Wednesday | July 22, 2026 |

ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿವಾದ ; ಬೆಂಕಿ ಹಾಕುವ ಬೆದರಿಕೆಯೊಡ್ಡಿದ್ದ ಹಿರೇಮಠ್‌ ವಿರುದ್ಧ ದೂರು

ಬೆಂಗಳೂರು; ಅನುಸೂಚಿತ ಜಾತಿಯ ಪಟ್ಟಿಯಲ್ಲಿರುವ ಬೇಡ ಜಂಗಮ ಸಮುದಾಯದ ಹೆಸರಿನಲ್ಲಿ ಇತರೆ ಸಮುದಾಯವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಬಗ್ಗೆ ಕಂದಾಯ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಸಂಬಂಧ ಪಟ್ಟ ಇಲಾಖೆಗಳೊಂದಿಗೆ ಕರ್ನಾಟಕ ವಿಧಾನಸಭೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಗೆ ಏಕಾಏಕೀ ನುಗ್ಗಿ ದಾಂಧಲೆ ನಡೆಸಿದ್ದ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ವಕೀಲರೂ ಆದ ಬಿ ಡಿ ಹಿರೇಮಠ್‌ ಅವರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಕುರಿತು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಶಾಸಕರ ಭವನದಲ್ಲಿ ಶಾಸಕರ ಭವನದಲ್ಲಿ 2022ರ ಏಪ್ರಿಲ್‌ 27ರಂದು ನಡೆಸಿದ್ದ ಸಭೆಯಲ್ಲಿ ಬಿ ಡಿ ಹಿರೇಮಠ್‌ ಅವರು ಯಾವ ಅನುಮತಿಯೂ ಇಲ್ಲದೆಯೂ ನುಗ್ಗಿ ಸಮಿತಿಯ ಅಧ್ಯಕ್ಷರು ಸದಸ್ಯರುಗಳು ಹಾಗೂ ಇಲಾಖಾಧಿಕಾರಿಗಳಿಗೆ ತಮ್ಮನ್ನು ನೋಡಿಕೊಳ್ಳುವುದಾಗಿ ಬೆದರಿಕೆ ಹಾಕುವುದರ ಜತೆ ವಿಧಾನಸೌಧಕ್ಕೆ ಬೆಂಕಿ ಹಾಕುವುದಾಗಿಯೂ ಸಹ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

 

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸಮಿತಿಯು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಗಮನಕ್ಕೆ ತಂದಿತ್ತು. ಅವರ ನಿರ್ದೇಶನದಂತೆ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ವಸುಂಧರಾದೇವಿ ಅವರು ವಿಧಾನಸೌಧ ಪೊಲೀಸ್‌ ಠಾಣೆಗೆ ಮೇ 10ರಂದು ದೂರು ದಾಖಲಿಸಿದ್ದಾರೆ. ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಧಾನಸೌಧ ಠಾಣೆಗೆ ಸಲ್ಲಿಸಿರುವ ದೂರಿನ ಪ್ರತಿ

 

ದೂರಿನಲ್ಲೇನಿದೆ?

 

ಸುಮಾರು 11-30 ಗಂಟೆಗೆ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ವಕೀಲರೂ ಆದ ಬಿ ಡಿ ಹಿರೇಮಠ್‌ ಅವರು ಸಮಿತಿ ಸಭೆಗೆ ಯಾವುದೇ ಅನುಮತಿ ಪಡೆಯದೇ ಏಕಾಏಕೀ ಅತಿಕ್ರಮವಾಗಿ ಪ್ರವೇಶಿಸಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಯಾವುದೇ ಗೌರವ ಕೊಡೆದೇ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ವಿಷಯವನ್ನು ಚರ್ಚಿಸಲು ಅಡಚಣೆ ಉಂಟು ಮಾಡಿರುತ್ತಾರೆ. ಅಲ್ಲದೆ ಸಮಿತಿಯ ಅಧ್ಯಕ್ಷರು ಸದಸ್ಯರುಗಳು ಹಾಗೂ ಇಲಾಖಾಧಿಕಾರಿಗಳಿಗೆ ತಮ್ಮನ್ನು ನೋಡಿಕೊಳ್ಳುವುದಾಗಿ ಬೆದರಿಕೆ ಹಾಕುವುದರ ಜತೆ ವಿಧಾನಸೌಧಕ್ಕೆ ಬೆಂಕಿ ಹಾಕುವುದಾಗಿಯೂ ಸಹ ಬೆದರಿಕೆ ಹಾಕಿರುತ್ತಾರೆ.

 

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಸದಸ್ಯರು ಮತ್ತು ಇಲಾಖಾಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸಲು ಅಡಚಣೆ ಉಂಟು ಮಾಡಿರುತ್ತಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸಮಿತಿಯ ಅಧ್ಯಕ್ಷರು ಸಭಾಧ್ಯಕ್ಷರಿಗೆ ಹಕ್ಕುಚ್ಯುತಿ ಸೂಚನೆಯನ್ನು ಸಲ್ಲಿಸಿದ್ದಾರೆ. ಇವರ ವಿರುದ್ಧ ದೂರು ದಾಖಲಿಸಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರು ನಿರ್ದೇಶಿಸಿದ್ದಾರೆ.

 

ಈ ಸಭೆಯಲ್ಲಿ ಕಂದಾಯ, ಸಮಾಜ ಕಲ್ಯಾಣ, ಕಾನೂನು ಇಲಾಖೆ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಿದ ಡಿಜಿಪಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಇನ್ನಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಪುತ್ರಿಗೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಿದ್ದ ಪ್ರಕರಣವು ಬಹಿರಂಗಗೊಂಡಿದ್ದ ಬೆನ್ನಲ್ಲೇ ಸಮಿತಿಯು ಸುಳ್ಳು ಜಾತಿಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳ ಕುರಿತು ವಿಚಾರಣೆಗೆ ಕೈಗೆತ್ತಿಕೊಂಡಿರುವುದನ್ನು ಸ್ಮರಿಸಬಹುದು.

Hot this week

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...
Please Scan to make Your Contribution

Topics

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

Related Articles

Popular Categories

error: Content is protected !!