Thursday | May 14, 2026 |

36.25 ಲಕ್ಷ ಅನುದಾನ ದುರ್ಬಳಕೆ ಆರೋಪ; ಮಾಜಿ ಎಂಎಲ್ಸಿ ಶ್ರೀಕಾಂತ್‌ ಘೋಟ್ನೇಕರ್‌ ವಿಚಾರಣೆಗೆ ಅನುಮತಿ

ಬೆಂಗಳೂರು: ಹಣ ದುರ್ಬಳಕೆ ಆರೋಪಕ್ಕೆ ಗುರಿಯಾಗಿರುವ ವಿಧಾನಪರಿಷತ್‌ನ ಮಾಜಿ ಸದಸ್ಯ ಶ್ರೀಕಾಂತ್‌ ಎಲ್‌ ಘೋಟ್ನೇಕರ್‌ ಅವರ ವಿರುದ್ಧ ವಿಚಾರಣೆ ನಡೆಸಲು ರಾಜ್ಯಪಾಲರ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದಾರೆ.

 

ಸಮುದಾಯ ಭವನಕ್ಕಾಗಿ ರಾಜ್ಯಸರ್ಕಾರದಿಂದ ಮಂಜೂರಾಗಿದ್ದ ಅನುದಾನದ ಪೈಕಿ 36.25 ಲಕ್ಷ ರು. ದುರ್ಬಳಕೆ ಮಾಡಿಕೊಂಡಿದ್ದರ ಬಗ್ಗೆ ಲೋಕಾಯುಕ್ತ ತನಿಖೆಯು ಸಾಬೀತುಗೊಳಿಸಿತ್ತು. ಇದನ್ನಾಧರಿಸಿ ಕ್ರಮಕ್ಕೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿತ್ತು. ಇದೀಗ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ 2022ರ ಮಾರ್ಚ್‌ 29ರಂದು ಲೋಕಾಯುಕ್ತ ರಿಜಿಸ್ಟ್ರಾರ್‌ ಉಷಾರಾಣಿ ಅವರಿಗೆ ಗೌಪ್ಯ ಪತ್ರ ಬರೆದಿದ್ದಾರೆ. ಇದರ ಪ್ರತಿ ಮತ್ತು ಲೋಕಾಯುಕ್ತ ತನಿಖಾ ವರದಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರಾಜ್ಯಪಾಲರು ಅನುಮತಿ ನೀಡಿರುವ ಪತ್ರ

 

ಶ್ರೀಕಾಂತ್‌ ಎಲ್ ಘೋಟ್ನೇಕರ್‌ ಅವರು ಇತ್ತೀಚೆಗಷ್ಟೇ ವಿಧಾನಪರಿಷತ್‌ ಸದಸ್ಯ ಸ್ಥಾನದಿಂದ ನಿವೃತ್ತರಾಗಿದ್ದಾರೆ.

 

ಸಮುದಾಯ ಭವನಕ್ಕಾಗಿ ರಾಜ್ಯ ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಿಕೊಂಡು ಆ ನಂತರ ಹಳಿಯಾಳದಲ್ಲಿ ತಮ್ಮದೇ ಹೆಸರಿನಲ್ಲಿರುವ ಎಸ್‌ ಎಲ್‌ ಘೋಟ್ನೇಕರ್‌ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣಕ್ಕೆ ಬಳಸಿಕೊಂಡಿದ್ದರು ಎಂಬ ಆರೋಪ ಕುರಿತು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ನ ನಾಗೇಂದ್ರ ಜಿವೋಜಿ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

 

