Saturday | March 21, 2026 |

ಟೂಲ್‌ಕಿಟ್‌ ಖರೀದಿ ಹಗರಣ; ಕರಾರು ಪತ್ರಕ್ಕೆ ತಡವಾಗಿ ಸಹಿ, ಸೂಚನೆಯನ್ನೂ ಪಾಲಿಸದ ಇಲಾಖೆ

Support THE-FILE

spot_img

ಬೆಂಗಳೂರು; ರಾಜ್ಯದ ಕೈಗಾರಿಕೆ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತರಬೇತಿದಾರರಿಗೆ ಟೂಲ್‌ಕಿಟ್‌ ಖರೀದಿ ಸಂಬಂಧ ಮಾಡಿಕೊಂಡಿದ್ದ ಕರಾರು ಪತ್ರಕ್ಕೆ ತಡವಾಗಿ ಸಹಿ ಹಾಕಿದ್ದರು ಎಂಬುದು ಇದೀಗ ಬಹಿರಂಗವಾಗಿದೆ. ಕರಾರು ಪತ್ರಕ್ಕೆ ತಡವಾಗಿ ಸಹಿ ಹಾಕಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಟೂಲ್‌ ಕಿಟ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ‌ ಜನರನ್ನು ಸಚಿವ ಅಶ್ವಥ್‌ ನಾರಾಯಣ್‌ ವಂಚಿಸುತ್ತಿದ್ದಾರೆ ಎಂಬ ಆರೋಪ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಟೂಲ್ ಕಿಟ್ ವಿತರಿಸಲು ಕರೆದಿದ್ದ ಟೆಂಡರ್‌ನಲ್ಲಿ ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ಸಚಿವ ಅಶ್ವಥ್‌ನಾರಾಯಣ್‌ ಅವರು ನಿರಾಕರಿಸಿರುವ ಬೆನ್ನಲ್ಲೇ ಕರಾರು ಪತ್ರಕ್ಕೆ ತಡವಾಗಿ ಸಹಿ ಹಾಕಿರುವುದು ಮುನ್ನೆಲೆಗೆ ಬಂದಿದೆ. ಈ ಸಂಬಂಧ ಟಿಪ್ಪಣಿ ಹಾಳೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಅಲ್ಲದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮದಡಿ ಉಚಿತ ವಿತರಿಸಸುವ ಕಾರ್ಯಕ್ರಮದಡಿ 2021-22ರಲ್ಲಿ ಹಂಚಿಕೆಯಾಗಿದ್ದ 16.67 ಕೋಟಿ ರು.ಗಳನ್ನು ಮೇ 2022ರೊಳಗೇ ವೆಚ್ಚ ಮಾಡಬೇಕು ಎಂಬ ಸೂಚನೆಯನ್ನು ಇಲಾಖೆಯು ಪಾಲಿಸಿರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ಟೂಲ್‌ಕಿಟ್‌ ಮತ್ತು ಲೇಖನ ಸಾಮಗ್ರಿಗಳು ನಿಗದಿತ ಅವಧಿಯಲ್ಲಿ ಸರಬರಾಜಾಗದೇ ವಿಳಂಬವಾಗಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

ಟೂಲ್‌ಕಿಟ್‌ ಖರೀದಿ ಸಂಬಂಧ ಇಲಾಖೆಯಲ್ಲಿನ ಕಡತದ ಹಾಳೆ

 

‘ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯವರು ಪ್ರಸ್ತಾಪಿತ ಲೆಕ್ಕ ಶೀರ್ಷಿಕೆಯಡಿ ಹಂಚಿಕೆಯಾಗಿದ್ದ 16.67 ಕೋಟಿಯ ಮೊತ್ತವನ್ನು ತಮ್ಮ ಉಳಿತಾಯಖಾತೆಗೆ ಜಮೆ ಮಾಡಿಕೊಂಡಿರುತ್ತಾರೆ. ಆದರೆ ಟೂಲ್‌ ಕಿಟ್‌ ಖರೀದಿಗೆ ಸಂಬಂಧ ಆಯುಕ್ತರು ತಡವಾಗಿ ಅಂದರೆ ದಿನಾಂಕ 27.06.2022ರಂದು ಕರಾರುಪತ್ರಕ್ಕೆ ಸಹಿ ಹಾಕಿದ್ದು, ಇಷ್ಟು ವಿಳಂಬವಾಗಿ ಕರಾರಿಗೆ ಸಹಿ ಹಾಕಲು ಕಾರಣವೇನೆಂಬುದರ ಬಗ್ಗೆ ಮಾಹಿತಿ ನೀಡಿರುವುದಿಲ್ಲ. ಬದಲಾಗಿ ತಮ್ಮ ಖಾತೆಗೆ ಜಮಾ ಮಾಡಿಕೊಂಡಿರುವ ಮೊತ್ತವನ್ನು ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದವರೆಗೂ ಅವಧಿ ವಿಸ್ತರಣೆಗೆ ಮಾಡುವಂತೆ ಕೋರಿರುತ್ತಾರೆ,’ ಎಂದು ಇಲಾಖೆ ಅಧಿಕಾರಿಗಳು ಟಿಪ್ಪಣಿ ಹಾಳೆಯಲ್ಲಿ ನಮೂದಿಸಿದ್ದಾರೆ.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮದಡಿ ಉಚಿತ ವಿತರಿಸಸುವ ಕಾರ್ಯಕ್ರಮವು 2021-22ನೇ ಸಾಲಿಗೆ ಸಂಬಂಧಿಸಿದ್ದಾಗಿದೆ. ಅಲ್ಲದೆ ಈಗಾಗಲೇ ವಿಳಂಬವೂ ಆಗಿದೆ. ಆದರೆ ಕಾರ್ಯಕ್ರಮವನ್ನು ಪೂರ್ಣಗೊಳಿಸಲು ಆಯುಕ್ತರು ಕೋರಿರುವಂತೆ ಪ್ರಸ್ತುತ ಆರ್ಥಿಕ ವರ್ಷದ ಅಂತ್ಯದವರೆಗೆ ಅವಕಾಶ ನೀಡುವುದು ಸೂಕ್ತವಲ್ಲ. ಆದ್ದರಿಂದ 2021-22ನೇ ಸಾಲಿನಲ್ಲಿ ಎಸ್‌ ಸಿ ಪಿ/ಟಿಎಸ್‌ಪಿ ಯೋಜನೆಯಡಿ ಹಂಚಿಕೆಯಾಗಿದ್ದ ಹಾಗೂ ಪ್ರಸ್ತುತ ಆಯುಕ್ತರ ಉಳಿತಾಯ ಖಾತೆಗೆ ಜಮೆ ಮಾಡಿರುವ 16.67 ಕೋಟಿ ಮೊತ್ತವನ್ನು ವೆಚ್ಚ ಮಾಡುವ ಅವಧಿಯನ್ನು 2022ರ ಅಗಸ್ಟ್‌ ಅಂತ್ಯದವರೆಗೆ ವಿಸ್ತರಿಸುವಂತೆ ಆರ್ಥಿಕ ಇಲಾಖೆಯನ್ನು ಕೋರಬಹುದು ಎಂದೂ ಇಲಾಖಾಧಿಕಾರಿಗಳು ಅಭಿಪ್ರಾಯ ನೀಡಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

