Saturday | August 8, 2026 |

‘ಆತ್ಮಹತ್ಯೆ ಮಾಡಿಕೊಂಡರೆ ಡಿ ರೂಪಾ ಅವರೇ ಕಾರಣ’; ರಾಘವೇಂದ್ರ ಶೆಟ್ಟಿ ವಿಡಿಯೋ ಬಹಿರಂಗ

ಬೆಂಗಳೂರು; ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಹಿರಿಯ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ಮಧ್ಯೆ ನಡೆಯುತ್ತಿರುವ ಪತ್ರ ಸಮರ ಆರಂಭವಾಗಿರುವ ಬೆನ್ನಲ್ಲೇ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಕ್ಕೆ ವಿಡಿಯೋ ಸಾಕ್ಷ್ಯವೊಂದು ಬಹಿರಂಗವಾಗಿದೆ.

 

ಅವರು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ ಎಂದು ಲಿಖಿತ ದೂರು ನೀಡಿರುವ ಬೆನ್ನಲ್ಲೇ ಬಹಿರಂಗವಾಗಿರುವ ವಿಡಿಯೋ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹಿರಿಯ ಐಪಿಎಸ್‌ ಅಧಿಕಾರಿ ಡಿ ರೂಪಾ ಅವರು ಮುಖ್ಯ ಕಾರ್ಯದರ್ಶಿಗೆ ನೀಡಿದ್ದ ದೂರಿಗೆ ಮತ್ತಷ್ಟು ಬಲ ಬಂದಂತಾಗಿದೆ. ಈ ವಿಡಿಯೋ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಡಿಯೋದಲ್ಲೇನಿದೆ?

 

ನಿಗಮದ 302 ಹಾಗೂ 303ನೇ ಆಡಳಿತ ಮಂಡಳಿ ಸಭೆ ನಡೆಯುತ್ತಿದ್ದ ವೇಳೆಯಲ್ಲಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಿ ರೂಪಾ ಅವರು ಮುಖಾಮುಖಿಯಾಗಿ ಮಾತನಾಡಿಲ್ಲ. ಬೇಳೂರು ರಾಘವೇಂದ್ರ ಶೆಟ್ಟಿ ಅವರ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆ ರೂಪ ಆವರು ಕಾರಣ ಎಂದು 5-6 ಬಾರಿ ಹೇಳಿರುವುದು ವಿಡಿಯೋದಿಂದ ತಿಳಿದು ಬಂದಿದೆ.

 

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರು. ವಂಚಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸೇವೆಯಿಂದಲೇ ವಜಾ ಆಗಿದ್ದ ನಿಗಮದ ಅಂದಿನ ಪ್ರಧಾನ ವ್ಯವಸ್ಥಾಪಕ ಜಿ ಕಿಶೋರ್‌ಕುಮಾರ್‌ ಅವರನ್ನು ಪುನಃ ಸೇವೆಗೆ ಸೇರಿಸಿಕೊಳ್ಳಲು ನಿಗಮದ ಹಾಲಿ ಅಧ್ಯಕ್ಷ ಡಾ ಬೇಳೂರು ರಾಘವೇಂದ್ರಶೆಟ್ಟಿ ಅವರು ನಾಲ್ಕರಿಂದ ಐದು ಕೋಟಿ ರು. ಹಣದ ವ್ಯವಹಾರ ಮಾತುಕತೆ ನಡೆಸಿದ್ದರು ಎಂದು ಮುಖ್ಯ ಕಾರ್ಯದರ್ಶಿಗೆ ಬರೆದಿದ್ದ ಪತ್ರದಲ್ಲಿ ಡಿ ರೂಪಾ ಅವರು ದೂರಿದ್ದನ್ನು ಸ್ಮರಿಸಬಹುದು.

Hot this week

‘ಅಕ್ರಮ ಗಣಿಗಾರಿಕೆ ಮಾಡಿರುವುದು ಗಮನಕ್ಕೆ ಬಂದಿರಲಿಲ್ಲವೇ?; ಅದಾನಿ ಎಸಿಸಿ ಸಿಮೆಂಟ್ ಪ್ರಕರಣದಲ್ಲಿ ಮಾಹಿತಿ ಕೋರಿದ ಆರ್ಥಿಕ ಇಲಾಖೆ

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ನ ಗಣಿ ಗುತ್ತಿಗೆ ಅವಧಿ...

15ನೇ ಹಣಕಾಸು ಆಯೋಗ;1,764.83 ಕೋಟಿ ಬಳಕೆ ಮಾಡದ ಪಂಚಾಯ್ತಿಗಳು, ನರೇಗಾ ಅನುದಾನವೂ ಅನ್ಯ ಉದ್ದೇಶಕ್ಕೆ ಬಳಕೆ

ಬೆಂಗಳೂರು; ಪ್ರಿಯಾಂಕ್‌ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌  ಸಚಿವರಾಗಿದ್ದ ಸಂದರ್ಭದಲ್ಲೇ ಅದೂ...
Please Scan to make Your Contribution

Topics

15ನೇ ಹಣಕಾಸು ಆಯೋಗ;1,764.83 ಕೋಟಿ ಬಳಕೆ ಮಾಡದ ಪಂಚಾಯ್ತಿಗಳು, ನರೇಗಾ ಅನುದಾನವೂ ಅನ್ಯ ಉದ್ದೇಶಕ್ಕೆ ಬಳಕೆ

ಬೆಂಗಳೂರು; ಪ್ರಿಯಾಂಕ್‌ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌  ಸಚಿವರಾಗಿದ್ದ ಸಂದರ್ಭದಲ್ಲೇ ಅದೂ...

ಐಎಎಸ್‌ ಅಧಿಕಾರಿಗಳ ಸಂಘಕ್ಕೆ ಕೋಟಿ ಕೋಟಿ ಅನುದಾನ; ನಿಯಮಬಾಹಿರ ಬಳಕೆ, 9.50 ಕೋಟಿ ವೆಚ್ಚಕ್ಕೆ ದಾಖಲೆಗಳೇ ಇಲ್ಲವೆಂದ ಎಜಿ

ಬೆಂಗಳೂರು; ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಎಸ್‌ ಅಧಿಕಾರಿಗಳ ಸಂಘಕ್ಕೆ ನೀಡಲಾಗಿದ್ದ ಅನುದಾನವನ್ನು ನಿಯಮಬಾಹಿರವಾಗಿ...

54 ತಾಲೂಕುಗಳಲ್ಲಿ ತೀವ್ರ, 40 ತಾಲೂಕುಗಳಲ್ಲಿ ಮಧ್ಯಮ ಬರ; ಇನ್ನೂ ರಚನೆಯಾಗದ ನೈಸರ್ಗಿಕ ವಿಕೋಪಗಳ ಸಚಿವ ಸಂಪುಟ ಉಪ ಸಮಿತಿ

ಬೆಂಗಳೂರು; ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಕುರಿತು ಪ್ರತಿಪಕ್ಷಗಳು ಜಿಲ್ಲಾವಾರು, ಪ್ರದೇಶವಾರು...

Related Articles

Popular Categories

error: Content is protected !!