Thursday | May 28, 2026 |

ಬಹುಕೋಟಿ ಒಡೆಯ ಜಮೀರ್‌, ಇಫ್ತಿಯಾರ್‌ ಔತಣಕೂಟ ಸಂಚಾರ ನಿಯಂತ್ರಣ ಶುಲ್ಕದಿಂದ ವಿನಾಯಿತಿ ಕೋರಿಕೆ

ಬೆಂಗಳೂರು; ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಬಿ ಜೆಡ್‌ ಜಮೀರ್‌ ಅಹ್ಮದ್‌ ಖಾನ್‌ ಅವರು 2 ತಿಂಗಳ ಹಿಂದೆ ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಇಫ್ತಿಯಾರ್‌ ಔತಣ ಕೂಟ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಗೆ ಪಾವತಿಸಬೇಕಿರುವ ಸಂಚಾರ ನಿಯಂತ್ರಣ ಶುಲ್ಕದಿಂದ ವಿನಾಯಿತಿ ಕೋರಿದ್ದಾರೆ. ಅದೇ ರೀತಿ ಪ್ರಮೋದಾದೇವಿ ಒಡೆಯರ್‌ ಜಾಗದಲ್ಲಿ ನಡೆದಿದ್ದ 5 ಕಾರ್ಯಕ್ರಮಗಳ ಶುಲ್ಕವೂ ಪಾವತಿಯಾಗಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

 

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಕ್ಕೆ ಗುರಿಯಾಗಿ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಒಳಗಾಗಿರುವ ಬಿ ಜೆಡ್‌ ಜಮೀರ್‌ ಅಹ್ಮದ್‌ ಖಾನ್‌ ಅವರು ಬಿಬಿಎಂಪಿಗೆ ಪಾವತಿಸಬೇಕಿರುವ ಕೇವಲ 15,000 ರು. ಸಂಚಾರ ನಿಯಂತ್ರಣ ಶುಲ್ಕದಿಂದ ವಿನಾಯಿತಿ ಕೋರಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಬೆಂಗಳೂರು ಅರಮನೆ ಮೈದಾನದ ನಲಪಾದ್‌ ಪೆವಿಲಿಯನ್‌ ಜಾಗದಲ್ಲಿ 2022ರ ಏಪ್ರಿಲ್ 15ರಂದು ನಡೆಸಿದ್ದ ಇಫ್ತಿಯಾರ್‌ ಕೂಟವು ಖಾಸಗಿ ಕಾರ್ಯಕ್ರಮವಾಗಿದ್ದರೂ ಸಂಚಾರ ನಿಯಂತ್ರಣ ಶುಲ್ಕ ಪಾವತಿಸುವುದರಿಂದ ವಿನಾಯಿತಿ ಕೋರಿರುವುದಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ತಕರಾರು ಎತ್ತಿದೆ. ಈ ಸಂಬಂಧ ಬೆಂಗಳೂರು ಅರಮನೆ ಮೈದಾನದ ಶ್ರೇಯಂ ಗೇಟ್‌ ನಂ 5ರ ರುದ್ರಪ್ರತಾಪ್‌ ಸಿಂಗ್‌ ಅವರಿಗೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರು 2022ರ ಜುಲೈ 6ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಬಿಬಿಎಂಪಿಗೆ ಪಾವತಿಸಬೇಕಾದ 15,000 ರು.ಗಳಿಂದ ವಿನಾಯಿತಿ ಕೋರಿರುವ ಮನವಿಯನ್ನು ಪರಿಶೀಲಿಸಲಾಗಿದೆ. ಪ್ರಸ್ತಾಪಿತ ಕಾರ್ಯಕ್ರಮವು ಸಂಪೂರ್ಣವಾಗಿ ಖಾಸಗಿ ಕಾರ್ಯಕ್ರಮವಾಗಿರುವುದರಿಂದ ಬಿಬಿಎಂಪಿಗೆ ಪಾವತಿಸಬೇಕಾದ ಶುಲ್ಕದಿಂದ ವಿನಾಯಿತಿ ನೀಡುವಂತೆ ಕೋರಿರುವುದನ್ನು ಒಪ್ಪಲು ಬರುವುದಿಲ್ಲ. ಆದ್ದರಿಂದ ನಿಯಮಾನುಸಾರ ಬಿಬಿಎಂಪಿಗೆ ಪಾವತಿಸಬೇಕಾದ ಶುಲ್ಕವನ್ನು ಪಾವತಿಸಿ ಕೂಡಲೇ ದಾಖಲೆ ಸಲ್ಲಿಸಬೇಕು,’ ಎಂದು ಪತ್ರದಲ್ಲಿ ನಿರ್ದೇಶಿಸಿದ್ದಾರೆ.

 

ರುದ್ರಪ್ರತಾಪ್‌ ಸಿಂಗ್‌ ಅವರಿಗೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಬರೆದಿರುವ ಪತ್ರದ ಪ್ರತಿ

 

ಇನ್ನು, ಪ್ರಮೋದಾದೇವಿ ಒಡೆಯರ್‌ ಇವರ ಜಾಗದಲ್ಲಿ 2010 ಮತ್ತು 2018ನೆ ಸಾಲಿನಲ್ಲಿ ಒಟ್ಟು 10 ಕಾರ್ಯಕ್ರಮಗಳು ನಡೆದಿದ್ದವು. ಈ ಪೈಕಿ 5 ಕಾರ್ಯಕ್ರಮಗಳಿಗೆ ಮಾತ್ರ ಶುಲ್ಕ ಪಾವತಿಸಿ ಇನ್ನುಳಿದ 5 ಕಾರ್ಯಕ್ರಮಗಳ ಶುಲ್ಕವನ್ನು ಪಾವತಿಸಿಲ್ಲ.

 

ಶುಲ್ಕ ಪಾವತಿಸಿ ಎಂದು ವಾರಸುದಾರರಿಗೆ ಸೂಚಿಸಿದ್ದರೂ ಇದುವರೆಗೂ ಪಾವತಿಯಾಗಿಲ್ಲ ಎಂಬುದು 2022ರ ಜೂನ್‌ 29ರಂದು ನಡೆದ ಸಭೆ ನಡವಳಿಯಿಂದ ತಿಳಿದು ಬಂದಿದೆ.

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

Related Articles

Popular Categories

error: Content is protected !!