Saturday | March 21, 2026 |

ಆರೆಸ್ಸೆಸ್‌ ಬೆಂಬಲದ ವನವಾಸಿ ಕಲ್ಯಾಣ ಸಂಸ್ಥೆಗೆ ಜಮೀನು; ಆರ್ಥಿಕ ಇಲಾಖೆ ತಿರಸ್ಕರಿಸಿದರೂ ಒತ್ತಡ ಹೇರಿಕೆ

Support THE-FILE

spot_img

ಬೆಂಗಳೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ದ ಬೆಂಬಲದೊಂದಿಗೆ ಮತ್ತು ಸಂಘ ಪರಿವಾರದ ಸಂಘಟನೆಯಾಗಿರುವ ವನವಾಸಿ ಕಲ್ಯಾಣ ಸಂಸ್ಥೆಯು ಜಮೀನು ಮಂಜೂರು ಮಾಡಿಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಂದಾಯ ಇಲಾಖೆ ಮೂಲಕ ವನವಾಸಿ ಕಲ್ಯಾಣ ಸಂಸ್ಥೆಯು ಜಮೀನು ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯು ಈಗಾಗಲೇ ತಿರಸ್ಕರಿಸಿದ್ದರೂ ಸರ್ಕಾರದ ಮೇಲೆ ಒತ್ತಡ ಹೇರಲಾರಂಭಿಸಿದೆ.

 

ರಾಷ್ಟ್ರೋತ್ಥಾನ ಪರಿಷತ್‌ಗೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಹುರಳಿಚಿಕ್ಕನಹಳ್ಳಿ ಗ್ರಾಮದಲ್ಲಿ 9 ಎಕರೆ ಗೋಮಾಳವನ್ನು ಕಾನೂನು ಇಲಾಖೆಯ ಆಕ್ಷೇಪದ ನಡುವೆಯೂ ಮಂಜೂರು ಮಾಡಿರುವ ಬೆನ್ನಲ್ಲೇ ವನವಾಸಿ ಕಲ್ಯಾಣ ಸಂಸ್ಥೆಯು ಜಮೀನು ಮಂಜೂರು ಮಾಡಿಸಿಕೊಳ್ಳಲು ಸಲ್ಲಿಸಿರುವ ಪ್ರಸ್ತಾವನೆಯು ಮುನ್ನೆಲೆಗೆ ಬಂದಿದೆ.

 

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಗ್ರಾಮದಲ್ಲಿರುವ 1 ಎಕರೆ ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿಕೊಡಲು ಕೆಲ ದಿನಗಳ ಹಿಂದೆಯಷ್ಟೇ ವನವಾಸಿ ಕಲ್ಯಾಣ ಸಂಸ್ಥೆಯು ಕಂದಾಯ ಇಲಾಖೆಗೆ ಪ್ರಸ್ತಾವನೆಯನ್ನು (ಕಡತ ಸಂಖ್ಯೆ; ಆರ್‌ಡಿ 10 ಎಲ್‌ಜಿಎನ್‌) ಸಲ್ಲಿಸಿದೆ. ಈ ಪ್ರಸ್ತಾವನೆ ಸಲ್ಲಿಸಲು ಕಂದಾಯ ಸಚಿವ ಆರ್‌ ಅಶೋಕ್‌ ಅವರು ಅನುಮೋದಿಸಿದ್ದರು ಎಂದು ತಿಳಿದು ಬಂದಿದೆ. ಈ  ಕುರಿತು ಆರ್ಥಿಕ ಇಲಾಖೆಯ ಅಭಿಪ್ರಾಯಕ್ಕಾಗಿ ಸಲ್ಲಿಕೆಯಾಗಿತ್ತು. ಆದರೆ ಆರ್ಥಿಕ ಇಲಾಖೆಯು ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ.

