Wednesday | March 25, 2026 |

ಮಕ್ಕಳಿಗೆ ನೂರು ದಿನ ಮೊಟ್ಟೆ, ಗುಣಮಟ್ಟದ ಶೂ ನೀಡದ ಸರ್ಕಾರದಿಂದ ದೇಗುಲಗಳ ಅಭಿವೃದ್ಧಿಗೆ 116 ಕೋಟಿ

Support THE-FILE

spot_img

ಬೆಂಗಳೂರು; ಶಾಲಾ ಮಕ್ಕಳಿಗೆ ಗುಣಮಟ್ಟದ ಶೂ, ಸಾಕ್ಸ್‌ ಖರೀದಿಗೆ ಹೆಚ್ಚುವರಿ ಅನುದಾನ ಮತ್ತು ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ 100 ದಿನಗಳಿಗೆ ಮೊಟ್ಟೆ ನೀಡಲು ಅನುಮತಿ ನೀಡದ ಆರ್ಥಿಕ ಇಲಾಖೆಯು ವಿಶೇಷ ಅನುದಾನದಡಿಯಲ್ಲಿ ವಿವಿಧ ದೇವಾಲಯಗಳ ಕಾಮಗಾರಿಗಳಿಗೆ 116 ಕೋಟಿ ರು. ಅನುದಾನ ಮಂಜೂರು ಮಾಡಲು ಯಾವುದೇ ತಕರಾರು ಇಲ್ಲದೇ ಸಹಮತಿ ವ್ಯಕ್ತಪಡಿಸಿದೆ.

 

ಶಾಲಾ ಕಟ್ಟಡ, ಶಾಲೆಗಳ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಅನುದಾನ ಒದಗಿಸಿಕೊಳ್ಳಲು ಸರ್ಕಾರ ಮತ್ತು ಆರ್ಥಿಕ ಇಲಾಖೆ ಮೇಲೆ ಒತ್ತಡ ಹೇರದ ಸಚಿವರು, ಶಾಸಕರು ತಮ್ಮ ತಮ್ಮ ವಿಧಾನಸಭೆ ಕ್ಷೇತ್ರಗಳಲ್ಲಿನ ದೇವಾಲಯಗಳ ಜೀರ್ಣೋದ್ಧಾರ ಮತ್ತು ವಿವಿಧ ಕಾಮಗಾರಿಗಳಿಗೆ ತಲಾ ಒಂದು ಕೋಟಿಯಂತೆ ಅನುದಾನ ಮಂಜೂರು ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವಿಧಾನಸಭೆ ಚುನಾವಣೆಗೆ 10 ತಿಂಗಳು ಬಾಕಿ ಇರುವಾಗಲೇ ನಗರ, ಗ್ರಾಮ, ಹೋಬಳಿ ವ್ಯಾಪ್ತಿಯಲ್ಲಿರುವ ದೇಗುಲಗಳಿಗೆ ಅನುದಾನ ಮಂಜೂರಾಗಿದೆ.

 

ಅಲ್ಲದೆ ಕೆಲ ಶಾಸಕರು ತಮ್ಮ ವಿಧಾನಸಭೆ ಕ್ಷೇತ್ರಗಳಲ್ಲದೇ ಬೇರೆ ಕ್ಷೇತ್ರಗಳಲ್ಲಿರುವ ದೇವಾಲಯಗಳ ಕಾಮಗಾರಿಗಳಿಗೆ ಅನುದಾನವನ್ನು ಮಂಜೂರು ಮಾಡಿಸಿಕೊಂಡಿದ್ದಾರೆ. ಒಟ್ಟು ಬಿಡುಗಡೆಯಾಗಿರುವ 116 ಕೋಟಿ ರು. ಅನುದಾನದಲ್ಲಿ ಬಿಜೆಪಿ ಶಾಸಕರು ಸಿಂಹಪಾಲು ಪಡೆದಿದ್ದಾರೆ. ಅಲ್ಲದೆ ಕೆಲ ಸಚಿವರು ಮತ್ತು ಶಾಸಕರಿಗೆ 3 ಕೋಟಿ ಮತ್ತು 1.50 ಕೋಟಿ ನೀಡಿರುವ ಸರ್ಕಾರವು ಬಹುತೇಕ ಶಾಸಕರಿಗೆ ತಲಾ 1 ಕೋಟಿಯಂತೆ ಅನದುಆನ ಮಂಜೂರು ಮಾಡಿದೆ. ರಾಜ್ಯ ಸರ್ಕಾರವು ಈ ಸಂಬಂಧ 2022ರ ಜುಲೈ 21ರಂದು ಆದೇಶ ಹೊರಡಿಸಿದೆ. ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಹಾಲಿ ಮತ್ತು ಮಾಜಿ ಸಚಿವರು, ಶಾಸಕರು ಮತ್ತು ಮಾಜಿ ಶಾಸಕರುಗಳ ಕೋರಿಕೆ ಮೇರೆಗೆ ಒಟ್ಟು 105 ಆದೇಶಗಳನ್ನು ವಿಧಾನಸಭಾವಾರು ಆದೇಶ ಹೊರಡಿಸಲಾಗಿದೆ. ಮೂಲ ಅನುದಾನ 1500.00 ಲಕ್ಷ ರು ಮತ್ತು 2022ರ ಜುಲೈ 1ರಂದು ಹೆಚ್ಚುವರಿಯಾಗಿ ಒದಗಿಸಿದ್ದ 3000.00 ಲಕ್ಷ ರು.ಗಳ ಸೇರಿ ಒಟ್ಟು 4500.00 ಲಕ್ಷ ರು. ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರು, ಶಾಸಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮಂಜೂರು ಮಾಡಿರುವ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಮಾತ್ರ ಬಳಸಬೇಕು,’ ಎಂದು ಆಡಳಿತ ಇಲಾಖೆಗೆ ತಿಳಿಸಿದೆ.

