Sunday | March 29, 2026 |

ಕಿಕ್‌ಬ್ಯಾಕ್‌ ಆರೋಪಿ ಅಧಿಕಾರಿ ಪರ ಅಖಾಡಕ್ಕಿಳಿದ ಮಾಜಿ ಪ್ರಧಾನಿ; ಅಧಿಕಾರಾವಧಿ 2 ವರ್ಷ ವಿಸ್ತರಣೆಗೆ ಪತ್ರ

Support THE-FILE

spot_img

ಬೆಂಗಳೂರು; ಹೇಮಾವತಿ ಮತ್ತು ಗೊರೂರು ವಲಯದಲ್ಲಿ ಅನುಷ್ಠಾನಗೊಂಡಿರುವ ಭಾರೀ ನೀರಾವರಿ ಯೋಜನೆಗಳ ಟೆಂಡರ್‌ಗಳಲ್ಲಿ ದೊಡ್ಡ ಮೊತ್ತದ ಕಿಕ್‌ ಬ್ಯಾಕ್ ಪಡೆದು ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಇಂಜಿನಿಯರ್‌ ಕೆ ಜೈಪ್ರಕಾಶ್‌ ಅವರ ಪರ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರು ಅಖಾಡಕ್ಕೆ ಇಳಿದಿದ್ದಾರೆ.

 

ಭಾರೀ ನೀರಾವರಿ ಯೋಜನೆಗಳ ಟೆಂಡರ್‌ ಮತ್ತು ಎಲ್‌ಒಸಿ ಬಿಡುಗಡೆಯಲ್ಲಿ ದೊಡ್ಡಮೊತ್ತದ ಕಿಕ್‌ ಬ್ಯಾಕ್‌ ಪಡೆದಿದ್ದಾರೆ ಎಂಬ ಆರೋಪ ಕುರಿತು ತನಿಖೆ ನಡೆಸಬೇಕು ಎಂದು ಎಸಿಬಿ ಎಡಿಜಿಪಿ ಅವರು ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು ಕೆ ಜೈಪ್ರಕಾಶ್‌ ಅವರನ್ನು ನಿವೃತ್ತಿ ನಂತರವೂ 2 ವರ್ಷದ ಅವಧಿಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಲ್ಲಿಯೇ ಪರಿಗಣಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 2022ರ ಮೇ 16ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಇದೆ ಪತ್ರದ ಮೇಲೆ ಕಡತ ಮಂಡಿಸಿ ಎಂದು ಡಿಪಿಎಆರ್‌ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಕ್ಕಣೆ ಹಾಕಿರುವುದು ಪತ್ರದಿಂದ ಗೊತ್ತಾಗಿದೆ.

 

ಪತ್ರದಲ್ಲೇನಿದೆ?

 

ಕೆ ಜೈಪ್ರಕಾಶ್‌ ಅವರು 2022ರ ಮೇ 31ರಂದು ತಮ್ಮ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. 2013 ಸೆಪ್ಟಂಬರ್‌ನಿಂದ 2015 ಸೆಪ್ಟಂಬರ್‌ವರೆಗೆ ಎರಡು ವರ್ಷಗಳ ಅವಧಿಗೆ ಪ್ರಥಮ ಬಾರಿಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ಇದೀಗ ಎರಡನೇ ಬಾರಿಗೆ ಇದೇ ಹುದ್ದೆಯಲ್ಲಿ ಆಗಸ್ಟ್‌ 2019ರಿಂದ ಇಲ್ಲಿಯವರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು 18 ವರ್ಷಗಳಿಗೂ ಮಿಗಿಲಾದ ಸೇವೆಯನ್ನು ಜಲಸಂಪನ್ಮೂಲ ಇಲಾಖೆಯಲ್ಲಿಯೇ ನಿರ್ವಹಿಸಿರುವುದನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಮಹತ್ತರ ಯೋಜನೆಗಳಾದ ಮೇಕೆದಾಟು, ಕಾವೇರಿ ನದಿಕೊಳ್ಳದ ಹೆಚ್ಚುವರಿ ನೀರಿನ ಬಳಕಗೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ವಿಷಯಗಳನ್ನು ನಿರ್ವಹಿಸುವಲ್ಲಿ ಇರುವ ಅವರ ಪರಿಣಿತಿ, ಸಾಮರ್ಥ್ಯ ಮತ್ತು ಸೇವೆಗಳನ್ನು ಪರಿಗಣಿಸಿ ಇವರ ಸೇವೆಯನ್ನು ನಿವೃತ್ತಿ ನಂತರವೂ ಕರ್ನಾಟಕ ನಾಗರಿಕ ಸೇವಾ ನಿಯಮಗಳು ಪ್ಯಾರಾ 95 (2)ರ ಅನ್ವಯ 2 ವರ್ಷದ ಅವಧಿಗೆ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಲ್ಲಿಯೇ ಮುಂದುವರೆಸಲು ಪರಿಗಣಿಸುವುದು ಸೂಕ್ತ ಎಂದು ದೇವೇಗೌಡರು ಪತ್ರದಲ್ಲಿ ವಿವರಿಸಿದ್ದಾರೆ.

