Monday | May 25, 2026 |

ಪಿಎಸ್‌ಐ ನೇಮಕ ಹಗರಣದ ಇನ್ನೊಂದು ಮುಖ; ಸಂಬಂಧಿಕರಿಗೆ 30 ಲಕ್ಷ, ಉಳಿದವರಿಗೆ 50 ಲಕ್ಷ ನಿಗದಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯಲ್ಲಿ ಅಕ್ರಮಕೂಟ ರಚಿಸಿಕೊಂಡಿದ್ದವರು ಸಂಬಂಧಿಕರನ್ನೂ ಬಿಡದೇ ಹಣ ವಸೂಲಿ ಮಾಡಿದ್ದರು ಎಂಬ ಸಂಗತಿಯನ್ನು ದೋಷಾರೋಪಣೆ ಪಟ್ಟಿಯನ್ನು ಬಹಿರಂಗೊಳಿಸಿದೆ.

 

ತನ್ನ ಸಂಬಂಧಿಕರು ಎಂಬ ಕಾರಣಕ್ಕಾಗಿ ಆರೋಪಿ ರುದ್ರಗೌಡ ಪಾಟೀಲ್ ಎಂಬಾತ ಒಟ್ಟು ಮೊತ್ತದಲ್ಲಿ 20 ಲಕ್ಷ ರು.ಗಳನ್ನು ಕಡಿಮೆ ಮಾಡಿದ್ದ ಎಂಬ ಅಂಶವು ದೋಷಾರೋಪಣೆ ಪಟ್ಟಿಯಲ್ಲಿ ಹೇಳಲಾಗಿದೆ. ಸಿಐಡಿ ಅಧಿಕಾರಿಗಳು ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಸಂತ ನರಿಬೋಳ ಅವರ ಮೂಲಕ ಆರೋಪಿ ರುದ್ರಗೌಡ ಪಾಟೀಲ್‌ ಅವರನ್ನು ಭೇಟಿ ಮಾಡಿದ್ದ ಆಕಾಂಕ್ಷಿಯೊಬ್ಬರು ಪಿಎಸ್ಐ ಹುದ್ದೆಗೆ ಆಯ್ಕೆ ಮಾಡಲು ಸಹಾಯ ಕೋರಿದ್ದರು. ‘ಅಣ್ಣಾ ನಾನು ಪಿಎಎಸ್‌ಐ ಪರೀಕ್ಷೆಗೆ ಅರ್ಜಿ ಹಾಕಿದ್ದೇನೆ. ಏನಾದರೂ ಮಾಢಿ ನಾನು ಪಿಎಸ್‌ಐ ಹುದ್ದೆಗೆ ಆಯ್ಕೆಯಾಗುವಂತೆ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಕ್ಕೆ ಬೇರೆ ಕ್ಯಾಂಡಿಡೇಟ್‌ಗಳಿಂದ 50 ಲಕ್ಷ ರು. ಪಡೆದುಕೊಳ್ಳುತ್ತೇನೆ. ಸಂಬಂಧಿಕರಿದ್ದೀರಿ, ನೀವು 30 ಲಕ್ಷ ಕೊಡಿ ಸಾಕು. ಬೇರೆ ಯಾವುದಾದರೂಈ ಕ್ಯಾಂಡಿಡೇಟ್‌ಗಳಿದ್ದಲ್ಲಿ ಕಳುಹಿಸಿಕೊಡಿ ಎಂದು,’ ಎಂದು ರುದ್ರಗೌಡ ಪಾಟೀಲ್‌ ಹೇಳಿದ್ದ ಎಂಬುದನ್ನು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

 

 

ವ್ಯವಹಾರ ಕುದುರಿದ ನಂತರ ಪರೀಕ್ಷೆ ಕೇಂದ್ರದಲ್ಲಿ ಸಿಗುವ ನೆರವಿನ ಕುರಿತು ವಿಸ್ತೃತವಾಗಿ ಆರೋಪಿ ರುದ್ರಗೌಡ ಪಾಟೀಲ್‌ ವಿವರಿಸಿದ್ದ. ‘ ನಿಮಗೆ ನಾವು ಒಂದು ಚಿಕ್ಕ ಬ್ಲ್ಯೂಟೂತ್‌ ಡಿವೈಸ್‌ ಕೊಡುತ್ತೇವೆ. ಅದನ್ನು ಪರೀಕ್ಷೆ ನಡೆಯುವ ದಿನ ಕಿವಿಯಲ್ಲಿ ಹಾಕಿಕೊಳ್ಳಿ. ನಾವು ನಿಮಗೆ ಕರೆ ಮಾಡಿ ನಿಮ್ಮ ಪ್ರಶ್ನೆಪತ್ರಿಕೆಯಲ್ಲಿ ಬಂದಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಹೇಳುತ್ತೇವೆ. ಅದನ್ನು ಕೇಳಿಸಿಕೊಂಡು ನೀವು ಉತ್ತರಗಳನ್ನು ಬರೆದರೆ ಸಾಕು ಪಿಎಸ್‌ಐ ಹುದ್ದೆಗೆ ಆಯ್ಕೆಯಾಗುವುದು ಖಚಿತ ಮತ್ತು ನಿಮಗೆ ಕರೆ ಮಾಡಿ ಉತ್ತರಗಳನ್ನು  ಹೇಳುವುದಕ್ಕಾಗಿ ನಮಗೆ ಒಂದು ಮೊಬೈಲ್‌ ಫೋನ್‌ ಒದಗಿಸಬೇಕು,’ ಎಂಬ ಬೇಡಿಕೆಯನ್ನೂ ಇರಿಸಿದ್ದ ಎಂಬ ಸಂಗತಿ ದೋಷಾರೋಪಣೆ ಪಟ್ಟಿಯಿಂದ ಗೊತ್ತಾಗಿದೆ.

 

ಅದರಂತೆ 2021 ಅಕ್ಟೋಬರ್‌ 3ರಂದು ನಡೆದಿದ್ದ ಪಿಎಸ್‌ಐ ಪರೀಕ್ಷೆ ದಿನ ಆರೋಪಿ ಮತ್ತು ಉತ್ತರಿಸುವ ತಂಡವು ಸೇರಿಕೊಂಡು 9901283143 ಮೊಬೈಲ್‌ ಸಂಖ್ಯೆ ಫೋನ್‌ನಿಂದ 7338633121ಗೆ ಕರೆ ಮಾಡಿಸಿ ಬ್ಲೂಟೂತ್‌ ಡಿವೈಎಸ್‌ ಮೂಲಕ ಪ್ರಶ್ನೆಪತ್ರಿಕೆಗಳಿಲ್ಲಿನ ಪ್ರಶ್ನೆಗಳಿಗೆ ಉತ್ತರಗಳನ್ನು ಹೇಳಿದ್ದನ್ನು ಕೇಳಿಸಿಕೊಂಡು ಉತ್ತರಗಳನ್ನು ಬರೆದು ಎನ್‌ ವಿ ಸುನೀಲ್‌ ಎಂಬಾತ ಆಯ್ಕೆಗೊಂಡಿದ್ದ ಎಂಬುದು ತಿಳಿದು ಬಂದಿದೆ.

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ...

Related Articles

Popular Categories

error: Content is protected !!