Sunday | May 10, 2026 |

ನೀರಾವರಿ ನಿಗಮಗಳ ಗುತ್ತಿಗೆದಾರರ ಅಲೆದಾಟ; 2 ವರ್ಷಗಳಾದರೂ ಪಾವತಿಯಾಗದ 12,845 ಕೋಟಿ

ಬೆಂಗಳೂರು; ಕೃಷ್ಣಾಭಾಗ್ಯ ಜಲನಿಗಮ, ಕರ್ನಾಟಕ ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮದಲ್ಲಿ ಅನುಷ್ಠಾನಗೊಂಡಿರುವ ಸಿವಿಲ್ ಸೇರಿದಂತೆ ವಿವಿಧ ರೀತಿಯ ಕಾಮಗಾರಿಗಳನ್ನು ನಿರ್ವಹಿಸಿರುವ ಗುತ್ತಿಗೆದಾರರಿಗೆ ಕಳೆದ 8 ವರ್ಷಗಳಿಂದಲೂ 22, 225.85 ಕೋಟಿ ರು. ಬಾಕಿ ಪಾವತಿಯಾಗಿಲ್ಲ. ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೇರಿದ 2 ವರ್ಷಗಳಲ್ಲಿ 12,845.91 ಕೋಟಿ ರು.ಗಳನ್ನು ಗುತ್ತಿಗೆದಾರರಿಗೆ ಪಾವತಿಸಲು ಬಾಕಿ ಉಳಿಸಿಕೊಂಡಿದೆ.

 

ಕಾಮಗಾರಿ ನಡೆಸಿ ಬಾಕಿ ಹಣಕ್ಕಾಗಿ ಅಲೆದಾಡಿ ಶೇ.40ರಷ್ಟು ಕಮಿಷನ್‌ ನೀಡಲಾರದೇ ಸಂತೋಷ್‌ ಪಾಟೀಲ್‌ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಜಲಸಂಪನ್ಮೂಲ ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಗೋವಿಂದ ಕಾರಜೋಳ ಅವರ ಹೆಸರನ್ನೂ ಉಲ್ಲೇಖಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದರು. ಇದರ ಬೆನ್ನಲ್ಲೇ ಜಲ ಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿನ ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ ವಿವರಗಳೂ ಮುನ್ನೆಲೆಗೆ ಬಂದಿವೆ.

 

ಜಲ ಸಂಪನ್ಮೂಲ ಇಲಾಖೆ ವ್ಯಾಪ್ತಿಯ ಕರ್ನಾಟಕ ನೀರಾವರಿ ನಿಗಮ, ಕೃಷ್ಣಭಾಗ್ಯ ಜಲನಿಗಮ, ಕಾವೇರಿ ಜಲ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮ ವ್ಯಾಪ್ತಿಯಲ್ಲಿ ಗುತ್ತಿಗೆದಾರರರಿಗೆ ಬಾಕಿ ಉಳಿಸಿಕೊಂಡಿರುವ ಮೊತ್ತದ ವಿವರಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

2013-14ರಿಂದ 2020-21ನೇ ಸಾಲಿನವರೆಗೆ ಕಾವೇರಿ ನೀರಾವರಿ ನಿಗಮ ಹೊರತುಪಡಿಸಿ ಉಳಿದ ನಿಗಮಗಳಿಗೆ 1,02, 417.2 ಕೋಟಿ ರು. ಅನುದಾನ ಬಿಡುಗಡೆಯಾಗಿದೆ. ಈ ಪೈಕಿ 99,955.62 ಕೋಟಿ ರು. ವೆಚ್ಚ ಮಾಡಿ 2,461.58 ಕೋಟಿ ರು. ಉಳಿಕೆ ಮಾಡಿದೆ. ಇದೇ ಅವಧಿಯಲ್ಲಿ ಗುತ್ತಿಗೆದಾರರಿಗೆ 22,225.85 ಕೋಟಿ ರು. ಬಾಕಿ ಉಳಿಸಿಕೊಂಡಿರುವ ಸರ್ಕಾರವು ಗುತ್ತಿಗೆದಾರರನ್ನು ಕಳೆದ 8 ವರ್ಷಗಳಿಂದಲೂ ಅಲೆದಾಡಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

 

2013-14ರಲ್ಲಿ 719.48 ಕೋಟಿ ರು., 2014-15ರಲ್ಲಿ 796.48 ಕೋಟಿ ರು., 2015-16ರಲ್ಲಿ 1,231.98 ಕೋಟಿ ರು., 2016-17ರಲ್ಲಿ 887.01 ಕೋಟಿ ರು., 2017-18ರಲ್ಲಿ 1,955.34 ಕೋಟಿ ರು., 2018-19ರಲ್ಲಿ 3,789.5 ಕೋಟಿ ರು., 2019-20ರಲ್ಲಿ 5,753.69 ಕೋಟಿ ರು., 2020-21ರಲ್ಲಿ 7,092. 22 ಕೋಟಿ ರು. ಗುತ್ತಿಗೆದಾರರಿಗೆ ಪಾವತಿಸಿಸಲು ಬಾಕಿ ಉಳಿಸಿಕೊಂಡಿರುವುದು ತಿಳಿದು ಬಂದಿದೆ.

