Thursday | March 26, 2026 |

ಪಿಎಸ್‌ಐ ನೇಮಕ ಹಗರಣದ ಇನ್ನೊಂದು ಮುಖ; ಸಂಬಂಧಿಕರಿಗೆ 30 ಲಕ್ಷ, ಉಳಿದವರಿಗೆ 50 ಲಕ್ಷ ನಿಗದಿ

Support THE-FILE

spot_img

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯಲ್ಲಿ ಅಕ್ರಮಕೂಟ ರಚಿಸಿಕೊಂಡಿದ್ದವರು ಸಂಬಂಧಿಕರನ್ನೂ ಬಿಡದೇ ಹಣ ವಸೂಲಿ ಮಾಡಿದ್ದರು ಎಂಬ ಸಂಗತಿಯನ್ನು ದೋಷಾರೋಪಣೆ ಪಟ್ಟಿಯನ್ನು ಬಹಿರಂಗೊಳಿಸಿದೆ.

 

ತನ್ನ ಸಂಬಂಧಿಕರು ಎಂಬ ಕಾರಣಕ್ಕಾಗಿ ಆರೋಪಿ ರುದ್ರಗೌಡ ಪಾಟೀಲ್ ಎಂಬಾತ ಒಟ್ಟು ಮೊತ್ತದಲ್ಲಿ 20 ಲಕ್ಷ ರು.ಗಳನ್ನು ಕಡಿಮೆ ಮಾಡಿದ್ದ ಎಂಬ ಅಂಶವು ದೋಷಾರೋಪಣೆ ಪಟ್ಟಿಯಲ್ಲಿ ಹೇಳಲಾಗಿದೆ. ಸಿಐಡಿ ಅಧಿಕಾರಿಗಳು ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಸಂತ ನರಿಬೋಳ ಅವರ ಮೂಲಕ ಆರೋಪಿ ರುದ್ರಗೌಡ ಪಾಟೀಲ್‌ ಅವರನ್ನು ಭೇಟಿ ಮಾಡಿದ್ದ ಆಕಾಂಕ್ಷಿಯೊಬ್ಬರು ಪಿಎಸ್ಐ ಹುದ್ದೆಗೆ ಆಯ್ಕೆ ಮಾಡಲು ಸಹಾಯ ಕೋರಿದ್ದರು. ‘ಅಣ್ಣಾ ನಾನು ಪಿಎಎಸ್‌ಐ ಪರೀಕ್ಷೆಗೆ ಅರ್ಜಿ ಹಾಕಿದ್ದೇನೆ. ಏನಾದರೂ ಮಾಢಿ ನಾನು ಪಿಎಸ್‌ಐ ಹುದ್ದೆಗೆ ಆಯ್ಕೆಯಾಗುವಂತೆ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಕ್ಕೆ ಬೇರೆ ಕ್ಯಾಂಡಿಡೇಟ್‌ಗಳಿಂದ 50 ಲಕ್ಷ ರು. ಪಡೆದುಕೊಳ್ಳುತ್ತೇನೆ. ಸಂಬಂಧಿಕರಿದ್ದೀರಿ, ನೀವು 30 ಲಕ್ಷ ಕೊಡಿ ಸಾಕು. ಬೇರೆ ಯಾವುದಾದರೂಈ ಕ್ಯಾಂಡಿಡೇಟ್‌ಗಳಿದ್ದಲ್ಲಿ ಕಳುಹಿಸಿಕೊಡಿ ಎಂದು,’ ಎಂದು ರುದ್ರಗೌಡ ಪಾಟೀಲ್‌ ಹೇಳಿದ್ದ ಎಂಬುದನ್ನು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

 

 

ವ್ಯವಹಾರ ಕುದುರಿದ ನಂತರ ಪರೀಕ್ಷೆ ಕೇಂದ್ರದಲ್ಲಿ ಸಿಗುವ ನೆರವಿನ ಕುರಿತು ವಿಸ್ತೃತವಾಗಿ ಆರೋಪಿ ರುದ್ರಗೌಡ ಪಾಟೀಲ್‌ ವಿವರಿಸಿದ್ದ. ‘ ನಿಮಗೆ ನಾವು ಒಂದು ಚಿಕ್ಕ ಬ್ಲ್ಯೂಟೂತ್‌ ಡಿವೈಸ್‌ ಕೊಡುತ್ತೇವೆ. ಅದನ್ನು ಪರೀಕ್ಷೆ ನಡೆಯುವ ದಿನ ಕಿವಿಯಲ್ಲಿ ಹಾಕಿಕೊಳ್ಳಿ. ನಾವು ನಿಮಗೆ ಕರೆ ಮಾಡಿ ನಿಮ್ಮ ಪ್ರಶ್ನೆಪತ್ರಿಕೆಯಲ್ಲಿ ಬಂದಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಹೇಳುತ್ತೇವೆ. ಅದನ್ನು ಕೇಳಿಸಿಕೊಂಡು ನೀವು ಉತ್ತರಗಳನ್ನು ಬರೆದರೆ ಸಾಕು ಪಿಎಸ್‌ಐ ಹುದ್ದೆಗೆ ಆಯ್ಕೆಯಾಗುವುದು ಖಚಿತ ಮತ್ತು ನಿಮಗೆ ಕರೆ ಮಾಡಿ ಉತ್ತರಗಳನ್ನು  ಹೇಳುವುದಕ್ಕಾಗಿ ನಮಗೆ ಒಂದು ಮೊಬೈಲ್‌ ಫೋನ್‌ ಒದಗಿಸಬೇಕು,’ ಎಂಬ ಬೇಡಿಕೆಯನ್ನೂ ಇರಿಸಿದ್ದ ಎಂಬ ಸಂಗತಿ ದೋಷಾರೋಪಣೆ ಪಟ್ಟಿಯಿಂದ ಗೊತ್ತಾಗಿದೆ.

 

ಅದರಂತೆ 2021 ಅಕ್ಟೋಬರ್‌ 3ರಂದು ನಡೆದಿದ್ದ ಪಿಎಸ್‌ಐ ಪರೀಕ್ಷೆ ದಿನ ಆರೋಪಿ ಮತ್ತು ಉತ್ತರಿಸುವ ತಂಡವು ಸೇರಿಕೊಂಡು 9901283143 ಮೊಬೈಲ್‌ ಸಂಖ್ಯೆ ಫೋನ್‌ನಿಂದ 7338633121ಗೆ ಕರೆ ಮಾಡಿಸಿ ಬ್ಲೂಟೂತ್‌ ಡಿವೈಎಸ್‌ ಮೂಲಕ ಪ್ರಶ್ನೆಪತ್ರಿಕೆಗಳಿಲ್ಲಿನ ಪ್ರಶ್ನೆಗಳಿಗೆ ಉತ್ತರಗಳನ್ನು ಹೇಳಿದ್ದನ್ನು ಕೇಳಿಸಿಕೊಂಡು ಉತ್ತರಗಳನ್ನು ಬರೆದು ಎನ್‌ ವಿ ಸುನೀಲ್‌ ಎಂಬಾತ ಆಯ್ಕೆಗೊಂಡಿದ್ದ ಎಂಬುದು ತಿಳಿದು ಬಂದಿದೆ.

Hot this week

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Topics

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Related Articles

Popular Categories

error: Content is protected !!