ಈ ದೂರನ್ನಾಧರಿಸಿ ತನಿಖೆ ನಡೆಸಿದ್ದ ಲೋಕಾಯುಕ್ತ ಸಂಸ್ಥೆಯು ದೂರಿನಲ್ಲಿದ್ದ ಅಂಶಗಳನ್ನು ಸಾಬೀತುಗೊಳಿಸಿತ್ತು. ಈ ಸಂಬಂಧ ಲೋಕಾಯುಕ್ತಕ್ಕೆ 2021ರ ಡಿಸೆಂಬರ್‌ 6ರಂದು ವರದಿಯನ್ನು ರಾಜ್ಯಪಾಲರಿಗೆ ಸಲ್ಲಿಸಿತ್ತು. ವರದಿ ಸಲ್ಲಿಸಿದಾಗ ಶ್ರೀಕಾಂತ್‌ ಎಲ್ ಘೋಟ್ನೇಕರ್‌ ಅವರು ವಿಧಾನಪರಿಷತ್‌ ಸದಸ್ಯರಾಗಿದ್ದರು ಎಂಬುದು ತಿಳಿದು ಬಂದಿದೆ.

 

ಈ ಕುರಿತು ಲೋಕಾಯುಕ್ತ ಸಂಸ್ಥೆಯ ಎಸ್‌ಪಿ 2021ರ ಜೂನ್‌ 14ರಂದು ತನಿಖಾ ವರದಿ ಸಲ್ಲಿಸಿದ್ದರು. ಜತೆಗೆ ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ಕೋಶವೂ ವರದಿ ನೀಡಿತ್ತು. ಇದನ್ನಾಧರಿಸಿ ಹಣ ದುರ್ಬಳಕೆ ಆರೋಪದಡಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1)ಎ ನೊಂದಿಗೆ ಐಪಿಸಿ ಸೆಕ್ಷನ್ 120 ಬಿ, 403, 406 ಅನ್ವಯ ಘೋಟ್ನೆಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಶೇ. 10 ರಷ್ಟು ಬಡ್ಡಿಯೊಂದಿಗೆ 5 ಲಕ್ಷ ರೂ. ವಸೂಲಿ ಮಾಡಬೇಕೆಂದು ಹಿಂದಿನ ಲೋಕಾಯುಕ್ತ ವಿಶ್ವನಾಥ್‌ ಶೆಟ್ಟಿ ಅವರು ಶಿಫಾರಸು ಮಾಡಿದ್ದರು.

 

ಆದರೆ ಶ್ರೀಕಾಂತ್‌ ಎಲ್‌ ಘೋಟ್ನೇಕರ್‌ ಅವರು ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗಳೆದಿದ್ದರು. ಈ ಸಂಬಂಧ 2021ರ ಅಕ್ಟೋಬರ್‌ 29ರಂದು ಹೇಳಿಕೆಯನ್ನೂ ನೀಡಿದ್ದರಲ್ಲದೆ ದೂರನ್ನು ವಜಾಗೊಳಿಸಬೇಕು ಎಂದು ಕೋರಿದ್ದರು.

 

ಪ್ರಸ್ತುತ ಶಾಲೆ ನಡೆಸುತ್ತಿರುವ ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ರಾಯಣ್ಣ ಸೋಮನಿಂಗ ಅವರಿಂದಲೂ ವಾರ್ಷಿಕ ಶೇ. 10 ರಷ್ಟು ಬಡ್ಡಿಯೊಂದಿಗೆ ರೂ. 36.25 ಲಕ್ಷ ಹಣ ವಸೂಲಿ ಮಾಡಬೇಕೆಂದು ಲೋಕಾಯುಕ್ತರು ಶಿಫಾರಸು ಮಾಡಿದ್ದರು.

 

ಹಳಿಯಾಳದಲ್ಲಿ ಕ್ಷತ್ರಿಯ ಮರಾಠ ಸಮುದಾಯದ ಸಮುದಾಯ ಭವನ ನಿರ್ಮಾಣಕ್ಕೆ ಹಣವನ್ನು ಬಿಡುಗಡೆ ಮಾಡಿಸಿಕೊಂಡಿದ್ದ ಘೋಟ್ನೆಕರ್ ಅವರು ಅದನ್ನು ತಮ್ಮ ಹೆಸರಿನಲ್ಲಿರುವ ಶಾಲೆಯ ಕಟ್ಟಡದ ಮೊದಲ ಮಹಡಿ ನಿರ್ಮಾಣಕ್ಕೆ ಬಳಸಿಕೊಂಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

 

 

