Friday | September 18, 2026 |

ಸ್ವಚ್ಛಭಾರತ್‌ ಸೇರಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಿಡುಗಡೆಯಾಗದ 921 ಕೋಟಿ;ತುಟಿ ಬಿಚ್ಚದ ಸರ್ಕಾರ

ಬೆಂಗಳೂರು; ದೇವಾಲಯಕ್ಕಿಂತ ಶೌಚಾಲಯ ಮುಖ್ಯ ಎಂದು ಗಾಂಧಿ ಜಯಂತಿಯಂದೇ ಸ್ವಚ್ಛ ಭಾರತ್‌ ಶೌಚಾಲಯಗಳ ನಿರ್ಮಾಣಕ್ಕೆ ಚಾಲನೆ ನೀಡಿ ಗಾಂಧೀಜಿ ಬಳಸುತ್ತಿದ್ದ ಕನ್ನಡಕವನ್ನೇ ಲಾಂಛನವಾಗಿ ಬಳಸಿಕೊಂಡು ಪ್ರಚಾರ ಗಿಟ್ಟಿಸಿಕೊಂಡಿರುವ ಕೇಂದ್ರ ಸರ್ಕಾರವು ರಾಜ್ಯಕ್ಕೆ ಕಳೆದೊಂದು ವರ್ಷದಲ್ಲಿ ಇದೇ ಯೋಜನೆಗೆ ಹಂಚಿಕೆ ಮಾಡಿದ್ದ ಒಟ್ಟು ಅನುದಾನದ ಪೈಕಿ 145.00 ಕೋಟಿ ರು.ಗಳನ್ನು ಬಿಡುಗಡೆ ಮಾಡಿಲ್ಲ.

 

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ಸ್ವಚ್ಚ ಭಾರತ ಯೋಜನೆಯೂ ಸೇರಿದಂತೆ ಆರೋಗ್ಯ, ವಸತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಒಟ್ಟು 921.22 ಕೋಟಿ ರು. ಅನುದಾನ ಬಿಡುಗಡೆಯಾಗಿಲ್ಲ.

 

ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಲಕ್ಷಾಂತರ ಕೋಟಿ ರು ಬಿಡುಗಡೆಯಾಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗಷ್ಟೇ ಜಾಹೀರಾತು ನೀಡಿ ಭರ್ಜರಿ ಪ್ರಚಾರ ಗಿಟ್ಟಿಸಿಕೊಂಡಿದ್ದರ ಬೆನ್ನಲ್ಲೇ ನಾಲ್ಕು ಇಲಾಖೆಗಳಲ್ಲಿ 921. 22 ಕೋಟಿ ರು. ಬಿಡುಗಡೆಯಾಗಿಲ್ಲ ಎಂಬ ಅಂಶವು ಬಹಿರಂಗವಾಗಿದೆ.

 

ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಕುರಿತು 2022ರ ಮೇ 20ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಕೇಂದ್ರ ಸರ್ಕಾರವು 921.22 ಕೋಟಿ ರು. ಬಿಡುಗಡೆ ಮಾಡಿಲ್ಲ ಎಂದು ಅಧಿಕಾರಿಗಳು ಮಾಹಿತಿ ಒದಗಿಸಿದ್ದಾರೆ. ಅಧಿಕಾರಿಗಳು ಒದಗಿಸಿರುವ ಮಾಹಿತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಆರ್‌ಡಿಪಿಆರ್‌ ಇಲಾಖೆ ಒದಗಿಸಿರುವ ಮಾಹಿತಿ ಪ್ರತಿ

 

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಅಡಿಯಲ್ಲಿ ಜಾರಿಗೊಳಿಸಿರುವ ಸ್ವಚ್ಚ ಭಾರತ ಯೋಜನೆಯಡಿ 145.00 ಕೋಟಿ, ಪಿಎಂಜಿಎಸ್‌ವೈ ಯೋಜನೆಯಡಿ 151.00 ಕೋಟಿ ರು. ಬಿಡುಗಡೆ ಮಾಡಿಲ್ಲ. ಈ ಅವಧಿಯಲ್ಲಿ ಸಚಿವರಾಗಿದ್ದ ಕೆ ಎಸ್‌ ಈಶ್ವರಪ್ಪ ಅವರು ಹಣ ಬಿಡುಗಡೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಒತ್ತಡವನ್ನೇ ಹಾಕಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

