Friday | March 27, 2026 |

ಸಚಿವ ಮಾಧುಸ್ವಾಮಿ ಬೆಂಗಾವಲಿಗೆ ಸಂದೇಹಾಸ್ಪದ ನಡವಳಿಕೆ ಹೊಂದಿರುವ ಇನ್ಸ್‌ಪೆಕ್ಟರ್‌ ನಿಯೋಜನೆ

Support THE-FILE

spot_img

ಬೆಂಗಳೂರು; ಸಂದೇಹಾಸ್ಪದ ನಡವಳಿಕೆ ಹೊಂದಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಒಳಗಾಗಿರುವ ಪೊಲೀಸ್‌ ಇನ್ಸ್‌ಪೆಕ್ಟರ್‌ ಕೆ ಟಿ ರಮೇಶ ಅವರನ್ನು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಅವರಿಗೆ ಬೆಂಗಾವಲು, ಭದ್ರತಾ ವ್ಯವಸ್ಥೆಗೆ ನಿಯೋಜಿಸಿರುವುದು ಇದೀಗ ಬಹಿರಂಗವಾಗಿದೆ.

 

ಪ್ರಕರಣವೊಂದರಲ್ಲಿ ಅರ್ಜಿದಾರರ ಸ್ನೇಹಿತರೊಬ್ಬರಿಂದ 2 ಲಕ್ಷ ರು.ಗಳನ್ನು ನೇರವಾಗಿ ಪಡೆದು ಮಾಲು ಪಟ್ಟಯಲ್ಲಿ ನಮೂದಿಸದೆಯೇ ಬೇರೊಬ್ಬರ ಕಡೆಯಿಂದ ಹಾಜರುಪಡಿಸಿ ಅಮಾನತ್ತು ಪಡಿಸುವ ಮೂಲಕ ಕೆ ಟಿ ರಮೇಶ್‌ ಅವರು ಸಂದೇಹಾಸ್ಪದ ನಡವಳಿಕೆ ಪ್ರದರ್ಶಿಸಿದ್ದರು ಎಂದು ನಾಗರಿಕ ಹಕ್ಕುಗಳ ಜಾರಿ ನಿದೇಶನಾಲಯದ ಪೊಲೀಸ್‌ ಅಧೀಕ್ಷಕ ಕೆ ಪರಶುರಾಮ ಅವರು 2021ರ ಡಿಸೆಂಬರ್‌ ನಲ್ಲಿ ಪತ್ರ ಬರೆದಿದ್ದರು.

 

ಈ ಪತ್ರ ಬರೆದು ವರ್ಷವಾದರೂ ಪೊಲೀಸ್‌ ಇಲಾಖೆ ಇದುವರೆಗೂ ಕ್ರಮ ವಹಿಸಿಲ್ಲ. ಆದರೆ ಇದೇ ಪೊಲೀಸ್‌ ಇನ್ಸ್‌ಪೆಕ್ಟರ್‌ ರಮೇಶ್‌ ಅವರನ್ನು ಕಾನೂನು ಮತ್ತು ಸಂಸದೀಯ ಸಚಿವ ಜೆ ಸಿ ಮಾಧುಸ್ವಾಮಿ ಅವರಿಗೆ ಬೆಂಗಾವಲು ಮತ್ತು ಭದ್ರತಾ ವ್ಯವಸ್ಥೆಗೆ ನಿಯೋಜಿಸಿರುವುದು ಅಚ್ಚರಿ ಮೂಡಿಸಿದೆ.

