Saturday | March 7, 2026 |

ರಾಷ್ಟ್ರೋತ್ಥಾನ ಪರಿಷತ್‌ ಪರ ಪಶು ಸಂಗೋಪನೆ ಇಲಾಖೆ; ಗೋಮಾಳ ಅವಶ್ಯಕತೆಯಿಲ್ಲವೆಂಬ ದೃಢೀಕೃತ ಪತ್ರ

Support THE-FILE

spot_img

ಬೆಂಗಳೂರು; ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿ ಹುರುಳಿಚಿಕ್ಕನಹಳ್ಳಿ ಗ್ರಾಮದ ರೈತರು ತಮ್ಮ ಸ್ವಂತ ಹೊಲದಲ್ಲಿ ಬೆಳೆದಿರುವ ಹುಲ್ಲು, ಬೂಸಾ ಹಿಂಡಿ ಕೊಟ್ಟು ರಾಸುಗಳನ್ನು ಸಾಕಾಣಿಕೆ ಮಾಡುತ್ತಿದ್ದಾರೆ ಎಂಬ ಕಾರಣವನ್ನು ಮುಂದಿರಿಸಿ ಗೋಮಾಳವನ್ನು ಕಾಯ್ದಿರಿಸುವ ಅವಶ್ಯಕತೆಯೇ ಇಲ್ಲವೆಂದು ಪಶು ವೈದ್ಯಾಧಿಕಾರಿಗಳು ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಜಮೀನು ಮಂಜೂರು ಮಾಡಲು ದಾರಿಮಾಡಿಕೊಟ್ಟಿರುವುದು ಬಹಿರಂಗವಾಗಿದೆ.

 

ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಜಮೀನು ಮಂಜೂರಾತಿ ಸಂಬಂಧದ 388 ಪುಟಗಳನ್ನೊಳಗೊಂಡ ಸಮಗ್ರ ಕಡತವನ್ನು ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಪಡೆದಿದೆ. ಇದರಲ್ಲಿ ಪಶುವೈದ್ಯಾಧಿಕಾರಿಗಳ ದೃಢೀಕರಣ ಪತ್ರವು ಇದೆ. ಇದನ್ನಾಧರಿಸಿಯೇ ಬೆಂಗಳೂರು ನಗರ ಜಿಲ್ಲಾಧಿಕಾರಿಯು ಸಹ ಗೋಮಾಳ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಎಂಬ ಅಂಶ ದಾಖಲೆಗಳಿಂದ ಗೊತ್ತಾಗಿದೆ.

 

ದೇಶದಲ್ಲಿಯೇ ಮೊದಲ ಬಾರಿಗೆ ಪಶು ಸಂಜೀವಿನಿ ಯೋಜನೆ ಜಾರಿಗೊಳಿಸಿದ್ದೇವೆ ಎಂದು ಸಚಿವ ಪ್ರಭು ಚವ್ಹಾಣ್‌ ಅವರು ಹೆಮ್ಮೆಯಿಂದ ಬೀಗಿದ್ದರು. ಆದರೀಗ ಗೋಮಾಳವನ್ನು ಉಳಿಸಿಕೊಳ್ಳಬೇಕಿದ್ದ ಪಶುವೈದ್ಯಾಧಿಕಾರಿಗಳೇ ಗೋಮಾಳವನ್ನು ಅನ್ಯ ಉದ್ಧೇಶಕ್ಕೆ ಮಂಜೂರು ಮಾಡಲು ಅನುಮತಿ ನೀಡಿರುವುದು ಸಾರ್ವಜನಿಕರ ವಲಯದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ.

 

ಹುರುಳಿಚಿಕ್ಕನಹಳ್ಳಿ ಗ್ರಾಮದಲ್ಲಿನ ಪ್ರಸ್ತಾಪಿತ ಜಮೀನು ಮೂಲತಃ ಗೋಮಾಳ ಜಮೀನಾಗಿರುತ್ತದೆ. ಈ ಗ್ರಾಮದಲ್ಲಿ 314 ಚಿಕ್ಕವು ಮತ್ತು 105 ದೊಡ್ಡ ಜಾನುವಾರು ಒಟ್ಟಾರೆ 419 ಜಾನುವಾರುಗಳಿವೆ. 100 ರಾಸುಗಳಿಗೆ ತಲಾ 30 ಎಕರೆಯಂತೆ 90-00 ಎಕರೆ ಗೋಮಾಳದ ಅಗತ್ಯವಿರುತ್ತದೆ.