 

 

2022ರ ಜುಲೈ 8ರಂದು ಆರ್ಥಿಕ ಇಲಾಖೆ ಹೊರಡಿಸಿದ್ದ ಆದೇಶದ ಪ್ರಕಾರ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮಂಜೂರು ಮಾಡಿರುವ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಕೊರತೆಯಾಗಿರುವ 106.85 ಕೋಟಿ ರು. ಗಳನ್ನು ಸಾದಿಲ್ವಾರು ನಿಧಿಯಿಂದ ಬಿಡುಗಡೆ ಮಾಡಲು ಅನುಮೋದನೆ ನೀಡಿತ್ತು ಎಂಬುದು ಆದೇಶದಿಂದ ತಿಳಿದು ಬಂದಿದೆ.

 

2022-23ನೇ ಸಾಲಿನಲ್ಲಿ ಆರ್ಥಿಕ ಇಲಾಖೆ ಸಹಮತಿಯಂತೆ ವಿಶೇಷ ಅನುದಾನದಡಿಯಲ್ಲಿ 105 ಸರ್ಕಾರದ ಆದೇಶಗಳಲ್ಲಿ ವಿವಿಧ ವಿಧಾನಸಭೆ ಕ್ಷೇತ್ರಗಳ ದೇವಾಲಯಗಳ ಕಾಮಗಾರಿಗಳನ್ನು ಕೈಗೊಳ್ಳಲು ಮಂಜೂರಾತಿ ನೀಡಿ ಆದೇಶಿಸಲಾಗಿದ್ದು,ಈ ಆದೇಸಗಳಲ್ಲಿ ಮಂಜೂರು ಮಾಡಿದ 23.237.00 ಲಕ್ಷ ರು. ಅನುದಾನದಲ್ಲಿ ಮೊದಲನೇ ಕಂತಿನ ಶೇ. 50ರಷ್ಟು ಅನುದಾನವನ್ನು ಅಂದರೆ 11,618.00 ಲಕ್ಷ ರು.ಗಳನ್ನು ಅನುದಾನವನ್ನು ಧಾರ್ಮಿಕ ದತ್ತಿ ಇಲಾಖೆಗೆ ಬಿಡುಗಡೆಗೊಳಿಸಿದೆ.

 

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, (ಶಿಕಾರಿಪುರ) ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ( ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌), ಕೆ ಎಸ್‌ ಈಶ್ವರಪ್ಪ (ಶಿವಮೊಗ್ಗ ಗ್ರಾಮಾಂತರ) ಶಶಿಕಲಾ ಜೊಲ್ಲೆ ( ನಿಪ್ಪಾಣಿ) ಬಿ ಸಿ ನಾಗೇಶ್‌ (ತಿಪಟೂರು) ಅರಬೈಲು ಶಿವರಾಮ ಹೆಬ್ಬಾರ ( ಯಲ್ಲಾಪುರ) ಆಚಾರ ಹಾಲಪ್ಪ ಬಸಪ್ಪ ( ಯಲಬುರ್ಗಾ), ಗೋವಿಂದ ಕಾರಜೋಳ (ಮುಧೋಳ), ಪ್ರಭು ಚೌಹಾನ್‌ (ಔರಾದ್‌ ) ಸಿ ಪಿ ಯೋಗೇಶ್ವರ್‌ (ಚನ್ನಪಟ್ಟಣ) ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ (ಹೊನ್ನಾಳಿ) , ಡಿ ಎನ್‌ ಜೀವರಾಜ್‌ (ಕೊಪ್ಪ, ಶೃಂಗೇರಿ, ಎನ್‌ ಆರ್‌ ಪುರ) ಎ ಎಸ್‌ ಜಯರಾಮ್‌ (ತುರುವೇಕೇರೆ), ಪಿ ರಾಜೀವ್‌ (ಕುಡಚಿ), ಬಾಲಚಂದ್ರ ಜಾರಕಿಹೊಳಿ (ಅರಭಾವಿ), ರಾಜೇಶ್‌ನಾಯ್ಕ (ಬಂಟ್ವಾಳ), ನರಸಿಂಹನಾಯಕ್‌ (ಸುರಪುರ), ಎಸ್‌ ವಿ ರಾಮಚಂದ್ರ (ಜಗಳೂರು), ಎನ್‌ ಲಿಂಗಣ್ಣ (ಮಾಯಕೊಂಡ), ಡಾ ಅವಿನಾಶ್‌ಜಾಧವ್ (ಚಿಂಚೋಳಿ), ಅಪ್ಪಚ್ಚು ರಂಜನ್ (ಮಡಿಕೇರಿ), ಬಿ ಎಂ ಸುಕುಮಾರಶೆಟ್ಟಿ (ಬೈಂದೂರು),

