Sunday | March 22, 2026 |

5 ವರ್ಷದಲ್ಲಿ 763 ಮಾನವ ಕಳ್ಳಸಾಗಾಣಿಕೆ ಪ್ರಕರಣ ದಾಖಲು;ಬಾಲಮಂದಿರಗಳಿಂದ 485 ಮಕ್ಕಳು ನಾಪತ್ತೆ

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ 763 ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ದಾಖಲಾಗಿವೆ. ಅದೇ ರೀತಿ ರಾಜ್ಯದ ಬಾಲಮಂದಿರಗಳಿಂದ ಒಟ್ಟು 485 ಮಕ್ಕಳು ನಾಪತ್ತೆಯಾಗಿದ್ದಾರೆ. ಕಳ್ಳ ಸಾಗಾಣಿಕೆ ಪ್ರಕರಣಗಳನ್ನು ತಡೆಗಟ್ಟಲು ಹಲವು ವರ್ಷಗಳಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳುತ್ತಿದ್ದಾರಾದರೂ ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ.

 

ಅದೇ ರೀತಿ ಬಾಲ ಮಂದಿರಗಳಿಂದ ಮಕ್ಕಳು ತಪ್ಪಿಸಿಕೊಳ್ಳದಂತೆ ಸಂಸ್ಥೆಗಳಲ್ಲಿ ಸಿಸಿಟಿವಿ ಮೂಲಕ ತೀವ್ರ ನಿಗಾ ಇರಿಸಿದ್ದರೂ 485 ಮಕ್ಕಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಮಕ್ಕಳನ್ನು ಪತ್ತೆ ಹಚ್ಚುವಲ್ಲಿಯೂ ಪೊಲೀಸ್‌ ಇಲಾಖೆಯು ಹಿಂದೆ ಬಿದ್ದಿದೆ.

 

ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಬೇಕಿದ್ದ ಪೊಲೀಸ್‌ ಅಧಿಕಾರಿಗಳು ಆರೋಪಿಗಳೊಂದಿಗೇ ಶಾಮೀಲಾಗುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಇತ್ತೀಚೆಗಷ್ಟೇ ವರದಿ ನೀಡಿತ್ತು. ಇದರ ಬೆನ್ನಲ್ಲೇ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳಿಗೆ ಕಡಿವಾಣ ಬಿದ್ದಿಲ್ಲ ಎಂಬ ಸಂಗತಿಯು ಮುನ್ನೆಲೆಗೆ ಬಂದಿದೆ.

 

ಮಾನವ ಕಳ್ಳ ಸಾಗಾಣಿಕೆ ಕುರಿತು ವಿಧಾನಪರಿಷತ್‌ ಸದಸ್ಯ ಕೆ ಟಿ ಶ್ರೀಕಂಠೇಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು 5 ವರ್ಷಗಳ ಅಂಕಿ ಸಂಖ್ಯೆಯನ್ನು ಒದಗಿಸಿದ್ದಾರೆ.

 

2017ರಲ್ಲಿ 178, 2018ರಲ್ಲಿ 146, 2019ರಲ್ಲಿ 155, 2020ರಲ್ಲಿ 119, 2021ರಲ್ಲಿ 134 ಮತ್ತು 2022ರ ಫೆಬ್ರುವರಿವರೆಗೆ 31 ಪ್ರಕರಣಗಳು ದಾಖಲಾಗಿವೆ. ಈ ಐದು ವರ್ಷಗಳಲ್ಲಿ ಒಟ್ಟು 972 ಆರೋಪಿಗಳನ್ನು ಬಂಧಿಸಲಾಗಿದೆ. 2017ರಲ್ಲಿ ಒಟ್ಟು 10 ಆರೋಪಿಗಳಿಗೆ ಶಿಕ್ಷೆಯಾಗಿರುವುದು ಹೊರತುಪಡಿಸಿದರೆ 2018ರಿಂದ 2022ರ ಫೆಬ್ರುವರಿವರೆಗೆ ಒಬ್ಬೇ ಒಬ್ಬ ಅರೋಪಿಗೆ ಶಿಕ್ಷೆಯಾಗಿಲ್ಲ ಎಂಬುದು ಆರಗ ಜ್ಞಾನೇಂದ್ರ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

 

ಮಾನವ ಕಳ್ಳಸಾಗಣೆ ತಡೆ ಮತ್ತು ನಿಷೇಧ ಕಾಯ್ದೆಯಡಿ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶಗಳಿದ್ದರೂ ಒಟ್ಟು 763 ಪ್ರಕರಣಗಳಲ್ಲಿ ಕೇವಲ 10 ಮಂದಿಗಷ್ಟೇ ಶಿಕ್ಷೆ ವಿಧಿಸಿರುವುದು ಪೊಲೀಸರ ಕಾರ್ಯವೈಖರಿಗೆ ಕೈಗನ್ನಡಿ ಹಿಡಿದಂತಾಗಿದೆ.

