Saturday | April 11, 2026 |

ಪಿಎಸ್‌ಐ ಹಗರಣ; ನಿಗಮದ ಅಧ್ಯಕ್ಷ ರಾಘವೇಂದ್ರಶೆಟ್ಟಿ ಆಪ್ತ ಕಾರ್ಯದರ್ಶಿ ದಾಖಲೆ ಬಹಿರಂಗ

ಬೆಂಗಳೂರು; ಪಿಎಸ್‌ಐ ಹಗರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದಡಿಯಲ್ಲಿ ಸಿಐಡಿ ಪೊಲೀಸರ ವಶದಲ್ಲಿರುವ ಶ್ರೀಕಾಂತ ಚೌರಿ ಎಂಬಾತನಿಗೆ ಯಾವುದೇ ಹುದ್ದೆಯನ್ನೂ ನೀಡಿರಲಿಲ್ಲ ಎಂದು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಡಾ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಆಪ್ತ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ದಾಖಲೆ ಬಹಿರಂಗವಾಗಿದೆ.

 

ಬಾಗಲಕೋಟೆಯಲ್ಲಿ ಮೇ 14ರಂದು ಮದುವೆಯಾಗಿದ್ದ ಶ್ರೀಕಾಂತ ಚೌರಿಯು ಮದುವೆ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆಯಲ್ಲಿಯೇ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಈತ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ ಬೇಳೂರು ರಾಘವೇಂದ್ರ ಶೆಟ್ಟಿ ಅವರಿಗೆ ಕಳೆದ ಒಂದು ವರ್ಷದಿಂದಲೂ ಆಪ್ತ ಕಾರ್ಯದರ್ಶಿ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದರೂ ಇದನ್ನು ನಿರಾಕರಿಸಿದ್ದ ಅಧ್ಯಕ್ಷ ಶೆಟ್ಟಿ ಅವರು ಪಿಎ ಎಂದು ಕೆಲಸ ಮಾಡಿದ್ದಾನೆಯೇ ಹೊರತು ಅಪ್ತ ಕಾರ್ಯದರ್ಶಿ ಎಂಬ ಹುದ್ದೆಯನ್ನೇ ನೀಡಿಲ್ಲ ಎಂದು ದಾರಿತಪ್ಪಿಸಿದ್ದರು.

 

ಆದರೀಗ ‘ದಿ ಫೈಲ್‌’ಗೆ ಲಭ್ಯವಾಗಿರುವ ದಾಖಲೆ ಪ್ರಕಾರ ನಿಗಮದ ಅಧ್ಯಕ್ಷರ ಆಪ್ತ ಶಾಖೆಯಲ್ಲಿನ ಸಿಬ್ಬಂದಿ ವಿವರಗಳ ಪಟ್ಟಿಯಲ್ಲಿ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಎಂಬ ಹುದ್ದೆಯಲ್ಲಿ ಶ್ರೀಕಾಂತ ಚೌರಿಯ ಹೆಸರು ಇದೆ. ಇವರಲ್ಲದೆ ಪ್ರಸನ್ನ ಆರ್‌ (ಆಪ್ತ ಸಹಾಯಕ), ನಿರಂಜನಕುಮಾರ್‌ ಸಿಎಸ್‌ (ದಲಾಯತ್‌) ಹರೀಶ್‌ ಆರ್‌ (ವಾಹನ ಚಾಲಕ) ಅವರ ಹೆಸರೂ ಇದೇ ಪಟ್ಟಿಯಲ್ಲಿದೆ.

 

‘ನಮ್ಮ ಜತೆ ಮೂರರಿಂದ ನಾಲ್ಕು ತಿಂಗಳು ಪಿಎ ಅಂತ ಕೆಲಸ ಮಾಡಿದ್ದಾನೆ. ಆಪ್ತ ಕಾರ್ಯದರ್ಶಿ ಪೋಸ್ಟೇ ಕೊಟ್ಟೇ ಇಲ್ಲ. ಆತನ ಆಕ್ಟಿವಿಟಿ ನಮಗೆ ಸರಿ ಕಾಣಲಿಲ್ಲ. ಆತ ಹಣ ಪಡೆದು ಅಧಿಕಾರಿಗಳ ಟ್ರಾನ್ಸಫರ್‌ ಕೆಲಸ ಮಾಡ್ತಿದಾನೆ ಅಂತ ಎಂದು ಕೆಲವರು ಮಾಹಿತಿ ನಿಡಿದ್ದರು. ಎರಡು ತಿಂಗಳ ಹೀಂದೆ ಆತನನ್ನು ಕೆಲಸದಿಂದ ತೆಗೆದುಕಹಾಕಿದ್ದೇವೆ. ಪಿಎ ಆಗಿವಿಜಿಟಿಂಗ್‌ ಕಾರ್ಡ್‌ ಮಾಡಿಸಬಾರದು. ಆದರೆ ಆತ ವಿಜಿಟಿಂಗ್‌ ಕಾರ್ಡ್‌ ಕೂಡ ಮಾಡಿಸಿದ್ದ,’ ಎಂದು ಡಾ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು.

 

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತೊದಲಾಬಾಗಿ ಗ್ರಾಮದಲ್ಲಿ ಚೌರಿಯನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಧಾರವಾಡದ ಇನ್ಸ್ಪೈರ್ ಇಂಡಿಯಾದ ಐಎಎಸ್ ಮತ್ತು ಕೆಎಎಸ್ ಕೋಚಿಂಗ್ ಸೆಂಟರ್ ಮಾಜಿ ನಿರ್ದೇಶಕನಾಗಿದ್ದ ಎನ್ನಲಾಗಿದೆ.

Hot this week

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

Topics

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

Related Articles

Popular Categories

error: Content is protected !!