Sunday | April 19, 2026 |

ಕ್ರೈಮ್‌ ಆಫೀಸರ್‌ ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ!; ಪೌಲ್‌ ಬಂಧನದ ಬೆನ್ನಲ್ಲೇ ಆಯ್ಕೆಪಟ್ಟಿ ಬಹಿರಂಗ

ಬೆಂಗಳೂರು; ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಗುರುತರ ಆರೋಪಕ್ಕೆ ಗುರಿಯಾಗಿರುವ ಪೊಲೀಸ್‌ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಡಿಜಿಪಿ ಅಮ್ರಿತ್‌  ಪೌಲ್‌ ಅವರು ಈ ಹುದ್ದೆಯಿಂದ ವರ್ಗಾವಣೆ ಆಗುವ ಮುನ್ನ ನಡೆದಿದ್ದ ಸೀನ್‌ ಅಫ್‌ ಕ್ರೈಮ್‌ ಆಫೀಸರ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿಯೂ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ.

 

2021ರಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿತ್ತಾದರೂ 2022ರ ಜುಲೈ 2ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಸಿಐಡಿ ಪೊಲೀಸರು ಅಮೃತ್‌ ಪೌಲ್‌ ಅವರನ್ನು ಬಂಧನಕ್ಕೊಳಪಡಿಸಿ ಅಮಾನತುಗೊಳಿಸಿರುವ ಬೆನ್ನಲ್ಲೇ 2022ರ ಜುಲೈ 2ರಂದು ಬಿಡುಗಡೆಗೊಂಡಿರುವ 202 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯೂ ಮುನ್ನೆಲೆಗೆ ಬಂದಿದೆ. ಈ ಪಟ್ಟಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಅಮ್ರಿತ್‌  ಪೌಲ್‌ ಅವರು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಇಡೀ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿತ್ತು. ಆದರೆ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಿರಲಿಲ್ಲ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ನಡೆಯುತ್ತಿದ್ದರಿಂದಾಗಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಿರಲಿಲ್ಲ ಎನ್ನಲಾಗಿದೆ. ನೇಮಕಾತಿ ಪ್ರಾಧಿಕಾರದ ಪ್ರಸ್ತುತ ಅಧ್ಯಕ್ಷರಾದ ಎಡಿಜಿಪಿ ಕಮಲ್‌ ಪಂತ್‌ ಅವರ ಸಹಿಯೊಂದಿಗೆ ತಾತ್ಕಾಲಿಕ ಆಯ್ಕೆಪಟ್ಟಿಯು ಬಿಡುಗಡೆಯಾಗಿದೆ.

 

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಒಎಂಆರ್‌ ಶೀಟ್‌ಗಳನ್ನಿರಿಸಿದ್ದ ಭದ್ರತಾ ಕೊಠಡಿಯ ಬೀಗದ ಕೀಯನ್ನು ಕೆಳಗಿನ ನೌಕರರಿಗೆ ನೀಡಿ ಅವರ ಮೂಲಕವೇ ಉತ್ತರ ಪತ್ರಿಕೆಗಳನ್ನು ತಿದ್ದಿಸಿರುವುದು ದೃಢಪಟ್ಟಿತ್ತು. ಹೀಗಾಗಿ ಅಮ್ರಿತ್‌  ಪೌಲ್‌ ಅವರನ್ನು ಬಂಧಿಸಲಾಗಿದೆಯಲ್ಲದೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

 

ಅಮ್ರಿತ್‌  ಪೌಲ್‌ ಅವರು ಹಲವು ವರ್ಷಗಳಿಂದಲೂ ಪೊಲೀಸ್‌ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಅವಧಿಯಲ್ಲಿ ಪೊಲೀಸ್‌ ಇಲಾಖೆಯ ವಿವಿಧ ಸ್ತರಗಳಲ್ಲಿ ಖಾಲಿ ಇದ್ದ ಹುದ್ದೆಗಳ ನೇಮಕಾತಿ ನಡೆದಿದೆ. ಇದೀಗ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಗುರುತರ ಆರೋಪಕ್ಕೆ ಗುರಿಯಾಗಿ ಬಂಧನಕ್ಕೊಳಗಾಗಿರುವುದರಿಂದ ಇವರ ಅವಧಿಯಲ್ಲಿ ನಡೆದಿರುವ ಎಲ್ಲಾ ನೇಮಕಾತಿಗಳ ಸುತ್ತಲೂ ಅನುಮಾನಗಳು ವ್ಯಕ್ತವಾಗಿವೆ.

 

ಅಮ್ರಿತ್‌  ಪೌಲ್‌ ನೇಮಕಾತಿ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕವಾದಾಗಿನಿಂದ ಇಲ್ಲಿಯವರೆಗೂ ಇಲಾಖೆಯಲ್ಲಿ ಯಾವೆಲ್ಲಾ ನೇಮಕಾತಿಗಳು ನಡೆದಿವೆಯೋ ಅವೆಲ್ಲದರ ಪುನರ್‌ ವಿಮರ್ಶೆ ಮತ್ತು ತನಿಖೆ ತುರ್ತಾಗಿ ಆಗಬೇಕು. ಜತೆಗೆ ಇನ್ನೂ ನೇಮಕಾತಿ ಆದೇಶ ಹೊರಬೀಳದ ಎಲ್ಲಾ ಪಟ್ಟಿಗಳನ್ನೂ ತಕ್ಷಣವೇ ತಡೆಹಿಡಿಯಲು ಸರ್ಕಾರವು ಹಾಲಿ ನೇಮಕಾತಿ ಪ್ರಾಧಿಕಾರದ ಆಧ್ಯಕ್ಷ ಎಡಿಜಿಪಿ ಕಮಲ್‌ ಪಂತ್‌ ಅವರಿಗೆ ನಿರ್ದೇಶನ ನೀಡಬೇಕು. ಅಲ್ಲದೆ ಪೌಲ್‌ ಅವಧಿಯಲ್ಲಿ ನಡೆದಿರುವ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಈ ಕುರಿತು ಕರ್ನಾಟಕ ರಾಷ್ಟ್ರಸಮಿತಿಯು ಸರ್ಕಾರಕ್ಕೆ ತಕ್ಷಣವೇ ಪತ್ರ ಬರೆಯಲಿದೆ ಎಂದು ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಅವರು ‘ದಿ ಫೈಲ್‌’ಗೆ ಪ್ರತಿಕ್ರಿಯೆ ನೀಡಿದರು.

Hot this week

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ...

ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ...

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತದಿಂದ ತನಿಖೆ, ಹೊರಬಿದ್ದ ಆದೇಶ

ಬೆಂಗಳೂರು; ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಿಂದಿನ ಕಾಂಗ್ರೆಸ್‌...

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

Topics

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ...

ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ...

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತದಿಂದ ತನಿಖೆ, ಹೊರಬಿದ್ದ ಆದೇಶ

ಬೆಂಗಳೂರು; ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಿಂದಿನ ಕಾಂಗ್ರೆಸ್‌...

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

Related Articles

Popular Categories

error: Content is protected !!