 

ಆರ್ಥಿಕ ಇಲಾಖೆ ನೀಡಿರುವ ಅಭಿಪ್ರಾಯದ ಪ್ರತಿ

 

ಈ ಕುರಿತು 2022ರ ಮೇ 6ರಂದು ಆರ್ಥಿಕ ಇಲಾಖೆಯು ತನ್ನ ಅಭಿಪ್ರಾಯವನ್ನು ಕಂದಾಯ ಇಲಾಖೆಗೆ ಕಳಿಸಿದೆ. ‘ ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಪ್ರಸ್ತಾವನೆಗೆ ಸಂಬಂಧಿಸಿದಂತೆ, ವನವಾಸಿ ಕಲ್ಯಾಣ ಸಂಸ್ಥೆಯು ಖಾಸಗಿ ಸಂಸ್ಥೆಯಾಗಿರುವುದರಿಂದ ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 22ಎ(2)ರ ಅನ್ವಯ ಖಾಸಗಿ ಸಂಸ್ಥೆಗಳಿಗೆ ನಗರ ಪೌರ ಸರಹದ್ದಿನೊಳಗಿರುವ ಜಮೀನನ್ನು ಮಂಜೂರು ಮಾಡಲು ಅವಕಾಶವಿಲ್ಲ. ಹೀಗಾಗಿ ಈ ಪ್ರಸ್ತಾವನೆಗೆ ಆರ್ಥಿಕ ಸಹಮತಿಯಿಲ್ಲ,’ ಎಂದು ಕಂದಾಯ ಇಲಾಖೆಗೆ ತನ್ನ ಅಭಿಪ್ರಾಯವನ್ನು ತಿಳಿಸಿದೆ.

 

ವನವಾಸಿ ಕಲ್ಯಾಣ ಸಂಸ್ಥೆಯ ಹಿನ್ನೆಲೆ

 

ವನವಾಸಿ ಕಲ್ಯಾಣ ಸಂಸ್ಥೆಯನ್ನು ಆರ್‌ಎಸ್‌ಎಸ್‌ನ ಪರಿವಾರ ಸಂಘಟನೆಯಾದ ಹಿಂದೂ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಅಜಿತ್‌ಕುಮಾರ್‌ ಮತ್ತಿತರರು ಸ್ಥಾಪಿಸಿದರು. ಸಿದ್ದಿಗಳು ಸೇರಿದಂತೆ ಗಿರಿಜನರ ಕಲ್ಯಾಣಕ್ಕಾಗಿ ಆರಂಭವಾದ ಈ ಸಂಸ್ಥೆಯನ್ನು ಶೃಂಗೇರಿ ಮೂಲದ ಪ್ರಕಾಶ್‌ ಕಾಮತ್‌ ಎಂಬುವರು ಮುನ್ನೆಡೆಸಿದರು.

 

ವನವಾಸಿ ಕಲ್ಯಾಣ ಆಶ್ರಮ ಎಂಬ ಸಂಘಟನೆಗೆ ಆರ್ ಎಸ್ ಎಸ್ ಮಾತೃಸಂಸ್ಥೆ. ಆರ್ ಎಸ್ ಎಸ್ ಸಿದ್ದಾಂತ, ನಿಲುವುಗಳನ್ನು ಜಾರಿ ಮಾಡಲೆಂದೇ ಇರುವ ಹತ್ತಾರು ವಿಭಾಗಗಳ ಪೈಕಿ ವನವಾಸಿ ಕಲ್ಯಾಣ ಆಶ್ರಮವೂ ಒಂದು ಎಂದು ಹೇಳಲಾಗುತ್ತಿದೆ.

 

