Tuesday | July 21, 2026 |

‘ಆತ್ಮಹತ್ಯೆ ಮಾಡಿಕೊಂಡರೆ ಡಿ ರೂಪಾ ಅವರೇ ಕಾರಣ’; ರಾಘವೇಂದ್ರ ಶೆಟ್ಟಿ ವಿಡಿಯೋ ಬಹಿರಂಗ

ಬೆಂಗಳೂರು; ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಹಿರಿಯ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ಮಧ್ಯೆ ನಡೆಯುತ್ತಿರುವ ಪತ್ರ ಸಮರ ಆರಂಭವಾಗಿರುವ ಬೆನ್ನಲ್ಲೇ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಕ್ಕೆ ವಿಡಿಯೋ ಸಾಕ್ಷ್ಯವೊಂದು ಬಹಿರಂಗವಾಗಿದೆ.

 

ಅವರು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ ಎಂದು ಲಿಖಿತ ದೂರು ನೀಡಿರುವ ಬೆನ್ನಲ್ಲೇ ಬಹಿರಂಗವಾಗಿರುವ ವಿಡಿಯೋ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹಿರಿಯ ಐಪಿಎಸ್‌ ಅಧಿಕಾರಿ ಡಿ ರೂಪಾ ಅವರು ಮುಖ್ಯ ಕಾರ್ಯದರ್ಶಿಗೆ ನೀಡಿದ್ದ ದೂರಿಗೆ ಮತ್ತಷ್ಟು ಬಲ ಬಂದಂತಾಗಿದೆ. ಈ ವಿಡಿಯೋ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಡಿಯೋದಲ್ಲೇನಿದೆ?

 

ನಿಗಮದ 302 ಹಾಗೂ 303ನೇ ಆಡಳಿತ ಮಂಡಳಿ ಸಭೆ ನಡೆಯುತ್ತಿದ್ದ ವೇಳೆಯಲ್ಲಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಿ ರೂಪಾ ಅವರು ಮುಖಾಮುಖಿಯಾಗಿ ಮಾತನಾಡಿಲ್ಲ. ಬೇಳೂರು ರಾಘವೇಂದ್ರ ಶೆಟ್ಟಿ ಅವರ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆ ರೂಪ ಆವರು ಕಾರಣ ಎಂದು 5-6 ಬಾರಿ ಹೇಳಿರುವುದು ವಿಡಿಯೋದಿಂದ ತಿಳಿದು ಬಂದಿದೆ.

 

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರು. ವಂಚಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸೇವೆಯಿಂದಲೇ ವಜಾ ಆಗಿದ್ದ ನಿಗಮದ ಅಂದಿನ ಪ್ರಧಾನ ವ್ಯವಸ್ಥಾಪಕ ಜಿ ಕಿಶೋರ್‌ಕುಮಾರ್‌ ಅವರನ್ನು ಪುನಃ ಸೇವೆಗೆ ಸೇರಿಸಿಕೊಳ್ಳಲು ನಿಗಮದ ಹಾಲಿ ಅಧ್ಯಕ್ಷ ಡಾ ಬೇಳೂರು ರಾಘವೇಂದ್ರಶೆಟ್ಟಿ ಅವರು ನಾಲ್ಕರಿಂದ ಐದು ಕೋಟಿ ರು. ಹಣದ ವ್ಯವಹಾರ ಮಾತುಕತೆ ನಡೆಸಿದ್ದರು ಎಂದು ಮುಖ್ಯ ಕಾರ್ಯದರ್ಶಿಗೆ ಬರೆದಿದ್ದ ಪತ್ರದಲ್ಲಿ ಡಿ ರೂಪಾ ಅವರು ದೂರಿದ್ದನ್ನು ಸ್ಮರಿಸಬಹುದು.

Hot this week

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...
Please Scan to make Your Contribution

Topics

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!