 

ವಸತಿ ಇಲಾಖೆಯ ಪಿಎಂವೈ (ನಗರ) ಯೋಜನೆಯಡಿ 51.00 ಕೋಟಿ, ಪಿಎಂಎವೈ (ಗ್ರಾಮೀಣ) ಯೋಜನೆಯಡಿ 253.50 ಕೋಟಿ ರು., ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಮಿಷನ್‌ ಅಡಿ 224.57 ಕೋಟಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಎಸ್‌ಸಿಪಿ ಮತ್ತುಟಿಎಸ್‌ಪಿ ಅಡಿಯಲ್ಲಿ 50 ಕೋಟಿ, ಆರ್ಟಿಕಲ್‌ 275ರ ಅಡಿ ಕಾಲೋನಿ ಅಭಿವೃದ್ಧಿಗೆ 26 ಕೋಟಿ ರು. ಬಿಡುಗಡೆ ಮಾಡಿಲ್ಲ.

 

921.22 ಕೋಟಿ ರು. ಬಿಡುಗಡೆಯಾಗದ ಕಾರಣ ಈ ಯೋಜನೆಗಳಡಿಯಲ್ಲಿ ಶೇ.100ರಷ್ಟು ವೆಚ್ಚ ಮಾಡಿಲ್ಲ ಎಂದು ಇಲಾಖೆಯು ಸಭೆಗೆ ಮಾಹಿತಿ ಒದಗಿಸಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ 2021-22ನೇ ಸಾಲಿನಲ್ಲಿ ಬಿಡುಗಡೆಯಾಗದೇ ಇರುವ ಅನುದಾನವನ್ನು ಬಳಕೆಯಾಗದೇ ಇರುವ ಅನುದಾನವೆಂದು ಪರಿಗಣಿಸಿ ಮುಂದಿನ ಆರ್ಥಿಕ ವರ್ಷದಲ್ಲಿ ಒದಗಿಸಲು ಅವಕಾಶವಿಲ್ಲ ಎಂದೂ ಸಭೆಗೆ ಮಾಹಿತಿ ಒದಗಿಸಿದ್ದಾರೆ.

 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಡಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ 2021-22ನೇ ಸಾಲಿನಲ್ಲಿ 3,460.33 ಕೋಟಿ ರು. ಹಂಚಿಕೆಯಾಗಿತ್ತು. ಈ ಪೈಕಿ 3,163.67 ಕೋಟಿ ರು. ಬಿಡುಗಡೆ ಅಗಿತ್ತು. ಇದರಲ್ಲಿ 3,158.94 ಕೋಟಿ ರು. ಖರ್ಚಾಗಿತ್ತು.

 

2022-23ನೇ ಸಾಲಿಗೆ ಈ ಇಲಾಖೆಗೆ 3,108.15 ಕೋಟಿ ರು. ಹಂಚಿಕೆಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಹೆಚ್ಚು ಇರುವ ಗ್ರಾಮಗಳಿಗೆ ಸಂಪರ್ಕ ರಸ್ತೆಗಳಿಗೆ ಗ್ರಾಮ ಸಡಕ್‌ ಯೋಜನೆಗೆ 156.65 ಕೋಟಿ ರು., ಗ್ರಾಮೀಣ ಸುಮಾರ್ಗ, ನಮ್ಮ ಗ್ರಾಮ ನಮ್ಮ ರಸ್ತೆಗೆ 250 ಕೋಟಿ , ಜಲಜೀವನ್‌ ಮಿಷನ್‌ಗೆ 2,200.45 ಕೋಟಿ, ಸ್ವಚ್ಛ ಭಾರತ ಅಭಿಯಾನಕ್ಕೆ 145.60 ಕೋಟಿ ರು., ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ 20,000 ರು.ನಂತೆ ಪ್ರೋತ್ಸಾಹಧನ ನೀಡಲು ಹೆಚ್ಚುವರಿಯಾಗಿ 20.41 ಕೋಟಿ ರು., ನರೇಗಾ ಅಡಿಯಲ್ಲಿ 308.48 ಕೋಟಿ ರು. ಹಂಚಿಕೆ ಮಾಡಲಾಗಿದೆ.

Hot this week

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...
Please Scan to make Your Contribution

Topics

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

Related Articles

Popular Categories

error: Content is protected !!