ಶ್ರೀ ಛತ್ರಪತಿ ಶಿವಾಜಿ ಎಜುಕೇಶನ್ ಟ್ರಸ್ಟ್ ಸೇರಿದಂತೆ ಸಂಸ್ಥೆಗೆ ಹಾಗೂ ಘೋಟ್ನೇಕರ ಮತ್ತು ರಾಯಣ್ಣ ಸಂಬಂಧಿತ ಸಂಸ್ಥೆಗಳಿಗೆ ಐದು ವರ್ಷಗಳ ಅವಧಿಗೆ ಯಾವುದೇ ಉದ್ದೇಶಕ್ಕೆ ಅನುದಾನ ಬಿಡುಗಡೆ ಮಾಡದಂತೆ ಲೋಕಾಯುಕ್ತ ಸಂಸ್ಥೆಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

 

ಪ್ರಸ್ತುತ ಬೀದರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಗಿನ ಕಾರವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಜಿಲ್ಲಾಧಿಕಾರಿ, ಬಸವರಾಜ ಮಹಾದೇವ ಬಡಿಗೇರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಲೋಕಾಯುಕ್ತ ಸೂಚಿಸಿದೆ.

Hot this week

ದ ಪಾಲಿಸಿ ಫ್ರಂಟ್ ಪಾಲುದಾರನ ಬಂಡವಾಳ ಬಯಲು ಮಾಡಿದ ಕೆಎಸ್‌ಎಂಸಿಎ; ಹಕ್ಕುಬಾಧ್ಯತಾ ಸಮಿತಿ ನಡವಳಿ ಬಹಿರಂಗ

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ...

ಕೆ ಕೆ ಗೆಸ್ಟ್‌ ಹೌಸ್‌ನಲ್ಲಿರುವ ಡಿಸಿಎಂ ವಸತಿ ಗೃಹಕ್ಕೆ ಪೀಠೋಪಕರಣ, ನವೀಕರಣ, ದುರಸ್ತಿ; 33 ಲಕ್ಷ ವೆಚ್ಚಕ್ಕೆ 4 ಜಿ ವಿನಾಯಿತಿ, ದುಂದುವೆಚ್ಚ?

ಬೆಂಗಳೂರು;  ಕಾಂಗ್ರೆಸ್‌ ಸರ್ಕಾರವು ಸಹ ಆರ್ಥಿಕ ಸಂಕಷ್ಟದಲ್ಲಿ  ಮುಳುಗೇಳುತ್ತಿದ್ದರೂ ಮುಖ್ಯಮಂತ್ರಿ, ಉಪ...

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...
Please Scan to make Your Contribution

Topics

ದ ಪಾಲಿಸಿ ಫ್ರಂಟ್ ಪಾಲುದಾರನ ಬಂಡವಾಳ ಬಯಲು ಮಾಡಿದ ಕೆಎಸ್‌ಎಂಸಿಎ; ಹಕ್ಕುಬಾಧ್ಯತಾ ಸಮಿತಿ ನಡವಳಿ ಬಹಿರಂಗ

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ...

ಕೆ ಕೆ ಗೆಸ್ಟ್‌ ಹೌಸ್‌ನಲ್ಲಿರುವ ಡಿಸಿಎಂ ವಸತಿ ಗೃಹಕ್ಕೆ ಪೀಠೋಪಕರಣ, ನವೀಕರಣ, ದುರಸ್ತಿ; 33 ಲಕ್ಷ ವೆಚ್ಚಕ್ಕೆ 4 ಜಿ ವಿನಾಯಿತಿ, ದುಂದುವೆಚ್ಚ?

ಬೆಂಗಳೂರು;  ಕಾಂಗ್ರೆಸ್‌ ಸರ್ಕಾರವು ಸಹ ಆರ್ಥಿಕ ಸಂಕಷ್ಟದಲ್ಲಿ  ಮುಳುಗೇಳುತ್ತಿದ್ದರೂ ಮುಖ್ಯಮಂತ್ರಿ, ಉಪ...

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

Related Articles

Popular Categories

error: Content is protected !!