Monday | August 24, 2026 |

ಪಿಯು ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ; ಕೇಳಿದ್ದು 6 ಸಾವಿರ, ಸರ್ಕಾರ ಹೆಚ್ಚಿಸಿದ್ದು 3 ಸಾವಿರ

ಬೆಂಗಳೂರು; ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ನೀಡುತ್ತಿದ್ದ 9,000 ರು. ಗೌರವ ಸಂಭಾವನೆಯನ್ನು 15 ಸಾವಿರ ರು.ಗಳಿಗೆ ಹೆಚ್ಚಿಸಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರೆ ಸರ್ಕಾರವು ಕೇವಲ ಮೂರು ಸಾವಿರ ಮಾತ್ರ ಹೆಚ್ಚಳ ಮಾಡಿ 12,000 ರು.ಗೇರಿಸಿದೆ.

 

6 ಸಾವಿರ ರುಪಾಯಿ ಗೌರವ ಸಂಭಾವನೆ ಹೆಚ್ಚಳವಾಗಲಿದೆ ಎಂದು ಅತಿಥಿ ಉಪನ್ಯಾಸಕರ ನಿರೀಕ್ಷೆಯನ್ನು ಹುಸಿಗೊಳಿಸಿರುವ ರಾಜ್ಯ ಸರ್ಕಾರವು ಮೂರು ಸಾವಿರ ರುಪಾಯಿ ಹೆಚ್ಚಳ ಮಾಡಿ 2022ರ ಜುಲೈ 5ರಂದು ಆದೇಶ ಹೊರಡಿಸಿದೆ. 9 ಸಾವಿರ ರು.ಗಳನ್ನು ಮೂರು ಸಾವಿರ ರುಪಾಯಿಗೇರಿಸಿ ಒಟ್ಟು 12,000 ರು. ಗೌರವ ಸಂಭಾವನೆ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದನ್ನು ಸಚಿವ ಬಿ ಸಿ ನಾಗೇಶ್‌ ಅವರು ಅನುಮೋದಿಸಿದ್ದಾರೆ.  ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

2022-23ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಒಟ್ಟು 3,271 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ 100 ಉಪನ್ಯಾಸಕರು, ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ 337 ಅತಿಥಿ ಉಪನ್ಯಾಸಕರ ಸಂಖ್ಯೆ ಸೇರಿದಂತೆ ಒಟ್ಟಾರೆ 3,708 ಹುದ್ದೆಗಳು ಖಾಲಿ ಇರುವುದು ಆದೇಶದಿಂದ ತಿಳಿದು ಬಂದಿದೆ.

 

ಗೌರವ ಸಂಭಾವನೆ ಹೆಚ್ಚಳ ಮಾಡಿ ಹೊರಡಿಸಿರುವ ಆದೇಶದ ಪ್ರತಿ

 

‘2022-23ನೇ ಶೈಕ್ಷಣಿಕ ಸಾಲಿನಲ್ಲಿ 3,708 ಅತಿಥಿ ಉಪನ್ಯಾಸಕರುಗಳಿಗೆ ಇಲ್ಲಿಯವರೆಗೆ ಹಲವು ವರ್ಷಗಳಿಂದ 9,000 ರು.ಗಳ ಗೌರವ ಸಂಭಾವನೆ ನೀಡಲಾಗುತ್ತಿತ್ತು. ಆದರೆ ಅದನ್ನು ಹೆಚ್ಚಿಸುವಂತೆ ಸಾಕಷ್ಟು ಬೇಡಿಕೆ ಬರುತ್ತಿದೆ. ಹಾಗೂ ಇತ್ತೀಚೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವ ಸಂಭಾವನೆ ಹೆಚ್ಚಿಸಿ ಆದೇಶಿಸಲಾಗಿದೆ. ಅದರಂತೆ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಗೌರವ ಸಂಭಾವನೆಯನ್ನು 9,000 ರು.ಗಳಿಂದ 15,000 ರು.ಗಳಿಗೆ ಹೆಚ್ಚಿಸಬೇಕು,’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಸ್ತಾವನೆಯಲ್ಲಿ ಕೋರಿದ್ದರು.

 

 

ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇದ್ದ ಅತಿಥಿ ಉಪನ್ಯಾಸಕರನ್ನು ಭರ್ತಿ ಮಾಡಲು 2016ರ ಜುಲೈ 4ರಂದೇ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆ ನಂತರ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರಲಿಲ್ಲ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಒಟ್ಟು 3,552 ಅತಿಥಿ ಉಪನ್ಯಾಸಕರನ್ನು 08 ತಿಂಗಳುವರೆಗೆ ಮಾಸಿಕ 9,000 ರು.ಗಳ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಪದವಿಪೂರ್ವ ಶಿಕ್ಷಣ ಇಲಾಖೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು.

 

2021-22ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಗಳು ಏಪ್ರಿಲ್‌ 13ವರೆಗೆ ನಡೆದಿತ್ತು. ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 18ರರೆಗೆ ನಡೆಸಲಾಗುತ್ತಿದೆ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ನೇಮಕ ಮಾಡಿಕೊಂಡ ಅತಿಥಿ ಉಪನ್ಯಾಸಕರುಗಳನ್ನು ಪ್ರಥಮ ಪಿಯುಸಿ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಕಾರ್ಯಗಳಿಗೆ ಉಪಯೋಗಿಸಿಕೊಂಡಿರುವುದರಿಂದ ಈ ಅತಿಥಿ ಉಪನ್ಯಾಸಕರುಗಳಿಗೆ ಮಾರ್ಚ್ ಮತ್ತು ಏಪ್ರಿಲ್‌ 2022ರವರೆಗೆ ಗೌರವ ಧನ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಪ ನಿರ್ದೇಶಕರುಗಳು ಕೋರಿದ್ದರು.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!