Friday | September 18, 2026 |

36.25 ಲಕ್ಷ ಅನುದಾನ ದುರ್ಬಳಕೆ ಆರೋಪ; ಮಾಜಿ ಎಂಎಲ್ಸಿ ಶ್ರೀಕಾಂತ್‌ ಘೋಟ್ನೇಕರ್‌ ವಿಚಾರಣೆಗೆ ಅನುಮತಿ

ಬೆಂಗಳೂರು: ಹಣ ದುರ್ಬಳಕೆ ಆರೋಪಕ್ಕೆ ಗುರಿಯಾಗಿರುವ ವಿಧಾನಪರಿಷತ್‌ನ ಮಾಜಿ ಸದಸ್ಯ ಶ್ರೀಕಾಂತ್‌ ಎಲ್‌ ಘೋಟ್ನೇಕರ್‌ ಅವರ ವಿರುದ್ಧ ವಿಚಾರಣೆ ನಡೆಸಲು ರಾಜ್ಯಪಾಲರ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದಾರೆ.

 

ಸಮುದಾಯ ಭವನಕ್ಕಾಗಿ ರಾಜ್ಯಸರ್ಕಾರದಿಂದ ಮಂಜೂರಾಗಿದ್ದ ಅನುದಾನದ ಪೈಕಿ 36.25 ಲಕ್ಷ ರು. ದುರ್ಬಳಕೆ ಮಾಡಿಕೊಂಡಿದ್ದರ ಬಗ್ಗೆ ಲೋಕಾಯುಕ್ತ ತನಿಖೆಯು ಸಾಬೀತುಗೊಳಿಸಿತ್ತು. ಇದನ್ನಾಧರಿಸಿ ಕ್ರಮಕ್ಕೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿತ್ತು. ಇದೀಗ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ 2022ರ ಮಾರ್ಚ್‌ 29ರಂದು ಲೋಕಾಯುಕ್ತ ರಿಜಿಸ್ಟ್ರಾರ್‌ ಉಷಾರಾಣಿ ಅವರಿಗೆ ಗೌಪ್ಯ ಪತ್ರ ಬರೆದಿದ್ದಾರೆ. ಇದರ ಪ್ರತಿ ಮತ್ತು ಲೋಕಾಯುಕ್ತ ತನಿಖಾ ವರದಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರಾಜ್ಯಪಾಲರು ಅನುಮತಿ ನೀಡಿರುವ ಪತ್ರ

 

ಶ್ರೀಕಾಂತ್‌ ಎಲ್ ಘೋಟ್ನೇಕರ್‌ ಅವರು ಇತ್ತೀಚೆಗಷ್ಟೇ ವಿಧಾನಪರಿಷತ್‌ ಸದಸ್ಯ ಸ್ಥಾನದಿಂದ ನಿವೃತ್ತರಾಗಿದ್ದಾರೆ.

 

ಸಮುದಾಯ ಭವನಕ್ಕಾಗಿ ರಾಜ್ಯ ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಿಕೊಂಡು ಆ ನಂತರ ಹಳಿಯಾಳದಲ್ಲಿ ತಮ್ಮದೇ ಹೆಸರಿನಲ್ಲಿರುವ ಎಸ್‌ ಎಲ್‌ ಘೋಟ್ನೇಕರ್‌ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣಕ್ಕೆ ಬಳಸಿಕೊಂಡಿದ್ದರು ಎಂಬ ಆರೋಪ ಕುರಿತು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ನ ನಾಗೇಂದ್ರ ಜಿವೋಜಿ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

 

ಈ ದೂರನ್ನಾಧರಿಸಿ ತನಿಖೆ ನಡೆಸಿದ್ದ ಲೋಕಾಯುಕ್ತ ಸಂಸ್ಥೆಯು ದೂರಿನಲ್ಲಿದ್ದ ಅಂಶಗಳನ್ನು ಸಾಬೀತುಗೊಳಿಸಿತ್ತು. ಈ ಸಂಬಂಧ ಲೋಕಾಯುಕ್ತಕ್ಕೆ 2021ರ ಡಿಸೆಂಬರ್‌ 6ರಂದು ವರದಿಯನ್ನು ರಾಜ್ಯಪಾಲರಿಗೆ ಸಲ್ಲಿಸಿತ್ತು. ವರದಿ ಸಲ್ಲಿಸಿದಾಗ ಶ್ರೀಕಾಂತ್‌ ಎಲ್ ಘೋಟ್ನೇಕರ್‌ ಅವರು ವಿಧಾನಪರಿಷತ್‌ ಸದಸ್ಯರಾಗಿದ್ದರು ಎಂಬುದು ತಿಳಿದು ಬಂದಿದೆ.

