Saturday | August 22, 2026 |

ಪಿಎಸ್‌ಐ ಹಗರಣ; ನಿಗಮದ ಅಧ್ಯಕ್ಷ ರಾಘವೇಂದ್ರಶೆಟ್ಟಿ ಆಪ್ತ ಕಾರ್ಯದರ್ಶಿ ದಾಖಲೆ ಬಹಿರಂಗ

ಬೆಂಗಳೂರು; ಪಿಎಸ್‌ಐ ಹಗರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದಡಿಯಲ್ಲಿ ಸಿಐಡಿ ಪೊಲೀಸರ ವಶದಲ್ಲಿರುವ ಶ್ರೀಕಾಂತ ಚೌರಿ ಎಂಬಾತನಿಗೆ ಯಾವುದೇ ಹುದ್ದೆಯನ್ನೂ ನೀಡಿರಲಿಲ್ಲ ಎಂದು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಡಾ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಆಪ್ತ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ದಾಖಲೆ ಬಹಿರಂಗವಾಗಿದೆ.

 

ಬಾಗಲಕೋಟೆಯಲ್ಲಿ ಮೇ 14ರಂದು ಮದುವೆಯಾಗಿದ್ದ ಶ್ರೀಕಾಂತ ಚೌರಿಯು ಮದುವೆ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆಯಲ್ಲಿಯೇ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಈತ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ ಬೇಳೂರು ರಾಘವೇಂದ್ರ ಶೆಟ್ಟಿ ಅವರಿಗೆ ಕಳೆದ ಒಂದು ವರ್ಷದಿಂದಲೂ ಆಪ್ತ ಕಾರ್ಯದರ್ಶಿ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದರೂ ಇದನ್ನು ನಿರಾಕರಿಸಿದ್ದ ಅಧ್ಯಕ್ಷ ಶೆಟ್ಟಿ ಅವರು ಪಿಎ ಎಂದು ಕೆಲಸ ಮಾಡಿದ್ದಾನೆಯೇ ಹೊರತು ಅಪ್ತ ಕಾರ್ಯದರ್ಶಿ ಎಂಬ ಹುದ್ದೆಯನ್ನೇ ನೀಡಿಲ್ಲ ಎಂದು ದಾರಿತಪ್ಪಿಸಿದ್ದರು.

 

ಆದರೀಗ ‘ದಿ ಫೈಲ್‌’ಗೆ ಲಭ್ಯವಾಗಿರುವ ದಾಖಲೆ ಪ್ರಕಾರ ನಿಗಮದ ಅಧ್ಯಕ್ಷರ ಆಪ್ತ ಶಾಖೆಯಲ್ಲಿನ ಸಿಬ್ಬಂದಿ ವಿವರಗಳ ಪಟ್ಟಿಯಲ್ಲಿ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಎಂಬ ಹುದ್ದೆಯಲ್ಲಿ ಶ್ರೀಕಾಂತ ಚೌರಿಯ ಹೆಸರು ಇದೆ. ಇವರಲ್ಲದೆ ಪ್ರಸನ್ನ ಆರ್‌ (ಆಪ್ತ ಸಹಾಯಕ), ನಿರಂಜನಕುಮಾರ್‌ ಸಿಎಸ್‌ (ದಲಾಯತ್‌) ಹರೀಶ್‌ ಆರ್‌ (ವಾಹನ ಚಾಲಕ) ಅವರ ಹೆಸರೂ ಇದೇ ಪಟ್ಟಿಯಲ್ಲಿದೆ.

 

‘ನಮ್ಮ ಜತೆ ಮೂರರಿಂದ ನಾಲ್ಕು ತಿಂಗಳು ಪಿಎ ಅಂತ ಕೆಲಸ ಮಾಡಿದ್ದಾನೆ. ಆಪ್ತ ಕಾರ್ಯದರ್ಶಿ ಪೋಸ್ಟೇ ಕೊಟ್ಟೇ ಇಲ್ಲ. ಆತನ ಆಕ್ಟಿವಿಟಿ ನಮಗೆ ಸರಿ ಕಾಣಲಿಲ್ಲ. ಆತ ಹಣ ಪಡೆದು ಅಧಿಕಾರಿಗಳ ಟ್ರಾನ್ಸಫರ್‌ ಕೆಲಸ ಮಾಡ್ತಿದಾನೆ ಅಂತ ಎಂದು ಕೆಲವರು ಮಾಹಿತಿ ನಿಡಿದ್ದರು. ಎರಡು ತಿಂಗಳ ಹೀಂದೆ ಆತನನ್ನು ಕೆಲಸದಿಂದ ತೆಗೆದುಕಹಾಕಿದ್ದೇವೆ. ಪಿಎ ಆಗಿವಿಜಿಟಿಂಗ್‌ ಕಾರ್ಡ್‌ ಮಾಡಿಸಬಾರದು. ಆದರೆ ಆತ ವಿಜಿಟಿಂಗ್‌ ಕಾರ್ಡ್‌ ಕೂಡ ಮಾಡಿಸಿದ್ದ,’ ಎಂದು ಡಾ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು.

 

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತೊದಲಾಬಾಗಿ ಗ್ರಾಮದಲ್ಲಿ ಚೌರಿಯನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಧಾರವಾಡದ ಇನ್ಸ್ಪೈರ್ ಇಂಡಿಯಾದ ಐಎಎಸ್ ಮತ್ತು ಕೆಎಎಸ್ ಕೋಚಿಂಗ್ ಸೆಂಟರ್ ಮಾಜಿ ನಿರ್ದೇಶಕನಾಗಿದ್ದ ಎನ್ನಲಾಗಿದೆ.

Hot this week

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....
Please Scan to make Your Contribution

Topics

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

Related Articles

Popular Categories

error: Content is protected !!