Wednesday | March 18, 2026 |

ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?

Support THE-FILE

spot_img

ಬೆಂಗಳೂರು; ಸಾವಿರಾರು ಕೋಟಿ ರುಪಾಯಿ ದೇಣಿಗೆ ಪಡೆಯುತ್ತಿರುವ ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿದೆ.

 

ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿದ್ದ ನಿವೇಶನಗಳನ್ನು ಪಕ್ಷದ ಸ್ವಂತ ಕಚೇರಿಗಾಗಿ ಮಂಜೂರು ಮಾಡಿಸಿಕೊಳ್ಳಲು ಕಂದಾಯ ಇಲಾಖೆಗೆ ವಿವಿಧ ಜಿಲ್ಲೆಗಳಿಂದ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
ಕಾನೂನು ಇಲಾಖೆಯ ಅಸಮ್ಮತಿ ನಡುವೆಯೂ ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಮಂಜೂರು ಮಾಡಿರುವ ಬೆನ್ನಲ್ಲೇ ಹಲವು ಸಚಿವರು ತಾಲೂಕು ಪ್ರದೇಶಗಳಲ್ಲಿ ಪಕ್ಷಕ್ಕೆ ಸ್ವಂತ ಕಚೇರಿಗಾಗಿ ನಾಗರಿಕ ನಿವೇಶನ, ಇತರೆ ಇಲಾಖೆಗಳು ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿರುವ, ಮೀಸಲಿರಿಸಿರುವ ನಿವೇಶನಗಳನ್ನು ಮಂಜೂರು ಮಾಡಲು ಸಲ್ಲಿಸಿರುವ ಅರ್ಜಿಗಳತ್ತ ಕಂದಾಯ ಇಲಾಖೆಯು ಅತ್ಯುತ್ಸಾಹ ವಹಿಸಿರುವುದು ಮುನ್ನೆಲೆಗೆ ಬಂದಿದೆ.

 

ಹಾಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಪ್ರತಿನಿಧಿಸಿರುವ ಮುಧೋಳ ನಗರದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿ ಕಟ್ಟಡ ನಿರ್ಮಾಣ ಸಂಬಂಧ ನಿವೇಶನ ಮಂಜೂರು ಮಾಡಬೇಕು ಎಂಬ ಅರ್ಜಿ ಸಲ್ಲಿಕೆಯಾಗಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು 2022ರ ಜೂನ್‌ 9ರಂದು ಬಾಗಲಕೋಟೆ ಜಿಲ್ಲಾಧಿಕಾರಿಗೆ ಪತ್ರ ಬರೆದು ವರದಿ ಸಲ್ಲಿಸಲು ಸೂಚಿಸಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬಾಗಲಕೋಟೆ ಜಿಲ್ಲಾಧಿಕಾರಿಗೆ ಕಂದಾಯ ಇಲಾಖೆಯು ಬರೆದಿರುವ ಪತ್ರದ ಪ್ರತಿ

 

ಮುಧೋಳ ನಗರದ ಮಂಟೂರು ರಸ್ತೆಯಲ್ಲಿ ಬಿಜೆಪಿ ಕಚೇರಿ ಕಟ್ಟಡಕ್ಕಾಗಿ ಗುರುತಿಸಿರುವ ಖಾಲಿ ನಿವೇಶನವು (ಆರ್‌ ಎಸ್‌ ನಂ 212 ಮತ್ತು ಸಿಟಿಎಸ್‌ ನಂ 2588, 134.00 ಚ ಮೀ) ಸಮಾಜ ಇಲಾಖೆಯ ಹೆಸರಿನಲ್ಲಿದೆ. ಅಲ್ಲದೆ ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಸಂಬಂಧ ಕಾಯ್ದಿರಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಈಗಾಗಲೇ ಕಂದಾಯ ಇಲಾಖೆಯ ಪತ್ರ ಮುಖೇನ ಗಮನಕ್ಕೆ ತಂದಿರುವುದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಪತ್ರದಿಂದ ತಿಳಿದು ಬಂದಿದೆ.

 

ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಸಂಬಂಧ ಕಾಯ್ದರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ವರದಿ ನೀಡಿದ್ದರೂ ಇದೇ ಜಾಗದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿ ಕಟ್ಟಡ ನಿರ್ಮಾಣ ಮಾಡಲು ಖಾಲಿ ನಿವೇಶನ ಮಂಜೂರು ಮಾಡಲು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿರುವುದು ಗೊತ್ತಾಗಿದೆ.

 

2019-20ನೇ ಸಾಲಿನಲ್ಲಿ ಬಿಜೆಪಿ ರಾಷ್ಟ್ರೀಯ ಘಟಕವು 4,848 ಕೋಟಿ ರು.ಮೌಲ್ಯದ ಆಸ್ತಿ ಹೊಂದಿರುವುದನ್ನು ಪ್ರಕಟಿಸಿತ್ತು. ಅದೇ ರೀತಿ 2020-21ರಲ್ಲಿ ಬಿಜೆಪಿಯ ಕರ್ನಾಟಕ ಘಟಕವು 22.44 ಕೋಟಿ ರು.ನಷ್ಟು ದೇಣಿಗೆ ಸಂಗ್ರಹಿಸಿತ್ತು ಎಂದು ಎಡಿಆರ್‌ ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!