 

ಕೃಷ್ಣ ಭಾಗ್ಯ ಜಲನಿಗಮದಲ್ಲಿ ಕಳೆದ 8 ವರ್ಷಗಳಿಂದ 1,993.44 ಕೋಟಿ ರು.ಗಳನ್ನು ಗುತ್ತಿಗೆದಾರರಿಗೆ ಬಾಕಿ ಪಾವತಿಸದೇ ಬಾಕಿ ಉಳಿದಿದೆ. ಅದೇ ರೀತಿ ಕರ್ನಾಟಕ ನೀರಾವರಿ ನಿಗಮದಲ್ಲಿ 12,110.22 ಕೋಟಿ ರು., ಕಾವೇರಿ ನೀರಾವರಿ ನಿಗಮದಲ್ಲಿ 3,745.5 ಕೋಟಿ ರು., ವಿಶ್ವೇಶ್ವರಯ್ಯ ಜಲನಿಗಮದಲ್ಲಿ 4,376.99 ಕೋಟಿ ರು. ಗುತ್ತಿಗೆದಾರರಿಗೆ ಪಾವತಿಸಲು ಬಾಕಿ ಇದೆ ಎಂದು ಗೊತ್ತಾಗಿದೆ.

 

‘ಜಲ ಸಂಪನ್ಮೂಲ ಇಲಾಖೆ ವ್ಯಾಪ್ತಿಯ ನೀರಾವರಿ ನಿಗಮಗಳಲ್ಲಿ ಬಾಕಿ ಇರುವ ಮೊತ್ತವನ್ನು ಪಡೆಬೇಕೆಂದರೆ ಜಲ ಸಂಪನ್ಮೂಲ ಸಚಿವರ ಪುತ್ರರೊಬ್ಬರು ಕಮಿಷನ್‌ಗೆ ಬೇಡಿಕೆ ಇರಿಸುತ್ತಾರೆ. ಇದನ್ನು ನೀಡಿದರೆ ಕಡತವನ್ನು ವಿಲೇವಾರಿ ಮಾಡಿ ಬಾಕಿ ಪಾವತಿಗೆ ಅನುಮೋದಿಸಿ ಅದನ್ನು ಆರ್ಥಿಕ ಇಲಾಖೆಗೆ ರವಾನಿಸುತ್ತಾರೆ. ಇಲ್ಲವಾದರೆ ಜಲ ಸಂಪನ್ಮೂಲ ಇಲಾಖೆಯ ಮೆಟ್ಟಿಲುಗಳನ್ನು ಹತ್ತಿಳಿದರೂ ನಯಾಪೈಸೆಯೂ ಸಿಗುವುದಿಲ್ಲ. ಹೀಗಾದರೆ ನಾವೂ ಸಂತೋಷ್‌ ಪಾಟೀಲ್‌ ಅವರ ಹಾದಿಯನ್ನೇ ಹಿಡಿಯಬೇಕಾದೀತು,’ ಎಂದು ಹೆಸರು ಹೇಳಲಿಚ್ಛಿಸದ ಗುತ್ತಿಗೆದಾರರೊಬ್ಬರು ‘ದಿ ಫೈಲ್‌’ಗೆ ಪ್ರತಿಕ್ರಿಯೆ ನೀಡಿದರು.

 

ಸಮ್ಮಿಶ್ರ ಸರ್ಕಾರದ (2018-19) ಅವಧಿಯಿಂದಲೂ ಗುತ್ತಿಗೆದಾರರಿಗೆ ಪಾವತಿಸುವ ಬಾಕಿ ಮೊತ್ತ ಬೆಟ್ಟದಂತೆ ಏರುತ್ತಿದೆ. ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಗುತ್ತಿಗೆದಾರರಿಗೆ ಬಾಕಿ ಇದ್ದ ಮೊತ್ತ 4,500 ಕೋಟಿ ರು.ನಿಂದ 5,000 ಕೋಟಿ ರುವರೆಗಿತ್ತು. 2020,2021 ಮತ್ತು 2022ರವರೆಗೆ ನಿಯಮಿತವಾಗಿ ಗುತ್ತಿಗೆದಾರರಿಗೆ ಬಾಕಿ ಪಾವತಿಯಾಗದ ಕಾರಣ ಬಾಕಿ ಮೊತ್ತ ಏರುತ್ತಿದೆ ಎನ್ನುತ್ತಾರೆ ನಿಗಮದ ಹಿರಿಯ ಅಧಿಕಾರಿಯೊಬ್ಬರು.

 

ಜಲ ಸಂಪನ್ಮೂಲ ಇಲಾಖೆಯ ವಿಶೇಷ ಅಭಿವೃದ್ಧಿ ವಾಹಕಗಳಾಗಿರುವ ಕೃಷ್ಣಾ ಭಾಗ್ಯ ಜಲನಿಗಮ, ಕರ್ನಾಟಕ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮ ಹಾಗೂ ಕಾವೇರಿ ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರಿಗೆ ಪ್ರಸ್ತುತ ಸಾಲಿನಲ್ಲಿ 10,967.47 ಕೋಟಿ ರು. ಪಾವತಿ ಮಾಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಅವರು ವಿಧಾನ ಪರಿಷತ್‌ನಲ್ಲಿ ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು.

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!