 

ಈ ಕುರಿತು ಲಂಚಮುಕ್ತ ಕರ್ನಾಟಕ ವೇದಿಕೆಯ ಅಧ್ಯಕ್ಷ ಮಲ್ಲಿಕಾರ್ಜುನ ಭಟ್ಟರಹಳ್ಳಿ ಎಂಬುವರು ಮುಖ್ಯಮಂತ್ರಿ, ಗೃಹ ಸಚಿವ, ಗೃಹ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಲವರಿಗೆ ದೂರರ್ಜಿ ಸಲ್ಲಿಸಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಲಂಚಮುಕ್ತ ಕರ್ನಾಟಕ ವೇದಿಕೆ ನೀಡಿರುವ ದೂರಿನ ಪ್ರತಿ

 

‘ಸಂದೇಹಾಸ್ಪದ ಮತ್ತು ನಿಯಮಬಾಹಿರವಾಗಿ ಕರ್ತವ್ಯ ನಿರ್ವಹಿಸಿರುವ ನಡವಳಿಕೆ ಇರುವ, ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯತನದಿಂದ ಪೊಲೀಸ್‌ ಇಲಾಖೆಯ ಘನತೆಗೆ ಕುಂದುಂಟು ಮಾಡಿರುವ ಕೆ ಟಿ ರಮೇಶ್‌ ಅವರು ಸರ್ಕಾರಿ ಕರ್ತವ್ಯ ನಿರ್ವಹಿಸಲು ಅಸಮರ್ಥರಾಗಿದ್ದರೂ ನಿಯಮಬಾಹಿರವಾಗಿ ಪೊಲೀಸ್‌ ಸೇವೆಯಲ್ಲಿ ಮುಂದುವರೆಸಲಾಗಿದೆ,’ ಎಂದು ಲಂಚಮುಕ್ತ ಕರ್ನಾಟಕ ವೇದಿಕೆಯ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಅವರ ತವರು ಕ್ಷೇತ್ರ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿ ಪ್ರವಾಸದ ಸಂದರ್ಭದಲ್ಲಿ ಕೆ ಟಿ ರಮೇಶ್‌ ಅವರು ಬೆಂಗಾವಲು ರಕ್ಷಣೆಗೆ ನಿಯೋಜಿಸಿರುವುದು ಅತಿ ದೊಡ್ಡ ಭದ್ರತಾ ಲೋಪವಾಗಿದೆ ಎಂದು ದೂರಿನಲ್ಲಿ ಆರೋಪಿಸಿರುವ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ಈ ಅಧಿಕಾರಿಯನ್ನು ಸರ್ಕಾರಿ ಸೇವೆಯಿಂದಲೇ ವಜಾಗೊಳಿಸಬೇಕು ಮತ್ತು ಸಚಿವರಿಗೆ ಸೂಕ್ತ ಬದಲಿ ಭದ್ರತಾ ವ್ಯವಸ್ಥೆಗೆ ನಿಯೋಜಿಸಬೇಕು ಎಂದು ದೂರಿನಲ್ಲಿ ಹೇಳಿದ್ದಾರೆ.

 

ಅಲ್ಲದೆ ಇದೇ ಕೆ ಟಿ ರಮೇಶ್‌ ಅವರ ವಿರುದ್ಧದ ಲಂಚ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಳಿ ಮಾಡಿದ್ದರು. ಆ ಸಂದರ್ಭದಲ್ಲಿ ಹುಳಿಯಾರು ಠಾಣೆಯ 2021ರ ಆಗಸ್ಟ್‌ 4ರಂದು ಎಫ್‌ಐಆರ್‌ (ನಂ 08/2021) ದಾಖಲಾಗಿತ್ತು. ಈತನ ವಿರುದ್ಧ ಸೂಕ್ತ ಇಲಾಖಾ ಕ್ರಮ ಕೈಗೊಳ್ಳಬೇಕು ಎಂದು ಎಸಿಬಿಯು ಜಿಲ್ಲಾ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದು 7 ತಿಂಗಳಾದರೂ ತುಮಕೂರು ಜಿಲ್ಲಾ ವರಿಷ್ಠಾಧಿಕಾರಿ ಮತ್ತು ಕೇಂದ್ರ ವಲಯದ ಐಜಿಪಿ ಇದುವರೆಗೂ ಯಾವುದೇ ಕ್ರಮ ವಹಿಸಿಲ್ಲ ಎಂಬ ಸಂಗತಿಯು ದೂರರ್ಜಿಯಿಂದ ಗೊತ್ತಾಗಿದೆ.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!