 

ರೂಪಾಲಿನಾಯಕ್‌ (ಕಾರವಾರ), ಡಿ ವೇದವ್ಯಾಸ ಕಾಮತ್‌ (ಬೆಳ್ತಂಗಡಿ), ಎಚ್‌ ಹಾಲಪ್ಪ ಹರತಾಳ್‌ (ಸಾಗರ) , ಎಂ ಚಂದ್ರಪ್ಪ (ಹೊಳಲ್ಕೆರೆ), ಎನ್‌ಮಹೇಶ್‌ (ಕೊಳ್ಳೆಗಾಲ), ಸಂಜೀವ ಮಠಂದೂರು (ಪುತ್ತೂರು), ಜೆ ಬಿ ಜ್ಯೋತಿಗಣೇಶ್‌ (ತುಮಕೂರು ನಗರ), ಅಭಯಪಾಟೀಲ್‌ (ಬೆಳಗಾವಿ ದಕ್ಷಿಣ), ಜಿ ಸೋಮಶೇಖರರೆಡ್ಡಿ (ಬಳ್ಳಾರಿ ನಗರ), ಬಸನಗೌಡ ಆರ್‌ ಪಾಟೀಲ್‌ (ವಿಜಾಪುರ ನಗರ), ರೂಪಾಲಿ ಸಂತೋಷ್‌ ನಾಯಕ್‌ (ಶಿರಸಿ ಸಿದ್ದಾಪುರ), ಡಾ ಭರತ್‌ ಶೆಟ್ಟಿ (ಮಂಗಳೂರು ನಗರ ಉತ್ತರ)

 

ಸಿ ಟಿ ರವಿ (ಚಿಕ್ಕಮಗಳೂರು) ಡಿ ವೇದವ್ಯಾಸ ಕಾಮತ್‌ (ಮಂಗಳೂರು ದಕ್ಷಿಣ), ನೆಹರು ಓಲೆಕಾರ (ಹಾವೇರಿ) ಲಕ್ಷ್ಮಿ ಹೆಬ್ಬಾಳಕರ ( ಬೆಳಗಾವಿಗ್ರಾಮೀಣ), ಎಸ್‌ ವಿ ರಾಮಚಂದ್ರ (ದಾವಣಗೆರೆ ಉತ್ತರ), ಪ್ರೀತಮ್‌ ಜೆ ಗೌಡ (ಹಾಸನ), ಅರವಿಂದ ಬೆಲ್ಲದ (ಹುಬ್ಬಳ್ಳಿ ಧಾರವಾಡ ಪಶ್ಚಿಮ), ಬೆಳ್ಳಿ ಪ್ರಕಾಶ್‌ (ಕಡೂರು), ಕೆ ಮಾಡಾಳ್‌ ವಿರೂಪಾಕ್ಷಪ್ಪ (ಚನ್ನಗಿರಿ), ಎನ್‌ ವೈ ಗೋಪಾಲಕೃಷ್ಣ (ಕೂಡ್ಲಿಗಿ), ಕೆ ಜೆ ಬೋಪಯ್ಯ (ವಿರಾಜಪೇಟೆ), ಬಿ ಹರ್ಷವರ್ಧನ್‌ (ನಂಜನಗೂಡು), ನೆಹರು ಓಲೇಕಾರ್‌ (ಹಾವೇರಿ), ಜಿ ಕರುಣಾಕರರೆಡ್ಡಿ (ಹರಪನಹಳ್ಳಿ) ಎಸ್‌ ಕುಮಾರ ಬಂಗಾರಪ್ಪ (ಸೊರಬ) ಗೂಳಿಹಟ್ಟಿ ಶೇಖರ್‌ (ಹೊಸದುರ್ಗ), ಎ ಎಸ್‌ ಪಾಟೀಲ್‌ ನಡಹಳ್ಳಿ (ಮುದ್ದೇಬಿಹಾಳ),

