment Region ಯಾವ ಆಧಾರದ ಮೇಲೆ ಗುರುತಿಸಲಾಗುವುದು ಎಂಬುದರ ಬಗ್ಗೆ ಮರು ಪರಿಶೀಲಿಸುವಂತೆ ಕೋರಿತ್ತು.

 

ಸಂಸದೀಯ ಶಾಸನ ರಚನೆ ಇಲಾಖೆ ನೀಡಿರುವ ಅಭಿಪ್ರಾಯದ ಪ್ರತಿ

 

ವಿಧೇಯಕದಲ್ಲಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯನ್ನೇ Apex Authorityಯನ್ನಾಗಿ ಮಾಡುವುದರಿಂದ ಪ್ರಸ್ತಾವಿತ ವಿಧೇಯಕದ ಅಗತ್ಯತೆ ಕಂಡು ಬರುವುದಿಲ್ಲ ಎಂದು ಹೇಳಿತ್ತು.

 

Special Investment Region to be Industrial Township ಇದು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕಾರ್ಯ ಸ್ವರೂಪಕ್ಕೆ ವ್ಯತಿರಿಕ್ತವಾಗುತ್ತದೆ. Industrial Townships ನ್ನು muncipalities Act ಅಡಿಯಲ್ಲಿ ರಚಿಸಬೇಕು ಎಂದಿತ್ತು.

 

ಪ್ರಸ್ತಾಪಿಸಿರುವ ವಿಧೇಯಕದಲ್ಲಿನ Special Investment Region and Regional Development Authorityಯ ಉಪ ಬಂಧಗಳನ್ನು ಅಗತ್ಯವಾದಲ್ಲಿ the karnataka industrial area developement act 1966ಗೆ ಸೂಕ್ತ ತಿದ್ದುಪಡಿಯನ್ನು ತರುವುದರ ಮೂಲಕ ಅಳವಡಿಸುವ ಬಗ್ಗೆ ಪರಿಶೀಲಿಸುವಂತೆ ಕೋರಿರುವುದು ತಿಳಿದು ಬಂದಿದೆ.

 

ರಾಜ್ಯದ ಜನರಿಗೆ ವಿಶೇಷವಾಗಿ ಕೈಗಾರಿಕಾ ಅಭಿವೃದ್ಧಿಯಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಹಾಗೂ ಟಯರ್-2 & ಟಯರ್-3 ನಗರಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸುವುದು ಹಾಗೂ ಬಂಡವಾಳ ಹೂಡಿಕೆಯ ಅಭಿವೃದ್ಧಿಯನ್ನು ರಾಜ್ಯದಲ್ಲಿ ಖಾತರಿಪಡಿಸಲಾಗುವುದು ಎಂದು ಹಿಂದಿನ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಅವರು ಹೇಳಿದ್ದನ್ನು ಸ್ಮರಿಸಬಹುದು.

 

100 ಕ್ಕಿಂತಲೂ ಹೆಚ್ಚು ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿರುವ ವಿಶೇಷ ಹೂಡಿಕೆ ವಲಯ ಸ್ಥಾಪನೆ, ಅಭಿವೃದ್ಧಿಪಡಿಸಿ ಅದನ್ನು ನಿರ್ವಹಿಸಲು ರಾಜ್ಯದಲ್ಲಿ ವಿಶೇಷ ಹೂಡಿಕೆ ವಲಯ ಕಾಯ್ದೆ ಜಾರಿಗೆ ತರಲು ಪ್ರಸ್ತಾಪಿಸಲಾಗಿತ್ತು. ಈ ಪ್ರದೇಶವನ್ನು ಕೈಗಾರಿಕೆ ಟೌನ್‌ ಶಿಪ್‌ ಎಂದು ಪರಿಗಣಿಸಲಾಗುತ್ತದೆ.

 

ಧಾರವಾಡ, ಗದಗ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳನ್ನೊಳಗೊಂಡ ಧಾರವಾಡ ವಿಶೇಷ ಹೂಡಿಕೆಯ ಮೊದಲನೇ ವಲಯ ಎಂದು ಅಧಿಸೂಚಿಸಲು ಪ್ರಸ್ತಾಪಿಸಿತ್ತು. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಶಿವಮೊಗ್ಗ ವಿಶೇಷ ಹೂಡಿಕೆ ವಲಯ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನೊಳಗೊಂಡ ಕಲಬುರಗಿ ವಿಶೇಷ ಹೂಡಿಕೆ ವಲಯವನ್ನು ಅಧಿಸೂಚಿತಗೊಳಿಸಲು ಪ್ರಸ್ತಾಪಿಸಲಾಗಿತ್ತು.

 

ರಾಜ್ಯದಲ್ಲಿ 5 ಲಕ್ಷ ಕೋಟಿ ರೂಪಾಯಿಗಳ ಬಂಡವಾಳ ಆಕರ್ಷಣೆ, 20 ಲಕ್ಷ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಹಾಗೂ ಕೈಗಾರಿಕಾಭಿವೃದ್ದಿಯಲ್ಲಿ ಹಿಂದುಳಿದ ಜಿಲ್ಲೆಗಳ ಅಭಿವೃದ್ದಿಗೆ ಅನುವು ಮಾಡಿಕೊಡುವಂತಹ ನೂತನ ಕೈಗಾರಿಕಾ ನೀತಿ 2020-25 ರಾಜ್ಯವನ್ನು ಇನ್ನಷ್ಟು ಕೈಗಾರಿಕಾ ಸ್ನೇಹಿ ಮಾಡುವತ್ತ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಲಾಗಿತ್ತು.

 

ವಿಶೇಷ ಹೂಡಿಕೆ ವಲಯ ಸ್ಥಾಪಿಸುವ ಸಂಬಂಧ ಹಿಂದಿನ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಗುಜರಾತ್‌ನಲ್ಲಿ ಪ್ರವಾಸ ಕೈಗೊಂಡಿತ್ತಲ್ಲದೆ ಅಲ್ಲಿನ ಕೈಗಾರಿಕೋದ್ಯಮಿಗಳನ್ನೂ ಭೇಟಿ ಮಾಡಿ ಪರಿಶೀಲನೆ ನಡೆಸಿತ್ತು.

 

ಗುಜರಾತ್‌ನಿಂದ ಹಿಂದಿರುಗಿದ ಬಳಿಕ ಜಗದೀಶ್‌ ಶೆಟ್ಟರ್‌ ಅವರು ಮಂಡಿಸಿದ್ದ ನೂತನ ಕೈಗಾರಿಕಾ ನೀತಿ 2020-25ಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಇದೇ ನೀತಿಯಲ್ಲಿ ವಿಶೇಷ ಹೂಡಿಕೆ ವಲಯ ಮತ್ತು ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನೂ ಪ್ರಸ್ತಾಪಿಸಿತ್ತು. ಈ ಬಗ್ಗೆ ಹಾಲಿ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಅವರೂ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!