 

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು ಬರೆದಿರುವ ಪತ್ರದ ಪ್ರತಿ

 

ಕೆ ಜೈಪ್ರಕಾಶ್‌ ವಿರುದ್ಧ ದೂರಿನ ಅಂಶಗಳೇನು?

 

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ ಜಯಪ್ರಕಾಶ್‌ ಮತ್ತು ಪ್ರಧಾನ ವ್ಯವಸ್ಥಾಪಕ ಗಂಗಾಧರ್‌ ಅವರ ವಿರುದ್ಧ ಜವರೇಗೌಡ ಎಂಬುವರು ಎಸಿಬಿಗೆ ದೂರು ಸಲ್ಲಿಸಿದ್ದರು. ಭಾರೀ ನೀರಾವರಿ ಯೋಜನೆಗಳ ಟೆಂಡರ್‌ ಮತ್ತು ಎಲ್‌ಒಸಿ ಬಿಡುಗಡೆಯಲ್ಲಿ ದೊಡ್ಡಮೊತ್ತದ ಕಿಕ್‌ ಬ್ಯಾಕ್‌ ಪಡೆದಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದರು.

 

ಕೆ ಜೈಪ್ರಕಾಶ್‌ ಅವರು ತಮ್ಮ ಮಗನನ್ನು ಬಿಎಸ್‌ಆರ್‌ ಮತ್ತು ಸ್ಟಾರ್‌ ಬಿಲ್ಡರ್‌ ಕಂಪನಿಯಲ್ಲಿ ಪಾಲುದಾರರನ್ನಾಗಿ ಮಾಡಿ, ಹೇಮಾವತಿ, ಗೊರೂರು ವಲಯದಲ್ಲಿ ಎಲ್ಲಾ ಭಾರೀ ನೀರಾವರಿ ಯೋಜನೆಗಳ ಟೆಂಡರ್‌ನಲ್ಲಿ ಗೋಲ್‌ಮಾಲ್‌ ಮಾಡಿರುತ್ತಾರೆ ಎಂದು ಜವರೇಗೌಡ ಎಂಬುವರು ದೂರಿನಲ್ಲಿ ವಿವರಿಸಿದ್ದಾರೆ.
ಜೈಪ್ರಕಾಶ್‌ ಮತ್ತು ಪ್ರಧಾನ ವವ್ಯವಸ್ಥಾಪಕ ಬಿ ಕೆ ಗಂಗಾಧರ್‌ ಸೇರಿ ಈ ಎರಡೂ ಕಂಪನಿಗಳಿಗೆ ಆದ್ಯತೆ ಮೇಲೆ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಿರುತ್ತಾರೆ. ಮತ್ತು ಟೆಂಡರ್‌ ಪರಿಮಾಣಗಳನ್ನು ಮೀರಿ ಹೆಚ್ಚುವರಿಯಾಗಿ ಕೆಲಸ ನಿರ್ವಹಿಸಲಾಗಿದೆ ಎಂದು ಪರಿಗಣಿಸಿ ಈ ಎರಡೂ ಕಂಪನಿಗಳಿಗೆ ನೀಡಿ ಕಿಕ್‌ಬ್ಯಾಕ್‌ ಪಡೆದಿರುತ್ತಾರೆ. ಇವರ ಅಧಿಕಾರವಾಧಿಯಲ್ಲಿ ಟೆಂಡರ್‌ಗಳಲ್ಲಿ ನಡೆದಿರುವ ಅವ್ಯವಹಾರಗಳನ್ನು ಬಯಲಿಗೆಳೆದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಸಿಬಿಗೆ ದೂರಿದ್ದರು.