 

ರೂಪಾಲಿ ಸಂತೋಷ್‌ನಾಯಕ್‌ (ಕುಮಟಾ ಹೊನ್ನಾವರ, ಭಟ್ಕಳ), ಎಸ್‌ ಎ ರಾಮದಾಸ್‌ (ಕೃಷ್ಣರಾಜ), ಎಂ ಪಿ ಕುಮಾರಸ್ವಾಮಿ (ಮೂಡಿಗೆರೆ), ಎಸ್‌ ಆರ್‌ ವಿಶ್ವನಾಥ್‌ (ಯಲಹಂಕ) ಡಾ ಸಿ ಎಂ ರಾಜೇಶ್‌ಗೌಡ (ಶಿರಾ), ಲಾಲಾಜಿ ಆರ್‌ ಮಂಡನ್‌ ( ಕಾಪು-ಉಡುಪಿ), ಎಚ್‌ ನಾಗೇಶ್‌ (ಮುಳಬಾಗಿಲು), ಹಾಲಾಡಿ ಶ್ರೀನಿವಾಸ ಶೆಟ್ಟಿ (ಕುಂದಾಪುರ), ಶ್ರೀಮಂತ ಬಾಳಾ ಸಾಹೇಬ್‌ ಪಾಟೀಲ್‌ (ಕಾಗವಾಡ), ಅನಿಲ್‌ ಎಸ್‌ ಬೆನಕೆ (ಬೆಳಗಾವಿಉತ್ತರ) ತಲಾ 1 ಕೋಟಿಯಂತೆ ಅನುದಾನ ಮಂಜೂರಾಗಿದೆ.

 

ರಾಜ್ಯದಲ್ಲಿ 34 ಸಾವಿರ ಕಡಿಮೆ ಆದಾಯವಿರುವ ಸಿ ಗ್ರೇಡ್‌ ದೇವಸ್ಥಾನಗಳಿವೆ. ಕೆಲ ಹಳ್ಳಿಗಳಲ್ಲಿರುವ ದೇಗುಲಗಳು ನಿರ್ವಹಣೆಗೆ ಅನುದಾನದ ಕೊರತೆ ಎದುರಿಸುತ್ತಿವೆ. ದೇಗುಲಗಳ ಜೀರ್ಣೋದ್ಧಾರ, ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅರ್ಚಕರು ಮತ್ತು ಗ್ರಾಮಗಳ ಮುಖಂಡರು ಅನುದಾನ ಮಂಜೂರು ಮಾಡಿಸಲು ಶಾಸಕರ ಮೇಲೆ ಒತ್ತಡ ಹೇರಿದ್ದರು.

 

ರಾಜ್ಯದಲ್ಲಿ 175 ಎ ಗ್ರೇಡ್‌, 330 ಬಿ ಗ್ರೇಡ್‌ ಹಾಗೂ 34,700 ಸಿ ಗ್ರೇಡ್‌ ದೇಗುಲಗಳಿವೆ. 25 ಲಕ್ಷ ರೂ.ಗೂ ಅಧಿಕ ಆದಾಯವಿದ್ದರೆ ಎ ಗ್ರೇಡ್‌, 5 ರಿಂದ 25 ಲಕ್ಷ ರೂ. ಆದಾಯವಿದ್ದರೆ ಬಿ ಗ್ರೇಡ್‌ ಮತ್ತು 1 ರಿಂದ 5 ಲಕ್ಷ ಆದಾಯವಿದ್ದರೆ ಸಿ ಗ್ರೇಡ್‌ ಎಂದು ವರ್ಗೀಕರಿಸಲಾಗಿದೆ ಎ ಗ್ರೇಡ್‌ ದೇವಸ್ಥಾನಗಳಿಂದ ಸಂಗ್ರಹವಾಗುವ ನಿಧಿಯಲ್ಲಿ ಶೇ.20ರಷ್ಟು ಅನುದಾನ ಪ್ರತ್ಯೇಕಗೊಳಿಸಿ ಸಿ ಗ್ರೇಡ್‌ ದೇಗುಲ ಜೀರ್ಣೋದ್ಧಾರಕ್ಕೆ ಕೊಡಲು ಈ ಹಿಂದೆ ನಿರ್ಧರಿಸಲಾಗಿತ್ತು ಎಂದು ತಿಳಿದು ಬಂದಿದೆ.

Hot this week

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Topics

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

Related Articles

Popular Categories

error: Content is protected !!