Friday | June 12, 2026 |

ಪಠ್ಯದಲ್ಲಿ ಕನಕದಾಸರ ಮಾಹಿತಿ ಒಂದು ಸಾಲಿಗೆ ಇಳಿಕೆ; ಕುರುಬರ ಸಂಘ ಮೌನ, ಕನಕ ಗುರುಪೀಠ ಕಿಡಿ

ಬೆಂಗಳೂರು; ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪರಿಶೀಲನಾ ಸಮಿತಿಯು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಕನಕದಾಸರನ್ನು ಕೇವಲ ಒಂದೇ ಒಂದು ಸಾಲಿನಲ್ಲಿ ಪರಿಚಯಿಸಿರುವುದಕ್ಕೆ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಈಶ್ವರಾನಂದಪುರಿ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

ಕುವೆಂಪು ವಿರುದ್ಧ ಅವಹೇಳನ ಮಾಡಿದ್ದ ರೋಹಿತ್‌ ಚಕ್ರತೀರ್ಥ ವಿರುದ್ಧ ಆದಿಚುಂಚನಗಿರಿ ಮಠ, ನಂಜಾವದೂತ ಶ್ರೀಗಳು ಸೇರಿದಂತೆ ನಾಡಿನೆಲ್ಲೆಡೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರ ಬೆನ್ನಲ್ಲೇ ಇದೀಗ ಪಠ್ಯದಲ್ಲಿ ಕನಕದಾಸರ ಕುರಿತಾದ ಮಾಹಿತಿಯನ್ನು ಸೀಮಿತಗೊಳಿಸಿರುವುದಕ್ಕೆ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠವು ಮೌನ ಮುರಿದಿರುವುದು ಪ್ರತಿರೋಧವನ್ನು ಬಲಪಡಿಸಿದಂತಾಗಿದೆ. ಕನಕ ಗುರುಪೀಠವು ಆಕ್ಷೇಪ ಎತ್ತಿದ್ದರೂ ಕರ್ನಾಟಕ ಪ್ರದೇಶ ಕುರುಬರ ಸಂಘವು ಇದುವರೆಗೂ ತುಟಿ ಬಿಚ್ಚಿಲ್ಲ.

 

ಅಲ್ಲದೆ ಈ ಸಮಿತಿಯು ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ತಕ್ಷಣವೇ ಹಿಂಪಡೆದುಕೊಳ್ಳಬೇಕು ಎಂದು ಒತ್ತಾಯಿಸುತ್ತಿರುವ ಮಠಾಧೀಶರ ಸಾಲಿಗೆ ಕಾಗಿನೆಲೆ ಕನಕ ಗುರುಪೀಠವೂ ಸೇರಿದೆ. ಪಠ್ಯ ಪರಿಷ್ಕರಣೆಯಲ್ಲಿ ಬಸವೇಶ್ವರರ ಕುರಿತು ತಪ್ಪು ಮಾಹಿತಿ ಸೇರಿಸಿದ್ದರೂ ಲಿಂಗಾಯತ ಮಠಗಳ ಮಠಾಧೀಶರು ತುಟಿ ಬಿಚ್ಚದಿರುವ ಹೊತ್ತಿನಲ್ಲಿ ಕನಕದಾಸರ ಕುರಿತು ಇದ್ದ ಮಾಹಿತಿಯನ್ನು ಒಂದೇ ಸಾಲಿಗೆ ಇಳಿಸಿರುವುದನ್ನು ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠವು ದನಿ ಎತ್ತಿರುವುದು ಹೋರಾಟಕ್ಕೆ ಇಂಬುಕೊಟ್ಟಂತಾಗಿದೆ.

 

ಪಠ್ಯ ಪರಿಷ್ಕರಣೆಯಲ್ಲಿ ಕನಕದಾಸರ ಕುರಿತು ಮಾಹಿತಿ ಇಲ್ಲದಿರುವ ಕುರಿತು ಈಶ್ವರಾನಂದಪುರಿ ಶ್ರೀಗಳು ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪತ್ರದಲ್ಲೇನಿದೆ?

 

2021-22ರ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಭಕ್ತಿ ಪಂಥದ ಕುರಿತು ದಾಸ ಶ್ರೇಷ್ಠ ಕನಕದಾಸರ ಬಗ್ಗೆ ಒಂದು ಪುಟಕ್ಕೂ ಹೆಚ್ಚಿನ ಮಾಹಿತಿ ಇದ್ದು, ಈಗಿನ ಪರಿಷ್ಕರಣೆಯಲ್ಲಿ 2022-23ರ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದ ಭಕ್ತಿ ಪಂಥದಲ್ಲಿ ಕೇವಲ ಒಂದೇ ಒಂದು ಸಾಲಿನಲ್ಲಿ ಪರಿಚಯಿಸಿರುವ ಕಾರಣ ತಿಳಿಯುತ್ತಿಲ್ಲ. 16ನೇ ಶತಮಾನದಲ್ಲಿ ಸಾಮಾಜಿಕ ವೈರುಧ್ಯಗಳ ವಿರುದ್ಧ ಕಂದಾಚಾರಗಳ ವಿರುದ್ಧ, ಜಾತೀಯತೆ ಹೋಗಲಾಡಿಸಲು ಬಹುದೊಡ್ಡ ಕೊಡುಗೆಯನ್ನು ನೀಡಿದವರು.

ಕಾಗಿನೆಲೆ ಮಹಾಸಂಸ್ಥಾನ ಗುರುಪೀಠದ ಈಶ್ವರನಂದಾಪುರಿ ಸ್ವಾಮೀಜಿ ಬರೆದಿರುವ ಪತ್ರದ ಪ್ರತಿ

 

ಕೀರ್ತನೆಗಳ ಮೂಲಕ ದಾಸಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕನಕದಾಸರ ಕುರಿತು ಮಾಹಿತಿಯಿಲ್ಲದೇ ಇರುವುದು ಎಷ್ಟು ಸರಿ, ಈ ಎಲ್ಲಾ ವಿಚಾರಗಳನ್ನು ತಾವು ಮನಗಂಡು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯವರಿಗೆ ಸೂಚನೆ ನೀಡಿ ಆಗಿರುವ ತಪ್ಪುಗಳನ್ನು ತಿದ್ದಿ ಕನಕದಾಸರನ್ನುಕುರಿತು ಸರಿಯಾದ ಮಾಹಿತಿಯನ್ನು ಪಠ್ಯಪುಸ್ತಕದಲ್ಲಿ ನೀಡಬೇಕು ಎಂದು ಈ ಮೂಲಕ ತಿಳಿಯಬಯಸುತ್ತೇನೆ.

 

ತಜ್ಞರಲ್ಲದ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಿ ಈಗಾಗಲೇ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕತೆಯಲ್ಲಿ ಇರುವ ಪಠ್ಯವನ್ನೇ ಮುಂದುವರೆಸಲು ತಿಳಿಯಬಯಸುತ್ತೇವೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!