Monday | March 9, 2026 |

ಪಿಯು ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ; ಕೇಳಿದ್ದು 6 ಸಾವಿರ, ಸರ್ಕಾರ ಹೆಚ್ಚಿಸಿದ್ದು 3 ಸಾವಿರ

Support THE-FILE

spot_img

ಬೆಂಗಳೂರು; ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ನೀಡುತ್ತಿದ್ದ 9,000 ರು. ಗೌರವ ಸಂಭಾವನೆಯನ್ನು 15 ಸಾವಿರ ರು.ಗಳಿಗೆ ಹೆಚ್ಚಿಸಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರೆ ಸರ್ಕಾರವು ಕೇವಲ ಮೂರು ಸಾವಿರ ಮಾತ್ರ ಹೆಚ್ಚಳ ಮಾಡಿ 12,000 ರು.ಗೇರಿಸಿದೆ.

 

6 ಸಾವಿರ ರುಪಾಯಿ ಗೌರವ ಸಂಭಾವನೆ ಹೆಚ್ಚಳವಾಗಲಿದೆ ಎಂದು ಅತಿಥಿ ಉಪನ್ಯಾಸಕರ ನಿರೀಕ್ಷೆಯನ್ನು ಹುಸಿಗೊಳಿಸಿರುವ ರಾಜ್ಯ ಸರ್ಕಾರವು ಮೂರು ಸಾವಿರ ರುಪಾಯಿ ಹೆಚ್ಚಳ ಮಾಡಿ 2022ರ ಜುಲೈ 5ರಂದು ಆದೇಶ ಹೊರಡಿಸಿದೆ. 9 ಸಾವಿರ ರು.ಗಳನ್ನು ಮೂರು ಸಾವಿರ ರುಪಾಯಿಗೇರಿಸಿ ಒಟ್ಟು 12,000 ರು. ಗೌರವ ಸಂಭಾವನೆ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದನ್ನು ಸಚಿವ ಬಿ ಸಿ ನಾಗೇಶ್‌ ಅವರು ಅನುಮೋದಿಸಿದ್ದಾರೆ.  ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

2022-23ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಒಟ್ಟು 3,271 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ 100 ಉಪನ್ಯಾಸಕರು, ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ 337 ಅತಿಥಿ ಉಪನ್ಯಾಸಕರ ಸಂಖ್ಯೆ ಸೇರಿದಂತೆ ಒಟ್ಟಾರೆ 3,708 ಹುದ್ದೆಗಳು ಖಾಲಿ ಇರುವುದು ಆದೇಶದಿಂದ ತಿಳಿದು ಬಂದಿದೆ.

 

ಗೌರವ ಸಂಭಾವನೆ ಹೆಚ್ಚಳ ಮಾಡಿ ಹೊರಡಿಸಿರುವ ಆದೇಶದ ಪ್ರತಿ

 

‘2022-23ನೇ ಶೈಕ್ಷಣಿಕ ಸಾಲಿನಲ್ಲಿ 3,708 ಅತಿಥಿ ಉಪನ್ಯಾಸಕರುಗಳಿಗೆ ಇಲ್ಲಿಯವರೆಗೆ ಹಲವು ವರ್ಷಗಳಿಂದ 9,000 ರು.ಗಳ ಗೌರವ ಸಂಭಾವನೆ ನೀಡಲಾಗುತ್ತಿತ್ತು. ಆದರೆ ಅದನ್ನು ಹೆಚ್ಚಿಸುವಂತೆ ಸಾಕಷ್ಟು ಬೇಡಿಕೆ ಬರುತ್ತಿದೆ. ಹಾಗೂ ಇತ್ತೀಚೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವ ಸಂಭಾವನೆ ಹೆಚ್ಚಿಸಿ ಆದೇಶಿಸಲಾಗಿದೆ. ಅದರಂತೆ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಗೌರವ ಸಂಭಾವನೆಯನ್ನು 9,000 ರು.ಗಳಿಂದ 15,000 ರು.ಗಳಿಗೆ ಹೆಚ್ಚಿಸಬೇಕು,’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಸ್ತಾವನೆಯಲ್ಲಿ ಕೋರಿದ್ದರು.

 

 

ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇದ್ದ ಅತಿಥಿ ಉಪನ್ಯಾಸಕರನ್ನು ಭರ್ತಿ ಮಾಡಲು 2016ರ ಜುಲೈ 4ರಂದೇ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆ ನಂತರ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರಲಿಲ್ಲ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಒಟ್ಟು 3,552 ಅತಿಥಿ ಉಪನ್ಯಾಸಕರನ್ನು 08 ತಿಂಗಳುವರೆಗೆ ಮಾಸಿಕ 9,000 ರು.ಗಳ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಪದವಿಪೂರ್ವ ಶಿಕ್ಷಣ ಇಲಾಖೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು.

 

2021-22ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಗಳು ಏಪ್ರಿಲ್‌ 13ವರೆಗೆ ನಡೆದಿತ್ತು. ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 18ರರೆಗೆ ನಡೆಸಲಾಗುತ್ತಿದೆ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ನೇಮಕ ಮಾಡಿಕೊಂಡ ಅತಿಥಿ ಉಪನ್ಯಾಸಕರುಗಳನ್ನು ಪ್ರಥಮ ಪಿಯುಸಿ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಕಾರ್ಯಗಳಿಗೆ ಉಪಯೋಗಿಸಿಕೊಂಡಿರುವುದರಿಂದ ಈ ಅತಿಥಿ ಉಪನ್ಯಾಸಕರುಗಳಿಗೆ ಮಾರ್ಚ್ ಮತ್ತು ಏಪ್ರಿಲ್‌ 2022ರವರೆಗೆ ಗೌರವ ಧನ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಪ ನಿರ್ದೇಶಕರುಗಳು ಕೋರಿದ್ದರು.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!