Tuesday | July 7, 2026 |

‘ಆತ್ಮಹತ್ಯೆ ಮಾಡಿಕೊಂಡರೆ ಡಿ ರೂಪಾ ಅವರೇ ಕಾರಣ’; ರಾಘವೇಂದ್ರ ಶೆಟ್ಟಿ ವಿಡಿಯೋ ಬಹಿರಂಗ

ಬೆಂಗಳೂರು; ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಹಿರಿಯ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ಮಧ್ಯೆ ನಡೆಯುತ್ತಿರುವ ಪತ್ರ ಸಮರ ಆರಂಭವಾಗಿರುವ ಬೆನ್ನಲ್ಲೇ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಕ್ಕೆ ವಿಡಿಯೋ ಸಾಕ್ಷ್ಯವೊಂದು ಬಹಿರಂಗವಾಗಿದೆ.

 

ಅವರು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ ಎಂದು ಲಿಖಿತ ದೂರು ನೀಡಿರುವ ಬೆನ್ನಲ್ಲೇ ಬಹಿರಂಗವಾಗಿರುವ ವಿಡಿಯೋ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹಿರಿಯ ಐಪಿಎಸ್‌ ಅಧಿಕಾರಿ ಡಿ ರೂಪಾ ಅವರು ಮುಖ್ಯ ಕಾರ್ಯದರ್ಶಿಗೆ ನೀಡಿದ್ದ ದೂರಿಗೆ ಮತ್ತಷ್ಟು ಬಲ ಬಂದಂತಾಗಿದೆ. ಈ ವಿಡಿಯೋ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಡಿಯೋದಲ್ಲೇನಿದೆ?

 

ನಿಗಮದ 302 ಹಾಗೂ 303ನೇ ಆಡಳಿತ ಮಂಡಳಿ ಸಭೆ ನಡೆಯುತ್ತಿದ್ದ ವೇಳೆಯಲ್ಲಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಿ ರೂಪಾ ಅವರು ಮುಖಾಮುಖಿಯಾಗಿ ಮಾತನಾಡಿಲ್ಲ. ಬೇಳೂರು ರಾಘವೇಂದ್ರ ಶೆಟ್ಟಿ ಅವರ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆ ರೂಪ ಆವರು ಕಾರಣ ಎಂದು 5-6 ಬಾರಿ ಹೇಳಿರುವುದು ವಿಡಿಯೋದಿಂದ ತಿಳಿದು ಬಂದಿದೆ.

 

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರು. ವಂಚಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸೇವೆಯಿಂದಲೇ ವಜಾ ಆಗಿದ್ದ ನಿಗಮದ ಅಂದಿನ ಪ್ರಧಾನ ವ್ಯವಸ್ಥಾಪಕ ಜಿ ಕಿಶೋರ್‌ಕುಮಾರ್‌ ಅವರನ್ನು ಪುನಃ ಸೇವೆಗೆ ಸೇರಿಸಿಕೊಳ್ಳಲು ನಿಗಮದ ಹಾಲಿ ಅಧ್ಯಕ್ಷ ಡಾ ಬೇಳೂರು ರಾಘವೇಂದ್ರಶೆಟ್ಟಿ ಅವರು ನಾಲ್ಕರಿಂದ ಐದು ಕೋಟಿ ರು. ಹಣದ ವ್ಯವಹಾರ ಮಾತುಕತೆ ನಡೆಸಿದ್ದರು ಎಂದು ಮುಖ್ಯ ಕಾರ್ಯದರ್ಶಿಗೆ ಬರೆದಿದ್ದ ಪತ್ರದಲ್ಲಿ ಡಿ ರೂಪಾ ಅವರು ದೂರಿದ್ದನ್ನು ಸ್ಮರಿಸಬಹುದು.

Hot this week

ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ; ಅಭಿವೃದ್ಧಿ ಹೊಂದಿದ ಜಮೀನುಗಳ ಸರ್ವೇ ನಂಬರ್‍‌ ವಿವರಣೆ ನೀಡದ ಅಧಿಕಾರಿವರ್ಗ

ಬೆಂಗಳೂರು; ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗುತ್ತಿಹೊಳೆ ಗ್ರಾಮದಲ್ಲಿ ವೀರಭದ್ರೇಶ್ವರ ಏತ...

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...
Please Scan to make Your Contribution

Topics

ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ; ಅಭಿವೃದ್ಧಿ ಹೊಂದಿದ ಜಮೀನುಗಳ ಸರ್ವೇ ನಂಬರ್‍‌ ವಿವರಣೆ ನೀಡದ ಅಧಿಕಾರಿವರ್ಗ

ಬೆಂಗಳೂರು; ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗುತ್ತಿಹೊಳೆ ಗ್ರಾಮದಲ್ಲಿ ವೀರಭದ್ರೇಶ್ವರ ಏತ...

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...

Related Articles

Popular Categories

error: Content is protected !!