ಟೂಲ್‌ಕಿಟ್‌ ಖರೀದಿಗೆ ಸಂಬಂಧಿಸಿದಂತೆ ಇಂಟೆಲಿಕ್‌ ಸಿಸ್ಟಂನೊಂದಿಗೆ 2022ರ ಜೂನ್‌ 27ರಂದು ಕರಾರುಪತ್ರವನ್ನು ಸಹಿ ಮಾಢಿ ಸರಬರಾಜುದಾರರಿಗೆ ನೀಡಲಾಗಿತ್ತು. 2022ರ ಜೂನ್‌ 29ರಂದು ಆಟೋಮೊಬೈಲ್‌ ಮತ್ತು ಎಲೆಕ್ಟ್ರಾನಿಕ್‌ ಮೆಕಾನಿಕ್‌ ಸೆಕ್ಟರ್‌ಗಳ ಪೂರ್ವ ರವಾನೆ ಪರಿಶೀಲನೆ ಮಾಡಲಾಗಿತ್ತು. ಉಳಿದ ಸೆಕ್ಟರ್‌ಗಳನ ಪರಿಶೀಲನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ 2022ರ ಜುಲೈ ಮೊದಲ ವಾರದಲ್ಲಿ ಟೂಲ್‌ಕಿಟ್‌ಗಳನ್ನು ಎಲ್ಲಾ ನೋಡಲ್‌ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಗಳಿಗೆ ಸರಬರಾಜು ಮಾಡಲಾಗುವುದು ಎಂದು ಕಂಪನಿಯು 2022ರ ಮೇ 30ರಂದು ಬರೆದಿದ್ದ ಪತ್ರದಲ್ಲಿ ತಿಳಿಸಿತ್ತು.

 

ಟೂಲ್‌ಕಿಟ್‌ ಮತ್ತು ಲೇಖನ ಸಾಮಗ್ರಿಗಳ ಖರೀದಿಸಿ ಉಚಿತವಾಗಿ ವಿತರಿಸುವ ಉದ್ದೇಶದಿಂದ ಕರೆದಿದ್ದ ಟೆಂಡರ್‌ ಬಗ್ಗೆ ದೂರು ಸ್ವೀಕೃತವಾಗಿತ್ತು. ಹೀಗಗಿ ಅದನ್ನು ರದ್ದುಪಡಿಸಿ ಮರು ಟೆಂಡರ್‌ ಕರೆಯಲಾಗಿತ್ತು. ಹೀಗಾಗಿ ಇದನ್ನು ಇತ್ಯರ್ಥಪಡಿಸಲು ಸಾಕಷ್ಟು ಸಮಯ ವ್ಯರ್ಥವಾಗಿತ್ತು.

 

ಇದಾದ ನಂತರ ಯಶಸ್ವಿ ಬಿಡ್‌ದಾರರು ಟೂಲ್‌ಕಿಟ್‌ಗಳನ್ನು ಸರಬರಾಜು ಮಾಡಲು ಹಾಗೂ ಬಿಲ್‌ಗಳನ್ನು ಪರಿಶೀಲಿಸಿ ಸರಬರಾಜುದಾರರಿಗೆ ಮೊತ್ತ ಪಾವತಿಸಲು ಸಾಕಷ್ಟು ಸಮಯಾವಕಾಶ ಅಗತ್ಯವಿತ್ತು. ಹೀಗಾಗಿ 202ರ ಮೇ ಅಂತ್ಯದೊಖಗೆ ವೆಚ್ಚ ಮಾಡಲು ಆರ್ಥಿಕ ಇಲಾಖೆ ಸಹಮತಿ ಕೋರಿತ್ತು. ಇದಕ್ಕೆ ಆರ್ಥಿಕ ಇಲಾಖೆಯು 2022ರ ಮಾರ್ಚ್ 10ರಂದು ಸಹಮತಿ ವ್ಯಕ್ತಪಡಿಸಿತ್ತು ಎಂಬ ಅಂಶ ಟಿಪ್ಪಣಿ ಹಾಳೆಯಲ್ಲಿ ನಮೂದಿಸಲಾಗಿದೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!