ಆರ್ ಎಸ್ ಎಸ್ ನ ಉಳಿದ ವಿಭಾಗಗಳು ತಮ್ಮ ಕಾರ್ಯನಿರ್ವಹಣೆಯಲ್ಲೇ ರಾಜಕೀಯ ಕಾರ್ಯಸೂಚಿಯನ್ನು ಬಹಿರಂಗಗೊಳಿಸುತ್ತದೆ.‌ ಆದರೆ ವನವಾಸಿ ಕಲ್ಯಾಣ ಆಶ್ರಮವು ಆದಿವಾಸಿಗಳು, ಕಾಡಿನ ನಿವಾಸಿಗಳ ಮಧ್ಯೆ ಕೆಲಸ ಮಾಡುವಾಗ ತನ್ನ ರಾಜಕೀಯ ಸಿದ್ದಾಂತವನ್ನಾಗಲೀ, ಭವಿಷ್ಯದ ಕಾರ್ಯಸೂಚಿಯನ್ನಾಗಲೀ ಹೇಳುವುದಿಲ್ಲ. ಬದಲಾಗಿ ಶಿಕ್ಷಣ, ಸಂಸ್ಕಾರ, ಧರ್ಮ, ದೇವರು, ದೇಶ, ಕ್ರೀಡೆಯ ಹೆಸರಿನಲ್ಲಿ ಆದಿವಾಸಿ ವನವಾಸಿಗಳ ಮಧ್ಯೆ ಕೆಲಸ ಮಾಡುತ್ತಾ ಗುಪ್ತ ಅಜೆಂಡಾವನ್ನು ಜಾರಿ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ.

 

ಬುಡಕಟ್ಟು, ವನವಾಸಿಗಳು ಅವರದ್ದೇ ಆದ ಸುಂದರ ಸಂಸ್ಕೃತಿ ಮತ್ತು ದೇವಾರಾಧನೆಯನ್ನು ಹೊಂದಿದ್ದಾರೆ. ಅದನ್ನು ನಿಧಾನಕ್ಕೆ ವೈದಿಕೀಕರಣಗೊಳಿಸುವ ಕೆಲಸವೇ ವನವಾಸಿ ಕಲ್ಯಾಣ ಸಂಸ್ಥೆಯು ಮೊದಲ ಕೆಲಸ. ಕಾಡಿನ ಮನೆಗಳಲ್ಲೂ ಸತ್ಯನಾರಾಯಣ ಪೂಜೆ ಮಾಡಿಸಿ ಆ ಕಾಡಿನ ಬಡ ಮಕ್ಕಳಿಂದಲೂ ದಕ್ಷಿಣೆ ಹಾಕಿಸುವುದೇ ನಾಗರಿಕತೆ ಎಂದು ವನವಾಸಿ ಕಲ್ಯಾಣ ಸಂಸ್ಥೆಯು ಸ್ಥಳೀಯರಲ್ಲಿ ಬಿತ್ತನೆ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

 

ಅಲ್ಲದೆ ವನವಾಸಿಗಳ ಮಕ್ಕಳಿಗೆ ಶ್ಲೋಕ, ಬಿಲ್ವಿದ್ದೆ ಹೇಳಿಕೊಡುವ ಮೂಲಕ ಮತ್ತೊಂದು ಅಜ್ಞಾನದ ಕೂಪಕ್ಕೆ ತಳ್ಳುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದೆ. ಈ ಮೂಲಕ ಸ್ವಲ್ಪವಾದರೂ ಅನ್ಯಾಯದ ವಿರುದ್ದದ ಪ್ರತಿಭಟನೆ ಮಾಡಿ ಹಕ್ಕು ಪಡೆಯುವ ಛಾತಿ ಹೊಂದಿರುವ ಅರಣ್ಯವಾಸಿಗಳನ್ನು ಗುಲಾಮಗಿರಿಗೆ ತಳ್ಳುವ ಕೆಲಸವನ್ನು ಮಾಡಲಾಗುತ್ತಿದೆ ಎಂಬ ಆರೋಪವೂ ಇದೆ.

 

ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವನವಾಸಿ ಕಲ್ಯಾಣ ಆಶ್ರಮ ತುಂಬಾ ಸಕ್ರೀಯವಾಗಿ ಕೆಲಸ ಮಾಡುತ್ತಿದೆ ಎಂದು ಗೊತ್ತಾಗಿದೆ. ಮುಖ್ಯವಾಗಿ ಪಶ್ಚಿಮ ಘಟ್ಟದ ವನವಾಸಿಗಳನ್ನು ಗುರಿಯಾಗಿರಿಸಿಕೊಂಡು ವನವಾಸಿ ಕಲ್ಯಾಣ ಆಶ್ರಮ ಕೆಲಸ ಮಾಡುತ್ತದೆ.

Hot this week

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Topics

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

Related Articles

Popular Categories

error: Content is protected !!