 

ಎಸಿಬಿ ಮಾಡಿದ್ದೇನು?

 

ಈ ದೂರು ಭ್ರಷ್ಟಾಚಾರ ನಿಗ್ರಹ ಕಾಯ್ದೆ ವ್ಯಾಪ್ತಿಗೆ ಒಳಪಡದ ಕಾರಣ ಜಲಸಂಪನ್ಮೂಲ ಇಲಾಖೆಯ ವಿಚಕ್ಷಣಾ ದಳದ ಮೂಲಕ ತನಿಖೆ ನಡೆಸಬೇಕು ಎಂದು ಎಸಿಬಿಯ ಎಡಿಜಿಪಿಗೆ ಎಸ್ಪಿ ಯತೀಶ್‌ಚಂದ್ರ ಅವರು 2021ರ ಆಗಸ್ಟ್‌ 16ರಂದು ಪತ್ರ ಬರೆದಿದ್ದರು.

 

ಈ ಅರ್ಜಿಯನ್ನು ಪರಿಶೀಲಿಸಿದ್ದ ಎಸಿಬಿಯು ‘ ಅರ್ಜಿಯಲ್ಲಿನ ವಿಷಯವು ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ವ್ಯಾಪ್ತಿಗೆ ಒಳಪಡದೇ ಇರುವುದರಿಂದ ಇಲಾಖೆಯ ಆಡಳಿತಾತ್ಮಕ ವಿಷಯವಾಗಿರುವುದರಿಂದ ದೂರು ಅರ್ಜಿಯಲ್ಲಿ ಜಾಗೃತ ಅಧಿಕಾರಿಗಳ ಪರಿಶೀಲನೆ ಸಲುವಾಗಿಜಲಸಂಪನ್ಮೂಲ ಇಲಾಖೆಗೆ ಕಳಿಸಿಕೊಡಬೇಕು ಎಂದು ಎಸಿಬಿ ಎಡಿಜಿಪಿ ಕಚೇರಿಗೆ ವರದಿ ಸಲ್ಲಿಸಿದ್ದರು ಎಂಬುದು ಪತ್ರದಿಂದ ತಿಳಿದು ಬಂದಿದೆ.

 

‘ಪೊಲೀಸ್‌ ಇನ್ಸ್‌ಪೆಕ್ಟರ್‌ ಸಲ್ಲಿಸಿರುವ ವರದಿಯಂತೆ ಎಸ್‌ ಎಂ ಜವರೇಗೌಡ ಅವರು ನೀಡಿರುವ ದೂರು ಅರ್ಜಿಯಲ್ಲಿನ ಆರೋಪಗಳ ಬಗ್ಗೆ ಜಲಸಂಪನ್ನೂಲ ಇಲಾಖೆಯ ಜಾಗೃತ ಅಧಿಕಾರಿಗಳಿಂದ ಪರಿಶೀಲನೆ ಕೈಗೊಳ್ಳಬೇಕು. ಇದನ್ನು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಕಳಿಸಿಕೊಡಬೇಕು,’ ಎಂದು ಎಸಿಬಿಯ ಎಸ್ಪಿ ಯತೀಶ್‌ ಚಂದ್ರ ಅವರು 2021ರ ಆಗಸ್ಟ್‌ 16ರಂದು ಎಸಿಬಿಯ ಎಡಿಜಿಪಿ ಅವರಿಗೆ ಪತ್ರ ಬರೆದಿದ್ದರು.

 

ಇದನ್ನಾಧರಿಸಿ ಎಡಿಜಿಪಿಯು ಸಹ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಈ ಪತ್ರ ಬರೆದು 9 ತಿಂಗಳು ಕಳೆದರೂ ಇಲಾಖೆಯು ಇದುವರೆಗೂ ಯಾವುದೇ ಕ್ರಮ ವಹಿಸಿಲ್ಲ. ಕೆ ಜೈಪ್ರಕಾಶ್‌ಕೆಲವೇ ತಿಂಗಳುಗಳಲ್ಲಿ ನಿವೃತ್ತಿಯಾಗುತ್ತಿದ್ದರೂ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ ನಡೆಯು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!