 

ಆದರೆ ಸದರಿ ಗ್ರಾಮ ಹಾಗೂ ಅಕ್ಕಪಕ್ಕದ ಗ್ರಾಮದಲ್ಲಿ ಅಷ್ಟು ವಿಸ್ತೀರ್ಣದ ಜಮೀನು ಲಭ್ಯವಿರುವುದಿಲ್ಲ. ಹಾಲಿ ಗ್ರಾಮದಲ್ಲಿ ರೈತರು ಸಾಕುತ್ತಿರುವ ಜಾನುವಾರುಗಳು ಹೈಬ್ರಿಡ್‌ ತಳಿ ಜಾನುವಾರುಗಳಾಗಿದ್ದು, ಈ ಜಾನುವಾರುಗಳಿಗೆ ರೈತರು ಬೆಳೆಯುವ ಮೇವು ಮತ್ತುಮಾರುಕಟ್ಟೆಯಲ್ಲಿ ದೊರೆಯುವ ಮೇವನ್ನು ಅವಲಂಬಿಸಿರುತ್ತಾರೆ ಎಂದು ಚೆಕ್‌ ಲೀಸ್ಟ್‌ ನೀಡಿರುವುದು ದಾಖಲೆಯಿಂದ ತಿಳಿದು ಬಂದಿದೆ.

 

‘ಹುರುಳಿ ಚಿಕ್ಕನಹಳ್ಳಿ ಗ್ರಾಮದಲ್ಲಿ 419 ರಾಸುಗಳಿದ್ದು 20ನೇ ಜಾನುವಾರು ಗಣತಿ ಮಾಹಿತಿ ಪ್ರಕಾರ 224 ಕುರಿಗಳು, 109 ಆಡುಗಳು ಕೂಡ ಇವೆ. ಸದರಿ ರಾಸುಗಳನ್ನು ರೈತರು ಮತ್ತು ಸಾರ್ವಜನಿಕರು ತಮ್ಮ ಸ್ವಂತ ಹೊಲದಲ್ಲಿ ಬೆಳೆದಿರುವ ಹುಲ್ಲು ಬೂಸಾ ಹಿಂಡಿ ಕೊಟ್ಟು ಸಾಕಾಣಿಕೆ ಮಾಡುತ್ತಿರುತ್ತಾರೆ. ಆದ್ದರಿಂದ ಹುರುಳಿಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂಬರ್‌ 69ರಲ್ಲಿನ 9-30 ಎಕರೆ ಜಮೀನನ್ನು ಕಾಯ್ದಿರಿಸುವ ಅವಶ್ಯಕತೆ ಕಂಡು ಬಂದಿರುವುದಿಲ್ಲ,’ ಎಂದು ಯಲಹಂಕ ತಾಲೂಕಿನ ಪಶುವೈದ್ಯಾಧಿಕಾರಿ 2021 ಏಪ್ರಿಲ್‌ನಲ್ಲಿ ಸರ್ಕಾರಕ್ಕೆ ದೃಢೀಕರಣ ಪತ್ರವನ್ನು ನೀಡಿದ್ದಾರೆ.

 

ಪಶು ವೈದ್ಯಾಧಿಕಾರಿ ಸಲ್ಲಿಸಿರುವ ದೃಢೀಕೃತ ಪತ್ರ

 

ಇದನ್ನಾಧರಿಸಿ ಗೋಮಾಳವನ್ನು ರಾಷ್ಟ್ರೋತ್ಥಾನ ಪರಿಷತ್‌ಗೆ ಮಂಜೂರು ಮಾಡಬಹುದು ಎಂದು ಯಲಹಂಕ ತಹಶೀಲ್ದಾರ್‌, ಪ್ರಾದೇಶಿಕ ಆಯುಕ್ತರು ಮತ್ತು ಬೆಂಗಳೂರು ಜಿಲ್ಲಾಧಿಕಾರಿಯೂ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

 

ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಜಮೀನು ಮಂಜೂರು ಮಾಡುವ ಸಂಬಂಧ 2021ರ ನವೆಂಬರ್‌ 25ರಂದು ಸಚಿವ ಸಂಪುಟಕ್ಕೆ ಕಡತ ಮಂಡನೆಯಾಗಿತ್ತು. ಅಂದು ನಡೆದಿದ್ದ ಸಂಪುಟ ಸಭೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಂಬಂಧ ತೀರ್ಮಾನ ಕೈಗೊಂಡಿರಲಿಲ್ಲ.

 

ಗೋಮಾಳ ಮಂಜೂರು ಮಾಡಬೇಕೇ ಬೇಡವೇ ಎಂಬ ಕುರಿತು ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಸಚಿವ ಆರ್‌ ಅಶೋಕ್‌ ಅವರ ವಿವೇಚನೆಗೆ ಬಿಡಲಾಗಿತ್ತು. ಆ ಹಂತದಲ್ಲೇ ‘ದಿ ಫೈಲ್‌’ ಮತ್ತು ವಾರ್ತಾಭಾರತಿ ಹೊರಗೆಳೆದಿತ್ತು.

 

ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳವನ್ನು ಮಂಜೂರು ಮಾಡಿರುವ ರಾಜ್ಯ ಸರ್ಕಾರವು 4 ತಿಂಗಳ ನಂತರ ಅಂದರೆ 2022ರ ಫೆ.22ರಂದು ಆದೇಶ ಹೊರಡಿಸಿರುವುದನ್ನು ಸ್ಮರಿಸಬಹುದು.

Hot this week

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

Topics

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Related Articles

Popular Categories

spot_imgspot_img
error: Content is protected !!