 

ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಉತ್ತರದ ಪ್ರತಿ

 

ಬಲವಂತದ ಮದುವೆ, ಕೆಲಸ ಮತ್ತು ಲೈಂಗಿಕ ದಾಸ್ಯದ ವಿಚಾರಕ್ಕೆ ಮಹಿಳೆಯರು ಮತ್ತು ಮಕ್ಕಳನ್ನು ಸಾಗಿಸಲಾಗುತ್ತಿದೆ. ಅದರಲ್ಲಿ 18 ವರ್ಷದ ಕೆಳಗಿನ ಹೆಣ್ಣು ಮಕ್ಕಳೇ ಹೆಚ್ಚು. ವಿಮಾನ ನಿಲ್ದಾಣದ ಮೂಲಕವೂ ಈ ಕಾರ್ಯ ಸಕ್ರಿಯವಾಗಿದೆ. ಇಲ್ಲೆಲ್ಲ ಬಿಗಿಪಹರೆ ಮತ್ತು ತಪಾಸಣೆ ಇದ್ದರೂ ಮಾನವ ಕಳ್ಳಸಾಗಾಣಿಕೆ ಪ್ರಕರಣಗಳು ಪೊಲೀಸರ ಅರಿವಿಗೇ ಬರುವುದಿಲ್ಲ. ಇನ್ನು ಗ್ರಾಮಾಂತರ ಪ್ರದೇಶದ ಕೆಲ ಶಾಲೆಗಳಿಂದ ಮಕ್ಕಳನ್ನು ಸಾಗಿಸಲಾಗುತ್ತಿದೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ. ಇಂತಹ ಪ್ರಕರಣಗಳಲ್ಲೂ ಪೊಲೀಸ್ ಇಲಾಖೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ.

 

2020ರಲ್ಲಿ 65 ಪ್ರಕರಣ ದಾಖಲಾಗಿದ್ದವು. ಈ ಪೈಕಿ 100 ಪುರುಷರು, 196 ಮಹಿಳೆಯರು, 21 ಅಪ್ರಾಪ್ತ ಬಾಲಕರು, 34 ಅಪ್ರಾಪ್ತ ಬಾಲಕಿಯರು ಸೇರಿ 345 ಮಂದಿಯನ್ನು ರಕ್ಷಿಸಲಾಗಿತ್ತು. ಇಂತಹ ಪ್ರಕರಣಗಳಲ್ಲಿ 147 ಜನರನ್ನು (111 ಪುರುಷರು, 36 ಮಹಿಳೆಯರು) ಬಂಧಿಸಲಾಗಿತ್ತು.

 

ಮಾನವ ಸಾಗಾಟ ಮಾರಾಟ ಎಲ್ಲೆಡೆ ಸರಪಳಿಯಾಗಿದೆ. ಬಡತನ, ಅಮಾಯಕ, ಅಸಯಾಕತೆ, ಮಕ್ಕಳನ್ನು ಈ ಜಾಲಕ್ಕೆ ಬಳಸುತ್ತಾರೆ. ಶೇ.95 ಮಂದಿ ವೇಶ್ಯಾವಾಟಿಕೆಗೆ ಬಳಕೆ, ಭಿಕ್ಷಾಟನೆ ಹೀಗೆ ಬೇರೆ ಬೇರೆ ಕಾರಣಕ್ಕೆ ಈ ಸಾಗಾಟ ನಡೆಯುತ್ತದೆ. ಅದರ ಕಡಿವಾಣಕ್ಕೆ ದೇಶದಲ್ಲಿ ಕಾನೂನು ಇದ್ದರೂ ಪ್ರಯೋಜನ ಇಲ್ಲವಾಗಿದೆ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತರು.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!