 

ಈ ಕುರಿತು ಲೋಕಾಯುಕ್ತ ಸಂಸ್ಥೆಯ ಎಸ್‌ಪಿ 2021ರ ಜೂನ್‌ 14ರಂದು ತನಿಖಾ ವರದಿ ಸಲ್ಲಿಸಿದ್ದರು. ಜತೆಗೆ ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ಕೋಶವೂ ವರದಿ ನೀಡಿತ್ತು. ಇದನ್ನಾಧರಿಸಿ ಹಣ ದುರ್ಬಳಕೆ ಆರೋಪದಡಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1)ಎ ನೊಂದಿಗೆ ಐಪಿಸಿ ಸೆಕ್ಷನ್ 120 ಬಿ, 403, 406 ಅನ್ವಯ ಘೋಟ್ನೆಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಶೇ. 10 ರಷ್ಟು ಬಡ್ಡಿಯೊಂದಿಗೆ 5 ಲಕ್ಷ ರೂ. ವಸೂಲಿ ಮಾಡಬೇಕೆಂದು ಹಿಂದಿನ ಲೋಕಾಯುಕ್ತ ವಿಶ್ವನಾಥ್‌ ಶೆಟ್ಟಿ ಅವರು ಶಿಫಾರಸು ಮಾಡಿದ್ದರು.

 

ಆದರೆ ಶ್ರೀಕಾಂತ್‌ ಎಲ್‌ ಘೋಟ್ನೇಕರ್‌ ಅವರು ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗಳೆದಿದ್ದರು. ಈ ಸಂಬಂಧ 2021ರ ಅಕ್ಟೋಬರ್‌ 29ರಂದು ಹೇಳಿಕೆಯನ್ನೂ ನೀಡಿದ್ದರಲ್ಲದೆ ದೂರನ್ನು ವಜಾಗೊಳಿಸಬೇಕು ಎಂದು ಕೋರಿದ್ದರು.

 

ಪ್ರಸ್ತುತ ಶಾಲೆ ನಡೆಸುತ್ತಿರುವ ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ರಾಯಣ್ಣ ಸೋಮನಿಂಗ ಅವರಿಂದಲೂ ವಾರ್ಷಿಕ ಶೇ. 10 ರಷ್ಟು ಬಡ್ಡಿಯೊಂದಿಗೆ ರೂ. 36.25 ಲಕ್ಷ ಹಣ ವಸೂಲಿ ಮಾಡಬೇಕೆಂದು ಲೋಕಾಯುಕ್ತರು ಶಿಫಾರಸು ಮಾಡಿದ್ದರು.

 

ಹಳಿಯಾಳದಲ್ಲಿ ಕ್ಷತ್ರಿಯ ಮರಾಠ ಸಮುದಾಯದ ಸಮುದಾಯ ಭವನ ನಿರ್ಮಾಣಕ್ಕೆ ಹಣವನ್ನು ಬಿಡುಗಡೆ ಮಾಡಿಸಿಕೊಂಡಿದ್ದ ಘೋಟ್ನೆಕರ್ ಅವರು ಅದನ್ನು ತಮ್ಮ ಹೆಸರಿನಲ್ಲಿರುವ ಶಾಲೆಯ ಕಟ್ಟಡದ ಮೊದಲ ಮಹಡಿ ನಿರ್ಮಾಣಕ್ಕೆ ಬಳಸಿಕೊಂಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

 

 

ಶ್ರೀ ಛತ್ರಪತಿ ಶಿವಾಜಿ ಎಜುಕೇಶನ್ ಟ್ರಸ್ಟ್ ಸೇರಿದಂತೆ ಸಂಸ್ಥೆಗೆ ಹಾಗೂ ಘೋಟ್ನೇಕರ ಮತ್ತು ರಾಯಣ್ಣ ಸಂಬಂಧಿತ ಸಂಸ್ಥೆಗಳಿಗೆ ಐದು ವರ್ಷಗಳ ಅವಧಿಗೆ ಯಾವುದೇ ಉದ್ದೇಶಕ್ಕೆ ಅನುದಾನ ಬಿಡುಗಡೆ ಮಾಡದಂತೆ ಲೋಕಾಯುಕ್ತ ಸಂಸ್ಥೆಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

 

ಪ್ರಸ್ತುತ ಬೀದರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಗಿನ ಕಾರವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಜಿಲ್ಲಾಧಿಕಾರಿ, ಬಸವರಾಜ ಮಹಾದೇವ ಬಡಿಗೇರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಲೋಕಾಯುಕ್ತ ಸೂಚಿಸಿದೆ.

Hot this week

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...
Please Scan to make Your Contribution

Topics

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

Related Articles

Popular Categories

error: Content is protected !!